Homeಮುಖಪುಟಸರ್ಕಾರದಿಂದ ದೇಶದ್ರೋಹ ಕಾನೂನು ದುರುಪಯೋಗ, ಅದನ್ನು ರದ್ದುಗೊಳಿಸಬೇಕು : ನಿವೃತ್ತ ಸುಪ್ರೀಂ ನ್ಯಾಯಾಧೀಶ

ಸರ್ಕಾರದಿಂದ ದೇಶದ್ರೋಹ ಕಾನೂನು ದುರುಪಯೋಗ, ಅದನ್ನು ರದ್ದುಗೊಳಿಸಬೇಕು : ನಿವೃತ್ತ ಸುಪ್ರೀಂ ನ್ಯಾಯಾಧೀಶ

ದಿ ವೈರ್ ಸಂದರ್ಶನ| ನಾಗರಿಕರಲ್ಲಿ ಭಯವನ್ನು ಸೃಷ್ಟಿಸಲು ದೇಶದ್ರೋಹ ಕಾನೂನನ್ನು ಸರ್ಕಾರಗಳು ಬಳಸುತ್ತಿವೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

- Advertisement -
- Advertisement -

ಅದರ ದುರುಪಯೋಗದ ಪ್ರಕರಣಗಳು “ಘಾತೀಯವಾಗಿ” (ವಿಪರೀತ ಪ್ರಮಾಣದಲ್ಲಿ) ಹೆಚ್ಚುತ್ತಿವೆ ಎಂದು ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124 ಎ- ದೇಶದ್ರೋಹದ ಕಾನೂನನ್ನು “ತಕ್ಷಣವೇ ರದ್ದುಗೊಳಿಸಬೇಕು” ಎಂದು ಗುಪ್ತಾ ಹೇಳಿದ್ದಾರೆ. ಭಿನ್ನಮತವನ್ನು ತಡೆಗಟ್ಟಲು ಅಥವಾ ತಡೆಯಲು, ನಾಗರಿಕರಲ್ಲಿ ಭಯವನ್ನು ಸೃಷ್ಟಿಸಲು ಇದನ್ನು ಸರ್ಕಾರಗಳು ಬಳಸುತ್ತಿವೆ ಎಂದು ನ್ಯಾಯಮೂರ್ತಿ ದೀಪಕ್ ಗುಪ್ತಾ ಹೇಳಿದ್ದಾರೆ.

ಸುಮಾರು 60 ವರ್ಷಗಳ ಹಿಂದೆ 1962 ರಲ್ಲಿ ಕೇದಾರ ನಾಥ್ ಸಿಂಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸೆಕ್ಷನ್ 124 ಎ ಅನ್ನು ಉಲ್ಲೇಖಿಸಿದೆ ಮತ್ತು ಹಿಂಸಾಚಾರಕ್ಕೆ ಪ್ರಚೋದನೆ ಇದ್ದಲ್ಲಿ ಮಾತ್ರ ಇದು ಅನ್ವಯಿಸುತ್ತದೆ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದ್ದಾರೆ.

ಇದನ್ನೂ ಓದಿ: ಟ್ರ್ಯಾಕ್ಟರ್‌ ರ್‍ಯಾಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಸೇರಿ 6 ಜನರ ವಿರುದ್ಧ ದೇಶದ್ರೋಹ ಪ್ರಕರಣ!

ಆರೋಪ ಹೊರಿಸಲು ಹಿಂಸಾಚಾರಕ್ಕೆ ಪ್ರಚೋದನೆಯ ವಿಷಯ ಅಗತ್ಯವಾದ ಘಟಕಾಂಶವಾಗಿದೆ ಮತ್ತು ಆ ಪ್ರಚೋದನೆಯಿಲ್ಲದೆ ಸೆಕ್ಷನ್ 124 ಎ ಅಂದರೆ ದೇಶದ್ರೋಹ ಕಾನೂನನ್ನು ಬಳಸಲಾಗುವುದಿಲ್ಲ. ಆದಾಗ್ಯೂ, ದೇಶಾದ್ಯಂತ ಬಹುಪಾಲು ಮ್ಯಾಜಿಸ್ಟ್ರೇಟ್‌ಗಳಿಗೆ ಈ ಅಂಶ ತಿಳಿದಂತಿಲ್ಲ ಅಥವಾ ಅದನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಸುಪ್ರೀಂ ಕೋರ್ಟ್ ಪದೇ ಪದೇ ಈ ಓದುವಿಕೆಯನ್ನು ( 1962 ರ ಉಲ್ಲೇಖ) ಪುನರುಚ್ಚರಿಸಿದೆ ಮತ್ತು ಸುಪ್ರೀಂ ಕೋರ್ಟ್‌ನ ನಿಲುವಿನ ಬಗ್ಗೆ ಯಾವುದೇ ಸಂದೇಹ ಅಥವಾ ಗೊಂದಲಗಳಿಲ್ಲ. ಇದರರ್ಥ ಸೆಕ್ಷನ್ 124 ಎ ಮುದ್ರಣದಲ್ಲಿ ಇರುವಂತೆ ಇರಲಾರದು. ಇದನ್ನು ತೀರಾ ವಿರಳವಾಗಿ ಬಳಸಬೇಕು ಎಂಬುದು ಕೂಡ ಸತ್ಯ ಎಂದು ಗುಪ್ತಾ ಹೇಳಿದ್ದಾರೆ.

ದಿ ವೈರ್‌ಗಾಗಿ ಕರಣ್ ಥಾಪರ್‌ಗೆ ನೀಡಿದ 36 ನಿಮಿಷಗಳ ಸಂದರ್ಶನದಲ್ಲಿ, ನ್ಯಾಯಮೂರ್ತಿ ಗುಪ್ತಾ, ತಮ್ಮ ಮೊದಲ ಆದ್ಯತೆಯೆಂದರೆ ದೇಶದ್ರೋಹದ ಕಾನೂನನ್ನು ತಕ್ಷಣವೇ ರದ್ದುಪಡಿಸುವುದು, ಎರಡನೆಯದು ಪೊಲೀಸರು ಆರೋಪವನ್ನು ಹೇಗೆ ಅನ್ವಯಿಸಬೇಕು ಎಂಬುದರ ಕುರಿತು ವಿವರವಾದ ಮಾರ್ಗಸೂಚಿಗಳನ್ನು ಸುಪ್ರೀಂ ಕೋರ್ಟ್‌ಗೆ ತಿಳಿಸಬೇಕು. ಅದನ್ನು ತೆಗೆದುಕೊಳ್ಳುವ ಮೊದಲು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಕೌಂಟರ್‌ಸೈನ್ ಮಾಡುವುದು ಅತ್ಯಗತ್ಯ ಎಂದು ಅವರು ಹೇಳಿದರು. ಸುಪ್ರೀಂ ಕೋರ್ಟ್ ಶೀಘ್ರದಲ್ಲೇ ಇಂತಹ ಮಾರ್ಗಸೂಚಿಗಳನ್ನು ರೂಪಿಸುತ್ತದೆ ಎಂದು ಅವರು ಆಶಿಸಿದರು.

ಇದನ್ನೂ ಓದಿ: ಮೋದಿ-ಆದಿತ್ಯನಾಥ್ ವಿರುದ್ದ ಟೀಕೆ: 293 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು!

ಈ ವಿಷಯವನ್ನು ಚರ್ಚಿಸುವ ಅಧಿಕಾರ ಹೊಂದಿರುವ ಮುಖ್ಯ ನ್ಯಾಯಮೂರ್ತಿ, ಸೆಕ್ಷನ್ 124 ಎ ಗೆ ಸಂಬಂಧಿಸಿದ ಅವಳಿ ಸಮಸ್ಯೆಗಳನ್ನು ಎತ್ತಬೇಕು: ಅದನ್ನು ದುರುಪಯೋಗಪಡಿಸಿಕೊಳ್ಳುವ ರೀತಿ ಮತ್ತು ತೀವ್ರವಾಗಿ ಹೆಚ್ಚುತ್ತಿರುವ ದುರುಪಯೋಗದ ಪ್ರಕರಣಗಳು- ಈ ವಿಷಯಗಳನ್ನು ಮುಖ್ಯ ನ್ಯಾಯಮೂರ್ತಿ ಎತ್ತಿಕೊಳ್ಳಬೇಕು. ಈ ವಿಷಯವನ್ನು ಪರಿಶೀಲಿಸಲು ಮುಖ್ಯ ನ್ಯಾಯಾಧೀಶರು ತಮ್ಮ ಸು-ಮೋಟು ಅಧಿಕಾರವನ್ನು ಬಳಸುತ್ತಾರೆ ಎಂದು ನಾನು ನಂಬಲಾರೆ. ಈ ವಿಷಯ ಕುರಿತು ಸುಪ್ರೀಂ ಕೋರ್ಟ್‌ಗೆ ಪಿಐಎಲ್ ಅಥವಾ ಸವಾಲನ್ನು ಸಲ್ಲಿಸುವವರೆಗೆ ಕಾಯಬೇಕಾಗಿದೆ ಮತ್ತು ಅದು ಈ ವಿಷಯಕ್ಕೆ ಹೋಗಲು ಸರಿಯಾದ ಮಾರ್ಗವಾಗಿದೆ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದ್ದಾರೆ.

ತಾವು ಮುಖ್ಯ ನ್ಯಾಯಮೂರ್ತಿಯಾಗಿದ್ದರೆ, ಕಾನೂನನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ನಂಬಿದ್ದರೂ ಸಹ, ದೇಶದ್ರೋಹದ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಲು ಕಚೇರಿಯ ಸು-ಮೋಟು ಅಧಿಕಾರವನ್ನು ಬಳಸುವುದಿಲ್ಲ ಎಂದು ಹೇಳಿದರು.

ದಿ ವೈರ್ ಸಂದರ್ಶನದಲ್ಲಿ, ನ್ಯಾಯಮೂರ್ತಿ ಗುಪ್ತಾ ಅವರನ್ನು ಇತ್ತೀಚೆಗೆ ದೇಶದ್ರೋಹದ ಆರೋಪಕ್ಕೆ ಒಳಪಡಿಸಿದ ಮೂರು ಪ್ರಕರಣಗಳ ಬಗ್ಗೆ ಪ್ರಶ್ನಿಸಲಾಯಿತು.

ಮೊದಲು, ದಿಶಾ ರವಿ ಪ್ರಕರಣ. ಟೂಲ್ಕಿಟ್ ಸಂಪಾದಿಸಲು ಅಥವಾ ಅದರ ವಿಷಯಗಳನ್ನು ಟ್ವೀಟ್ ಮಾಡುವುದು ಖಂಡಿತವಾಗಿಯೂ ದೇಶದ್ರೋಹವಲ್ಲ ಎಂದು ನ್ಯಾಯಮೂರ್ತಿ ಗುಪ್ತಾ ಹೇಳಿದ್ದಾರೆ. ತಾನು ಟೂಲ್ಕಿಟ್ ಅನ್ನು ಪರಿಶೀಲಿಸಿದ್ದೇನೆ ಮತ್ತು ಅದರ ವಿಷಯದಲ್ಲಿ ದೇಶದ್ರೋಹಿ ಅಂಶ ಅಥವಾ ಅಪರಾಧವೂ ಇಲ್ಲ ಎಂದು ಅವರು ಹೇಳಿದರು. ದಿಶಾ ರವಿ ಅವರು ಪೋಯೆಟಿಕ್ ಜಸ್ಟೀಸ್ ಫೌಂಡೇಶನ್‌ನ ಸದಸ್ಯರೊಂದಿಗೆ ವೆಬ್‌ನಾರ್‌ನಲ್ಲಿ ಭಾಗಿಯಾಗುವುದು ದೇಶದ್ರೋಹ ಅಥವಾ ಅಪರಾಧವಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: ದಿಶಾ ರವಿಯ ಜಾಮೀನು ಆದೇಶ: ದೇಶದ್ರೋಹದ ಬಗ್ಗೆ ನ್ಯಾಯಾಧೀಶರು ಹೇಳಿದ್ದೇನು?

ಈ ಸಂಬಂಧದಲ್ಲಿ, ಖಲಿಸ್ತಾನವನ್ನು ಚಾಂಪಿಯನ್ ಮಾಡುವ ಅಥವಾ ನಿಷೇಧಿತ ಸಂಘಟನೆಯ ಸದಸ್ಯರಾಗಿರುವ ಯಾರೊಂದಿಗಾದರೂ ಮಾತನಾಡುವುದು ದೇಶದ್ರೋಹ ಅಥವಾ ಅಪರಾಧವೇ ಎಂದು ನ್ಯಾಯಮೂರ್ತಿ ಗುಪ್ತಾ ಅವರನ್ನು ಕೇಳಲಾಯಿತು. ಅವರ ಸ್ಪಷ್ಟ ಉತ್ತರವೆಂದರೆ ಅದು ದೇಶದ್ರೋಹವಲ್ಲ ಮತ್ತು ಅಪರಾಧವಲ್ಲ.

ಎರಡನೆಯದಾಗಿ, ರಿಪಬ್ಲಿಕ್ ದಿನದಂದು ಪ್ರತಿಭಟನಾಕಾರರೊಬ್ಬರು ಗುಂಡು ಹಾರಿಸಲ್ಪಟ್ಟ ಕಾರಣ ಸಾವನ್ನಪ್ಪಿದ್ದಾರೆ ಎಂದು ಪತ್ರಕರ್ತರು ಟ್ವೀಟ್ ಮಾಡುವುದು ದೇಶದ್ರೋಹವಲ್ಲ ಎಂದು ಹೇಳಿದರು, ಟ್ವೀಟ್‌ನ ವಿಷಯ ತಪ್ಪಾಗಿದ್ದರೂ ಅದು ದೇಶದ್ರೋಹ ಅಥವಾ ಅಪರಾಧವಲ್ಲ ಎಂದು ಹೇಳಿದರು. ಇದು ಕಳಪೆ ಪತ್ರಿಕೋದ್ಯಮವಾಗಬಹುದು, ಆದರೆ ಅದು ಅಪರಾಧವಲ್ಲ ಎಂದು ಗುಪ್ತಾ ಅಭಿಪ್ರಾಯ ಪಟ್ಟಿದ್ದಾರೆ.

1995 ರಲ್ಲಿ ಸುಪ್ರೀಂ ಕೋರ್ಟ್ ಬಲ್ವಂತ್ ಸಿಂಗ್ ಪ್ರಕರಣದಲ್ಲಿ ’ಖಲಿಸ್ತಾನ್ ಜಿಂದಾಬಾದ್’ ಎಂದು ಕೂಗುವುದು ದೇಶದ್ರೋಹವಲ್ಲ ಎಂದು ತೀರ್ಪು ನೀಡಿತ್ತು. ಜೆಎನ್‌ಯು ವಿದ್ಯಾರ್ಥಿಗಳು, ’ಭಾರತ್ ತೇರೆ ತುಕ್ಡೆ ತುಕ್ಡೆ ಹೊಂಗೆ ಇನ್ಸಾ ಅಲ್ಲಾ ಇನ್ಸಾ ಅಲ್ಲಾ’ ಎಂದು ಘೋಷಣೆ ಕೂಗಿದ್ದು ದೇಶದ್ರೋಹವೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಗುಪ್ತಾ, ಘೋಷಣೆಯನ್ನು ಹಿಂಸಾಚಾರಕ್ಕೆ ಪೊಲೀಸರು ನೇರವಾಗಿ ಲಿಂಕ್ ಮಾಡಲು ಸಾಧ್ಯವಾದರೆ ಅದು ದೇಶದ್ರೋಹ ಎಂದು ಹೇಳಿದ್ದಾರೆ. ಮೂರು ವರ್ಷಗಳು ಕಳೆದಿವೆ. ಅಂತಹ ಯಾವುದೇ ಪುರಾವೆಗಳು ಮುಂದೆ ಬಂದಿಲ್ಲ ಎಂದು ಅವರು ಹೇಳಿದರು. ಆದ್ದರಿಂದ, ಇದು ದೇಶದ್ರೋಹವಾಗುವ ಸಾಧ್ಯತೆಯಿದೆ ಎಂದು ತಾನು ನಂಬುವುದಿಲ್ಲ ಎಂದು ಹೇಳಿದ್ದಾರೆ.

ನ್ಯಾಯಮೂರ್ತಿ ಗುಪ್ತಾ ಮಂಡಿಸಿದ ಪ್ರಮುಖ ಅಂಶವೆಂದರೆ, ’ಭಾರತ್ ತೇರೆ ತುಕ್ಡೆ ತುಕ್ಡೆ ಹೊಂಗೆ ಇನ್ಸಾ ಅಲ್ಲಾ ಇನ್ಸಾ ಅಲ್ಲಾ’ ಎಂಬ ಘೋಷಣೆ ದೇಶದ್ರೋಹವಲ್ಲ ಮತ್ತು ಇದು ಹಿಂಸಾಚಾರಕ್ಕೆ ಪ್ರಚೋದನೆ ಎಂದು ಪೊಲೀಸರು ಸಾಬೀತುಪಡಿಸಿದರೆ ಮಾತ್ರ ದೇಶದ್ರೋಹವಾಗುತ್ತದೆ.
ಕಳೆದ ತಿಂಗಳು ದಿಶಾ ರವಿ ಅವರಿಗೆ ಜಾಮೀನು ನೀಡುತ್ತಿದ್ದಾಗ, “ಸರ್ಕಾರಗಳ ಗಾಯಗಳನ್ನು ಮುಚ್ಚಿಕೊಳ್ಳಲು ದೇಶದ್ರೋಹದ ಕಾನೂನನ್ನು ಬಳಸಲಾಗುತ್ತಿದೆ’’ ಎಂದು ಕಿರಿಯ ನ್ಯಾಯಾಧೀಶರು ಹೇಳಿದ್ದನ್ನು ತಾನು ಸಂಪೂರ್ಣವಾಗಿ ಒಪ್ಪುತ್ತೇನೆ ಎಂದು ನ್ಯಾಯಮೂರ್ತಿ ಗುಪ್ತಾ ದಿ ವೈರ್‌ಗೆ ತಿಳಿಸಿದರು.

ಇದನ್ನೂ ಓದಿ: ರೈತರು ದೇಶದ್ರೋಹಿಗಳಲ್ಲ, ಕೆಂಪು ಕೋಟೆ ಘರ್ಷಣೆಗೆ ಕೇಂದ್ರದ ಪಿತೂರಿಯೇ ಕಾರಣ: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...