Homeಮುಖಪುಟಸರ್ಕಾರದಿಂದ ದೇಶದ್ರೋಹ ಕಾನೂನು ದುರುಪಯೋಗ, ಅದನ್ನು ರದ್ದುಗೊಳಿಸಬೇಕು : ನಿವೃತ್ತ ಸುಪ್ರೀಂ ನ್ಯಾಯಾಧೀಶ

ಸರ್ಕಾರದಿಂದ ದೇಶದ್ರೋಹ ಕಾನೂನು ದುರುಪಯೋಗ, ಅದನ್ನು ರದ್ದುಗೊಳಿಸಬೇಕು : ನಿವೃತ್ತ ಸುಪ್ರೀಂ ನ್ಯಾಯಾಧೀಶ

ದಿ ವೈರ್ ಸಂದರ್ಶನ| ನಾಗರಿಕರಲ್ಲಿ ಭಯವನ್ನು ಸೃಷ್ಟಿಸಲು ದೇಶದ್ರೋಹ ಕಾನೂನನ್ನು ಸರ್ಕಾರಗಳು ಬಳಸುತ್ತಿವೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

- Advertisement -
- Advertisement -

ಅದರ ದುರುಪಯೋಗದ ಪ್ರಕರಣಗಳು “ಘಾತೀಯವಾಗಿ” (ವಿಪರೀತ ಪ್ರಮಾಣದಲ್ಲಿ) ಹೆಚ್ಚುತ್ತಿವೆ ಎಂದು ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124 ಎ- ದೇಶದ್ರೋಹದ ಕಾನೂನನ್ನು “ತಕ್ಷಣವೇ ರದ್ದುಗೊಳಿಸಬೇಕು” ಎಂದು ಗುಪ್ತಾ ಹೇಳಿದ್ದಾರೆ. ಭಿನ್ನಮತವನ್ನು ತಡೆಗಟ್ಟಲು ಅಥವಾ ತಡೆಯಲು, ನಾಗರಿಕರಲ್ಲಿ ಭಯವನ್ನು ಸೃಷ್ಟಿಸಲು ಇದನ್ನು ಸರ್ಕಾರಗಳು ಬಳಸುತ್ತಿವೆ ಎಂದು ನ್ಯಾಯಮೂರ್ತಿ ದೀಪಕ್ ಗುಪ್ತಾ ಹೇಳಿದ್ದಾರೆ.

ಸುಮಾರು 60 ವರ್ಷಗಳ ಹಿಂದೆ 1962 ರಲ್ಲಿ ಕೇದಾರ ನಾಥ್ ಸಿಂಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸೆಕ್ಷನ್ 124 ಎ ಅನ್ನು ಉಲ್ಲೇಖಿಸಿದೆ ಮತ್ತು ಹಿಂಸಾಚಾರಕ್ಕೆ ಪ್ರಚೋದನೆ ಇದ್ದಲ್ಲಿ ಮಾತ್ರ ಇದು ಅನ್ವಯಿಸುತ್ತದೆ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದ್ದಾರೆ.

ಇದನ್ನೂ ಓದಿ: ಟ್ರ್ಯಾಕ್ಟರ್‌ ರ್‍ಯಾಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿ 6 ಜನರ ವಿರುದ್ಧ ದೇಶದ್ರೋಹ ಪ್ರಕರಣ!

ಆರೋಪ ಹೊರಿಸಲು ಹಿಂಸಾಚಾರಕ್ಕೆ ಪ್ರಚೋದನೆಯ ವಿಷಯ ಅಗತ್ಯವಾದ ಘಟಕಾಂಶವಾಗಿದೆ ಮತ್ತು ಆ ಪ್ರಚೋದನೆಯಿಲ್ಲದೆ ಸೆಕ್ಷನ್ 124 ಎ ಅಂದರೆ ದೇಶದ್ರೋಹ ಕಾನೂನನ್ನು ಬಳಸಲಾಗುವುದಿಲ್ಲ. ಆದಾಗ್ಯೂ, ದೇಶಾದ್ಯಂತ ಬಹುಪಾಲು ಮ್ಯಾಜಿಸ್ಟ್ರೇಟ್‌ಗಳಿಗೆ ಈ ಅಂಶ ತಿಳಿದಂತಿಲ್ಲ ಅಥವಾ ಅದನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಸುಪ್ರೀಂ ಕೋರ್ಟ್ ಪದೇ ಪದೇ ಈ ಓದುವಿಕೆಯನ್ನು ( 1962 ರ ಉಲ್ಲೇಖ) ಪುನರುಚ್ಚರಿಸಿದೆ ಮತ್ತು ಸುಪ್ರೀಂ ಕೋರ್ಟ್‌ನ ನಿಲುವಿನ ಬಗ್ಗೆ ಯಾವುದೇ ಸಂದೇಹ ಅಥವಾ ಗೊಂದಲಗಳಿಲ್ಲ. ಇದರರ್ಥ ಸೆಕ್ಷನ್ 124 ಎ ಮುದ್ರಣದಲ್ಲಿ ಇರುವಂತೆ ಇರಲಾರದು. ಇದನ್ನು ತೀರಾ ವಿರಳವಾಗಿ ಬಳಸಬೇಕು ಎಂಬುದು ಕೂಡ ಸತ್ಯ ಎಂದು ಗುಪ್ತಾ ಹೇಳಿದ್ದಾರೆ.

ದಿ ವೈರ್‌ಗಾಗಿ ಕರಣ್ ಥಾಪರ್‌ಗೆ ನೀಡಿದ 36 ನಿಮಿಷಗಳ ಸಂದರ್ಶನದಲ್ಲಿ, ನ್ಯಾಯಮೂರ್ತಿ ಗುಪ್ತಾ, ತಮ್ಮ ಮೊದಲ ಆದ್ಯತೆಯೆಂದರೆ ದೇಶದ್ರೋಹದ ಕಾನೂನನ್ನು ತಕ್ಷಣವೇ ರದ್ದುಪಡಿಸುವುದು, ಎರಡನೆಯದು ಪೊಲೀಸರು ಆರೋಪವನ್ನು ಹೇಗೆ ಅನ್ವಯಿಸಬೇಕು ಎಂಬುದರ ಕುರಿತು ವಿವರವಾದ ಮಾರ್ಗಸೂಚಿಗಳನ್ನು ಸುಪ್ರೀಂ ಕೋರ್ಟ್‌ಗೆ ತಿಳಿಸಬೇಕು. ಅದನ್ನು ತೆಗೆದುಕೊಳ್ಳುವ ಮೊದಲು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಕೌಂಟರ್‌ಸೈನ್ ಮಾಡುವುದು ಅತ್ಯಗತ್ಯ ಎಂದು ಅವರು ಹೇಳಿದರು. ಸುಪ್ರೀಂ ಕೋರ್ಟ್ ಶೀಘ್ರದಲ್ಲೇ ಇಂತಹ ಮಾರ್ಗಸೂಚಿಗಳನ್ನು ರೂಪಿಸುತ್ತದೆ ಎಂದು ಅವರು ಆಶಿಸಿದರು.

ಇದನ್ನೂ ಓದಿ: ಮೋದಿ-ಆದಿತ್ಯನಾಥ್ ವಿರುದ್ದ ಟೀಕೆ: 293 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು!

ಈ ವಿಷಯವನ್ನು ಚರ್ಚಿಸುವ ಅಧಿಕಾರ ಹೊಂದಿರುವ ಮುಖ್ಯ ನ್ಯಾಯಮೂರ್ತಿ, ಸೆಕ್ಷನ್ 124 ಎ ಗೆ ಸಂಬಂಧಿಸಿದ ಅವಳಿ ಸಮಸ್ಯೆಗಳನ್ನು ಎತ್ತಬೇಕು: ಅದನ್ನು ದುರುಪಯೋಗಪಡಿಸಿಕೊಳ್ಳುವ ರೀತಿ ಮತ್ತು ತೀವ್ರವಾಗಿ ಹೆಚ್ಚುತ್ತಿರುವ ದುರುಪಯೋಗದ ಪ್ರಕರಣಗಳು- ಈ ವಿಷಯಗಳನ್ನು ಮುಖ್ಯ ನ್ಯಾಯಮೂರ್ತಿ ಎತ್ತಿಕೊಳ್ಳಬೇಕು. ಈ ವಿಷಯವನ್ನು ಪರಿಶೀಲಿಸಲು ಮುಖ್ಯ ನ್ಯಾಯಾಧೀಶರು ತಮ್ಮ ಸು-ಮೋಟು ಅಧಿಕಾರವನ್ನು ಬಳಸುತ್ತಾರೆ ಎಂದು ನಾನು ನಂಬಲಾರೆ. ಈ ವಿಷಯ ಕುರಿತು ಸುಪ್ರೀಂ ಕೋರ್ಟ್‌ಗೆ ಪಿಐಎಲ್ ಅಥವಾ ಸವಾಲನ್ನು ಸಲ್ಲಿಸುವವರೆಗೆ ಕಾಯಬೇಕಾಗಿದೆ ಮತ್ತು ಅದು ಈ ವಿಷಯಕ್ಕೆ ಹೋಗಲು ಸರಿಯಾದ ಮಾರ್ಗವಾಗಿದೆ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದ್ದಾರೆ.

ತಾವು ಮುಖ್ಯ ನ್ಯಾಯಮೂರ್ತಿಯಾಗಿದ್ದರೆ, ಕಾನೂನನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ನಂಬಿದ್ದರೂ ಸಹ, ದೇಶದ್ರೋಹದ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಲು ಕಚೇರಿಯ ಸು-ಮೋಟು ಅಧಿಕಾರವನ್ನು ಬಳಸುವುದಿಲ್ಲ ಎಂದು ಹೇಳಿದರು.

ದಿ ವೈರ್ ಸಂದರ್ಶನದಲ್ಲಿ, ನ್ಯಾಯಮೂರ್ತಿ ಗುಪ್ತಾ ಅವರನ್ನು ಇತ್ತೀಚೆಗೆ ದೇಶದ್ರೋಹದ ಆರೋಪಕ್ಕೆ ಒಳಪಡಿಸಿದ ಮೂರು ಪ್ರಕರಣಗಳ ಬಗ್ಗೆ ಪ್ರಶ್ನಿಸಲಾಯಿತು.

ಮೊದಲು, ದಿಶಾ ರವಿ ಪ್ರಕರಣ. ಟೂಲ್ಕಿಟ್ ಸಂಪಾದಿಸಲು ಅಥವಾ ಅದರ ವಿಷಯಗಳನ್ನು ಟ್ವೀಟ್ ಮಾಡುವುದು ಖಂಡಿತವಾಗಿಯೂ ದೇಶದ್ರೋಹವಲ್ಲ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದ್ದಾರೆ. ತಾನು ಟೂಲ್ಕಿಟ್ ಅನ್ನು ಪರಿಶೀಲಿಸಿದ್ದೇನೆ ಮತ್ತು ಅದರ ವಿಷಯದಲ್ಲಿ ದೇಶದ್ರೋಹಿ ಅಂಶ ಅಥವಾ ಅಪರಾಧವೂ ಇಲ್ಲ ಎಂದು ಅವರು ಹೇಳಿದರು. ದಿಶಾ ರವಿ ಅವರು ಪೋಯೆಟಿಕ್ ಜಸ್ಟೀಸ್ ಫೌಂಡೇಶನ್‌ನ ಸದಸ್ಯರೊಂದಿಗೆ ವೆಬ್‌ನಾರ್‌ನಲ್ಲಿ ಭಾಗಿಯಾಗುವುದು ದೇಶದ್ರೋಹ ಅಥವಾ ಅಪರಾಧವಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: ದಿಶಾ ರವಿಯ ಜಾಮೀನು ಆದೇಶ: ದೇಶದ್ರೋಹದ ಬಗ್ಗೆ ನ್ಯಾಯಾಧೀಶರು ಹೇಳಿದ್ದೇನು?

ಈ ಸಂಬಂಧದಲ್ಲಿ, ಖಲಿಸ್ತಾನವನ್ನು ಚಾಂಪಿಯನ್ ಮಾಡುವ ಅಥವಾ ನಿಷೇಧಿತ ಸಂಘಟನೆಯ ಸದಸ್ಯರಾಗಿರುವ ಯಾರೊಂದಿಗಾದರೂ ಮಾತನಾಡುವುದು ದೇಶದ್ರೋಹ ಅಥವಾ ಅಪರಾಧವೇ ಎಂದು ನ್ಯಾಯಮೂರ್ತಿ ಗುಪ್ತಾ ಅವರನ್ನು ಕೇಳಲಾಯಿತು. ಅವರ ಸ್ಪಷ್ಟ ಉತ್ತರವೆಂದರೆ ಅದು ದೇಶದ್ರೋಹವಲ್ಲ ಮತ್ತು ಅಪರಾಧವಲ್ಲ.

ಎರಡನೆಯದಾಗಿ, ರಿಪಬ್ಲಿಕ್ ದಿನದಂದು ಪ್ರತಿಭಟನಾಕಾರರೊಬ್ಬರು ಗುಂಡು ಹಾರಿಸಲ್ಪಟ್ಟ ಕಾರಣ ಸಾವನ್ನಪ್ಪಿದ್ದಾರೆ ಎಂದು ಪತ್ರಕರ್ತರು ಟ್ವೀಟ್ ಮಾಡುವುದು ದೇಶದ್ರೋಹವಲ್ಲ ಎಂದು ಹೇಳಿದರು, ಟ್ವೀಟ್‌ನ ವಿಷಯ ತಪ್ಪಾಗಿದ್ದರೂ ಅದು ದೇಶದ್ರೋಹ ಅಥವಾ ಅಪರಾಧವಲ್ಲ ಎಂದು ಹೇಳಿದರು. ಇದು ಕಳಪೆ ಪತ್ರಿಕೋದ್ಯಮವಾಗಬಹುದು, ಆದರೆ ಅದು ಅಪರಾಧವಲ್ಲ ಎಂದು ಗುಪ್ತಾ ಅಭಿಪ್ರಾಯ ಪಟ್ಟಿದ್ದಾರೆ.

1995 ರಲ್ಲಿ ಸುಪ್ರೀಂ ಕೋರ್ಟ್ ಬಲ್ವಂತ್ ಸಿಂಗ್ ಪ್ರಕರಣದಲ್ಲಿ ’ಖಲಿಸ್ತಾನ್ ಜಿಂದಾಬಾದ್’ ಎಂದು ಕೂಗುವುದು ದೇಶದ್ರೋಹವಲ್ಲ ಎಂದು ತೀರ್ಪು ನೀಡಿತ್ತು. ಜೆಎನ್‌ಯು ವಿದ್ಯಾರ್ಥಿಗಳು, ’ಭಾರತ್ ತೇರೆ ತುಕ್ಡೆ ತುಕ್ಡೆ ಹೊಂಗೆ ಇನ್ಸಾ ಅಲ್ಲಾ ಇನ್ಸಾ ಅಲ್ಲಾ’ ಎಂದು ಘೋಷಣೆ ಕೂಗಿದ್ದು ದೇಶದ್ರೋಹವೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಗುಪ್ತಾ, ಘೋಷಣೆಯನ್ನು ಹಿಂಸಾಚಾರಕ್ಕೆ ಪೊಲೀಸರು ನೇರವಾಗಿ ಲಿಂಕ್ ಮಾಡಲು ಸಾಧ್ಯವಾದರೆ ಅದು ದೇಶದ್ರೋಹ ಎಂದು ಹೇಳಿದ್ದಾರೆ. ಮೂರು ವರ್ಷಗಳು ಕಳೆದಿವೆ. ಅಂತಹ ಯಾವುದೇ ಪುರಾವೆಗಳು ಮುಂದೆ ಬಂದಿಲ್ಲ ಎಂದು ಅವರು ಹೇಳಿದರು. ಆದ್ದರಿಂದ, ಇದು ದೇಶದ್ರೋಹವಾಗುವ ಸಾಧ್ಯತೆಯಿದೆ ಎಂದು ತಾನು ನಂಬುವುದಿಲ್ಲ ಎಂದು ಹೇಳಿದ್ದಾರೆ.

ನ್ಯಾಯಮೂರ್ತಿ ಗುಪ್ತಾ ಮಂಡಿಸಿದ ಪ್ರಮುಖ ಅಂಶವೆಂದರೆ, ’ಭಾರತ್ ತೇರೆ ತುಕ್ಡೆ ತುಕ್ಡೆ ಹೊಂಗೆ ಇನ್ಸಾ ಅಲ್ಲಾ ಇನ್ಸಾ ಅಲ್ಲಾ’ ಎಂಬ ಘೋಷಣೆ ದೇಶದ್ರೋಹವಲ್ಲ ಮತ್ತು ಇದು ಹಿಂಸಾಚಾರಕ್ಕೆ ಪ್ರಚೋದನೆ ಎಂದು ಪೊಲೀಸರು ಸಾಬೀತುಪಡಿಸಿದರೆ ಮಾತ್ರ ದೇಶದ್ರೋಹವಾಗುತ್ತದೆ.
ಕಳೆದ ತಿಂಗಳು ದಿಶಾ ರವಿ ಅವರಿಗೆ ಜಾಮೀನು ನೀಡುತ್ತಿದ್ದಾಗ, “ಸರ್ಕಾರಗಳ ಗಾಯಗಳನ್ನು ಮುಚ್ಚಿಕೊಳ್ಳಲು ದೇಶದ್ರೋಹದ ಕಾನೂನನ್ನು ಬಳಸಲಾಗುತ್ತಿದೆ’’ ಎಂದು ಕಿರಿಯ ನ್ಯಾಯಾಧೀಶರು ಹೇಳಿದ್ದನ್ನು ತಾನು ಸಂಪೂರ್ಣವಾಗಿ ಒಪ್ಪುತ್ತೇನೆ ಎಂದು ನ್ಯಾಯಮೂರ್ತಿ ಗುಪ್ತಾ ದಿ ವೈರ್‌ಗೆ ತಿಳಿಸಿದರು.

ಇದನ್ನೂ ಓದಿ: ರೈತರು ದೇಶದ್ರೋಹಿಗಳಲ್ಲ, ಕೆಂಪು ಕೋಟೆ ಘರ್ಷಣೆಗೆ ಕೇಂದ್ರದ ಪಿತೂರಿಯೇ ಕಾರಣ: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...