Homeಮುಖಪುಟಹಾರ್ದಿಕ್ ಪಟೇಲ್, ಶೆಹ್ಲಾ ರಶೀದ್ ವಿರುದ್ಧದ 'ದೇಶದ್ರೋಹ' ಪ್ರಕರಣಗಳು ವಾಪಸ್ : ಬಿಜೆಪಿ ಬೆಂಬಲಿಸಿದರೆ ಗಂಭೀರ...

ಹಾರ್ದಿಕ್ ಪಟೇಲ್, ಶೆಹ್ಲಾ ರಶೀದ್ ವಿರುದ್ಧದ ‘ದೇಶದ್ರೋಹ’ ಪ್ರಕರಣಗಳು ವಾಪಸ್ : ಬಿಜೆಪಿ ಬೆಂಬಲಿಸಿದರೆ ಗಂಭೀರ ಕೇಸ್‌ಗಳು ರದ್ದು?

- Advertisement -
- Advertisement -

2015ರ ಪಾಟಿದಾರ್ ಮೀಸಲಾತಿ ಆಂದೋಲನದ ನೇತೃತ್ವ ವಹಿಸಿದ್ದ ಬಿಜೆಪಿ ಶಾಸಕ ಹಾರ್ದಿಕ್ ಪಟೇಲ್ ಮತ್ತು ಇತರ ನಾಲ್ವರ ವಿರುದ್ಧ ದಾಖಲಾಗಿದ್ದ ದೇಶದ್ರೋಹ ಪ್ರಕರಣವನ್ನು ಹಿಂಪಡೆಯಲು ಅಹಮದಾಬಾದ್ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಗುಜರಾತ್ ಸರ್ಕಾರಕ್ಕೆ ಅನುಮತಿ ನೀಡಿದೆ.

ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ವಿಶೇಷ ಸಾರ್ವಜನಿಕ ಅಭಿಯೋಜಕ ಸುಧೀರ್ ಬ್ರಹ್ಮಭಟ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಮನೀಶ್ ಪುರೋಹಿತ್ ಶನಿವಾರ (ಮಾ.1) ಈ ಸಂಬಂಧ ಎರಡು ಆದೇಶಗಳನ್ನು ಹೊರಡಿಸಿದ್ದಾರೆ.

“ಕಾನೂನುಬದ್ಧವಾಗಿ ಮತ್ತು ಸಾಮಾಜಿಕವಾಗಿ ಸಾಧ್ಯವಿಲ್ಲ” ಎಂದು ತಿಳಿದಿದ್ದರೂ ಸಹ, ಹಾರ್ದಿಕ್ ಪಟೇಲ್, ದಿನೇಶ್ ಬಂಭಾನಿಯಾ, ಚಿರಾಗ್ ಪಟೇಲ್, ಕೇತನ್ ಪಟೇಲ್ ಮತ್ತು ಅಲ್ಪೇಶ್ ಕಥೇರಿಯಾ ಪಾಟಿದಾರ್ ಅಥವಾ ಪಟೇಲ್ ಸಮುದಾಯದ ಸದಸ್ಯರನ್ನು ಒಬಿಸಿ ಪಟ್ಟಿಗೆ ಸೇರಿಸಲು ಆಂದೋಲನ ನಡೆಸುವಂತೆ 2015ರಲ್ಲಿ ಪ್ರಚೋದಿಸಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಲಾಗಿತ್ತು.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124ಎ (ದೇಶದ್ರೋಹ), 121 (ಭಾರತ ಸರ್ಕಾರದ ವಿರುದ್ಧ ಯುದ್ಧ ಮಾಡುವುದು ಅಥವಾ ಯುದ್ಧ ಮಾಡಲು ಪ್ರಯತ್ನಿಸುವುದು ಅಥವಾ ಯುದ್ಧ ಮಾಡಲು ಪ್ರೇರೇಪಿಸುವುದು), 121ಎ (ಸೆಕ್ಷನ್ 121 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳನ್ನು ಮಾಡಲು ಸಂಚು ರೂಪಿಸುವುದು), 153ಎ (ಧರ್ಮ, ಜನಾಂಗ, ಜನ್ಮಸ್ಥಳ, ನಿವಾಸ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸಾಮರಸ್ಯದ ವಿರುದ್ದ ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು) ಮತ್ತು 153ಬಿ (ಆಪಾದನೆ, ರಾಷ್ಟ್ರೀಯ ಏಕೀಕರಣದ ವಿರುದ್ದ ಪೂರ್ವಾಗ್ರಹ ಪೀಡಿತ ಹೇಳಿಕೆಗಳು) ಅಡಿಯಲ್ಲಿ ಆರೋಪ ಹೊರಿಸಲಾಗಿತ್ತು.

ಕಳೆದ ತಿಂಗಳು ಬಿಜೆಪಿ ಸರ್ಕಾರ ಹಿಂಪಡೆಯುವುದಾಗಿ ಘೋಷಿಸಿದ ಒಂಬತ್ತು ಪಾಟೀದಾರ್ ಕೋಟಾ ಆಂದೋಲನ ಪ್ರಕರಣಗಳಲ್ಲಿ ಇದೂ ಒಂದು. 2015 ರ ಪಾಟೀದಾರ್ ಆಂದೋಲನಕ್ಕೆ ಸಂಬಂಧಿಸಿದಂತೆ ಸುಮಾರು 300 ಪ್ರಕರಣಗಳು ದಾಖಲಾಗಿವೆ.

ಶೆಹ್ಲಾ ರಶೀದ್ ವಿರುದ್ದದ ದೇಶದ್ರೋಹ ಪ್ರಕರಣ ವಾಪಸ್!

2019ರಲ್ಲಿ ದಾಖಲಾಗಿದ್ದ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿ ನಾಯಕಿ ಶೆಹ್ಲಾ ರಶೀದ್ ಅವರ ವಿರುದ್ಧದ ಮೊಕದ್ದಮೆಯನ್ನು ಹಿಂಪಡೆಯಲು ದೆಹಲಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯ ಗುರುವಾರ (ಫೆ.27) ಸ್ವೀಕರಿಸಿದೆ.

ಸೆಪ್ಟೆಂಬರ್ 2019ರಲ್ಲಿ, ಕಾಶ್ಮೀರದಲ್ಲಿ ಸಶಸ್ತ್ರ ಪಡೆಗಳ ಬಗ್ಗೆ ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ ರಶೀದ್ ವಿರುದ್ಧ ದೇಶದ್ರೋಹ ಮತ್ತು ಇತರ ಕ್ರಿಮಿನಲ್ ಆರೋಪಗಳನ್ನು ಹೊರಿಸಲಾಗಿತ್ತು.

ವಕೀಲ ಅಲಖ್ ಅಲೋಕ್ ಶ್ರೀವಾಸ್ತವ ಅವರ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124ಎ (ದೇಶದ್ರೋಹ), 153ಎ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆಯ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 153 (ಗಲಭೆಯನ್ನು ಉಂಟುಮಾಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪ್ರಚೋದನೆ ನೀಡುವುದು), 504 (ಶಾಂತಿ ಕದಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಅವಮಾನಿಸುವುದು) ಮತ್ತು 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನಿಡಿದ್ದ 370ನೇ ವಿಧಿಯನ್ನು ಆಗಸ್ಟ್ 18, 2019ರಂದು ರದ್ದುಗೊಳಿಸಿ, ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಕಣಿವೆಯಲ್ಲಿ ಮಕ್ಕಳು ಮತ್ತು ಯುವಕರ ಮೇಲೆ ಸಶಸ್ತ್ರ ಪಡೆಗಳು ದೌರ್ಜನ್ಯವೆಸಗಿವೆ ಎಂದು ರಶೀದ್ ಆರೋಪಿಸಿದ್ದರು.

ಜೈಲಿನಲ್ಲಿ ಕೊಳೆಯುತ್ತಿರುವ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ 

ಬಿಜೆಪಿ ಬೆಂಬಲಿಸಿದವರ ವಿರುದ್ದದ ದೇಶದ್ರೋಹಗಳಂತಹ ಗಂಭೀರ ಪ್ರಕರಣಗಳು ರದ್ದಾಗುತ್ತಿದೆ. ಆದರೆ, ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್‌ನಂತವರು ಕಳೆದ 4-5 ವರ್ಷಗಳಿಂದ ಜೈಲಿನಲ್ಲಿ ಕೊಳೆಯುತ್ತಿದ್ದಾರೆ.

2020ರ ದೆಹಲಿ ಗಲಭೆಗೆ ಸಂಚು ರೂಪಿಸಿದ ಆರೋಪದ ಮೇಲೆ ಉಮರ್ ಖಾಲಿದ್ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ ಜೈಲಿಗಟ್ಟಲಾಗಿದೆ. ಇದೇ ರೀತಿ ಸಿಎಎ ವಿರುದ್ದದ ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಶಾರ್ಜೀಲ್ ಇಮಾಮ್ ವಿರುದ್ದವೂ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ. ಇವರಿಬ್ಬರ ಜಾಮೀನು ಅರ್ಜಿಗಳನ್ನು ಅನೇಕ ಬಾರಿ ತಿರಸ್ಕರಿಸಲಾಗಿದೆ. ವಿಶೇಷವೆಂದರೆ, ವಿಚಾರಣೆಯೇ ಪ್ರಾರಂಭಿಸದೆ, ಆರೋಪ ಸಾಬೀತಾಗದೆ ಜೈಲಿನಲ್ಲಿಡಲಾಗಿದೆ.

ಒಂದು ಕಡೆಗೆ ಬದಲಾಗಿ ಎಲ್ಲವೂ ಒಳ್ಳೆಯದಾಗುತ್ತದೆ : ರಾಜ್‌ದೀಪ್ ಸರ್ದೇಸಾಯಿ 

“ಶೆಹ್ಲಾ ರಶೀದ್ ವಿರುದ್ಧದ 2019ರ ದೇಶದ್ರೋಹ ಪ್ರಕರಣವನ್ನು ದೆಹಲಿ ಪೊಲೀಸರು ಹಿಂತೆಗೆದುಕೊಂಡಿದ್ದಾರೆ; ಹಾರ್ದಿಕ್ ಪಟೇಲ್ ವಿರುದ್ಧದ ದೇಶದ್ರೋಹ ಪ್ರಕರಣವನ್ನು ಹಿಂಪಡೆಯಲು ಗುಜರಾತ್ ಸರ್ಕಾರಕ್ಕೆ ಅಹಮದಾಬಾದ್ ನ್ಯಾಯಾಲಯ ಅನುಮತಿ ನೀಡಿದೆ. ಉಮರ್ ಖಾಲಿದ್‌ನಂತೆ ಬಾಗಲು ನಿರಾಕರಿಸಿದವರು ಇನ್ನೂ 5 ವರ್ಷಗಳಿಂದ ಜಾಮೀನು ಸಹ ಇಲ್ಲದೆ ಜೈಲಿನಲ್ಲಿದ್ದಾರೆ. ಕಾನೂನು ತನ್ನದೇ ಆದ ಹಾದಿ ಹಿಡಿಯುತ್ತಿದೆಯೇ ಅಥವಾ ‘ವಾಷಿಂಗ್ ಮೆಷಿನ್’ ಪಾತ್ರವನ್ನು ನಿರ್ವಹಿಸುತ್ತಿರುವ ರಾಜಕೀಯವೇ? ಸಂದೇಶವು ಸ್ಪಷ್ಟವಾಗಿದೆ: ಬದಿಗಳನ್ನು ಬದಲಾಯಿಸಿ ಎಲ್ಲವೂ ಒಳ್ಳೆಯದಾಗುತ್ತದೆ” ಎಂದು ಹಿರಿಯ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಹೇಳಿದ್ದಾರೆ.

 

“ಬಿಜೆಪಿಗೆ ಸೇರಿ ಅಥವಾ ಉಮರ್ ಖಾಲಿದ್‌ರಂತೆ ಜೈಲಿನಲ್ಲಿ ಕೊಳೆಯಿರಿ”

“ಶೆಹ್ಲಾ ರಶೀದ್ ಮತ್ತು ಹಾರ್ದಿಕ್ ಪಟೇಲ್ ವಿರುದ್ಧದ ದೇಶದ್ರೋಹ ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಸಂದೇಶ ಸ್ಪಷ್ಟವಾಗಿದೆ. ಬಿಜೆಪಿಗೆ ಸೇರಿ ಅಥವಾ ಉಮರ್ ಖಾಲಿದ್‌ರಂತೆ ಜೈಲಿನಲ್ಲಿ ಕೊಳೆಯಿರಿ” ಎಂದು ಹೋರಾಟಗಾರ ತರುಣ್ ಗೌತಮ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಹಾರ್ದಿಕ್ ಪಟೇಲ್, ಶೆಹ್ಲಾ ರಶೀದ್ ಹಿನ್ನೆಲೆ 

ಹಾರ್ದಿಕ್ ಪಟೇಲ್ : ಗುಜರಾತ್‌ನ ಪಾಟೀದಾರ್ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಸಾವಿರಾರು ಯುವಜನರನ್ನು ಒಟ್ಟುಗೂಡಿಸಿ ಧೀರ್ಘ ಕಾಲ ಪ್ರತಿಭಟಿಸಿದ ಹಾರ್ದಿಕ್ ಪಟೇಲ್, ಅಲ್ಲಿನ ಯುವನಾಯಕನಾಗಿ ಬೆಳೆದಿದ್ದರು. ಕಳೆದ 20 ವರ್ಷದಿಂದ ಆಡಳಿತದಲ್ಲಿರುವ ಬಿಜೆಪಿ ಸಮುದಾಯಕ್ಕೆ ಮೋಸ ಮಾಡುತ್ತಿದೆ ಎಂದು ಆರೋಪಿಸಿದ್ದರು. ಅವರ ಪ್ರತಿಭಟನೆಗೆ ಭರಪೂರ ಬೆಂಬಲ ವ್ಯಕ್ತವಾಗಿತ್ತು. 2017ರಲ್ಲಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿ ಹೋರಾಟ ಮುಂದುವರೆಸಿದ್ದರು. ಜಿಗ್ನೇಶ್ ಮೇವಾನಿ, ಹಾರ್ದಿಕ್ ಪಟೇಲ್ ಮತ್ತು ಅಲ್ಪೇಶ್ ಠಾಕೂರ್ ಎಂಬ ಮೂವರು ಯುವಜನರು ಬಿಜೆಪಿಯ ಎದೆ ನಡುಗಿಸಿದ್ದರು. ಆ ಚುನಾವಣೆಯಲ್ಲಿ ಸೋಲಿನ ದವಡೆಗೆ ಸಿಲುಕಿದ್ದ ಬಿಜೆಪಿ ಅಲ್ಪದರಲ್ಲೇ ಸರಳ ಬಹುಮತ ಪಡೆದು ಪಾರಾಗಿತ್ತು. ಆನಂತರ ಹಾರ್ದಿಕ್ ಪಟೇಲ್ ಮತ್ತು ಅಲ್ಪೇಶ್ ಠಾಕೂರ್ ಮೇಲೆ ಬಿಜೆಪಿ ದೇಶದ್ರೋಹ ಸೇರಿ ಇತರ ಪ್ರಕರಣಗಳನ್ನು ದಾಖಲಿಸಿ ಕಿರುಕುಳ ಕೊಟ್ಟಿತ್ತು. ಅವರಿಬ್ಬರೂ ಬಿಜೆಪಿ ಸೇರಿ ಆರೋಪ ಮುಕ್ತರಾದರು. ಅವರ ಮೇಲಿನ ಪ್ರಕರಣ ಹಿಂಪಡೆಯಲಾಗಿದೆ. ಜಿಗ್ನೇಶ್ ಮೇಲೆ ಹಲವು ಪ್ರಕರಣಗಳಿದ್ದು ತನಿಖೆ ಎದುರಿಸುತ್ತಿದ್ದಾರೆ.

ಶೆಹ್ಲಾ ರಶೀದ್  : ಕಾಶ್ಮೀರದ ಈ ಯುವತಿ ಜೆಎನ್‌ಯೂನಲ್ಲಿ ಓದುತ್ತಿದ್ದಾಗ ಬಿಜೆಪಿಯ ಕಡು ವಿರೋಧಿಯಾಗಿದ್ದರು. 2018ರ ಜನವರಿಯಲ್ಲಿ ಬೆಂಗಳೂರಿನಲ್ಲಿ ನಡೆದ ಗೌರಿ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಯ್ಯ, ಜಿಗ್ನೇಶ್, ಉಮರ್ ಖಾಲಿದ್ ಮತ್ತು ಪ್ರಕಾಶ್ ರಾಜ್‌ರವರ ಜೊತೆ ಫೋಟೊ ತೆಗೆಸಿಕೊಂಡಿದ್ದರು. ಜಮ್ಮ ಕಾಶ್ಮೀರ ಪೀಪಲ್ಸ್ ಮೂವ್ ಮೆಂಟ್ ಅನ್ನುವ ಪಕ್ಷ/ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. 2019ರಲ್ಲಿ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಅದನ್ನು ವಿರೋಧಿಸಿ ಆಗಸ್ಟ್ 17ರಂದು ಶೆಹ್ಲಾ ರಶೀದ್ ಸರಣಿ ಟ್ವಿಟ್ ಗಳನ್ನು ಮಾಡಿದ್ದರು. ಪ್ರತಿನಿತ್ಯ, ಅದರಲ್ಲಿಯೂ ರಾತ್ರಿವೇಳೆ ವಿಚಾರಣೆಯ ನೆಪದಲ್ಲಿ ಭಾರತೀಯ ಸೇನೆಯು ಜನರನ್ನು ಕರೆದೊಯ್ದು ಹಿಂಸೆ ನೀಡುತ್ತಿದೆ ಎಂದು ಆರೋಪಿಸಿದ್ದರು. ಆ ಕಾರಣಕ್ಕೆ ಅವರ ಮೇಲೆ ಉದ್ದೇಶಪೂರ್ವಕ ಹಿಂಸೆಗೆ ಪ್ರಚೋದನೆ ಮತ್ತು ಸೇನೆಗೆ ಕೆಟ್ಟ ಹೆಸರು ತರುತ್ತಿದ್ದಾರೆಂದು ದೇಶದ್ರೋಹದ ಪ್ರಕರಣ ದಾಖಲಿಸಲಾಗಿತ್ತು. ಆನಂತರ, ನಿಧಾನಕ್ಕೆ ಶೆಹ್ಲಾ ರಶೀದ್ ಬದಲಾದರು. ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಮೋದಿ ಸರ್ಕಾರದ ಕ್ರಮವನ್ನು ಶ್ಲಾಘಿಸಿದರು, ಬಿಜೆಪಿ ಪರ ಟ್ವೀಟ್ ಮಾಡಿದರು. ಈಗ ಅವರ ಮೇಲಿನ ಪ್ರಕರಣವನ್ನು ವಾಪಸ್ ಪಡೆಯಲಾಗಿದೆ.

ಬಿಹಾರ | ಎನ್‌ಡಿಎ ಸರ್ಕಾರವನ್ನು ಬೇರು ಸಹಿತ ಕಿತ್ತೊಗೆಯುತ್ತೇವೆ: ಚುನಾವಣಾ ಪ್ರಚಾರ ಆರಂಭಿಸಿದ ಸಿಪಿಐ-ಎಂಎಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...