Homeಕರ್ನಾಟಕಭಾರತದಲ್ಲಿ RSS ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು: ಕಟೀಲ್‌ಗೆ ಕಾಂಗ್ರೆಸ್ ತಿರುಗೇಟು

ಭಾರತದಲ್ಲಿ RSS ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು: ಕಟೀಲ್‌ಗೆ ಕಾಂಗ್ರೆಸ್ ತಿರುಗೇಟು

- Advertisement -
- Advertisement -

”ಕೋಮು ಪ್ರಚೋದನೆ ನೀಡಿದರೆ, ಕಾನೂನನ್ನು ಕೈಗೆತ್ತಿಕೊಂಡರೆ ಬಜರಂಗದಳ, ಆರ್‌ಎಸ್‌ಎಸ್‌ ಯಾವುದೇ ಇರಲಿ ನಿಷೇಧಿಸುತ್ತೇವೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ಬೆನ್ನಲ್ಲೇ ಬಿಜೆಪಿ-ಕಾಂಗ್ರೆಸ್‌ ನಡುವೆ ವಾಕ್ಸಮರ ಜೋರಾಗಿ ನಡೆಯುತ್ತಿದೆ.

ಕಾಂಗ್ರೆಸ್‌ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ”ಧರ್ಮ ಮತ್ತು ಜಾತಿಯ ಹೆಸಲಿನಲ್ಲಿ ಸಮಾಜದಲ್ಲಿ ದ್ವೇಷವನ್ನು ಬಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮವನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು ಯಾವುದೇ ವ್ಯಕ್ತಿಗಳಾಗಲಿ, ಭಜರಂಗದಳ ಮತ್ತು ಪಿ.ಎಫ್.ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗಲಿ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು” ಎಂದು ಹೇಳಿದೆ.

ಇದೀಗ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು, ಅವರ ಪ್ರಣಾಳಿಕೆ ಇಡೇರಿಸುವ ಕುರಿತು ಮಾಧ್ಯಮದರು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಪ್ರಶ್ನೆ ಮಾಡಿದಾಗ ಅವರು, ”ಕೋಮು ಪ್ರಚೋದನೆ ನೀಡಿದರೆ, ಕಾನೂನನ್ನು ಕೈಗೆತ್ತಿಕೊಂಡರೆ ಬಜರಂಗದಳ, ಆರ್‌ಎಸ್‌ಎಸ್‌ ಯಾವುದೇ ಇರಲಿ ನಿಷೇಧಿಸುತ್ತೇವೆ. ಸರ್ವ ಜನಾಂಗದ ಶಾಂತಿಯ ತೋಟ ರೂಪಿಸಲು ನಾವು ಬಜರಂಗದಳ, ಆರ್‌ಎಸ್‌ಎಸ್‌ ಎಂಬುದನ್ನು ನೋಡುವುದಿಲ್ಲ, ಪರಿಗಣಿಸುವುದಿಲ್ಲ. ಕಾನೂನು ಕೈಗೆತ್ತಿಕೊಂಡರೆ ನಿಷೇಧಿಸುತ್ತೇವೆ” ಎಂದು ಹೇಳಿದ್ದಾರೆ. ಅದಲ್ಲದೇ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕಾನೂನುಗಳನ್ನು ಮರುಪರಿಶೀಲಿಸುತ್ತೇವೆ. ಹಿಜಾಬ್‌ ಬ್ಯಾನ್‌, ಗೋಹತ್ಯೆ ನಿಷೇಧದಂತಹ ಕಾನೂನುಗಳನ್ನು ವಾಪಸ್‌ ಪಡೆಯಲಿದ್ದೇವೆ ಎಂದು ಹೇಳಿದ್ದರು.

ಇದನ್ನೂ ಓದಿ: ನೇತಾಜಿ ಸುಭಾಷ್‌ ಚಂದ್ರ ಬೋಸ್ ನೆನಪು: ಆರ್‌ಎಸ್‌ಎಸ್‌ ಬಚ್ಚಿಡುವ ಸತ್ಯಗಳಿವು

ಇದೀಗ ರಾಜ್ಯ ಕಾಂಗ್ರೆಸ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ”ಭಾರತದಲ್ಲಿ RSS ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು. ಸರ್ದಾರ್ ಪಟೇಲರೇ ಭಾರತ ವಿರೋಧಿ ಸಂಘಟನೆ ಎಂಬ ಸರ್ಟಿಫಿಕೇಟ್ ನೀಡಿದ್ದರು. ಕಾಂಗ್ರೆಸ್ ಆಗಲೂ ಇತ್ತು ಈಗಲೂ ಇದೆ, ಮುಂದೆಯೂ ಇರಲಿದೆ. ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಆವರಣದಲ್ಲಿ RSS ಚಟುವಟಿಕೆಗಳನ್ನು ತಡೆಯುವ ಕುರಿತು ವಿಮರ್ಶಿಸಲಾಗುವುದು” ಎಂದು ಹೇಳಿದೆ.

ಬಜರಂಗದಳ, ಆರ್.ಎಸ್.ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ: ಕಟೀಲ್

ಬಜರಂಗದಳ, ಆರ್.ಎಸ್.ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಆರ್.ಎಸ್.ಎಸ್ ನಿಷೇಧದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ”ಆರ್.ಎಸ್.ಎಸ್ ಈ ದೇಶದಲ್ಲಿ ರಾಷ್ಟ್ರ ಭಕ್ತಿ ಕಲಿಸಿದೆ. ಈ ದೇಶ ನಡೆಸುವ ಪ್ರಧಾನ ಮಂತ್ರಿ ಆರ್.ಎಸ್.ಎಸ್ ಸ್ವಯಂ ಸೇವಕ, ಕೇಂದ್ರದ ಮಂತ್ರಿಗಳು, ನಾವೆಲ್ಲರೂ ಆರ್.ಎಸ್.ಎಸ್ ಸ್ವಯಂ ಸೇವಕರು” ಎಂದರು.

”ಸಿದ್ದರಾಮಯ್ಯ ರಾಜಕೀಯ ಮುಗಿಯುತ್ತೆ ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆಗೆ ತಾಕತ್ ಇದ್ದರೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನ ಬಂಧಿಸಲಿ, ಕಾಂಗ್ರೆಸ್‌ನ ಮೆರವಣಿಗೆ, ವಿಜಯೋತ್ಸವ, ಸಭೆಗಳಲ್ಲೇ ಪಾಕಿಸ್ತಾನ ಪರ ಘೋಷಣೆ ಬಂದಿದೆ. ಪ್ರಿಯಾಂಕ್ ಖರ್ಗೆ ಬಾಯಿಗೆ ಹಿಡಿತ ಇಟ್ಟುಕೊಂಡು, ನಾಲಿಗೆ ಹಿಡಿತದಲ್ಲಿ ಮಾತನಾಡಲಿ” ಎಂದು ಕಿಡಿಕಾರಿದರು.

”ಬಜರಂಗದಳ, ಆರ್.ಎಸ್.ಎಸ್ ನಿಷೇಧ ಮಾಡಲು ನಿಮಗೆ ಹಕ್ಕಿಲ್ಲ. ನೆಹರೂ, ಇಂದಿರಾ ಗಾಂಧಿ ಎಲ್ಲರೂ ನಿಷೇಧಕ್ಕೆ ಕೈ ಹಾಕಿ ಕೈ ಸುಟ್ಟುಕೊಂಡಿದ್ದಾರೆ. ನಿಷೇಧದ ಕೆಲಸ ಮಾಡಿದಾಗಲೆಲ್ಲ ದೇಶದಲ್ಲಿ ಕಾಂಗ್ರೆಸ್ ಸರ್ಕಾರವೇ ಬಂದಿಲ್ಲ. ಆರ್.ಎಸ್.ಎಸ್ ರಾಷ್ಟ್ರಭಕ್ತಿ ಸಂಕೇತ ಅಂತ ಕಾಂಗ್ರೆಸ್‌ನಲ್ಲೇ ಹೇಳಿದ್ದಾರೆ. ವಿಧಾನಸೌಧದಲ್ಲಿ ಡಿಕೆಶಿಯವರೇ ಪ್ರಾರ್ಥನೆ ಹೇಳಿದ್ದಾರೆ, ಅದರಲ್ಲೇ ಇದೆ. ಆ ಪ್ರಾರ್ಥನೆಯಲ್ಲಿ ಏನಿದೆ ಎನ್ನುವುದನ್ನು ಖರ್ಗೆಯವರು ಡಿಕೆಶಿ ಬಳಿ ಕೇಳಲಿ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...