Homeಮುಖಪುಟಸರ್ಕಾರದಿಂದ ದೇಶದ್ರೋಹ ಕಾನೂನು ದುರುಪಯೋಗ, ಅದನ್ನು ರದ್ದುಗೊಳಿಸಬೇಕು : ನಿವೃತ್ತ ಸುಪ್ರೀಂ ನ್ಯಾಯಾಧೀಶ

ಸರ್ಕಾರದಿಂದ ದೇಶದ್ರೋಹ ಕಾನೂನು ದುರುಪಯೋಗ, ಅದನ್ನು ರದ್ದುಗೊಳಿಸಬೇಕು : ನಿವೃತ್ತ ಸುಪ್ರೀಂ ನ್ಯಾಯಾಧೀಶ

ದಿ ವೈರ್ ಸಂದರ್ಶನ| ನಾಗರಿಕರಲ್ಲಿ ಭಯವನ್ನು ಸೃಷ್ಟಿಸಲು ದೇಶದ್ರೋಹ ಕಾನೂನನ್ನು ಸರ್ಕಾರಗಳು ಬಳಸುತ್ತಿವೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

- Advertisement -
- Advertisement -

ಅದರ ದುರುಪಯೋಗದ ಪ್ರಕರಣಗಳು “ಘಾತೀಯವಾಗಿ” (ವಿಪರೀತ ಪ್ರಮಾಣದಲ್ಲಿ) ಹೆಚ್ಚುತ್ತಿವೆ ಎಂದು ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124 ಎ- ದೇಶದ್ರೋಹದ ಕಾನೂನನ್ನು “ತಕ್ಷಣವೇ ರದ್ದುಗೊಳಿಸಬೇಕು” ಎಂದು ಗುಪ್ತಾ ಹೇಳಿದ್ದಾರೆ. ಭಿನ್ನಮತವನ್ನು ತಡೆಗಟ್ಟಲು ಅಥವಾ ತಡೆಯಲು, ನಾಗರಿಕರಲ್ಲಿ ಭಯವನ್ನು ಸೃಷ್ಟಿಸಲು ಇದನ್ನು ಸರ್ಕಾರಗಳು ಬಳಸುತ್ತಿವೆ ಎಂದು ನ್ಯಾಯಮೂರ್ತಿ ದೀಪಕ್ ಗುಪ್ತಾ ಹೇಳಿದ್ದಾರೆ.

ಸುಮಾರು 60 ವರ್ಷಗಳ ಹಿಂದೆ 1962 ರಲ್ಲಿ ಕೇದಾರ ನಾಥ್ ಸಿಂಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸೆಕ್ಷನ್ 124 ಎ ಅನ್ನು ಉಲ್ಲೇಖಿಸಿದೆ ಮತ್ತು ಹಿಂಸಾಚಾರಕ್ಕೆ ಪ್ರಚೋದನೆ ಇದ್ದಲ್ಲಿ ಮಾತ್ರ ಇದು ಅನ್ವಯಿಸುತ್ತದೆ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದ್ದಾರೆ.

ಇದನ್ನೂ ಓದಿ: ಟ್ರ್ಯಾಕ್ಟರ್‌ ರ್‍ಯಾಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿ 6 ಜನರ ವಿರುದ್ಧ ದೇಶದ್ರೋಹ ಪ್ರಕರಣ!

ಆರೋಪ ಹೊರಿಸಲು ಹಿಂಸಾಚಾರಕ್ಕೆ ಪ್ರಚೋದನೆಯ ವಿಷಯ ಅಗತ್ಯವಾದ ಘಟಕಾಂಶವಾಗಿದೆ ಮತ್ತು ಆ ಪ್ರಚೋದನೆಯಿಲ್ಲದೆ ಸೆಕ್ಷನ್ 124 ಎ ಅಂದರೆ ದೇಶದ್ರೋಹ ಕಾನೂನನ್ನು ಬಳಸಲಾಗುವುದಿಲ್ಲ. ಆದಾಗ್ಯೂ, ದೇಶಾದ್ಯಂತ ಬಹುಪಾಲು ಮ್ಯಾಜಿಸ್ಟ್ರೇಟ್‌ಗಳಿಗೆ ಈ ಅಂಶ ತಿಳಿದಂತಿಲ್ಲ ಅಥವಾ ಅದನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಸುಪ್ರೀಂ ಕೋರ್ಟ್ ಪದೇ ಪದೇ ಈ ಓದುವಿಕೆಯನ್ನು ( 1962 ರ ಉಲ್ಲೇಖ) ಪುನರುಚ್ಚರಿಸಿದೆ ಮತ್ತು ಸುಪ್ರೀಂ ಕೋರ್ಟ್‌ನ ನಿಲುವಿನ ಬಗ್ಗೆ ಯಾವುದೇ ಸಂದೇಹ ಅಥವಾ ಗೊಂದಲಗಳಿಲ್ಲ. ಇದರರ್ಥ ಸೆಕ್ಷನ್ 124 ಎ ಮುದ್ರಣದಲ್ಲಿ ಇರುವಂತೆ ಇರಲಾರದು. ಇದನ್ನು ತೀರಾ ವಿರಳವಾಗಿ ಬಳಸಬೇಕು ಎಂಬುದು ಕೂಡ ಸತ್ಯ ಎಂದು ಗುಪ್ತಾ ಹೇಳಿದ್ದಾರೆ.

ದಿ ವೈರ್‌ಗಾಗಿ ಕರಣ್ ಥಾಪರ್‌ಗೆ ನೀಡಿದ 36 ನಿಮಿಷಗಳ ಸಂದರ್ಶನದಲ್ಲಿ, ನ್ಯಾಯಮೂರ್ತಿ ಗುಪ್ತಾ, ತಮ್ಮ ಮೊದಲ ಆದ್ಯತೆಯೆಂದರೆ ದೇಶದ್ರೋಹದ ಕಾನೂನನ್ನು ತಕ್ಷಣವೇ ರದ್ದುಪಡಿಸುವುದು, ಎರಡನೆಯದು ಪೊಲೀಸರು ಆರೋಪವನ್ನು ಹೇಗೆ ಅನ್ವಯಿಸಬೇಕು ಎಂಬುದರ ಕುರಿತು ವಿವರವಾದ ಮಾರ್ಗಸೂಚಿಗಳನ್ನು ಸುಪ್ರೀಂ ಕೋರ್ಟ್‌ಗೆ ತಿಳಿಸಬೇಕು. ಅದನ್ನು ತೆಗೆದುಕೊಳ್ಳುವ ಮೊದಲು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಕೌಂಟರ್‌ಸೈನ್ ಮಾಡುವುದು ಅತ್ಯಗತ್ಯ ಎಂದು ಅವರು ಹೇಳಿದರು. ಸುಪ್ರೀಂ ಕೋರ್ಟ್ ಶೀಘ್ರದಲ್ಲೇ ಇಂತಹ ಮಾರ್ಗಸೂಚಿಗಳನ್ನು ರೂಪಿಸುತ್ತದೆ ಎಂದು ಅವರು ಆಶಿಸಿದರು.

ಇದನ್ನೂ ಓದಿ: ಮೋದಿ-ಆದಿತ್ಯನಾಥ್ ವಿರುದ್ದ ಟೀಕೆ: 293 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು!

ಈ ವಿಷಯವನ್ನು ಚರ್ಚಿಸುವ ಅಧಿಕಾರ ಹೊಂದಿರುವ ಮುಖ್ಯ ನ್ಯಾಯಮೂರ್ತಿ, ಸೆಕ್ಷನ್ 124 ಎ ಗೆ ಸಂಬಂಧಿಸಿದ ಅವಳಿ ಸಮಸ್ಯೆಗಳನ್ನು ಎತ್ತಬೇಕು: ಅದನ್ನು ದುರುಪಯೋಗಪಡಿಸಿಕೊಳ್ಳುವ ರೀತಿ ಮತ್ತು ತೀವ್ರವಾಗಿ ಹೆಚ್ಚುತ್ತಿರುವ ದುರುಪಯೋಗದ ಪ್ರಕರಣಗಳು- ಈ ವಿಷಯಗಳನ್ನು ಮುಖ್ಯ ನ್ಯಾಯಮೂರ್ತಿ ಎತ್ತಿಕೊಳ್ಳಬೇಕು. ಈ ವಿಷಯವನ್ನು ಪರಿಶೀಲಿಸಲು ಮುಖ್ಯ ನ್ಯಾಯಾಧೀಶರು ತಮ್ಮ ಸು-ಮೋಟು ಅಧಿಕಾರವನ್ನು ಬಳಸುತ್ತಾರೆ ಎಂದು ನಾನು ನಂಬಲಾರೆ. ಈ ವಿಷಯ ಕುರಿತು ಸುಪ್ರೀಂ ಕೋರ್ಟ್‌ಗೆ ಪಿಐಎಲ್ ಅಥವಾ ಸವಾಲನ್ನು ಸಲ್ಲಿಸುವವರೆಗೆ ಕಾಯಬೇಕಾಗಿದೆ ಮತ್ತು ಅದು ಈ ವಿಷಯಕ್ಕೆ ಹೋಗಲು ಸರಿಯಾದ ಮಾರ್ಗವಾಗಿದೆ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದ್ದಾರೆ.

ತಾವು ಮುಖ್ಯ ನ್ಯಾಯಮೂರ್ತಿಯಾಗಿದ್ದರೆ, ಕಾನೂನನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ನಂಬಿದ್ದರೂ ಸಹ, ದೇಶದ್ರೋಹದ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಲು ಕಚೇರಿಯ ಸು-ಮೋಟು ಅಧಿಕಾರವನ್ನು ಬಳಸುವುದಿಲ್ಲ ಎಂದು ಹೇಳಿದರು.

ದಿ ವೈರ್ ಸಂದರ್ಶನದಲ್ಲಿ, ನ್ಯಾಯಮೂರ್ತಿ ಗುಪ್ತಾ ಅವರನ್ನು ಇತ್ತೀಚೆಗೆ ದೇಶದ್ರೋಹದ ಆರೋಪಕ್ಕೆ ಒಳಪಡಿಸಿದ ಮೂರು ಪ್ರಕರಣಗಳ ಬಗ್ಗೆ ಪ್ರಶ್ನಿಸಲಾಯಿತು.

ಮೊದಲು, ದಿಶಾ ರವಿ ಪ್ರಕರಣ. ಟೂಲ್ಕಿಟ್ ಸಂಪಾದಿಸಲು ಅಥವಾ ಅದರ ವಿಷಯಗಳನ್ನು ಟ್ವೀಟ್ ಮಾಡುವುದು ಖಂಡಿತವಾಗಿಯೂ ದೇಶದ್ರೋಹವಲ್ಲ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದ್ದಾರೆ. ತಾನು ಟೂಲ್ಕಿಟ್ ಅನ್ನು ಪರಿಶೀಲಿಸಿದ್ದೇನೆ ಮತ್ತು ಅದರ ವಿಷಯದಲ್ಲಿ ದೇಶದ್ರೋಹಿ ಅಂಶ ಅಥವಾ ಅಪರಾಧವೂ ಇಲ್ಲ ಎಂದು ಅವರು ಹೇಳಿದರು. ದಿಶಾ ರವಿ ಅವರು ಪೋಯೆಟಿಕ್ ಜಸ್ಟೀಸ್ ಫೌಂಡೇಶನ್‌ನ ಸದಸ್ಯರೊಂದಿಗೆ ವೆಬ್‌ನಾರ್‌ನಲ್ಲಿ ಭಾಗಿಯಾಗುವುದು ದೇಶದ್ರೋಹ ಅಥವಾ ಅಪರಾಧವಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: ದಿಶಾ ರವಿಯ ಜಾಮೀನು ಆದೇಶ: ದೇಶದ್ರೋಹದ ಬಗ್ಗೆ ನ್ಯಾಯಾಧೀಶರು ಹೇಳಿದ್ದೇನು?

ಈ ಸಂಬಂಧದಲ್ಲಿ, ಖಲಿಸ್ತಾನವನ್ನು ಚಾಂಪಿಯನ್ ಮಾಡುವ ಅಥವಾ ನಿಷೇಧಿತ ಸಂಘಟನೆಯ ಸದಸ್ಯರಾಗಿರುವ ಯಾರೊಂದಿಗಾದರೂ ಮಾತನಾಡುವುದು ದೇಶದ್ರೋಹ ಅಥವಾ ಅಪರಾಧವೇ ಎಂದು ನ್ಯಾಯಮೂರ್ತಿ ಗುಪ್ತಾ ಅವರನ್ನು ಕೇಳಲಾಯಿತು. ಅವರ ಸ್ಪಷ್ಟ ಉತ್ತರವೆಂದರೆ ಅದು ದೇಶದ್ರೋಹವಲ್ಲ ಮತ್ತು ಅಪರಾಧವಲ್ಲ.

ಎರಡನೆಯದಾಗಿ, ರಿಪಬ್ಲಿಕ್ ದಿನದಂದು ಪ್ರತಿಭಟನಾಕಾರರೊಬ್ಬರು ಗುಂಡು ಹಾರಿಸಲ್ಪಟ್ಟ ಕಾರಣ ಸಾವನ್ನಪ್ಪಿದ್ದಾರೆ ಎಂದು ಪತ್ರಕರ್ತರು ಟ್ವೀಟ್ ಮಾಡುವುದು ದೇಶದ್ರೋಹವಲ್ಲ ಎಂದು ಹೇಳಿದರು, ಟ್ವೀಟ್‌ನ ವಿಷಯ ತಪ್ಪಾಗಿದ್ದರೂ ಅದು ದೇಶದ್ರೋಹ ಅಥವಾ ಅಪರಾಧವಲ್ಲ ಎಂದು ಹೇಳಿದರು. ಇದು ಕಳಪೆ ಪತ್ರಿಕೋದ್ಯಮವಾಗಬಹುದು, ಆದರೆ ಅದು ಅಪರಾಧವಲ್ಲ ಎಂದು ಗುಪ್ತಾ ಅಭಿಪ್ರಾಯ ಪಟ್ಟಿದ್ದಾರೆ.

1995 ರಲ್ಲಿ ಸುಪ್ರೀಂ ಕೋರ್ಟ್ ಬಲ್ವಂತ್ ಸಿಂಗ್ ಪ್ರಕರಣದಲ್ಲಿ ’ಖಲಿಸ್ತಾನ್ ಜಿಂದಾಬಾದ್’ ಎಂದು ಕೂಗುವುದು ದೇಶದ್ರೋಹವಲ್ಲ ಎಂದು ತೀರ್ಪು ನೀಡಿತ್ತು. ಜೆಎನ್‌ಯು ವಿದ್ಯಾರ್ಥಿಗಳು, ’ಭಾರತ್ ತೇರೆ ತುಕ್ಡೆ ತುಕ್ಡೆ ಹೊಂಗೆ ಇನ್ಸಾ ಅಲ್ಲಾ ಇನ್ಸಾ ಅಲ್ಲಾ’ ಎಂದು ಘೋಷಣೆ ಕೂಗಿದ್ದು ದೇಶದ್ರೋಹವೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಗುಪ್ತಾ, ಘೋಷಣೆಯನ್ನು ಹಿಂಸಾಚಾರಕ್ಕೆ ಪೊಲೀಸರು ನೇರವಾಗಿ ಲಿಂಕ್ ಮಾಡಲು ಸಾಧ್ಯವಾದರೆ ಅದು ದೇಶದ್ರೋಹ ಎಂದು ಹೇಳಿದ್ದಾರೆ. ಮೂರು ವರ್ಷಗಳು ಕಳೆದಿವೆ. ಅಂತಹ ಯಾವುದೇ ಪುರಾವೆಗಳು ಮುಂದೆ ಬಂದಿಲ್ಲ ಎಂದು ಅವರು ಹೇಳಿದರು. ಆದ್ದರಿಂದ, ಇದು ದೇಶದ್ರೋಹವಾಗುವ ಸಾಧ್ಯತೆಯಿದೆ ಎಂದು ತಾನು ನಂಬುವುದಿಲ್ಲ ಎಂದು ಹೇಳಿದ್ದಾರೆ.

ನ್ಯಾಯಮೂರ್ತಿ ಗುಪ್ತಾ ಮಂಡಿಸಿದ ಪ್ರಮುಖ ಅಂಶವೆಂದರೆ, ’ಭಾರತ್ ತೇರೆ ತುಕ್ಡೆ ತುಕ್ಡೆ ಹೊಂಗೆ ಇನ್ಸಾ ಅಲ್ಲಾ ಇನ್ಸಾ ಅಲ್ಲಾ’ ಎಂಬ ಘೋಷಣೆ ದೇಶದ್ರೋಹವಲ್ಲ ಮತ್ತು ಇದು ಹಿಂಸಾಚಾರಕ್ಕೆ ಪ್ರಚೋದನೆ ಎಂದು ಪೊಲೀಸರು ಸಾಬೀತುಪಡಿಸಿದರೆ ಮಾತ್ರ ದೇಶದ್ರೋಹವಾಗುತ್ತದೆ.
ಕಳೆದ ತಿಂಗಳು ದಿಶಾ ರವಿ ಅವರಿಗೆ ಜಾಮೀನು ನೀಡುತ್ತಿದ್ದಾಗ, “ಸರ್ಕಾರಗಳ ಗಾಯಗಳನ್ನು ಮುಚ್ಚಿಕೊಳ್ಳಲು ದೇಶದ್ರೋಹದ ಕಾನೂನನ್ನು ಬಳಸಲಾಗುತ್ತಿದೆ’’ ಎಂದು ಕಿರಿಯ ನ್ಯಾಯಾಧೀಶರು ಹೇಳಿದ್ದನ್ನು ತಾನು ಸಂಪೂರ್ಣವಾಗಿ ಒಪ್ಪುತ್ತೇನೆ ಎಂದು ನ್ಯಾಯಮೂರ್ತಿ ಗುಪ್ತಾ ದಿ ವೈರ್‌ಗೆ ತಿಳಿಸಿದರು.

ಇದನ್ನೂ ಓದಿ: ರೈತರು ದೇಶದ್ರೋಹಿಗಳಲ್ಲ, ಕೆಂಪು ಕೋಟೆ ಘರ್ಷಣೆಗೆ ಕೇಂದ್ರದ ಪಿತೂರಿಯೇ ಕಾರಣ: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...