Homeಮುಖಪುಟಸರ್ಕಾರದಿಂದ ದೇಶದ್ರೋಹ ಕಾನೂನು ದುರುಪಯೋಗ, ಅದನ್ನು ರದ್ದುಗೊಳಿಸಬೇಕು : ನಿವೃತ್ತ ಸುಪ್ರೀಂ ನ್ಯಾಯಾಧೀಶ

ಸರ್ಕಾರದಿಂದ ದೇಶದ್ರೋಹ ಕಾನೂನು ದುರುಪಯೋಗ, ಅದನ್ನು ರದ್ದುಗೊಳಿಸಬೇಕು : ನಿವೃತ್ತ ಸುಪ್ರೀಂ ನ್ಯಾಯಾಧೀಶ

ದಿ ವೈರ್ ಸಂದರ್ಶನ| ನಾಗರಿಕರಲ್ಲಿ ಭಯವನ್ನು ಸೃಷ್ಟಿಸಲು ದೇಶದ್ರೋಹ ಕಾನೂನನ್ನು ಸರ್ಕಾರಗಳು ಬಳಸುತ್ತಿವೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

- Advertisement -
- Advertisement -

ಅದರ ದುರುಪಯೋಗದ ಪ್ರಕರಣಗಳು “ಘಾತೀಯವಾಗಿ” (ವಿಪರೀತ ಪ್ರಮಾಣದಲ್ಲಿ) ಹೆಚ್ಚುತ್ತಿವೆ ಎಂದು ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124 ಎ- ದೇಶದ್ರೋಹದ ಕಾನೂನನ್ನು “ತಕ್ಷಣವೇ ರದ್ದುಗೊಳಿಸಬೇಕು” ಎಂದು ಗುಪ್ತಾ ಹೇಳಿದ್ದಾರೆ. ಭಿನ್ನಮತವನ್ನು ತಡೆಗಟ್ಟಲು ಅಥವಾ ತಡೆಯಲು, ನಾಗರಿಕರಲ್ಲಿ ಭಯವನ್ನು ಸೃಷ್ಟಿಸಲು ಇದನ್ನು ಸರ್ಕಾರಗಳು ಬಳಸುತ್ತಿವೆ ಎಂದು ನ್ಯಾಯಮೂರ್ತಿ ದೀಪಕ್ ಗುಪ್ತಾ ಹೇಳಿದ್ದಾರೆ.

ಸುಮಾರು 60 ವರ್ಷಗಳ ಹಿಂದೆ 1962 ರಲ್ಲಿ ಕೇದಾರ ನಾಥ್ ಸಿಂಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸೆಕ್ಷನ್ 124 ಎ ಅನ್ನು ಉಲ್ಲೇಖಿಸಿದೆ ಮತ್ತು ಹಿಂಸಾಚಾರಕ್ಕೆ ಪ್ರಚೋದನೆ ಇದ್ದಲ್ಲಿ ಮಾತ್ರ ಇದು ಅನ್ವಯಿಸುತ್ತದೆ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದ್ದಾರೆ.

ಇದನ್ನೂ ಓದಿ: ಟ್ರ್ಯಾಕ್ಟರ್‌ ರ್‍ಯಾಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿ 6 ಜನರ ವಿರುದ್ಧ ದೇಶದ್ರೋಹ ಪ್ರಕರಣ!

ಆರೋಪ ಹೊರಿಸಲು ಹಿಂಸಾಚಾರಕ್ಕೆ ಪ್ರಚೋದನೆಯ ವಿಷಯ ಅಗತ್ಯವಾದ ಘಟಕಾಂಶವಾಗಿದೆ ಮತ್ತು ಆ ಪ್ರಚೋದನೆಯಿಲ್ಲದೆ ಸೆಕ್ಷನ್ 124 ಎ ಅಂದರೆ ದೇಶದ್ರೋಹ ಕಾನೂನನ್ನು ಬಳಸಲಾಗುವುದಿಲ್ಲ. ಆದಾಗ್ಯೂ, ದೇಶಾದ್ಯಂತ ಬಹುಪಾಲು ಮ್ಯಾಜಿಸ್ಟ್ರೇಟ್‌ಗಳಿಗೆ ಈ ಅಂಶ ತಿಳಿದಂತಿಲ್ಲ ಅಥವಾ ಅದನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಸುಪ್ರೀಂ ಕೋರ್ಟ್ ಪದೇ ಪದೇ ಈ ಓದುವಿಕೆಯನ್ನು ( 1962 ರ ಉಲ್ಲೇಖ) ಪುನರುಚ್ಚರಿಸಿದೆ ಮತ್ತು ಸುಪ್ರೀಂ ಕೋರ್ಟ್‌ನ ನಿಲುವಿನ ಬಗ್ಗೆ ಯಾವುದೇ ಸಂದೇಹ ಅಥವಾ ಗೊಂದಲಗಳಿಲ್ಲ. ಇದರರ್ಥ ಸೆಕ್ಷನ್ 124 ಎ ಮುದ್ರಣದಲ್ಲಿ ಇರುವಂತೆ ಇರಲಾರದು. ಇದನ್ನು ತೀರಾ ವಿರಳವಾಗಿ ಬಳಸಬೇಕು ಎಂಬುದು ಕೂಡ ಸತ್ಯ ಎಂದು ಗುಪ್ತಾ ಹೇಳಿದ್ದಾರೆ.

ದಿ ವೈರ್‌ಗಾಗಿ ಕರಣ್ ಥಾಪರ್‌ಗೆ ನೀಡಿದ 36 ನಿಮಿಷಗಳ ಸಂದರ್ಶನದಲ್ಲಿ, ನ್ಯಾಯಮೂರ್ತಿ ಗುಪ್ತಾ, ತಮ್ಮ ಮೊದಲ ಆದ್ಯತೆಯೆಂದರೆ ದೇಶದ್ರೋಹದ ಕಾನೂನನ್ನು ತಕ್ಷಣವೇ ರದ್ದುಪಡಿಸುವುದು, ಎರಡನೆಯದು ಪೊಲೀಸರು ಆರೋಪವನ್ನು ಹೇಗೆ ಅನ್ವಯಿಸಬೇಕು ಎಂಬುದರ ಕುರಿತು ವಿವರವಾದ ಮಾರ್ಗಸೂಚಿಗಳನ್ನು ಸುಪ್ರೀಂ ಕೋರ್ಟ್‌ಗೆ ತಿಳಿಸಬೇಕು. ಅದನ್ನು ತೆಗೆದುಕೊಳ್ಳುವ ಮೊದಲು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಕೌಂಟರ್‌ಸೈನ್ ಮಾಡುವುದು ಅತ್ಯಗತ್ಯ ಎಂದು ಅವರು ಹೇಳಿದರು. ಸುಪ್ರೀಂ ಕೋರ್ಟ್ ಶೀಘ್ರದಲ್ಲೇ ಇಂತಹ ಮಾರ್ಗಸೂಚಿಗಳನ್ನು ರೂಪಿಸುತ್ತದೆ ಎಂದು ಅವರು ಆಶಿಸಿದರು.

ಇದನ್ನೂ ಓದಿ: ಮೋದಿ-ಆದಿತ್ಯನಾಥ್ ವಿರುದ್ದ ಟೀಕೆ: 293 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು!

ಈ ವಿಷಯವನ್ನು ಚರ್ಚಿಸುವ ಅಧಿಕಾರ ಹೊಂದಿರುವ ಮುಖ್ಯ ನ್ಯಾಯಮೂರ್ತಿ, ಸೆಕ್ಷನ್ 124 ಎ ಗೆ ಸಂಬಂಧಿಸಿದ ಅವಳಿ ಸಮಸ್ಯೆಗಳನ್ನು ಎತ್ತಬೇಕು: ಅದನ್ನು ದುರುಪಯೋಗಪಡಿಸಿಕೊಳ್ಳುವ ರೀತಿ ಮತ್ತು ತೀವ್ರವಾಗಿ ಹೆಚ್ಚುತ್ತಿರುವ ದುರುಪಯೋಗದ ಪ್ರಕರಣಗಳು- ಈ ವಿಷಯಗಳನ್ನು ಮುಖ್ಯ ನ್ಯಾಯಮೂರ್ತಿ ಎತ್ತಿಕೊಳ್ಳಬೇಕು. ಈ ವಿಷಯವನ್ನು ಪರಿಶೀಲಿಸಲು ಮುಖ್ಯ ನ್ಯಾಯಾಧೀಶರು ತಮ್ಮ ಸು-ಮೋಟು ಅಧಿಕಾರವನ್ನು ಬಳಸುತ್ತಾರೆ ಎಂದು ನಾನು ನಂಬಲಾರೆ. ಈ ವಿಷಯ ಕುರಿತು ಸುಪ್ರೀಂ ಕೋರ್ಟ್‌ಗೆ ಪಿಐಎಲ್ ಅಥವಾ ಸವಾಲನ್ನು ಸಲ್ಲಿಸುವವರೆಗೆ ಕಾಯಬೇಕಾಗಿದೆ ಮತ್ತು ಅದು ಈ ವಿಷಯಕ್ಕೆ ಹೋಗಲು ಸರಿಯಾದ ಮಾರ್ಗವಾಗಿದೆ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದ್ದಾರೆ.

ತಾವು ಮುಖ್ಯ ನ್ಯಾಯಮೂರ್ತಿಯಾಗಿದ್ದರೆ, ಕಾನೂನನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ನಂಬಿದ್ದರೂ ಸಹ, ದೇಶದ್ರೋಹದ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಲು ಕಚೇರಿಯ ಸು-ಮೋಟು ಅಧಿಕಾರವನ್ನು ಬಳಸುವುದಿಲ್ಲ ಎಂದು ಹೇಳಿದರು.

ದಿ ವೈರ್ ಸಂದರ್ಶನದಲ್ಲಿ, ನ್ಯಾಯಮೂರ್ತಿ ಗುಪ್ತಾ ಅವರನ್ನು ಇತ್ತೀಚೆಗೆ ದೇಶದ್ರೋಹದ ಆರೋಪಕ್ಕೆ ಒಳಪಡಿಸಿದ ಮೂರು ಪ್ರಕರಣಗಳ ಬಗ್ಗೆ ಪ್ರಶ್ನಿಸಲಾಯಿತು.

ಮೊದಲು, ದಿಶಾ ರವಿ ಪ್ರಕರಣ. ಟೂಲ್ಕಿಟ್ ಸಂಪಾದಿಸಲು ಅಥವಾ ಅದರ ವಿಷಯಗಳನ್ನು ಟ್ವೀಟ್ ಮಾಡುವುದು ಖಂಡಿತವಾಗಿಯೂ ದೇಶದ್ರೋಹವಲ್ಲ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದ್ದಾರೆ. ತಾನು ಟೂಲ್ಕಿಟ್ ಅನ್ನು ಪರಿಶೀಲಿಸಿದ್ದೇನೆ ಮತ್ತು ಅದರ ವಿಷಯದಲ್ಲಿ ದೇಶದ್ರೋಹಿ ಅಂಶ ಅಥವಾ ಅಪರಾಧವೂ ಇಲ್ಲ ಎಂದು ಅವರು ಹೇಳಿದರು. ದಿಶಾ ರವಿ ಅವರು ಪೋಯೆಟಿಕ್ ಜಸ್ಟೀಸ್ ಫೌಂಡೇಶನ್‌ನ ಸದಸ್ಯರೊಂದಿಗೆ ವೆಬ್‌ನಾರ್‌ನಲ್ಲಿ ಭಾಗಿಯಾಗುವುದು ದೇಶದ್ರೋಹ ಅಥವಾ ಅಪರಾಧವಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: ದಿಶಾ ರವಿಯ ಜಾಮೀನು ಆದೇಶ: ದೇಶದ್ರೋಹದ ಬಗ್ಗೆ ನ್ಯಾಯಾಧೀಶರು ಹೇಳಿದ್ದೇನು?

ಈ ಸಂಬಂಧದಲ್ಲಿ, ಖಲಿಸ್ತಾನವನ್ನು ಚಾಂಪಿಯನ್ ಮಾಡುವ ಅಥವಾ ನಿಷೇಧಿತ ಸಂಘಟನೆಯ ಸದಸ್ಯರಾಗಿರುವ ಯಾರೊಂದಿಗಾದರೂ ಮಾತನಾಡುವುದು ದೇಶದ್ರೋಹ ಅಥವಾ ಅಪರಾಧವೇ ಎಂದು ನ್ಯಾಯಮೂರ್ತಿ ಗುಪ್ತಾ ಅವರನ್ನು ಕೇಳಲಾಯಿತು. ಅವರ ಸ್ಪಷ್ಟ ಉತ್ತರವೆಂದರೆ ಅದು ದೇಶದ್ರೋಹವಲ್ಲ ಮತ್ತು ಅಪರಾಧವಲ್ಲ.

ಎರಡನೆಯದಾಗಿ, ರಿಪಬ್ಲಿಕ್ ದಿನದಂದು ಪ್ರತಿಭಟನಾಕಾರರೊಬ್ಬರು ಗುಂಡು ಹಾರಿಸಲ್ಪಟ್ಟ ಕಾರಣ ಸಾವನ್ನಪ್ಪಿದ್ದಾರೆ ಎಂದು ಪತ್ರಕರ್ತರು ಟ್ವೀಟ್ ಮಾಡುವುದು ದೇಶದ್ರೋಹವಲ್ಲ ಎಂದು ಹೇಳಿದರು, ಟ್ವೀಟ್‌ನ ವಿಷಯ ತಪ್ಪಾಗಿದ್ದರೂ ಅದು ದೇಶದ್ರೋಹ ಅಥವಾ ಅಪರಾಧವಲ್ಲ ಎಂದು ಹೇಳಿದರು. ಇದು ಕಳಪೆ ಪತ್ರಿಕೋದ್ಯಮವಾಗಬಹುದು, ಆದರೆ ಅದು ಅಪರಾಧವಲ್ಲ ಎಂದು ಗುಪ್ತಾ ಅಭಿಪ್ರಾಯ ಪಟ್ಟಿದ್ದಾರೆ.

1995 ರಲ್ಲಿ ಸುಪ್ರೀಂ ಕೋರ್ಟ್ ಬಲ್ವಂತ್ ಸಿಂಗ್ ಪ್ರಕರಣದಲ್ಲಿ ’ಖಲಿಸ್ತಾನ್ ಜಿಂದಾಬಾದ್’ ಎಂದು ಕೂಗುವುದು ದೇಶದ್ರೋಹವಲ್ಲ ಎಂದು ತೀರ್ಪು ನೀಡಿತ್ತು. ಜೆಎನ್‌ಯು ವಿದ್ಯಾರ್ಥಿಗಳು, ’ಭಾರತ್ ತೇರೆ ತುಕ್ಡೆ ತುಕ್ಡೆ ಹೊಂಗೆ ಇನ್ಸಾ ಅಲ್ಲಾ ಇನ್ಸಾ ಅಲ್ಲಾ’ ಎಂದು ಘೋಷಣೆ ಕೂಗಿದ್ದು ದೇಶದ್ರೋಹವೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಗುಪ್ತಾ, ಘೋಷಣೆಯನ್ನು ಹಿಂಸಾಚಾರಕ್ಕೆ ಪೊಲೀಸರು ನೇರವಾಗಿ ಲಿಂಕ್ ಮಾಡಲು ಸಾಧ್ಯವಾದರೆ ಅದು ದೇಶದ್ರೋಹ ಎಂದು ಹೇಳಿದ್ದಾರೆ. ಮೂರು ವರ್ಷಗಳು ಕಳೆದಿವೆ. ಅಂತಹ ಯಾವುದೇ ಪುರಾವೆಗಳು ಮುಂದೆ ಬಂದಿಲ್ಲ ಎಂದು ಅವರು ಹೇಳಿದರು. ಆದ್ದರಿಂದ, ಇದು ದೇಶದ್ರೋಹವಾಗುವ ಸಾಧ್ಯತೆಯಿದೆ ಎಂದು ತಾನು ನಂಬುವುದಿಲ್ಲ ಎಂದು ಹೇಳಿದ್ದಾರೆ.

ನ್ಯಾಯಮೂರ್ತಿ ಗುಪ್ತಾ ಮಂಡಿಸಿದ ಪ್ರಮುಖ ಅಂಶವೆಂದರೆ, ’ಭಾರತ್ ತೇರೆ ತುಕ್ಡೆ ತುಕ್ಡೆ ಹೊಂಗೆ ಇನ್ಸಾ ಅಲ್ಲಾ ಇನ್ಸಾ ಅಲ್ಲಾ’ ಎಂಬ ಘೋಷಣೆ ದೇಶದ್ರೋಹವಲ್ಲ ಮತ್ತು ಇದು ಹಿಂಸಾಚಾರಕ್ಕೆ ಪ್ರಚೋದನೆ ಎಂದು ಪೊಲೀಸರು ಸಾಬೀತುಪಡಿಸಿದರೆ ಮಾತ್ರ ದೇಶದ್ರೋಹವಾಗುತ್ತದೆ.
ಕಳೆದ ತಿಂಗಳು ದಿಶಾ ರವಿ ಅವರಿಗೆ ಜಾಮೀನು ನೀಡುತ್ತಿದ್ದಾಗ, “ಸರ್ಕಾರಗಳ ಗಾಯಗಳನ್ನು ಮುಚ್ಚಿಕೊಳ್ಳಲು ದೇಶದ್ರೋಹದ ಕಾನೂನನ್ನು ಬಳಸಲಾಗುತ್ತಿದೆ’’ ಎಂದು ಕಿರಿಯ ನ್ಯಾಯಾಧೀಶರು ಹೇಳಿದ್ದನ್ನು ತಾನು ಸಂಪೂರ್ಣವಾಗಿ ಒಪ್ಪುತ್ತೇನೆ ಎಂದು ನ್ಯಾಯಮೂರ್ತಿ ಗುಪ್ತಾ ದಿ ವೈರ್‌ಗೆ ತಿಳಿಸಿದರು.

ಇದನ್ನೂ ಓದಿ: ರೈತರು ದೇಶದ್ರೋಹಿಗಳಲ್ಲ, ಕೆಂಪು ಕೋಟೆ ಘರ್ಷಣೆಗೆ ಕೇಂದ್ರದ ಪಿತೂರಿಯೇ ಕಾರಣ: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....