Homeಮುಖಪುಟವಶಾಹತುಶಾಹಿ ದೇಶದ್ರೋಹದ ಕಾನೂನು ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಅಗತ್ಯವೇ?: ಸುಪ್ರೀಂ ಪ್ರಶ್ನೆ

ವಶಾಹತುಶಾಹಿ ದೇಶದ್ರೋಹದ ಕಾನೂನು ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಅಗತ್ಯವೇ?: ಸುಪ್ರೀಂ ಪ್ರಶ್ನೆ

- Advertisement -
- Advertisement -

ದೇಶದ್ರೋಹದ ಕಾನೂನು ಬ್ರಿಟೀಷ್ ಕಾಲದ ಈ ವಶಾಹತುಶಾಹಿ ಕಾನೂನು ಆಗಿದ್ದು, ಸ್ವಾತಂತ್ರ್ಯ ದೊರೆತ 75 ವರ್ಷಗಳ ನಂತರವೂ ಅದರ ಅಗತ್ಯವಿದೆಯೇ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

ದೇಶದ್ರೋಹ ಕಾನೂನಿನ ಸಿಂಧುತ್ವವನ್ನು ಪರಿಶೀಲಿಸುವುದಾಗಿ ಹೇಳಿದ ನ್ಯಾಯಾಲಯ, ಈ ಕುರಿತು ಕೇಂದ್ರದ ಪ್ರತಿಕ್ರಿಯೆ ಕೋರಿದೆ.

ದೇಶದ್ರೋಹದ ಕಾನೂನಿಗೆ ಸಂಬಂಧಿಸಿದಂತೆ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಅವರನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣರವರು “ಗಾಂಧೀಜಿಯ ಹೋರಾಟವನ್ನು ಹತ್ತಿಕ್ಕಲು ಬ್ರೀಟಿಷರು ಇದೇ ಕಾನೂನನ್ನು ಬಳಸುತ್ತಿದ್ದರು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬ್ರಿಟಿಷ್ ವಶಾಹತುಶಾಹಿ ದೇಶದ್ರೋಹದ ಕಾನೂನು ಅಗತ್ಯವಿದೆಯೇ? ಸ್ವಾತಂತ್ರ್ಯ ದೊರೆತು 75 ವರ್ಷಗಳಾದರೂ ಈ ಕಾನೂನು ಬೇಕೆ? ಎಂದು ಸಿಜೆಐ ರಮಣರವರು ಅಟಾರ್ನಿಯವರನ್ನು ಪ್ರಶ್ನಿಸಿದ್ದಾರೆ.

ಈ ದೇಶದ್ರೋಹದ ಕಾನೂನನ್ನು ರದ್ದುಗೊಳಿಸಬೇಕೆಂದು ಹಲವಾರು ಅರ್ಜಿಗಳು ದಾಖಲಾಗಿದ್ದು ಎಲ್ಲವನ್ನು ಒಟ್ಟಿಗೆ ಆಲಿಸುವುದಾಗಿ ಸಿಜೆಐ ತಿಳಿಸಿದ್ದಾರೆ.

ಈ ಕಾನೂನು ದುರ್ಬಳಕೆಯಾಗುತ್ತಿದೆ ಎಂಬುದು ನಮ್ಮ ಕಾಳಜಿಯಾಗಿದೆ. ಅಲ್ಲದೆ ಇದನ್ನು ಜಾರಿಗೊರಿಸುವವರು ಯಾವುದೇ ಹೊಣೆಗಾರಿಕೆಯನ್ನು ಹೊಂದಿಲ್ಲ. ‘ಇದುವರೆಗೂ ದಾಖಲಾದ ಪ್ರಕರಣಗಳಲ್ಲಿ ಕೆಲವೇ ಪ್ರಕರಣಗಳು ಮಾತ್ರ ಸಾಬೀತಾಗಿದ್ದು, ಅಪರಾಧ ದರ ತೀರಾ ಕಡಿಮೆಯಿರುವುದನ್ನು ಇತಿಹಾಸ ತೋರಿಸಿದೆ’ ಎಂದು ಎನ್‌ವಿ ರಮಣ ತಿಳಿಸಿದ್ದಾರೆ.

ಯಾವುದೇ ಗ್ರಾಮದಲ್ಲಿ ಯಾರಾದರೂ ಪ್ರಶ್ನಿಸಿದರೆ ಅವರನ್ನು ಬಂಧಿಸಿ ಪೊಲೀಸರು ಆತನ ಮೇಲೆ 124ಎ ಪ್ರಕರಣ ದಾಖಲಿಸಬಹುದಾಗಿದೆ. ಇದರಿಂದ ಜನ ಭಯಭೀತರಾಗಿದ್ದಾರೆ ಎಂದು ರಮಣ ಅಭಿಪ್ರಾಯಪಟ್ಟಿದ್ದಾರೆ.

ನಾವು ಯಾವುದೇ ಸರ್ಕಾರವನ್ನು ದೂಷಿಸುತ್ತಿಲ್ಲ. ಆದರೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಎಕ್ಷನ್ 66ಎ ಅನ್ನು ರದ್ದುಪಡಿಸಿ ಬಹಳ ದಿನಗಳಾದರೂ ಇನ್ನು ಬಳಕೆಯಲ್ಲಿದೆ. ಅದೇ ರೀತಿ ಈ ದೇಶದ್ರೋಹ ಕಾನೂನು ಸಹ ದುರ್ಬಳಕೆಯಾಗುತ್ತಿದೆ. ಇದರ ಸಿಂಧುತ್ವವನ್ನು ಪರಿಶೀಲಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಈ ಕಾಯ್ದೆ ಅತಿಯಾಗಿ ದುರ್ಬಳಕೆಯಾಗಿದೆ. ಬಡಗಿಯೊಬ್ಬನಿಗೆ ಕಾಡೋಂದನ್ನು ತೋರಿಸಿ ಯಾವುದಾದರೊಂದು ಮರವನ್ನು ಬಳಸಿಕೊ ಎಂದರೆ ಆತನ ಇಡೀ ಕಾಡನ್ನು ಕಡಿದ ರೀತಿ ಈ ಕಾನೂನು ಎಲ್ಲರ ವಿರುದ್ಧ ಪ್ರಯೋಗಿಸಲ್ಪಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಅದೇ ರೀತಿ ಎರಡು ದಿನಗಳ ಹಿಂದೆ UAPA ಕಾಯ್ದೆಯ ಬಗ್ಗೆ ಸಹ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿತ್ತು. ಭಯೋತ್ಪಾದನಾ ವಿರೋಧಿ ಕಾನೂನುಗಳ ದುರ್ಬಳಕೆ ಸರಿಯಲ್ಲ ಎಂದು ಸುಪ್ರೀಂ ಕೋರ್ಟ್‌ ನ್ಯಾಯಾಮೂರ್ತಿ ಜಸ್ಟಿಸ್‌ ಡಿ.ವೈ. ಚಂದ್ರಚೂಡ್‌ ಅಭಿಪ್ರಾಯ ಪಟ್ಟಿದ್ದರು. ಜುಲೈ 12ರಂದು ಇಂಡೋ-ಅಮೇರಿಕನ್‌ ನ್ಯಾಯಾಧೀಶರ ವರ್ಚುವಲ್‌ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, UAPA ಸೇರಿದಂತೆ ಭಯೋತ್ಪಾದನಾ ತಡೆ ಕಾನೂನುಗಳನ್ನು ಭಿನ್ನಮತಗಳ ದಮನಕ್ಕೆ ಮತ್ತು ಪ್ರಜೆಗಳ ಮೇಲಿನ ದೌರ್ಜನ್ಯಕ್ಕೆ ಪ್ರಯೋಗಿಸುವ ಟ್ರೆಂಡ್‌ ಇತ್ತೀಚೆಗೆ ಬೆಳೆಯುತ್ತಿರುವುದರ ಕುರಿತು ವಿಷಾದ ವ್ಯಕ್ತಪಡಿಸಿದರು.

ಮಾನವ ಹಕ್ಕುಗಳ ಹೋರಾಟಗಾರ 84 ವರ್ಷ ವಯಸ್ಸಿನ ಫಾದರ್ ಸ್ಟ್ಯಾನ್‌ ಸ್ವಾಮಿ ನಿಧನದ ನಂತರ ದೇಶದಲ್ಲಿ ಯುಎಪಿಎ ಕಾಯ್ದೆ ಕುರಿತು ತೀವ್ರ ಟೀಕೆಗಳು ಕೇಳಿಬರುತ್ತಿವೆ. ಈ ಸಂದರ್ಭದಲ್ಲಿ ಜಸ್ಟಿಸ್‌ ಚಂದ್ರಚೂಡ್‌ ಅವರ ಹೇಳಿಕೆ ಮಹತ್ವದ ಸ್ಥಾನ ಪಡೆದುಕೊಂಡಿದೆ.

ಇತ್ತೀಚೆಗೆ ಖ್ಯಾತ ಪತ್ರಕರ್ತ ವಿನೋದ್ ದುವಾ ವಿರುದ್ಧ ದಾಖಲಿಸಲಾಗಿದ್ದ ದೇಶದ್ರೋಹ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮಹತ್ವವನ್ನು ಹಾಗೂ ಹಿಂಸಾಚಾರದ ಪ್ರಚೋದನೆ ಇಲ್ಲದಿರುವವರೆಗೂ ಪ್ರಭುತ್ವವನ್ನು ಮುಕ್ತವಾಗಿ ಟೀಕಿಸುವ ಪತ್ರಕರ್ತರ ಸ್ವಾತಂತ್ರ್ಯವನ್ನು ದೃಢವಾಗಿ ಅನುಮೋದಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.


ಇದನ್ನೂ ಓದಿ: ವಿನೋದ್ ದುವಾ ವಿರುದ್ಧ ಎಫ್‌ಐಆರ್ ರದ್ದು; ದೇಶದ್ರೋಹ ಕಾನೂನಿನ ಮೂಲಭೂತ ನಿಯಮಗಳನ್ನು ನೆನಪಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...