Homeಮುಖಪುಟವಶಾಹತುಶಾಹಿ ದೇಶದ್ರೋಹದ ಕಾನೂನು ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಅಗತ್ಯವೇ?: ಸುಪ್ರೀಂ ಪ್ರಶ್ನೆ

ವಶಾಹತುಶಾಹಿ ದೇಶದ್ರೋಹದ ಕಾನೂನು ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಅಗತ್ಯವೇ?: ಸುಪ್ರೀಂ ಪ್ರಶ್ನೆ

- Advertisement -
- Advertisement -

ದೇಶದ್ರೋಹದ ಕಾನೂನು ಬ್ರಿಟೀಷ್ ಕಾಲದ ಈ ವಶಾಹತುಶಾಹಿ ಕಾನೂನು ಆಗಿದ್ದು, ಸ್ವಾತಂತ್ರ್ಯ ದೊರೆತ 75 ವರ್ಷಗಳ ನಂತರವೂ ಅದರ ಅಗತ್ಯವಿದೆಯೇ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

ದೇಶದ್ರೋಹ ಕಾನೂನಿನ ಸಿಂಧುತ್ವವನ್ನು ಪರಿಶೀಲಿಸುವುದಾಗಿ ಹೇಳಿದ ನ್ಯಾಯಾಲಯ, ಈ ಕುರಿತು ಕೇಂದ್ರದ ಪ್ರತಿಕ್ರಿಯೆ ಕೋರಿದೆ.

ದೇಶದ್ರೋಹದ ಕಾನೂನಿಗೆ ಸಂಬಂಧಿಸಿದಂತೆ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಅವರನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣರವರು “ಗಾಂಧೀಜಿಯ ಹೋರಾಟವನ್ನು ಹತ್ತಿಕ್ಕಲು ಬ್ರೀಟಿಷರು ಇದೇ ಕಾನೂನನ್ನು ಬಳಸುತ್ತಿದ್ದರು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬ್ರಿಟಿಷ್ ವಶಾಹತುಶಾಹಿ ದೇಶದ್ರೋಹದ ಕಾನೂನು ಅಗತ್ಯವಿದೆಯೇ? ಸ್ವಾತಂತ್ರ್ಯ ದೊರೆತು 75 ವರ್ಷಗಳಾದರೂ ಈ ಕಾನೂನು ಬೇಕೆ? ಎಂದು ಸಿಜೆಐ ರಮಣರವರು ಅಟಾರ್ನಿಯವರನ್ನು ಪ್ರಶ್ನಿಸಿದ್ದಾರೆ.

ಈ ದೇಶದ್ರೋಹದ ಕಾನೂನನ್ನು ರದ್ದುಗೊಳಿಸಬೇಕೆಂದು ಹಲವಾರು ಅರ್ಜಿಗಳು ದಾಖಲಾಗಿದ್ದು ಎಲ್ಲವನ್ನು ಒಟ್ಟಿಗೆ ಆಲಿಸುವುದಾಗಿ ಸಿಜೆಐ ತಿಳಿಸಿದ್ದಾರೆ.

ಈ ಕಾನೂನು ದುರ್ಬಳಕೆಯಾಗುತ್ತಿದೆ ಎಂಬುದು ನಮ್ಮ ಕಾಳಜಿಯಾಗಿದೆ. ಅಲ್ಲದೆ ಇದನ್ನು ಜಾರಿಗೊರಿಸುವವರು ಯಾವುದೇ ಹೊಣೆಗಾರಿಕೆಯನ್ನು ಹೊಂದಿಲ್ಲ. ‘ಇದುವರೆಗೂ ದಾಖಲಾದ ಪ್ರಕರಣಗಳಲ್ಲಿ ಕೆಲವೇ ಪ್ರಕರಣಗಳು ಮಾತ್ರ ಸಾಬೀತಾಗಿದ್ದು, ಅಪರಾಧ ದರ ತೀರಾ ಕಡಿಮೆಯಿರುವುದನ್ನು ಇತಿಹಾಸ ತೋರಿಸಿದೆ’ ಎಂದು ಎನ್‌ವಿ ರಮಣ ತಿಳಿಸಿದ್ದಾರೆ.

ಯಾವುದೇ ಗ್ರಾಮದಲ್ಲಿ ಯಾರಾದರೂ ಪ್ರಶ್ನಿಸಿದರೆ ಅವರನ್ನು ಬಂಧಿಸಿ ಪೊಲೀಸರು ಆತನ ಮೇಲೆ 124ಎ ಪ್ರಕರಣ ದಾಖಲಿಸಬಹುದಾಗಿದೆ. ಇದರಿಂದ ಜನ ಭಯಭೀತರಾಗಿದ್ದಾರೆ ಎಂದು ರಮಣ ಅಭಿಪ್ರಾಯಪಟ್ಟಿದ್ದಾರೆ.

ನಾವು ಯಾವುದೇ ಸರ್ಕಾರವನ್ನು ದೂಷಿಸುತ್ತಿಲ್ಲ. ಆದರೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಎಕ್ಷನ್ 66ಎ ಅನ್ನು ರದ್ದುಪಡಿಸಿ ಬಹಳ ದಿನಗಳಾದರೂ ಇನ್ನು ಬಳಕೆಯಲ್ಲಿದೆ. ಅದೇ ರೀತಿ ಈ ದೇಶದ್ರೋಹ ಕಾನೂನು ಸಹ ದುರ್ಬಳಕೆಯಾಗುತ್ತಿದೆ. ಇದರ ಸಿಂಧುತ್ವವನ್ನು ಪರಿಶೀಲಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಈ ಕಾಯ್ದೆ ಅತಿಯಾಗಿ ದುರ್ಬಳಕೆಯಾಗಿದೆ. ಬಡಗಿಯೊಬ್ಬನಿಗೆ ಕಾಡೋಂದನ್ನು ತೋರಿಸಿ ಯಾವುದಾದರೊಂದು ಮರವನ್ನು ಬಳಸಿಕೊ ಎಂದರೆ ಆತನ ಇಡೀ ಕಾಡನ್ನು ಕಡಿದ ರೀತಿ ಈ ಕಾನೂನು ಎಲ್ಲರ ವಿರುದ್ಧ ಪ್ರಯೋಗಿಸಲ್ಪಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಅದೇ ರೀತಿ ಎರಡು ದಿನಗಳ ಹಿಂದೆ UAPA ಕಾಯ್ದೆಯ ಬಗ್ಗೆ ಸಹ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿತ್ತು. ಭಯೋತ್ಪಾದನಾ ವಿರೋಧಿ ಕಾನೂನುಗಳ ದುರ್ಬಳಕೆ ಸರಿಯಲ್ಲ ಎಂದು ಸುಪ್ರೀಂ ಕೋರ್ಟ್‌ ನ್ಯಾಯಾಮೂರ್ತಿ ಜಸ್ಟಿಸ್‌ ಡಿ.ವೈ. ಚಂದ್ರಚೂಡ್‌ ಅಭಿಪ್ರಾಯ ಪಟ್ಟಿದ್ದರು. ಜುಲೈ 12ರಂದು ಇಂಡೋ-ಅಮೇರಿಕನ್‌ ನ್ಯಾಯಾಧೀಶರ ವರ್ಚುವಲ್‌ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, UAPA ಸೇರಿದಂತೆ ಭಯೋತ್ಪಾದನಾ ತಡೆ ಕಾನೂನುಗಳನ್ನು ಭಿನ್ನಮತಗಳ ದಮನಕ್ಕೆ ಮತ್ತು ಪ್ರಜೆಗಳ ಮೇಲಿನ ದೌರ್ಜನ್ಯಕ್ಕೆ ಪ್ರಯೋಗಿಸುವ ಟ್ರೆಂಡ್‌ ಇತ್ತೀಚೆಗೆ ಬೆಳೆಯುತ್ತಿರುವುದರ ಕುರಿತು ವಿಷಾದ ವ್ಯಕ್ತಪಡಿಸಿದರು.

ಮಾನವ ಹಕ್ಕುಗಳ ಹೋರಾಟಗಾರ 84 ವರ್ಷ ವಯಸ್ಸಿನ ಫಾದರ್ ಸ್ಟ್ಯಾನ್‌ ಸ್ವಾಮಿ ನಿಧನದ ನಂತರ ದೇಶದಲ್ಲಿ ಯುಎಪಿಎ ಕಾಯ್ದೆ ಕುರಿತು ತೀವ್ರ ಟೀಕೆಗಳು ಕೇಳಿಬರುತ್ತಿವೆ. ಈ ಸಂದರ್ಭದಲ್ಲಿ ಜಸ್ಟಿಸ್‌ ಚಂದ್ರಚೂಡ್‌ ಅವರ ಹೇಳಿಕೆ ಮಹತ್ವದ ಸ್ಥಾನ ಪಡೆದುಕೊಂಡಿದೆ.

ಇತ್ತೀಚೆಗೆ ಖ್ಯಾತ ಪತ್ರಕರ್ತ ವಿನೋದ್ ದುವಾ ವಿರುದ್ಧ ದಾಖಲಿಸಲಾಗಿದ್ದ ದೇಶದ್ರೋಹ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮಹತ್ವವನ್ನು ಹಾಗೂ ಹಿಂಸಾಚಾರದ ಪ್ರಚೋದನೆ ಇಲ್ಲದಿರುವವರೆಗೂ ಪ್ರಭುತ್ವವನ್ನು ಮುಕ್ತವಾಗಿ ಟೀಕಿಸುವ ಪತ್ರಕರ್ತರ ಸ್ವಾತಂತ್ರ್ಯವನ್ನು ದೃಢವಾಗಿ ಅನುಮೋದಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.


ಇದನ್ನೂ ಓದಿ: ವಿನೋದ್ ದುವಾ ವಿರುದ್ಧ ಎಫ್‌ಐಆರ್ ರದ್ದು; ದೇಶದ್ರೋಹ ಕಾನೂನಿನ ಮೂಲಭೂತ ನಿಯಮಗಳನ್ನು ನೆನಪಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...