Homeಕರ್ನಾಟಕಭಾರತದಲ್ಲಿ RSS ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು: ಕಟೀಲ್‌ಗೆ ಕಾಂಗ್ರೆಸ್ ತಿರುಗೇಟು

ಭಾರತದಲ್ಲಿ RSS ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು: ಕಟೀಲ್‌ಗೆ ಕಾಂಗ್ರೆಸ್ ತಿರುಗೇಟು

- Advertisement -
- Advertisement -

”ಕೋಮು ಪ್ರಚೋದನೆ ನೀಡಿದರೆ, ಕಾನೂನನ್ನು ಕೈಗೆತ್ತಿಕೊಂಡರೆ ಬಜರಂಗದಳ, ಆರ್‌ಎಸ್‌ಎಸ್‌ ಯಾವುದೇ ಇರಲಿ ನಿಷೇಧಿಸುತ್ತೇವೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ಬೆನ್ನಲ್ಲೇ ಬಿಜೆಪಿ-ಕಾಂಗ್ರೆಸ್‌ ನಡುವೆ ವಾಕ್ಸಮರ ಜೋರಾಗಿ ನಡೆಯುತ್ತಿದೆ.

ಕಾಂಗ್ರೆಸ್‌ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ”ಧರ್ಮ ಮತ್ತು ಜಾತಿಯ ಹೆಸಲಿನಲ್ಲಿ ಸಮಾಜದಲ್ಲಿ ದ್ವೇಷವನ್ನು ಬಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮವನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು ಯಾವುದೇ ವ್ಯಕ್ತಿಗಳಾಗಲಿ, ಭಜರಂಗದಳ ಮತ್ತು ಪಿ.ಎಫ್.ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗಲಿ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು” ಎಂದು ಹೇಳಿದೆ.

ಇದೀಗ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು, ಅವರ ಪ್ರಣಾಳಿಕೆ ಇಡೇರಿಸುವ ಕುರಿತು ಮಾಧ್ಯಮದರು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಪ್ರಶ್ನೆ ಮಾಡಿದಾಗ ಅವರು, ”ಕೋಮು ಪ್ರಚೋದನೆ ನೀಡಿದರೆ, ಕಾನೂನನ್ನು ಕೈಗೆತ್ತಿಕೊಂಡರೆ ಬಜರಂಗದಳ, ಆರ್‌ಎಸ್‌ಎಸ್‌ ಯಾವುದೇ ಇರಲಿ ನಿಷೇಧಿಸುತ್ತೇವೆ. ಸರ್ವ ಜನಾಂಗದ ಶಾಂತಿಯ ತೋಟ ರೂಪಿಸಲು ನಾವು ಬಜರಂಗದಳ, ಆರ್‌ಎಸ್‌ಎಸ್‌ ಎಂಬುದನ್ನು ನೋಡುವುದಿಲ್ಲ, ಪರಿಗಣಿಸುವುದಿಲ್ಲ. ಕಾನೂನು ಕೈಗೆತ್ತಿಕೊಂಡರೆ ನಿಷೇಧಿಸುತ್ತೇವೆ” ಎಂದು ಹೇಳಿದ್ದಾರೆ. ಅದಲ್ಲದೇ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕಾನೂನುಗಳನ್ನು ಮರುಪರಿಶೀಲಿಸುತ್ತೇವೆ. ಹಿಜಾಬ್‌ ಬ್ಯಾನ್‌, ಗೋಹತ್ಯೆ ನಿಷೇಧದಂತಹ ಕಾನೂನುಗಳನ್ನು ವಾಪಸ್‌ ಪಡೆಯಲಿದ್ದೇವೆ ಎಂದು ಹೇಳಿದ್ದರು.

ಇದನ್ನೂ ಓದಿ: ನೇತಾಜಿ ಸುಭಾಷ್‌ ಚಂದ್ರ ಬೋಸ್ ನೆನಪು: ಆರ್‌ಎಸ್‌ಎಸ್‌ ಬಚ್ಚಿಡುವ ಸತ್ಯಗಳಿವು

ಇದೀಗ ರಾಜ್ಯ ಕಾಂಗ್ರೆಸ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ”ಭಾರತದಲ್ಲಿ RSS ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು. ಸರ್ದಾರ್ ಪಟೇಲರೇ ಭಾರತ ವಿರೋಧಿ ಸಂಘಟನೆ ಎಂಬ ಸರ್ಟಿಫಿಕೇಟ್ ನೀಡಿದ್ದರು. ಕಾಂಗ್ರೆಸ್ ಆಗಲೂ ಇತ್ತು ಈಗಲೂ ಇದೆ, ಮುಂದೆಯೂ ಇರಲಿದೆ. ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಆವರಣದಲ್ಲಿ RSS ಚಟುವಟಿಕೆಗಳನ್ನು ತಡೆಯುವ ಕುರಿತು ವಿಮರ್ಶಿಸಲಾಗುವುದು” ಎಂದು ಹೇಳಿದೆ.

ಬಜರಂಗದಳ, ಆರ್.ಎಸ್.ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ: ಕಟೀಲ್

ಬಜರಂಗದಳ, ಆರ್.ಎಸ್.ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಆರ್.ಎಸ್.ಎಸ್ ನಿಷೇಧದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ”ಆರ್.ಎಸ್.ಎಸ್ ಈ ದೇಶದಲ್ಲಿ ರಾಷ್ಟ್ರ ಭಕ್ತಿ ಕಲಿಸಿದೆ. ಈ ದೇಶ ನಡೆಸುವ ಪ್ರಧಾನ ಮಂತ್ರಿ ಆರ್.ಎಸ್.ಎಸ್ ಸ್ವಯಂ ಸೇವಕ, ಕೇಂದ್ರದ ಮಂತ್ರಿಗಳು, ನಾವೆಲ್ಲರೂ ಆರ್.ಎಸ್.ಎಸ್ ಸ್ವಯಂ ಸೇವಕರು” ಎಂದರು.

”ಸಿದ್ದರಾಮಯ್ಯ ರಾಜಕೀಯ ಮುಗಿಯುತ್ತೆ ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆಗೆ ತಾಕತ್ ಇದ್ದರೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನ ಬಂಧಿಸಲಿ, ಕಾಂಗ್ರೆಸ್‌ನ ಮೆರವಣಿಗೆ, ವಿಜಯೋತ್ಸವ, ಸಭೆಗಳಲ್ಲೇ ಪಾಕಿಸ್ತಾನ ಪರ ಘೋಷಣೆ ಬಂದಿದೆ. ಪ್ರಿಯಾಂಕ್ ಖರ್ಗೆ ಬಾಯಿಗೆ ಹಿಡಿತ ಇಟ್ಟುಕೊಂಡು, ನಾಲಿಗೆ ಹಿಡಿತದಲ್ಲಿ ಮಾತನಾಡಲಿ” ಎಂದು ಕಿಡಿಕಾರಿದರು.

”ಬಜರಂಗದಳ, ಆರ್.ಎಸ್.ಎಸ್ ನಿಷೇಧ ಮಾಡಲು ನಿಮಗೆ ಹಕ್ಕಿಲ್ಲ. ನೆಹರೂ, ಇಂದಿರಾ ಗಾಂಧಿ ಎಲ್ಲರೂ ನಿಷೇಧಕ್ಕೆ ಕೈ ಹಾಕಿ ಕೈ ಸುಟ್ಟುಕೊಂಡಿದ್ದಾರೆ. ನಿಷೇಧದ ಕೆಲಸ ಮಾಡಿದಾಗಲೆಲ್ಲ ದೇಶದಲ್ಲಿ ಕಾಂಗ್ರೆಸ್ ಸರ್ಕಾರವೇ ಬಂದಿಲ್ಲ. ಆರ್.ಎಸ್.ಎಸ್ ರಾಷ್ಟ್ರಭಕ್ತಿ ಸಂಕೇತ ಅಂತ ಕಾಂಗ್ರೆಸ್‌ನಲ್ಲೇ ಹೇಳಿದ್ದಾರೆ. ವಿಧಾನಸೌಧದಲ್ಲಿ ಡಿಕೆಶಿಯವರೇ ಪ್ರಾರ್ಥನೆ ಹೇಳಿದ್ದಾರೆ, ಅದರಲ್ಲೇ ಇದೆ. ಆ ಪ್ರಾರ್ಥನೆಯಲ್ಲಿ ಏನಿದೆ ಎನ್ನುವುದನ್ನು ಖರ್ಗೆಯವರು ಡಿಕೆಶಿ ಬಳಿ ಕೇಳಲಿ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...