Homeಮುಖಪುಟಸರ್ಕಾರದಿಂದ ದೇಶದ್ರೋಹ ಕಾನೂನು ದುರುಪಯೋಗ, ಅದನ್ನು ರದ್ದುಗೊಳಿಸಬೇಕು : ನಿವೃತ್ತ ಸುಪ್ರೀಂ ನ್ಯಾಯಾಧೀಶ

ಸರ್ಕಾರದಿಂದ ದೇಶದ್ರೋಹ ಕಾನೂನು ದುರುಪಯೋಗ, ಅದನ್ನು ರದ್ದುಗೊಳಿಸಬೇಕು : ನಿವೃತ್ತ ಸುಪ್ರೀಂ ನ್ಯಾಯಾಧೀಶ

ದಿ ವೈರ್ ಸಂದರ್ಶನ| ನಾಗರಿಕರಲ್ಲಿ ಭಯವನ್ನು ಸೃಷ್ಟಿಸಲು ದೇಶದ್ರೋಹ ಕಾನೂನನ್ನು ಸರ್ಕಾರಗಳು ಬಳಸುತ್ತಿವೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

- Advertisement -
- Advertisement -

ಅದರ ದುರುಪಯೋಗದ ಪ್ರಕರಣಗಳು “ಘಾತೀಯವಾಗಿ” (ವಿಪರೀತ ಪ್ರಮಾಣದಲ್ಲಿ) ಹೆಚ್ಚುತ್ತಿವೆ ಎಂದು ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124 ಎ- ದೇಶದ್ರೋಹದ ಕಾನೂನನ್ನು “ತಕ್ಷಣವೇ ರದ್ದುಗೊಳಿಸಬೇಕು” ಎಂದು ಗುಪ್ತಾ ಹೇಳಿದ್ದಾರೆ. ಭಿನ್ನಮತವನ್ನು ತಡೆಗಟ್ಟಲು ಅಥವಾ ತಡೆಯಲು, ನಾಗರಿಕರಲ್ಲಿ ಭಯವನ್ನು ಸೃಷ್ಟಿಸಲು ಇದನ್ನು ಸರ್ಕಾರಗಳು ಬಳಸುತ್ತಿವೆ ಎಂದು ನ್ಯಾಯಮೂರ್ತಿ ದೀಪಕ್ ಗುಪ್ತಾ ಹೇಳಿದ್ದಾರೆ.

ಸುಮಾರು 60 ವರ್ಷಗಳ ಹಿಂದೆ 1962 ರಲ್ಲಿ ಕೇದಾರ ನಾಥ್ ಸಿಂಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸೆಕ್ಷನ್ 124 ಎ ಅನ್ನು ಉಲ್ಲೇಖಿಸಿದೆ ಮತ್ತು ಹಿಂಸಾಚಾರಕ್ಕೆ ಪ್ರಚೋದನೆ ಇದ್ದಲ್ಲಿ ಮಾತ್ರ ಇದು ಅನ್ವಯಿಸುತ್ತದೆ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದ್ದಾರೆ.

ಇದನ್ನೂ ಓದಿ: ಟ್ರ್ಯಾಕ್ಟರ್‌ ರ್‍ಯಾಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿ 6 ಜನರ ವಿರುದ್ಧ ದೇಶದ್ರೋಹ ಪ್ರಕರಣ!

ಆರೋಪ ಹೊರಿಸಲು ಹಿಂಸಾಚಾರಕ್ಕೆ ಪ್ರಚೋದನೆಯ ವಿಷಯ ಅಗತ್ಯವಾದ ಘಟಕಾಂಶವಾಗಿದೆ ಮತ್ತು ಆ ಪ್ರಚೋದನೆಯಿಲ್ಲದೆ ಸೆಕ್ಷನ್ 124 ಎ ಅಂದರೆ ದೇಶದ್ರೋಹ ಕಾನೂನನ್ನು ಬಳಸಲಾಗುವುದಿಲ್ಲ. ಆದಾಗ್ಯೂ, ದೇಶಾದ್ಯಂತ ಬಹುಪಾಲು ಮ್ಯಾಜಿಸ್ಟ್ರೇಟ್‌ಗಳಿಗೆ ಈ ಅಂಶ ತಿಳಿದಂತಿಲ್ಲ ಅಥವಾ ಅದನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಸುಪ್ರೀಂ ಕೋರ್ಟ್ ಪದೇ ಪದೇ ಈ ಓದುವಿಕೆಯನ್ನು ( 1962 ರ ಉಲ್ಲೇಖ) ಪುನರುಚ್ಚರಿಸಿದೆ ಮತ್ತು ಸುಪ್ರೀಂ ಕೋರ್ಟ್‌ನ ನಿಲುವಿನ ಬಗ್ಗೆ ಯಾವುದೇ ಸಂದೇಹ ಅಥವಾ ಗೊಂದಲಗಳಿಲ್ಲ. ಇದರರ್ಥ ಸೆಕ್ಷನ್ 124 ಎ ಮುದ್ರಣದಲ್ಲಿ ಇರುವಂತೆ ಇರಲಾರದು. ಇದನ್ನು ತೀರಾ ವಿರಳವಾಗಿ ಬಳಸಬೇಕು ಎಂಬುದು ಕೂಡ ಸತ್ಯ ಎಂದು ಗುಪ್ತಾ ಹೇಳಿದ್ದಾರೆ.

ದಿ ವೈರ್‌ಗಾಗಿ ಕರಣ್ ಥಾಪರ್‌ಗೆ ನೀಡಿದ 36 ನಿಮಿಷಗಳ ಸಂದರ್ಶನದಲ್ಲಿ, ನ್ಯಾಯಮೂರ್ತಿ ಗುಪ್ತಾ, ತಮ್ಮ ಮೊದಲ ಆದ್ಯತೆಯೆಂದರೆ ದೇಶದ್ರೋಹದ ಕಾನೂನನ್ನು ತಕ್ಷಣವೇ ರದ್ದುಪಡಿಸುವುದು, ಎರಡನೆಯದು ಪೊಲೀಸರು ಆರೋಪವನ್ನು ಹೇಗೆ ಅನ್ವಯಿಸಬೇಕು ಎಂಬುದರ ಕುರಿತು ವಿವರವಾದ ಮಾರ್ಗಸೂಚಿಗಳನ್ನು ಸುಪ್ರೀಂ ಕೋರ್ಟ್‌ಗೆ ತಿಳಿಸಬೇಕು. ಅದನ್ನು ತೆಗೆದುಕೊಳ್ಳುವ ಮೊದಲು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಕೌಂಟರ್‌ಸೈನ್ ಮಾಡುವುದು ಅತ್ಯಗತ್ಯ ಎಂದು ಅವರು ಹೇಳಿದರು. ಸುಪ್ರೀಂ ಕೋರ್ಟ್ ಶೀಘ್ರದಲ್ಲೇ ಇಂತಹ ಮಾರ್ಗಸೂಚಿಗಳನ್ನು ರೂಪಿಸುತ್ತದೆ ಎಂದು ಅವರು ಆಶಿಸಿದರು.

ಇದನ್ನೂ ಓದಿ: ಮೋದಿ-ಆದಿತ್ಯನಾಥ್ ವಿರುದ್ದ ಟೀಕೆ: 293 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು!

ಈ ವಿಷಯವನ್ನು ಚರ್ಚಿಸುವ ಅಧಿಕಾರ ಹೊಂದಿರುವ ಮುಖ್ಯ ನ್ಯಾಯಮೂರ್ತಿ, ಸೆಕ್ಷನ್ 124 ಎ ಗೆ ಸಂಬಂಧಿಸಿದ ಅವಳಿ ಸಮಸ್ಯೆಗಳನ್ನು ಎತ್ತಬೇಕು: ಅದನ್ನು ದುರುಪಯೋಗಪಡಿಸಿಕೊಳ್ಳುವ ರೀತಿ ಮತ್ತು ತೀವ್ರವಾಗಿ ಹೆಚ್ಚುತ್ತಿರುವ ದುರುಪಯೋಗದ ಪ್ರಕರಣಗಳು- ಈ ವಿಷಯಗಳನ್ನು ಮುಖ್ಯ ನ್ಯಾಯಮೂರ್ತಿ ಎತ್ತಿಕೊಳ್ಳಬೇಕು. ಈ ವಿಷಯವನ್ನು ಪರಿಶೀಲಿಸಲು ಮುಖ್ಯ ನ್ಯಾಯಾಧೀಶರು ತಮ್ಮ ಸು-ಮೋಟು ಅಧಿಕಾರವನ್ನು ಬಳಸುತ್ತಾರೆ ಎಂದು ನಾನು ನಂಬಲಾರೆ. ಈ ವಿಷಯ ಕುರಿತು ಸುಪ್ರೀಂ ಕೋರ್ಟ್‌ಗೆ ಪಿಐಎಲ್ ಅಥವಾ ಸವಾಲನ್ನು ಸಲ್ಲಿಸುವವರೆಗೆ ಕಾಯಬೇಕಾಗಿದೆ ಮತ್ತು ಅದು ಈ ವಿಷಯಕ್ಕೆ ಹೋಗಲು ಸರಿಯಾದ ಮಾರ್ಗವಾಗಿದೆ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದ್ದಾರೆ.

ತಾವು ಮುಖ್ಯ ನ್ಯಾಯಮೂರ್ತಿಯಾಗಿದ್ದರೆ, ಕಾನೂನನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ನಂಬಿದ್ದರೂ ಸಹ, ದೇಶದ್ರೋಹದ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಲು ಕಚೇರಿಯ ಸು-ಮೋಟು ಅಧಿಕಾರವನ್ನು ಬಳಸುವುದಿಲ್ಲ ಎಂದು ಹೇಳಿದರು.

ದಿ ವೈರ್ ಸಂದರ್ಶನದಲ್ಲಿ, ನ್ಯಾಯಮೂರ್ತಿ ಗುಪ್ತಾ ಅವರನ್ನು ಇತ್ತೀಚೆಗೆ ದೇಶದ್ರೋಹದ ಆರೋಪಕ್ಕೆ ಒಳಪಡಿಸಿದ ಮೂರು ಪ್ರಕರಣಗಳ ಬಗ್ಗೆ ಪ್ರಶ್ನಿಸಲಾಯಿತು.

ಮೊದಲು, ದಿಶಾ ರವಿ ಪ್ರಕರಣ. ಟೂಲ್ಕಿಟ್ ಸಂಪಾದಿಸಲು ಅಥವಾ ಅದರ ವಿಷಯಗಳನ್ನು ಟ್ವೀಟ್ ಮಾಡುವುದು ಖಂಡಿತವಾಗಿಯೂ ದೇಶದ್ರೋಹವಲ್ಲ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದ್ದಾರೆ. ತಾನು ಟೂಲ್ಕಿಟ್ ಅನ್ನು ಪರಿಶೀಲಿಸಿದ್ದೇನೆ ಮತ್ತು ಅದರ ವಿಷಯದಲ್ಲಿ ದೇಶದ್ರೋಹಿ ಅಂಶ ಅಥವಾ ಅಪರಾಧವೂ ಇಲ್ಲ ಎಂದು ಅವರು ಹೇಳಿದರು. ದಿಶಾ ರವಿ ಅವರು ಪೋಯೆಟಿಕ್ ಜಸ್ಟೀಸ್ ಫೌಂಡೇಶನ್‌ನ ಸದಸ್ಯರೊಂದಿಗೆ ವೆಬ್‌ನಾರ್‌ನಲ್ಲಿ ಭಾಗಿಯಾಗುವುದು ದೇಶದ್ರೋಹ ಅಥವಾ ಅಪರಾಧವಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: ದಿಶಾ ರವಿಯ ಜಾಮೀನು ಆದೇಶ: ದೇಶದ್ರೋಹದ ಬಗ್ಗೆ ನ್ಯಾಯಾಧೀಶರು ಹೇಳಿದ್ದೇನು?

ಈ ಸಂಬಂಧದಲ್ಲಿ, ಖಲಿಸ್ತಾನವನ್ನು ಚಾಂಪಿಯನ್ ಮಾಡುವ ಅಥವಾ ನಿಷೇಧಿತ ಸಂಘಟನೆಯ ಸದಸ್ಯರಾಗಿರುವ ಯಾರೊಂದಿಗಾದರೂ ಮಾತನಾಡುವುದು ದೇಶದ್ರೋಹ ಅಥವಾ ಅಪರಾಧವೇ ಎಂದು ನ್ಯಾಯಮೂರ್ತಿ ಗುಪ್ತಾ ಅವರನ್ನು ಕೇಳಲಾಯಿತು. ಅವರ ಸ್ಪಷ್ಟ ಉತ್ತರವೆಂದರೆ ಅದು ದೇಶದ್ರೋಹವಲ್ಲ ಮತ್ತು ಅಪರಾಧವಲ್ಲ.

ಎರಡನೆಯದಾಗಿ, ರಿಪಬ್ಲಿಕ್ ದಿನದಂದು ಪ್ರತಿಭಟನಾಕಾರರೊಬ್ಬರು ಗುಂಡು ಹಾರಿಸಲ್ಪಟ್ಟ ಕಾರಣ ಸಾವನ್ನಪ್ಪಿದ್ದಾರೆ ಎಂದು ಪತ್ರಕರ್ತರು ಟ್ವೀಟ್ ಮಾಡುವುದು ದೇಶದ್ರೋಹವಲ್ಲ ಎಂದು ಹೇಳಿದರು, ಟ್ವೀಟ್‌ನ ವಿಷಯ ತಪ್ಪಾಗಿದ್ದರೂ ಅದು ದೇಶದ್ರೋಹ ಅಥವಾ ಅಪರಾಧವಲ್ಲ ಎಂದು ಹೇಳಿದರು. ಇದು ಕಳಪೆ ಪತ್ರಿಕೋದ್ಯಮವಾಗಬಹುದು, ಆದರೆ ಅದು ಅಪರಾಧವಲ್ಲ ಎಂದು ಗುಪ್ತಾ ಅಭಿಪ್ರಾಯ ಪಟ್ಟಿದ್ದಾರೆ.

1995 ರಲ್ಲಿ ಸುಪ್ರೀಂ ಕೋರ್ಟ್ ಬಲ್ವಂತ್ ಸಿಂಗ್ ಪ್ರಕರಣದಲ್ಲಿ ’ಖಲಿಸ್ತಾನ್ ಜಿಂದಾಬಾದ್’ ಎಂದು ಕೂಗುವುದು ದೇಶದ್ರೋಹವಲ್ಲ ಎಂದು ತೀರ್ಪು ನೀಡಿತ್ತು. ಜೆಎನ್‌ಯು ವಿದ್ಯಾರ್ಥಿಗಳು, ’ಭಾರತ್ ತೇರೆ ತುಕ್ಡೆ ತುಕ್ಡೆ ಹೊಂಗೆ ಇನ್ಸಾ ಅಲ್ಲಾ ಇನ್ಸಾ ಅಲ್ಲಾ’ ಎಂದು ಘೋಷಣೆ ಕೂಗಿದ್ದು ದೇಶದ್ರೋಹವೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಗುಪ್ತಾ, ಘೋಷಣೆಯನ್ನು ಹಿಂಸಾಚಾರಕ್ಕೆ ಪೊಲೀಸರು ನೇರವಾಗಿ ಲಿಂಕ್ ಮಾಡಲು ಸಾಧ್ಯವಾದರೆ ಅದು ದೇಶದ್ರೋಹ ಎಂದು ಹೇಳಿದ್ದಾರೆ. ಮೂರು ವರ್ಷಗಳು ಕಳೆದಿವೆ. ಅಂತಹ ಯಾವುದೇ ಪುರಾವೆಗಳು ಮುಂದೆ ಬಂದಿಲ್ಲ ಎಂದು ಅವರು ಹೇಳಿದರು. ಆದ್ದರಿಂದ, ಇದು ದೇಶದ್ರೋಹವಾಗುವ ಸಾಧ್ಯತೆಯಿದೆ ಎಂದು ತಾನು ನಂಬುವುದಿಲ್ಲ ಎಂದು ಹೇಳಿದ್ದಾರೆ.

ನ್ಯಾಯಮೂರ್ತಿ ಗುಪ್ತಾ ಮಂಡಿಸಿದ ಪ್ರಮುಖ ಅಂಶವೆಂದರೆ, ’ಭಾರತ್ ತೇರೆ ತುಕ್ಡೆ ತುಕ್ಡೆ ಹೊಂಗೆ ಇನ್ಸಾ ಅಲ್ಲಾ ಇನ್ಸಾ ಅಲ್ಲಾ’ ಎಂಬ ಘೋಷಣೆ ದೇಶದ್ರೋಹವಲ್ಲ ಮತ್ತು ಇದು ಹಿಂಸಾಚಾರಕ್ಕೆ ಪ್ರಚೋದನೆ ಎಂದು ಪೊಲೀಸರು ಸಾಬೀತುಪಡಿಸಿದರೆ ಮಾತ್ರ ದೇಶದ್ರೋಹವಾಗುತ್ತದೆ.
ಕಳೆದ ತಿಂಗಳು ದಿಶಾ ರವಿ ಅವರಿಗೆ ಜಾಮೀನು ನೀಡುತ್ತಿದ್ದಾಗ, “ಸರ್ಕಾರಗಳ ಗಾಯಗಳನ್ನು ಮುಚ್ಚಿಕೊಳ್ಳಲು ದೇಶದ್ರೋಹದ ಕಾನೂನನ್ನು ಬಳಸಲಾಗುತ್ತಿದೆ’’ ಎಂದು ಕಿರಿಯ ನ್ಯಾಯಾಧೀಶರು ಹೇಳಿದ್ದನ್ನು ತಾನು ಸಂಪೂರ್ಣವಾಗಿ ಒಪ್ಪುತ್ತೇನೆ ಎಂದು ನ್ಯಾಯಮೂರ್ತಿ ಗುಪ್ತಾ ದಿ ವೈರ್‌ಗೆ ತಿಳಿಸಿದರು.

ಇದನ್ನೂ ಓದಿ: ರೈತರು ದೇಶದ್ರೋಹಿಗಳಲ್ಲ, ಕೆಂಪು ಕೋಟೆ ಘರ್ಷಣೆಗೆ ಕೇಂದ್ರದ ಪಿತೂರಿಯೇ ಕಾರಣ: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...