Homeಕರ್ನಾಟಕಭಾರತದಲ್ಲಿ RSS ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು: ಕಟೀಲ್‌ಗೆ ಕಾಂಗ್ರೆಸ್ ತಿರುಗೇಟು

ಭಾರತದಲ್ಲಿ RSS ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು: ಕಟೀಲ್‌ಗೆ ಕಾಂಗ್ರೆಸ್ ತಿರುಗೇಟು

- Advertisement -
- Advertisement -

”ಕೋಮು ಪ್ರಚೋದನೆ ನೀಡಿದರೆ, ಕಾನೂನನ್ನು ಕೈಗೆತ್ತಿಕೊಂಡರೆ ಬಜರಂಗದಳ, ಆರ್‌ಎಸ್‌ಎಸ್‌ ಯಾವುದೇ ಇರಲಿ ನಿಷೇಧಿಸುತ್ತೇವೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ಬೆನ್ನಲ್ಲೇ ಬಿಜೆಪಿ-ಕಾಂಗ್ರೆಸ್‌ ನಡುವೆ ವಾಕ್ಸಮರ ಜೋರಾಗಿ ನಡೆಯುತ್ತಿದೆ.

ಕಾಂಗ್ರೆಸ್‌ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ”ಧರ್ಮ ಮತ್ತು ಜಾತಿಯ ಹೆಸಲಿನಲ್ಲಿ ಸಮಾಜದಲ್ಲಿ ದ್ವೇಷವನ್ನು ಬಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮವನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು ಯಾವುದೇ ವ್ಯಕ್ತಿಗಳಾಗಲಿ, ಭಜರಂಗದಳ ಮತ್ತು ಪಿ.ಎಫ್.ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗಲಿ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು” ಎಂದು ಹೇಳಿದೆ.

ಇದೀಗ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು, ಅವರ ಪ್ರಣಾಳಿಕೆ ಇಡೇರಿಸುವ ಕುರಿತು ಮಾಧ್ಯಮದರು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಪ್ರಶ್ನೆ ಮಾಡಿದಾಗ ಅವರು, ”ಕೋಮು ಪ್ರಚೋದನೆ ನೀಡಿದರೆ, ಕಾನೂನನ್ನು ಕೈಗೆತ್ತಿಕೊಂಡರೆ ಬಜರಂಗದಳ, ಆರ್‌ಎಸ್‌ಎಸ್‌ ಯಾವುದೇ ಇರಲಿ ನಿಷೇಧಿಸುತ್ತೇವೆ. ಸರ್ವ ಜನಾಂಗದ ಶಾಂತಿಯ ತೋಟ ರೂಪಿಸಲು ನಾವು ಬಜರಂಗದಳ, ಆರ್‌ಎಸ್‌ಎಸ್‌ ಎಂಬುದನ್ನು ನೋಡುವುದಿಲ್ಲ, ಪರಿಗಣಿಸುವುದಿಲ್ಲ. ಕಾನೂನು ಕೈಗೆತ್ತಿಕೊಂಡರೆ ನಿಷೇಧಿಸುತ್ತೇವೆ” ಎಂದು ಹೇಳಿದ್ದಾರೆ. ಅದಲ್ಲದೇ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕಾನೂನುಗಳನ್ನು ಮರುಪರಿಶೀಲಿಸುತ್ತೇವೆ. ಹಿಜಾಬ್‌ ಬ್ಯಾನ್‌, ಗೋಹತ್ಯೆ ನಿಷೇಧದಂತಹ ಕಾನೂನುಗಳನ್ನು ವಾಪಸ್‌ ಪಡೆಯಲಿದ್ದೇವೆ ಎಂದು ಹೇಳಿದ್ದರು.

ಇದನ್ನೂ ಓದಿ: ನೇತಾಜಿ ಸುಭಾಷ್‌ ಚಂದ್ರ ಬೋಸ್ ನೆನಪು: ಆರ್‌ಎಸ್‌ಎಸ್‌ ಬಚ್ಚಿಡುವ ಸತ್ಯಗಳಿವು

ಇದೀಗ ರಾಜ್ಯ ಕಾಂಗ್ರೆಸ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ”ಭಾರತದಲ್ಲಿ RSS ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು. ಸರ್ದಾರ್ ಪಟೇಲರೇ ಭಾರತ ವಿರೋಧಿ ಸಂಘಟನೆ ಎಂಬ ಸರ್ಟಿಫಿಕೇಟ್ ನೀಡಿದ್ದರು. ಕಾಂಗ್ರೆಸ್ ಆಗಲೂ ಇತ್ತು ಈಗಲೂ ಇದೆ, ಮುಂದೆಯೂ ಇರಲಿದೆ. ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಆವರಣದಲ್ಲಿ RSS ಚಟುವಟಿಕೆಗಳನ್ನು ತಡೆಯುವ ಕುರಿತು ವಿಮರ್ಶಿಸಲಾಗುವುದು” ಎಂದು ಹೇಳಿದೆ.

ಬಜರಂಗದಳ, ಆರ್.ಎಸ್.ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ: ಕಟೀಲ್

ಬಜರಂಗದಳ, ಆರ್.ಎಸ್.ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಆರ್.ಎಸ್.ಎಸ್ ನಿಷೇಧದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ”ಆರ್.ಎಸ್.ಎಸ್ ಈ ದೇಶದಲ್ಲಿ ರಾಷ್ಟ್ರ ಭಕ್ತಿ ಕಲಿಸಿದೆ. ಈ ದೇಶ ನಡೆಸುವ ಪ್ರಧಾನ ಮಂತ್ರಿ ಆರ್.ಎಸ್.ಎಸ್ ಸ್ವಯಂ ಸೇವಕ, ಕೇಂದ್ರದ ಮಂತ್ರಿಗಳು, ನಾವೆಲ್ಲರೂ ಆರ್.ಎಸ್.ಎಸ್ ಸ್ವಯಂ ಸೇವಕರು” ಎಂದರು.

”ಸಿದ್ದರಾಮಯ್ಯ ರಾಜಕೀಯ ಮುಗಿಯುತ್ತೆ ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆಗೆ ತಾಕತ್ ಇದ್ದರೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನ ಬಂಧಿಸಲಿ, ಕಾಂಗ್ರೆಸ್‌ನ ಮೆರವಣಿಗೆ, ವಿಜಯೋತ್ಸವ, ಸಭೆಗಳಲ್ಲೇ ಪಾಕಿಸ್ತಾನ ಪರ ಘೋಷಣೆ ಬಂದಿದೆ. ಪ್ರಿಯಾಂಕ್ ಖರ್ಗೆ ಬಾಯಿಗೆ ಹಿಡಿತ ಇಟ್ಟುಕೊಂಡು, ನಾಲಿಗೆ ಹಿಡಿತದಲ್ಲಿ ಮಾತನಾಡಲಿ” ಎಂದು ಕಿಡಿಕಾರಿದರು.

”ಬಜರಂಗದಳ, ಆರ್.ಎಸ್.ಎಸ್ ನಿಷೇಧ ಮಾಡಲು ನಿಮಗೆ ಹಕ್ಕಿಲ್ಲ. ನೆಹರೂ, ಇಂದಿರಾ ಗಾಂಧಿ ಎಲ್ಲರೂ ನಿಷೇಧಕ್ಕೆ ಕೈ ಹಾಕಿ ಕೈ ಸುಟ್ಟುಕೊಂಡಿದ್ದಾರೆ. ನಿಷೇಧದ ಕೆಲಸ ಮಾಡಿದಾಗಲೆಲ್ಲ ದೇಶದಲ್ಲಿ ಕಾಂಗ್ರೆಸ್ ಸರ್ಕಾರವೇ ಬಂದಿಲ್ಲ. ಆರ್.ಎಸ್.ಎಸ್ ರಾಷ್ಟ್ರಭಕ್ತಿ ಸಂಕೇತ ಅಂತ ಕಾಂಗ್ರೆಸ್‌ನಲ್ಲೇ ಹೇಳಿದ್ದಾರೆ. ವಿಧಾನಸೌಧದಲ್ಲಿ ಡಿಕೆಶಿಯವರೇ ಪ್ರಾರ್ಥನೆ ಹೇಳಿದ್ದಾರೆ, ಅದರಲ್ಲೇ ಇದೆ. ಆ ಪ್ರಾರ್ಥನೆಯಲ್ಲಿ ಏನಿದೆ ಎನ್ನುವುದನ್ನು ಖರ್ಗೆಯವರು ಡಿಕೆಶಿ ಬಳಿ ಕೇಳಲಿ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...