Homeಮುಖಪುಟದೇಶದ್ರೋಹ: ಪ್ರತಿಯೊಬ್ಬ ಪತ್ರಕರ್ತನು ರಕ್ಷಣೆಗೆ ಅರ್ಹನಾಗಿರುತ್ತಾನೆ ಎಂದ ಸುಪ್ರೀಂ ಕೋರ್ಟ್

ದೇಶದ್ರೋಹ: ಪ್ರತಿಯೊಬ್ಬ ಪತ್ರಕರ್ತನು ರಕ್ಷಣೆಗೆ ಅರ್ಹನಾಗಿರುತ್ತಾನೆ ಎಂದ ಸುಪ್ರೀಂ ಕೋರ್ಟ್

- Advertisement -
- Advertisement -

ಪ್ರತಿಯೊಬ್ಬ ಪತ್ರಕರ್ತನನ್ನು ದೇಶದ್ರೋಹ ಆರೋಪಗಳಿಂದ 1962 ರ ಆದೇಶವು ರಕ್ಷಿಸುತ್ತದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಪತ್ರಕರ್ತ ವಿನೋದ್ ದುವಾ ವಿರುದ್ಧದ ದೇಶದ್ರೋಹ ಪ್ರಕರಣವನ್ನು ಗುರುವಾರ ರದ್ದುಗೊಳಿಸಿದೆ.

ಬಿಜೆಪಿ ಮುಖಂಡರ ದೂರಿನ ಆಧಾರದ ಮೇಲೆ ವಿನೋದ್ ದುವಾ ಅವರ ಮೇಲೆ ಕಳೆದ ವರ್ಷ ನಡೆದಿದ್ದ ದೆಹಲಿ ಗಲಭೆ ಕುರಿತು ಹಿಮಾಚಲ ಪ್ರದೇಶದಲ್ಲಿ ದೇಶದ್ರೋಹದ ಆರೋಪವನ್ನು ಹೊರಿಸಲಾಗಿತ್ತು. ನಕಲಿ ಸುದ್ದಿಗಳನ್ನು ಹರಡುವುದು, ಸಾರ್ವಜನಿಕ ಗಲಭೆಗೆ ಕಾರಣವಾಗುವುದು, ಮಾನಹಾನಿಕರ ವಿಷಯಗಳನ್ನು ಮುದ್ರಿಸುವುದು ಮತ್ತು ಸಾರ್ವಜನಿಕವಾಗಿ ದ್ವೇಷಪೂರಿತ ಹೇಳಿಕೆಗಳನ್ನು ನೀಡುವುದು ಎಂಬ ಆರೋಪಗಳಲ್ಲಿ ಪತ್ರಕರ್ತ ವಿನೋದ್ ದುವಾ ವಿರುದ್ಧ ಪ್ರಕರಣ ದಾಖಲಾಗಿತ್ತು.

ಬಿಜೆಪಿ ಮುಖಂಡನ ದೂರಿನ ವಿರುದ್ಧ ಹಿರಿಯ ಪತ್ರಕರ್ತ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. “ದೇಶದ್ರೋಹದ ಕುರಿತಾದ ಕೇದಾರ ನಾಥ್ ಸಿಂಗ್ ತೀರ್ಪಿನಡಿಯಲ್ಲಿ ಪ್ರತಿಯೊಬ್ಬ ಪತ್ರಕರ್ತರಿಗೂ ರಕ್ಷಣೆಗೆ ಅರ್ಹತೆ ಇರುತ್ತದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದ ಪ್ರತಿ ಹಳ್ಳಿ, ವಾರ್ಡ್‌ಗಳಿಗೂ ಕೆಸಿವಿಟಿ ಕೊರೊನಾ ವಾಲಂಟಿಯರ್‌ ತಂಡ, ನೀವು ಕೈಜೋಡಿಸಬಹುದು

ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಸಮಿತಿಯು ಅನುಮತಿ ನೀಡದ ಹೊರತು 10 ವರ್ಷಗಳ ಅನುಭವ ಹೊಂದಿರುವ ಯಾವುದೇ ಪತ್ರಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಬಾರದು ಎಂದು ವಿನೋದ್ ದುವಾ ಮನವಿ ಮಾಡಿದ್ದರು. ಆದರೆ  ಅವರ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತು.

ಈ ಮನವಿಯನ್ನು ಅಂಗೀಕರಿಸಿದರೇ ಶಾಸಕಾಂಗದ ಅಧಿಕಾರವನ್ನು ಅತಿಕ್ರಮಿಸುತ್ತದೆ ಎಂದು ನ್ಯಾಯಮೂರ್ತಿಗಳಾದ ಯು ಯು ಲಲಿತ್ ಮತ್ತು ವಿನೀತ್ ಸರಣ್ ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿಯ ಕೆಲವು ಭಾಗಗಳಲ್ಲಿ ನಡೆದ ಹಿಂಸಾಚಾರದ ಬಗ್ಗೆ ಬಿಜೆಪಿ ಮುಖಂಡರು ವಿನೋದ್ ದುವಾ ಅವರ ಕಾರ್ಯಕ್ರಮದ ವಿರುದ್ಧ ದೂರು ನೀಡಿದ್ದರು. ಫೆಬ್ರವರಿ 24, 2020 ರಂದು ನಡೆದ ದೆಹಲಿ ಘರ್ಷಣೆಯಲ್ಲಿ 50 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು ಮತ್ತು 200 ಮಂದಿ ಗಾಯಗೊಂಡಿದ್ದರು.

1962 ರ ಸುಪ್ರೀಂ ಕೋರ್ಟ್ ತೀರ್ಪು ಪ್ರಕಾರ  “ಸರ್ಕಾರದ ಕಾರ್ಯಗಳಲ್ಲಿ ಸುಧಾರಣೆ ಅಥವಾ ಕಾನೂನುಬದ್ಧ ವಿಧಾನಗಳಿಂದ ಮಾರ್ಪಾಡು ಮಾಡುವ ಉದ್ದೇಶಕ್ಕಾಗಿ ತೀಕ್ಷ್ಣವಾದ ಪದಗಳನ್ನು ಬಳಸುವುದು ದೇಶದ್ರೋಹವಲ್ಲ”.


ಇದನ್ನೂ ಓದಿ: ಮಾನವ ಹಕ್ಕು ಆಯೋಗದ ಅಧ್ಯಕ್ಷ, ಸದಸ್ಯರ ನೇಮಕ: ಎಸ್‌ಸಿ/ಎಸ್‌ಟಿಗಳಿಗೆ ಪ್ರಾಧಾನ್ಯವಿಲ್ಲವೇಕೆ ಎಂದ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...