Homeಮುಖಪುಟಸರ್ಕಾರದಿಂದ ದೇಶದ್ರೋಹ ಕಾನೂನು ದುರುಪಯೋಗ, ಅದನ್ನು ರದ್ದುಗೊಳಿಸಬೇಕು : ನಿವೃತ್ತ ಸುಪ್ರೀಂ ನ್ಯಾಯಾಧೀಶ

ಸರ್ಕಾರದಿಂದ ದೇಶದ್ರೋಹ ಕಾನೂನು ದುರುಪಯೋಗ, ಅದನ್ನು ರದ್ದುಗೊಳಿಸಬೇಕು : ನಿವೃತ್ತ ಸುಪ್ರೀಂ ನ್ಯಾಯಾಧೀಶ

ದಿ ವೈರ್ ಸಂದರ್ಶನ| ನಾಗರಿಕರಲ್ಲಿ ಭಯವನ್ನು ಸೃಷ್ಟಿಸಲು ದೇಶದ್ರೋಹ ಕಾನೂನನ್ನು ಸರ್ಕಾರಗಳು ಬಳಸುತ್ತಿವೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

- Advertisement -
- Advertisement -

ಅದರ ದುರುಪಯೋಗದ ಪ್ರಕರಣಗಳು “ಘಾತೀಯವಾಗಿ” (ವಿಪರೀತ ಪ್ರಮಾಣದಲ್ಲಿ) ಹೆಚ್ಚುತ್ತಿವೆ ಎಂದು ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124 ಎ- ದೇಶದ್ರೋಹದ ಕಾನೂನನ್ನು “ತಕ್ಷಣವೇ ರದ್ದುಗೊಳಿಸಬೇಕು” ಎಂದು ಗುಪ್ತಾ ಹೇಳಿದ್ದಾರೆ. ಭಿನ್ನಮತವನ್ನು ತಡೆಗಟ್ಟಲು ಅಥವಾ ತಡೆಯಲು, ನಾಗರಿಕರಲ್ಲಿ ಭಯವನ್ನು ಸೃಷ್ಟಿಸಲು ಇದನ್ನು ಸರ್ಕಾರಗಳು ಬಳಸುತ್ತಿವೆ ಎಂದು ನ್ಯಾಯಮೂರ್ತಿ ದೀಪಕ್ ಗುಪ್ತಾ ಹೇಳಿದ್ದಾರೆ.

ಸುಮಾರು 60 ವರ್ಷಗಳ ಹಿಂದೆ 1962 ರಲ್ಲಿ ಕೇದಾರ ನಾಥ್ ಸಿಂಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸೆಕ್ಷನ್ 124 ಎ ಅನ್ನು ಉಲ್ಲೇಖಿಸಿದೆ ಮತ್ತು ಹಿಂಸಾಚಾರಕ್ಕೆ ಪ್ರಚೋದನೆ ಇದ್ದಲ್ಲಿ ಮಾತ್ರ ಇದು ಅನ್ವಯಿಸುತ್ತದೆ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದ್ದಾರೆ.

ಇದನ್ನೂ ಓದಿ: ಟ್ರ್ಯಾಕ್ಟರ್‌ ರ್‍ಯಾಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿ 6 ಜನರ ವಿರುದ್ಧ ದೇಶದ್ರೋಹ ಪ್ರಕರಣ!

ಆರೋಪ ಹೊರಿಸಲು ಹಿಂಸಾಚಾರಕ್ಕೆ ಪ್ರಚೋದನೆಯ ವಿಷಯ ಅಗತ್ಯವಾದ ಘಟಕಾಂಶವಾಗಿದೆ ಮತ್ತು ಆ ಪ್ರಚೋದನೆಯಿಲ್ಲದೆ ಸೆಕ್ಷನ್ 124 ಎ ಅಂದರೆ ದೇಶದ್ರೋಹ ಕಾನೂನನ್ನು ಬಳಸಲಾಗುವುದಿಲ್ಲ. ಆದಾಗ್ಯೂ, ದೇಶಾದ್ಯಂತ ಬಹುಪಾಲು ಮ್ಯಾಜಿಸ್ಟ್ರೇಟ್‌ಗಳಿಗೆ ಈ ಅಂಶ ತಿಳಿದಂತಿಲ್ಲ ಅಥವಾ ಅದನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಸುಪ್ರೀಂ ಕೋರ್ಟ್ ಪದೇ ಪದೇ ಈ ಓದುವಿಕೆಯನ್ನು ( 1962 ರ ಉಲ್ಲೇಖ) ಪುನರುಚ್ಚರಿಸಿದೆ ಮತ್ತು ಸುಪ್ರೀಂ ಕೋರ್ಟ್‌ನ ನಿಲುವಿನ ಬಗ್ಗೆ ಯಾವುದೇ ಸಂದೇಹ ಅಥವಾ ಗೊಂದಲಗಳಿಲ್ಲ. ಇದರರ್ಥ ಸೆಕ್ಷನ್ 124 ಎ ಮುದ್ರಣದಲ್ಲಿ ಇರುವಂತೆ ಇರಲಾರದು. ಇದನ್ನು ತೀರಾ ವಿರಳವಾಗಿ ಬಳಸಬೇಕು ಎಂಬುದು ಕೂಡ ಸತ್ಯ ಎಂದು ಗುಪ್ತಾ ಹೇಳಿದ್ದಾರೆ.

ದಿ ವೈರ್‌ಗಾಗಿ ಕರಣ್ ಥಾಪರ್‌ಗೆ ನೀಡಿದ 36 ನಿಮಿಷಗಳ ಸಂದರ್ಶನದಲ್ಲಿ, ನ್ಯಾಯಮೂರ್ತಿ ಗುಪ್ತಾ, ತಮ್ಮ ಮೊದಲ ಆದ್ಯತೆಯೆಂದರೆ ದೇಶದ್ರೋಹದ ಕಾನೂನನ್ನು ತಕ್ಷಣವೇ ರದ್ದುಪಡಿಸುವುದು, ಎರಡನೆಯದು ಪೊಲೀಸರು ಆರೋಪವನ್ನು ಹೇಗೆ ಅನ್ವಯಿಸಬೇಕು ಎಂಬುದರ ಕುರಿತು ವಿವರವಾದ ಮಾರ್ಗಸೂಚಿಗಳನ್ನು ಸುಪ್ರೀಂ ಕೋರ್ಟ್‌ಗೆ ತಿಳಿಸಬೇಕು. ಅದನ್ನು ತೆಗೆದುಕೊಳ್ಳುವ ಮೊದಲು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಕೌಂಟರ್‌ಸೈನ್ ಮಾಡುವುದು ಅತ್ಯಗತ್ಯ ಎಂದು ಅವರು ಹೇಳಿದರು. ಸುಪ್ರೀಂ ಕೋರ್ಟ್ ಶೀಘ್ರದಲ್ಲೇ ಇಂತಹ ಮಾರ್ಗಸೂಚಿಗಳನ್ನು ರೂಪಿಸುತ್ತದೆ ಎಂದು ಅವರು ಆಶಿಸಿದರು.

ಇದನ್ನೂ ಓದಿ: ಮೋದಿ-ಆದಿತ್ಯನಾಥ್ ವಿರುದ್ದ ಟೀಕೆ: 293 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು!

ಈ ವಿಷಯವನ್ನು ಚರ್ಚಿಸುವ ಅಧಿಕಾರ ಹೊಂದಿರುವ ಮುಖ್ಯ ನ್ಯಾಯಮೂರ್ತಿ, ಸೆಕ್ಷನ್ 124 ಎ ಗೆ ಸಂಬಂಧಿಸಿದ ಅವಳಿ ಸಮಸ್ಯೆಗಳನ್ನು ಎತ್ತಬೇಕು: ಅದನ್ನು ದುರುಪಯೋಗಪಡಿಸಿಕೊಳ್ಳುವ ರೀತಿ ಮತ್ತು ತೀವ್ರವಾಗಿ ಹೆಚ್ಚುತ್ತಿರುವ ದುರುಪಯೋಗದ ಪ್ರಕರಣಗಳು- ಈ ವಿಷಯಗಳನ್ನು ಮುಖ್ಯ ನ್ಯಾಯಮೂರ್ತಿ ಎತ್ತಿಕೊಳ್ಳಬೇಕು. ಈ ವಿಷಯವನ್ನು ಪರಿಶೀಲಿಸಲು ಮುಖ್ಯ ನ್ಯಾಯಾಧೀಶರು ತಮ್ಮ ಸು-ಮೋಟು ಅಧಿಕಾರವನ್ನು ಬಳಸುತ್ತಾರೆ ಎಂದು ನಾನು ನಂಬಲಾರೆ. ಈ ವಿಷಯ ಕುರಿತು ಸುಪ್ರೀಂ ಕೋರ್ಟ್‌ಗೆ ಪಿಐಎಲ್ ಅಥವಾ ಸವಾಲನ್ನು ಸಲ್ಲಿಸುವವರೆಗೆ ಕಾಯಬೇಕಾಗಿದೆ ಮತ್ತು ಅದು ಈ ವಿಷಯಕ್ಕೆ ಹೋಗಲು ಸರಿಯಾದ ಮಾರ್ಗವಾಗಿದೆ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದ್ದಾರೆ.

ತಾವು ಮುಖ್ಯ ನ್ಯಾಯಮೂರ್ತಿಯಾಗಿದ್ದರೆ, ಕಾನೂನನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ನಂಬಿದ್ದರೂ ಸಹ, ದೇಶದ್ರೋಹದ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಲು ಕಚೇರಿಯ ಸು-ಮೋಟು ಅಧಿಕಾರವನ್ನು ಬಳಸುವುದಿಲ್ಲ ಎಂದು ಹೇಳಿದರು.

ದಿ ವೈರ್ ಸಂದರ್ಶನದಲ್ಲಿ, ನ್ಯಾಯಮೂರ್ತಿ ಗುಪ್ತಾ ಅವರನ್ನು ಇತ್ತೀಚೆಗೆ ದೇಶದ್ರೋಹದ ಆರೋಪಕ್ಕೆ ಒಳಪಡಿಸಿದ ಮೂರು ಪ್ರಕರಣಗಳ ಬಗ್ಗೆ ಪ್ರಶ್ನಿಸಲಾಯಿತು.

ಮೊದಲು, ದಿಶಾ ರವಿ ಪ್ರಕರಣ. ಟೂಲ್ಕಿಟ್ ಸಂಪಾದಿಸಲು ಅಥವಾ ಅದರ ವಿಷಯಗಳನ್ನು ಟ್ವೀಟ್ ಮಾಡುವುದು ಖಂಡಿತವಾಗಿಯೂ ದೇಶದ್ರೋಹವಲ್ಲ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದ್ದಾರೆ. ತಾನು ಟೂಲ್ಕಿಟ್ ಅನ್ನು ಪರಿಶೀಲಿಸಿದ್ದೇನೆ ಮತ್ತು ಅದರ ವಿಷಯದಲ್ಲಿ ದೇಶದ್ರೋಹಿ ಅಂಶ ಅಥವಾ ಅಪರಾಧವೂ ಇಲ್ಲ ಎಂದು ಅವರು ಹೇಳಿದರು. ದಿಶಾ ರವಿ ಅವರು ಪೋಯೆಟಿಕ್ ಜಸ್ಟೀಸ್ ಫೌಂಡೇಶನ್‌ನ ಸದಸ್ಯರೊಂದಿಗೆ ವೆಬ್‌ನಾರ್‌ನಲ್ಲಿ ಭಾಗಿಯಾಗುವುದು ದೇಶದ್ರೋಹ ಅಥವಾ ಅಪರಾಧವಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: ದಿಶಾ ರವಿಯ ಜಾಮೀನು ಆದೇಶ: ದೇಶದ್ರೋಹದ ಬಗ್ಗೆ ನ್ಯಾಯಾಧೀಶರು ಹೇಳಿದ್ದೇನು?

ಈ ಸಂಬಂಧದಲ್ಲಿ, ಖಲಿಸ್ತಾನವನ್ನು ಚಾಂಪಿಯನ್ ಮಾಡುವ ಅಥವಾ ನಿಷೇಧಿತ ಸಂಘಟನೆಯ ಸದಸ್ಯರಾಗಿರುವ ಯಾರೊಂದಿಗಾದರೂ ಮಾತನಾಡುವುದು ದೇಶದ್ರೋಹ ಅಥವಾ ಅಪರಾಧವೇ ಎಂದು ನ್ಯಾಯಮೂರ್ತಿ ಗುಪ್ತಾ ಅವರನ್ನು ಕೇಳಲಾಯಿತು. ಅವರ ಸ್ಪಷ್ಟ ಉತ್ತರವೆಂದರೆ ಅದು ದೇಶದ್ರೋಹವಲ್ಲ ಮತ್ತು ಅಪರಾಧವಲ್ಲ.

ಎರಡನೆಯದಾಗಿ, ರಿಪಬ್ಲಿಕ್ ದಿನದಂದು ಪ್ರತಿಭಟನಾಕಾರರೊಬ್ಬರು ಗುಂಡು ಹಾರಿಸಲ್ಪಟ್ಟ ಕಾರಣ ಸಾವನ್ನಪ್ಪಿದ್ದಾರೆ ಎಂದು ಪತ್ರಕರ್ತರು ಟ್ವೀಟ್ ಮಾಡುವುದು ದೇಶದ್ರೋಹವಲ್ಲ ಎಂದು ಹೇಳಿದರು, ಟ್ವೀಟ್‌ನ ವಿಷಯ ತಪ್ಪಾಗಿದ್ದರೂ ಅದು ದೇಶದ್ರೋಹ ಅಥವಾ ಅಪರಾಧವಲ್ಲ ಎಂದು ಹೇಳಿದರು. ಇದು ಕಳಪೆ ಪತ್ರಿಕೋದ್ಯಮವಾಗಬಹುದು, ಆದರೆ ಅದು ಅಪರಾಧವಲ್ಲ ಎಂದು ಗುಪ್ತಾ ಅಭಿಪ್ರಾಯ ಪಟ್ಟಿದ್ದಾರೆ.

1995 ರಲ್ಲಿ ಸುಪ್ರೀಂ ಕೋರ್ಟ್ ಬಲ್ವಂತ್ ಸಿಂಗ್ ಪ್ರಕರಣದಲ್ಲಿ ’ಖಲಿಸ್ತಾನ್ ಜಿಂದಾಬಾದ್’ ಎಂದು ಕೂಗುವುದು ದೇಶದ್ರೋಹವಲ್ಲ ಎಂದು ತೀರ್ಪು ನೀಡಿತ್ತು. ಜೆಎನ್‌ಯು ವಿದ್ಯಾರ್ಥಿಗಳು, ’ಭಾರತ್ ತೇರೆ ತುಕ್ಡೆ ತುಕ್ಡೆ ಹೊಂಗೆ ಇನ್ಸಾ ಅಲ್ಲಾ ಇನ್ಸಾ ಅಲ್ಲಾ’ ಎಂದು ಘೋಷಣೆ ಕೂಗಿದ್ದು ದೇಶದ್ರೋಹವೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಗುಪ್ತಾ, ಘೋಷಣೆಯನ್ನು ಹಿಂಸಾಚಾರಕ್ಕೆ ಪೊಲೀಸರು ನೇರವಾಗಿ ಲಿಂಕ್ ಮಾಡಲು ಸಾಧ್ಯವಾದರೆ ಅದು ದೇಶದ್ರೋಹ ಎಂದು ಹೇಳಿದ್ದಾರೆ. ಮೂರು ವರ್ಷಗಳು ಕಳೆದಿವೆ. ಅಂತಹ ಯಾವುದೇ ಪುರಾವೆಗಳು ಮುಂದೆ ಬಂದಿಲ್ಲ ಎಂದು ಅವರು ಹೇಳಿದರು. ಆದ್ದರಿಂದ, ಇದು ದೇಶದ್ರೋಹವಾಗುವ ಸಾಧ್ಯತೆಯಿದೆ ಎಂದು ತಾನು ನಂಬುವುದಿಲ್ಲ ಎಂದು ಹೇಳಿದ್ದಾರೆ.

ನ್ಯಾಯಮೂರ್ತಿ ಗುಪ್ತಾ ಮಂಡಿಸಿದ ಪ್ರಮುಖ ಅಂಶವೆಂದರೆ, ’ಭಾರತ್ ತೇರೆ ತುಕ್ಡೆ ತುಕ್ಡೆ ಹೊಂಗೆ ಇನ್ಸಾ ಅಲ್ಲಾ ಇನ್ಸಾ ಅಲ್ಲಾ’ ಎಂಬ ಘೋಷಣೆ ದೇಶದ್ರೋಹವಲ್ಲ ಮತ್ತು ಇದು ಹಿಂಸಾಚಾರಕ್ಕೆ ಪ್ರಚೋದನೆ ಎಂದು ಪೊಲೀಸರು ಸಾಬೀತುಪಡಿಸಿದರೆ ಮಾತ್ರ ದೇಶದ್ರೋಹವಾಗುತ್ತದೆ.
ಕಳೆದ ತಿಂಗಳು ದಿಶಾ ರವಿ ಅವರಿಗೆ ಜಾಮೀನು ನೀಡುತ್ತಿದ್ದಾಗ, “ಸರ್ಕಾರಗಳ ಗಾಯಗಳನ್ನು ಮುಚ್ಚಿಕೊಳ್ಳಲು ದೇಶದ್ರೋಹದ ಕಾನೂನನ್ನು ಬಳಸಲಾಗುತ್ತಿದೆ’’ ಎಂದು ಕಿರಿಯ ನ್ಯಾಯಾಧೀಶರು ಹೇಳಿದ್ದನ್ನು ತಾನು ಸಂಪೂರ್ಣವಾಗಿ ಒಪ್ಪುತ್ತೇನೆ ಎಂದು ನ್ಯಾಯಮೂರ್ತಿ ಗುಪ್ತಾ ದಿ ವೈರ್‌ಗೆ ತಿಳಿಸಿದರು.

ಇದನ್ನೂ ಓದಿ: ರೈತರು ದೇಶದ್ರೋಹಿಗಳಲ್ಲ, ಕೆಂಪು ಕೋಟೆ ಘರ್ಷಣೆಗೆ ಕೇಂದ್ರದ ಪಿತೂರಿಯೇ ಕಾರಣ: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...