Homeಮುಖಪುಟಹಾರ್ದಿಕ್ ಪಟೇಲ್, ಶೆಹ್ಲಾ ರಶೀದ್ ವಿರುದ್ಧದ 'ದೇಶದ್ರೋಹ' ಪ್ರಕರಣಗಳು ವಾಪಸ್ : ಬಿಜೆಪಿ ಬೆಂಬಲಿಸಿದರೆ ಗಂಭೀರ...

ಹಾರ್ದಿಕ್ ಪಟೇಲ್, ಶೆಹ್ಲಾ ರಶೀದ್ ವಿರುದ್ಧದ ‘ದೇಶದ್ರೋಹ’ ಪ್ರಕರಣಗಳು ವಾಪಸ್ : ಬಿಜೆಪಿ ಬೆಂಬಲಿಸಿದರೆ ಗಂಭೀರ ಕೇಸ್‌ಗಳು ರದ್ದು?

- Advertisement -
- Advertisement -

2015ರ ಪಾಟಿದಾರ್ ಮೀಸಲಾತಿ ಆಂದೋಲನದ ನೇತೃತ್ವ ವಹಿಸಿದ್ದ ಬಿಜೆಪಿ ಶಾಸಕ ಹಾರ್ದಿಕ್ ಪಟೇಲ್ ಮತ್ತು ಇತರ ನಾಲ್ವರ ವಿರುದ್ಧ ದಾಖಲಾಗಿದ್ದ ದೇಶದ್ರೋಹ ಪ್ರಕರಣವನ್ನು ಹಿಂಪಡೆಯಲು ಅಹಮದಾಬಾದ್ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಗುಜರಾತ್ ಸರ್ಕಾರಕ್ಕೆ ಅನುಮತಿ ನೀಡಿದೆ.

ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ವಿಶೇಷ ಸಾರ್ವಜನಿಕ ಅಭಿಯೋಜಕ ಸುಧೀರ್ ಬ್ರಹ್ಮಭಟ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಮನೀಶ್ ಪುರೋಹಿತ್ ಶನಿವಾರ (ಮಾ.1) ಈ ಸಂಬಂಧ ಎರಡು ಆದೇಶಗಳನ್ನು ಹೊರಡಿಸಿದ್ದಾರೆ.

“ಕಾನೂನುಬದ್ಧವಾಗಿ ಮತ್ತು ಸಾಮಾಜಿಕವಾಗಿ ಸಾಧ್ಯವಿಲ್ಲ” ಎಂದು ತಿಳಿದಿದ್ದರೂ ಸಹ, ಹಾರ್ದಿಕ್ ಪಟೇಲ್, ದಿನೇಶ್ ಬಂಭಾನಿಯಾ, ಚಿರಾಗ್ ಪಟೇಲ್, ಕೇತನ್ ಪಟೇಲ್ ಮತ್ತು ಅಲ್ಪೇಶ್ ಕಥೇರಿಯಾ ಪಾಟಿದಾರ್ ಅಥವಾ ಪಟೇಲ್ ಸಮುದಾಯದ ಸದಸ್ಯರನ್ನು ಒಬಿಸಿ ಪಟ್ಟಿಗೆ ಸೇರಿಸಲು ಆಂದೋಲನ ನಡೆಸುವಂತೆ 2015ರಲ್ಲಿ ಪ್ರಚೋದಿಸಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಲಾಗಿತ್ತು.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124ಎ (ದೇಶದ್ರೋಹ), 121 (ಭಾರತ ಸರ್ಕಾರದ ವಿರುದ್ಧ ಯುದ್ಧ ಮಾಡುವುದು ಅಥವಾ ಯುದ್ಧ ಮಾಡಲು ಪ್ರಯತ್ನಿಸುವುದು ಅಥವಾ ಯುದ್ಧ ಮಾಡಲು ಪ್ರೇರೇಪಿಸುವುದು), 121ಎ (ಸೆಕ್ಷನ್ 121 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳನ್ನು ಮಾಡಲು ಸಂಚು ರೂಪಿಸುವುದು), 153ಎ (ಧರ್ಮ, ಜನಾಂಗ, ಜನ್ಮಸ್ಥಳ, ನಿವಾಸ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸಾಮರಸ್ಯದ ವಿರುದ್ದ ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು) ಮತ್ತು 153ಬಿ (ಆಪಾದನೆ, ರಾಷ್ಟ್ರೀಯ ಏಕೀಕರಣದ ವಿರುದ್ದ ಪೂರ್ವಾಗ್ರಹ ಪೀಡಿತ ಹೇಳಿಕೆಗಳು) ಅಡಿಯಲ್ಲಿ ಆರೋಪ ಹೊರಿಸಲಾಗಿತ್ತು.

ಕಳೆದ ತಿಂಗಳು ಬಿಜೆಪಿ ಸರ್ಕಾರ ಹಿಂಪಡೆಯುವುದಾಗಿ ಘೋಷಿಸಿದ ಒಂಬತ್ತು ಪಾಟೀದಾರ್ ಕೋಟಾ ಆಂದೋಲನ ಪ್ರಕರಣಗಳಲ್ಲಿ ಇದೂ ಒಂದು. 2015 ರ ಪಾಟೀದಾರ್ ಆಂದೋಲನಕ್ಕೆ ಸಂಬಂಧಿಸಿದಂತೆ ಸುಮಾರು 300 ಪ್ರಕರಣಗಳು ದಾಖಲಾಗಿವೆ.

ಶೆಹ್ಲಾ ರಶೀದ್ ವಿರುದ್ದದ ದೇಶದ್ರೋಹ ಪ್ರಕರಣ ವಾಪಸ್!

2019ರಲ್ಲಿ ದಾಖಲಾಗಿದ್ದ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿ ನಾಯಕಿ ಶೆಹ್ಲಾ ರಶೀದ್ ಅವರ ವಿರುದ್ಧದ ಮೊಕದ್ದಮೆಯನ್ನು ಹಿಂಪಡೆಯಲು ದೆಹಲಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯ ಗುರುವಾರ (ಫೆ.27) ಸ್ವೀಕರಿಸಿದೆ.

ಸೆಪ್ಟೆಂಬರ್ 2019ರಲ್ಲಿ, ಕಾಶ್ಮೀರದಲ್ಲಿ ಸಶಸ್ತ್ರ ಪಡೆಗಳ ಬಗ್ಗೆ ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ ರಶೀದ್ ವಿರುದ್ಧ ದೇಶದ್ರೋಹ ಮತ್ತು ಇತರ ಕ್ರಿಮಿನಲ್ ಆರೋಪಗಳನ್ನು ಹೊರಿಸಲಾಗಿತ್ತು.

ವಕೀಲ ಅಲಖ್ ಅಲೋಕ್ ಶ್ರೀವಾಸ್ತವ ಅವರ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124ಎ (ದೇಶದ್ರೋಹ), 153ಎ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆಯ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 153 (ಗಲಭೆಯನ್ನು ಉಂಟುಮಾಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪ್ರಚೋದನೆ ನೀಡುವುದು), 504 (ಶಾಂತಿ ಕದಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಅವಮಾನಿಸುವುದು) ಮತ್ತು 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನಿಡಿದ್ದ 370ನೇ ವಿಧಿಯನ್ನು ಆಗಸ್ಟ್ 18, 2019ರಂದು ರದ್ದುಗೊಳಿಸಿ, ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಕಣಿವೆಯಲ್ಲಿ ಮಕ್ಕಳು ಮತ್ತು ಯುವಕರ ಮೇಲೆ ಸಶಸ್ತ್ರ ಪಡೆಗಳು ದೌರ್ಜನ್ಯವೆಸಗಿವೆ ಎಂದು ರಶೀದ್ ಆರೋಪಿಸಿದ್ದರು.

ಜೈಲಿನಲ್ಲಿ ಕೊಳೆಯುತ್ತಿರುವ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ 

ಬಿಜೆಪಿ ಬೆಂಬಲಿಸಿದವರ ವಿರುದ್ದದ ದೇಶದ್ರೋಹಗಳಂತಹ ಗಂಭೀರ ಪ್ರಕರಣಗಳು ರದ್ದಾಗುತ್ತಿದೆ. ಆದರೆ, ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್‌ನಂತವರು ಕಳೆದ 4-5 ವರ್ಷಗಳಿಂದ ಜೈಲಿನಲ್ಲಿ ಕೊಳೆಯುತ್ತಿದ್ದಾರೆ.

2020ರ ದೆಹಲಿ ಗಲಭೆಗೆ ಸಂಚು ರೂಪಿಸಿದ ಆರೋಪದ ಮೇಲೆ ಉಮರ್ ಖಾಲಿದ್ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ ಜೈಲಿಗಟ್ಟಲಾಗಿದೆ. ಇದೇ ರೀತಿ ಸಿಎಎ ವಿರುದ್ದದ ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಶಾರ್ಜೀಲ್ ಇಮಾಮ್ ವಿರುದ್ದವೂ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ. ಇವರಿಬ್ಬರ ಜಾಮೀನು ಅರ್ಜಿಗಳನ್ನು ಅನೇಕ ಬಾರಿ ತಿರಸ್ಕರಿಸಲಾಗಿದೆ. ವಿಶೇಷವೆಂದರೆ, ವಿಚಾರಣೆಯೇ ಪ್ರಾರಂಭಿಸದೆ, ಆರೋಪ ಸಾಬೀತಾಗದೆ ಜೈಲಿನಲ್ಲಿಡಲಾಗಿದೆ.

ಒಂದು ಕಡೆಗೆ ಬದಲಾಗಿ ಎಲ್ಲವೂ ಒಳ್ಳೆಯದಾಗುತ್ತದೆ : ರಾಜ್‌ದೀಪ್ ಸರ್ದೇಸಾಯಿ 

“ಶೆಹ್ಲಾ ರಶೀದ್ ವಿರುದ್ಧದ 2019ರ ದೇಶದ್ರೋಹ ಪ್ರಕರಣವನ್ನು ದೆಹಲಿ ಪೊಲೀಸರು ಹಿಂತೆಗೆದುಕೊಂಡಿದ್ದಾರೆ; ಹಾರ್ದಿಕ್ ಪಟೇಲ್ ವಿರುದ್ಧದ ದೇಶದ್ರೋಹ ಪ್ರಕರಣವನ್ನು ಹಿಂಪಡೆಯಲು ಗುಜರಾತ್ ಸರ್ಕಾರಕ್ಕೆ ಅಹಮದಾಬಾದ್ ನ್ಯಾಯಾಲಯ ಅನುಮತಿ ನೀಡಿದೆ. ಉಮರ್ ಖಾಲಿದ್‌ನಂತೆ ಬಾಗಲು ನಿರಾಕರಿಸಿದವರು ಇನ್ನೂ 5 ವರ್ಷಗಳಿಂದ ಜಾಮೀನು ಸಹ ಇಲ್ಲದೆ ಜೈಲಿನಲ್ಲಿದ್ದಾರೆ. ಕಾನೂನು ತನ್ನದೇ ಆದ ಹಾದಿ ಹಿಡಿಯುತ್ತಿದೆಯೇ ಅಥವಾ ‘ವಾಷಿಂಗ್ ಮೆಷಿನ್’ ಪಾತ್ರವನ್ನು ನಿರ್ವಹಿಸುತ್ತಿರುವ ರಾಜಕೀಯವೇ? ಸಂದೇಶವು ಸ್ಪಷ್ಟವಾಗಿದೆ: ಬದಿಗಳನ್ನು ಬದಲಾಯಿಸಿ ಎಲ್ಲವೂ ಒಳ್ಳೆಯದಾಗುತ್ತದೆ” ಎಂದು ಹಿರಿಯ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಹೇಳಿದ್ದಾರೆ.

 

“ಬಿಜೆಪಿಗೆ ಸೇರಿ ಅಥವಾ ಉಮರ್ ಖಾಲಿದ್‌ರಂತೆ ಜೈಲಿನಲ್ಲಿ ಕೊಳೆಯಿರಿ”

“ಶೆಹ್ಲಾ ರಶೀದ್ ಮತ್ತು ಹಾರ್ದಿಕ್ ಪಟೇಲ್ ವಿರುದ್ಧದ ದೇಶದ್ರೋಹ ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಸಂದೇಶ ಸ್ಪಷ್ಟವಾಗಿದೆ. ಬಿಜೆಪಿಗೆ ಸೇರಿ ಅಥವಾ ಉಮರ್ ಖಾಲಿದ್‌ರಂತೆ ಜೈಲಿನಲ್ಲಿ ಕೊಳೆಯಿರಿ” ಎಂದು ಹೋರಾಟಗಾರ ತರುಣ್ ಗೌತಮ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಹಾರ್ದಿಕ್ ಪಟೇಲ್, ಶೆಹ್ಲಾ ರಶೀದ್ ಹಿನ್ನೆಲೆ 

ಹಾರ್ದಿಕ್ ಪಟೇಲ್ : ಗುಜರಾತ್‌ನ ಪಾಟೀದಾರ್ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಸಾವಿರಾರು ಯುವಜನರನ್ನು ಒಟ್ಟುಗೂಡಿಸಿ ಧೀರ್ಘ ಕಾಲ ಪ್ರತಿಭಟಿಸಿದ ಹಾರ್ದಿಕ್ ಪಟೇಲ್, ಅಲ್ಲಿನ ಯುವನಾಯಕನಾಗಿ ಬೆಳೆದಿದ್ದರು. ಕಳೆದ 20 ವರ್ಷದಿಂದ ಆಡಳಿತದಲ್ಲಿರುವ ಬಿಜೆಪಿ ಸಮುದಾಯಕ್ಕೆ ಮೋಸ ಮಾಡುತ್ತಿದೆ ಎಂದು ಆರೋಪಿಸಿದ್ದರು. ಅವರ ಪ್ರತಿಭಟನೆಗೆ ಭರಪೂರ ಬೆಂಬಲ ವ್ಯಕ್ತವಾಗಿತ್ತು. 2017ರಲ್ಲಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿ ಹೋರಾಟ ಮುಂದುವರೆಸಿದ್ದರು. ಜಿಗ್ನೇಶ್ ಮೇವಾನಿ, ಹಾರ್ದಿಕ್ ಪಟೇಲ್ ಮತ್ತು ಅಲ್ಪೇಶ್ ಠಾಕೂರ್ ಎಂಬ ಮೂವರು ಯುವಜನರು ಬಿಜೆಪಿಯ ಎದೆ ನಡುಗಿಸಿದ್ದರು. ಆ ಚುನಾವಣೆಯಲ್ಲಿ ಸೋಲಿನ ದವಡೆಗೆ ಸಿಲುಕಿದ್ದ ಬಿಜೆಪಿ ಅಲ್ಪದರಲ್ಲೇ ಸರಳ ಬಹುಮತ ಪಡೆದು ಪಾರಾಗಿತ್ತು. ಆನಂತರ ಹಾರ್ದಿಕ್ ಪಟೇಲ್ ಮತ್ತು ಅಲ್ಪೇಶ್ ಠಾಕೂರ್ ಮೇಲೆ ಬಿಜೆಪಿ ದೇಶದ್ರೋಹ ಸೇರಿ ಇತರ ಪ್ರಕರಣಗಳನ್ನು ದಾಖಲಿಸಿ ಕಿರುಕುಳ ಕೊಟ್ಟಿತ್ತು. ಅವರಿಬ್ಬರೂ ಬಿಜೆಪಿ ಸೇರಿ ಆರೋಪ ಮುಕ್ತರಾದರು. ಅವರ ಮೇಲಿನ ಪ್ರಕರಣ ಹಿಂಪಡೆಯಲಾಗಿದೆ. ಜಿಗ್ನೇಶ್ ಮೇಲೆ ಹಲವು ಪ್ರಕರಣಗಳಿದ್ದು ತನಿಖೆ ಎದುರಿಸುತ್ತಿದ್ದಾರೆ.

ಶೆಹ್ಲಾ ರಶೀದ್  : ಕಾಶ್ಮೀರದ ಈ ಯುವತಿ ಜೆಎನ್‌ಯೂನಲ್ಲಿ ಓದುತ್ತಿದ್ದಾಗ ಬಿಜೆಪಿಯ ಕಡು ವಿರೋಧಿಯಾಗಿದ್ದರು. 2018ರ ಜನವರಿಯಲ್ಲಿ ಬೆಂಗಳೂರಿನಲ್ಲಿ ನಡೆದ ಗೌರಿ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಯ್ಯ, ಜಿಗ್ನೇಶ್, ಉಮರ್ ಖಾಲಿದ್ ಮತ್ತು ಪ್ರಕಾಶ್ ರಾಜ್‌ರವರ ಜೊತೆ ಫೋಟೊ ತೆಗೆಸಿಕೊಂಡಿದ್ದರು. ಜಮ್ಮ ಕಾಶ್ಮೀರ ಪೀಪಲ್ಸ್ ಮೂವ್ ಮೆಂಟ್ ಅನ್ನುವ ಪಕ್ಷ/ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. 2019ರಲ್ಲಿ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಅದನ್ನು ವಿರೋಧಿಸಿ ಆಗಸ್ಟ್ 17ರಂದು ಶೆಹ್ಲಾ ರಶೀದ್ ಸರಣಿ ಟ್ವಿಟ್ ಗಳನ್ನು ಮಾಡಿದ್ದರು. ಪ್ರತಿನಿತ್ಯ, ಅದರಲ್ಲಿಯೂ ರಾತ್ರಿವೇಳೆ ವಿಚಾರಣೆಯ ನೆಪದಲ್ಲಿ ಭಾರತೀಯ ಸೇನೆಯು ಜನರನ್ನು ಕರೆದೊಯ್ದು ಹಿಂಸೆ ನೀಡುತ್ತಿದೆ ಎಂದು ಆರೋಪಿಸಿದ್ದರು. ಆ ಕಾರಣಕ್ಕೆ ಅವರ ಮೇಲೆ ಉದ್ದೇಶಪೂರ್ವಕ ಹಿಂಸೆಗೆ ಪ್ರಚೋದನೆ ಮತ್ತು ಸೇನೆಗೆ ಕೆಟ್ಟ ಹೆಸರು ತರುತ್ತಿದ್ದಾರೆಂದು ದೇಶದ್ರೋಹದ ಪ್ರಕರಣ ದಾಖಲಿಸಲಾಗಿತ್ತು. ಆನಂತರ, ನಿಧಾನಕ್ಕೆ ಶೆಹ್ಲಾ ರಶೀದ್ ಬದಲಾದರು. ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಮೋದಿ ಸರ್ಕಾರದ ಕ್ರಮವನ್ನು ಶ್ಲಾಘಿಸಿದರು, ಬಿಜೆಪಿ ಪರ ಟ್ವೀಟ್ ಮಾಡಿದರು. ಈಗ ಅವರ ಮೇಲಿನ ಪ್ರಕರಣವನ್ನು ವಾಪಸ್ ಪಡೆಯಲಾಗಿದೆ.

ಬಿಹಾರ | ಎನ್‌ಡಿಎ ಸರ್ಕಾರವನ್ನು ಬೇರು ಸಹಿತ ಕಿತ್ತೊಗೆಯುತ್ತೇವೆ: ಚುನಾವಣಾ ಪ್ರಚಾರ ಆರಂಭಿಸಿದ ಸಿಪಿಐ-ಎಂಎಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...