Homeಮುಖಪುಟವಶಾಹತುಶಾಹಿ ದೇಶದ್ರೋಹದ ಕಾನೂನು ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಅಗತ್ಯವೇ?: ಸುಪ್ರೀಂ ಪ್ರಶ್ನೆ

ವಶಾಹತುಶಾಹಿ ದೇಶದ್ರೋಹದ ಕಾನೂನು ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಅಗತ್ಯವೇ?: ಸುಪ್ರೀಂ ಪ್ರಶ್ನೆ

- Advertisement -
- Advertisement -

ದೇಶದ್ರೋಹದ ಕಾನೂನು ಬ್ರಿಟೀಷ್ ಕಾಲದ ಈ ವಶಾಹತುಶಾಹಿ ಕಾನೂನು ಆಗಿದ್ದು, ಸ್ವಾತಂತ್ರ್ಯ ದೊರೆತ 75 ವರ್ಷಗಳ ನಂತರವೂ ಅದರ ಅಗತ್ಯವಿದೆಯೇ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

ದೇಶದ್ರೋಹ ಕಾನೂನಿನ ಸಿಂಧುತ್ವವನ್ನು ಪರಿಶೀಲಿಸುವುದಾಗಿ ಹೇಳಿದ ನ್ಯಾಯಾಲಯ, ಈ ಕುರಿತು ಕೇಂದ್ರದ ಪ್ರತಿಕ್ರಿಯೆ ಕೋರಿದೆ.

ದೇಶದ್ರೋಹದ ಕಾನೂನಿಗೆ ಸಂಬಂಧಿಸಿದಂತೆ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್ ಅವರನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣರವರು “ಗಾಂಧೀಜಿಯ ಹೋರಾಟವನ್ನು ಹತ್ತಿಕ್ಕಲು ಬ್ರೀಟಿಷರು ಇದೇ ಕಾನೂನನ್ನು ಬಳಸುತ್ತಿದ್ದರು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬ್ರಿಟಿಷ್ ವಶಾಹತುಶಾಹಿ ದೇಶದ್ರೋಹದ ಕಾನೂನು ಅಗತ್ಯವಿದೆಯೇ? ಸ್ವಾತಂತ್ರ್ಯ ದೊರೆತು 75 ವರ್ಷಗಳಾದರೂ ಈ ಕಾನೂನು ಬೇಕೆ? ಎಂದು ಸಿಜೆಐ ರಮಣರವರು ಅಟಾರ್ನಿಯವರನ್ನು ಪ್ರಶ್ನಿಸಿದ್ದಾರೆ.

ಈ ದೇಶದ್ರೋಹದ ಕಾನೂನನ್ನು ರದ್ದುಗೊಳಿಸಬೇಕೆಂದು ಹಲವಾರು ಅರ್ಜಿಗಳು ದಾಖಲಾಗಿದ್ದು ಎಲ್ಲವನ್ನು ಒಟ್ಟಿಗೆ ಆಲಿಸುವುದಾಗಿ ಸಿಜೆಐ ತಿಳಿಸಿದ್ದಾರೆ.

ಈ ಕಾನೂನು ದುರ್ಬಳಕೆಯಾಗುತ್ತಿದೆ ಎಂಬುದು ನಮ್ಮ ಕಾಳಜಿಯಾಗಿದೆ. ಅಲ್ಲದೆ ಇದನ್ನು ಜಾರಿಗೊರಿಸುವವರು ಯಾವುದೇ ಹೊಣೆಗಾರಿಕೆಯನ್ನು ಹೊಂದಿಲ್ಲ. ‘ಇದುವರೆಗೂ ದಾಖಲಾದ ಪ್ರಕರಣಗಳಲ್ಲಿ ಕೆಲವೇ ಪ್ರಕರಣಗಳು ಮಾತ್ರ ಸಾಬೀತಾಗಿದ್ದು, ಅಪರಾಧ ದರ ತೀರಾ ಕಡಿಮೆಯಿರುವುದನ್ನು ಇತಿಹಾಸ ತೋರಿಸಿದೆ’ ಎಂದು ಎನ್‌ವಿ ರಮಣ ತಿಳಿಸಿದ್ದಾರೆ.

ಯಾವುದೇ ಗ್ರಾಮದಲ್ಲಿ ಯಾರಾದರೂ ಪ್ರಶ್ನಿಸಿದರೆ ಅವರನ್ನು ಬಂಧಿಸಿ ಪೊಲೀಸರು ಆತನ ಮೇಲೆ 124ಎ ಪ್ರಕರಣ ದಾಖಲಿಸಬಹುದಾಗಿದೆ. ಇದರಿಂದ ಜನ ಭಯಭೀತರಾಗಿದ್ದಾರೆ ಎಂದು ರಮಣ ಅಭಿಪ್ರಾಯಪಟ್ಟಿದ್ದಾರೆ.

ನಾವು ಯಾವುದೇ ಸರ್ಕಾರವನ್ನು ದೂಷಿಸುತ್ತಿಲ್ಲ. ಆದರೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಎಕ್ಷನ್ 66ಎ ಅನ್ನು ರದ್ದುಪಡಿಸಿ ಬಹಳ ದಿನಗಳಾದರೂ ಇನ್ನು ಬಳಕೆಯಲ್ಲಿದೆ. ಅದೇ ರೀತಿ ಈ ದೇಶದ್ರೋಹ ಕಾನೂನು ಸಹ ದುರ್ಬಳಕೆಯಾಗುತ್ತಿದೆ. ಇದರ ಸಿಂಧುತ್ವವನ್ನು ಪರಿಶೀಲಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಈ ಕಾಯ್ದೆ ಅತಿಯಾಗಿ ದುರ್ಬಳಕೆಯಾಗಿದೆ. ಬಡಗಿಯೊಬ್ಬನಿಗೆ ಕಾಡೋಂದನ್ನು ತೋರಿಸಿ ಯಾವುದಾದರೊಂದು ಮರವನ್ನು ಬಳಸಿಕೊ ಎಂದರೆ ಆತನ ಇಡೀ ಕಾಡನ್ನು ಕಡಿದ ರೀತಿ ಈ ಕಾನೂನು ಎಲ್ಲರ ವಿರುದ್ಧ ಪ್ರಯೋಗಿಸಲ್ಪಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಅದೇ ರೀತಿ ಎರಡು ದಿನಗಳ ಹಿಂದೆ UAPA ಕಾಯ್ದೆಯ ಬಗ್ಗೆ ಸಹ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿತ್ತು. ಭಯೋತ್ಪಾದನಾ ವಿರೋಧಿ ಕಾನೂನುಗಳ ದುರ್ಬಳಕೆ ಸರಿಯಲ್ಲ ಎಂದು ಸುಪ್ರೀಂ ಕೋರ್ಟ್‌ ನ್ಯಾಯಾಮೂರ್ತಿ ಜಸ್ಟಿಸ್‌ ಡಿ.ವೈ. ಚಂದ್ರಚೂಡ್‌ ಅಭಿಪ್ರಾಯ ಪಟ್ಟಿದ್ದರು. ಜುಲೈ 12ರಂದು ಇಂಡೋ-ಅಮೇರಿಕನ್‌ ನ್ಯಾಯಾಧೀಶರ ವರ್ಚುವಲ್‌ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, UAPA ಸೇರಿದಂತೆ ಭಯೋತ್ಪಾದನಾ ತಡೆ ಕಾನೂನುಗಳನ್ನು ಭಿನ್ನಮತಗಳ ದಮನಕ್ಕೆ ಮತ್ತು ಪ್ರಜೆಗಳ ಮೇಲಿನ ದೌರ್ಜನ್ಯಕ್ಕೆ ಪ್ರಯೋಗಿಸುವ ಟ್ರೆಂಡ್‌ ಇತ್ತೀಚೆಗೆ ಬೆಳೆಯುತ್ತಿರುವುದರ ಕುರಿತು ವಿಷಾದ ವ್ಯಕ್ತಪಡಿಸಿದರು.

ಮಾನವ ಹಕ್ಕುಗಳ ಹೋರಾಟಗಾರ 84 ವರ್ಷ ವಯಸ್ಸಿನ ಫಾದರ್ ಸ್ಟ್ಯಾನ್‌ ಸ್ವಾಮಿ ನಿಧನದ ನಂತರ ದೇಶದಲ್ಲಿ ಯುಎಪಿಎ ಕಾಯ್ದೆ ಕುರಿತು ತೀವ್ರ ಟೀಕೆಗಳು ಕೇಳಿಬರುತ್ತಿವೆ. ಈ ಸಂದರ್ಭದಲ್ಲಿ ಜಸ್ಟಿಸ್‌ ಚಂದ್ರಚೂಡ್‌ ಅವರ ಹೇಳಿಕೆ ಮಹತ್ವದ ಸ್ಥಾನ ಪಡೆದುಕೊಂಡಿದೆ.

ಇತ್ತೀಚೆಗೆ ಖ್ಯಾತ ಪತ್ರಕರ್ತ ವಿನೋದ್ ದುವಾ ವಿರುದ್ಧ ದಾಖಲಿಸಲಾಗಿದ್ದ ದೇಶದ್ರೋಹ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮಹತ್ವವನ್ನು ಹಾಗೂ ಹಿಂಸಾಚಾರದ ಪ್ರಚೋದನೆ ಇಲ್ಲದಿರುವವರೆಗೂ ಪ್ರಭುತ್ವವನ್ನು ಮುಕ್ತವಾಗಿ ಟೀಕಿಸುವ ಪತ್ರಕರ್ತರ ಸ್ವಾತಂತ್ರ್ಯವನ್ನು ದೃಢವಾಗಿ ಅನುಮೋದಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.


ಇದನ್ನೂ ಓದಿ: ವಿನೋದ್ ದುವಾ ವಿರುದ್ಧ ಎಫ್‌ಐಆರ್ ರದ್ದು; ದೇಶದ್ರೋಹ ಕಾನೂನಿನ ಮೂಲಭೂತ ನಿಯಮಗಳನ್ನು ನೆನಪಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...