Homeಕರ್ನಾಟಕಭಾರತದಲ್ಲಿ RSS ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು: ಕಟೀಲ್‌ಗೆ ಕಾಂಗ್ರೆಸ್ ತಿರುಗೇಟು

ಭಾರತದಲ್ಲಿ RSS ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು: ಕಟೀಲ್‌ಗೆ ಕಾಂಗ್ರೆಸ್ ತಿರುಗೇಟು

- Advertisement -
- Advertisement -

”ಕೋಮು ಪ್ರಚೋದನೆ ನೀಡಿದರೆ, ಕಾನೂನನ್ನು ಕೈಗೆತ್ತಿಕೊಂಡರೆ ಬಜರಂಗದಳ, ಆರ್‌ಎಸ್‌ಎಸ್‌ ಯಾವುದೇ ಇರಲಿ ನಿಷೇಧಿಸುತ್ತೇವೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ಬೆನ್ನಲ್ಲೇ ಬಿಜೆಪಿ-ಕಾಂಗ್ರೆಸ್‌ ನಡುವೆ ವಾಕ್ಸಮರ ಜೋರಾಗಿ ನಡೆಯುತ್ತಿದೆ.

ಕಾಂಗ್ರೆಸ್‌ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ”ಧರ್ಮ ಮತ್ತು ಜಾತಿಯ ಹೆಸಲಿನಲ್ಲಿ ಸಮಾಜದಲ್ಲಿ ದ್ವೇಷವನ್ನು ಬಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮವನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು ಯಾವುದೇ ವ್ಯಕ್ತಿಗಳಾಗಲಿ, ಭಜರಂಗದಳ ಮತ್ತು ಪಿ.ಎಫ್.ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗಲಿ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು” ಎಂದು ಹೇಳಿದೆ.

ಇದೀಗ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು, ಅವರ ಪ್ರಣಾಳಿಕೆ ಇಡೇರಿಸುವ ಕುರಿತು ಮಾಧ್ಯಮದರು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಪ್ರಶ್ನೆ ಮಾಡಿದಾಗ ಅವರು, ”ಕೋಮು ಪ್ರಚೋದನೆ ನೀಡಿದರೆ, ಕಾನೂನನ್ನು ಕೈಗೆತ್ತಿಕೊಂಡರೆ ಬಜರಂಗದಳ, ಆರ್‌ಎಸ್‌ಎಸ್‌ ಯಾವುದೇ ಇರಲಿ ನಿಷೇಧಿಸುತ್ತೇವೆ. ಸರ್ವ ಜನಾಂಗದ ಶಾಂತಿಯ ತೋಟ ರೂಪಿಸಲು ನಾವು ಬಜರಂಗದಳ, ಆರ್‌ಎಸ್‌ಎಸ್‌ ಎಂಬುದನ್ನು ನೋಡುವುದಿಲ್ಲ, ಪರಿಗಣಿಸುವುದಿಲ್ಲ. ಕಾನೂನು ಕೈಗೆತ್ತಿಕೊಂಡರೆ ನಿಷೇಧಿಸುತ್ತೇವೆ” ಎಂದು ಹೇಳಿದ್ದಾರೆ. ಅದಲ್ಲದೇ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕಾನೂನುಗಳನ್ನು ಮರುಪರಿಶೀಲಿಸುತ್ತೇವೆ. ಹಿಜಾಬ್‌ ಬ್ಯಾನ್‌, ಗೋಹತ್ಯೆ ನಿಷೇಧದಂತಹ ಕಾನೂನುಗಳನ್ನು ವಾಪಸ್‌ ಪಡೆಯಲಿದ್ದೇವೆ ಎಂದು ಹೇಳಿದ್ದರು.

ಇದನ್ನೂ ಓದಿ: ನೇತಾಜಿ ಸುಭಾಷ್‌ ಚಂದ್ರ ಬೋಸ್ ನೆನಪು: ಆರ್‌ಎಸ್‌ಎಸ್‌ ಬಚ್ಚಿಡುವ ಸತ್ಯಗಳಿವು

ಇದೀಗ ರಾಜ್ಯ ಕಾಂಗ್ರೆಸ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ”ಭಾರತದಲ್ಲಿ RSS ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು. ಸರ್ದಾರ್ ಪಟೇಲರೇ ಭಾರತ ವಿರೋಧಿ ಸಂಘಟನೆ ಎಂಬ ಸರ್ಟಿಫಿಕೇಟ್ ನೀಡಿದ್ದರು. ಕಾಂಗ್ರೆಸ್ ಆಗಲೂ ಇತ್ತು ಈಗಲೂ ಇದೆ, ಮುಂದೆಯೂ ಇರಲಿದೆ. ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಆವರಣದಲ್ಲಿ RSS ಚಟುವಟಿಕೆಗಳನ್ನು ತಡೆಯುವ ಕುರಿತು ವಿಮರ್ಶಿಸಲಾಗುವುದು” ಎಂದು ಹೇಳಿದೆ.

ಬಜರಂಗದಳ, ಆರ್.ಎಸ್.ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ: ಕಟೀಲ್

ಬಜರಂಗದಳ, ಆರ್.ಎಸ್.ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಆರ್.ಎಸ್.ಎಸ್ ನಿಷೇಧದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ”ಆರ್.ಎಸ್.ಎಸ್ ಈ ದೇಶದಲ್ಲಿ ರಾಷ್ಟ್ರ ಭಕ್ತಿ ಕಲಿಸಿದೆ. ಈ ದೇಶ ನಡೆಸುವ ಪ್ರಧಾನ ಮಂತ್ರಿ ಆರ್.ಎಸ್.ಎಸ್ ಸ್ವಯಂ ಸೇವಕ, ಕೇಂದ್ರದ ಮಂತ್ರಿಗಳು, ನಾವೆಲ್ಲರೂ ಆರ್.ಎಸ್.ಎಸ್ ಸ್ವಯಂ ಸೇವಕರು” ಎಂದರು.

”ಸಿದ್ದರಾಮಯ್ಯ ರಾಜಕೀಯ ಮುಗಿಯುತ್ತೆ ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆಗೆ ತಾಕತ್ ಇದ್ದರೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನ ಬಂಧಿಸಲಿ, ಕಾಂಗ್ರೆಸ್‌ನ ಮೆರವಣಿಗೆ, ವಿಜಯೋತ್ಸವ, ಸಭೆಗಳಲ್ಲೇ ಪಾಕಿಸ್ತಾನ ಪರ ಘೋಷಣೆ ಬಂದಿದೆ. ಪ್ರಿಯಾಂಕ್ ಖರ್ಗೆ ಬಾಯಿಗೆ ಹಿಡಿತ ಇಟ್ಟುಕೊಂಡು, ನಾಲಿಗೆ ಹಿಡಿತದಲ್ಲಿ ಮಾತನಾಡಲಿ” ಎಂದು ಕಿಡಿಕಾರಿದರು.

”ಬಜರಂಗದಳ, ಆರ್.ಎಸ್.ಎಸ್ ನಿಷೇಧ ಮಾಡಲು ನಿಮಗೆ ಹಕ್ಕಿಲ್ಲ. ನೆಹರೂ, ಇಂದಿರಾ ಗಾಂಧಿ ಎಲ್ಲರೂ ನಿಷೇಧಕ್ಕೆ ಕೈ ಹಾಕಿ ಕೈ ಸುಟ್ಟುಕೊಂಡಿದ್ದಾರೆ. ನಿಷೇಧದ ಕೆಲಸ ಮಾಡಿದಾಗಲೆಲ್ಲ ದೇಶದಲ್ಲಿ ಕಾಂಗ್ರೆಸ್ ಸರ್ಕಾರವೇ ಬಂದಿಲ್ಲ. ಆರ್.ಎಸ್.ಎಸ್ ರಾಷ್ಟ್ರಭಕ್ತಿ ಸಂಕೇತ ಅಂತ ಕಾಂಗ್ರೆಸ್‌ನಲ್ಲೇ ಹೇಳಿದ್ದಾರೆ. ವಿಧಾನಸೌಧದಲ್ಲಿ ಡಿಕೆಶಿಯವರೇ ಪ್ರಾರ್ಥನೆ ಹೇಳಿದ್ದಾರೆ, ಅದರಲ್ಲೇ ಇದೆ. ಆ ಪ್ರಾರ್ಥನೆಯಲ್ಲಿ ಏನಿದೆ ಎನ್ನುವುದನ್ನು ಖರ್ಗೆಯವರು ಡಿಕೆಶಿ ಬಳಿ ಕೇಳಲಿ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...