Homeಅಂಕಣಗಳುಬಿಜೆಪಿ ಯಂಗೆ ಚೊಕ್ಕ ಮಾಡಿವಿ ನೋಡಿ!

ಬಿಜೆಪಿ ಯಂಗೆ ಚೊಕ್ಕ ಮಾಡಿವಿ ನೋಡಿ!

- Advertisement -
- Advertisement -

ಅದೊಂದು ಕಾಲವಿತ್ತು; ಚುನಾವಣೆ ಬಂತೆಂದರೆ ಲೀಡರ್‌ಗಳು ತಮ್ಮ ನಾಲಗೆಯನ್ನು ಮಸೆದುಕೊಂಡು, ಪರಿಣಾಮಕಾರಿ ಸುಭಾಷಿತಗಳನ್ನು ಬಾಯಿಪಾಠ ಮಾಡಿಕೊಂಡು, ಉಪಕತೆಗಳನ್ನು ಹೊಸೆದುಕೊಂಡು ಬಹಿರಂಗ ಸಭೆಗಳಲ್ಲಿ ಭಾಷಣ ಬಿಗಿದು ಓಟು ಕೇಳುತ್ತಿದ್ದರು. ಶಾಂತವೇರಿ ಗೋಪಾಲಗೌಡರಂತೂ ಗಂಟೆಗಟ್ಟಲೆ ಮಾತನಾಡಿ ರಾಜ್ಯ, ದೇಶ ಮತ್ತು ಅಂತಾರಾಷ್ಟ್ರೀಯ ಮಟ್ಟದ ರಾಜಕಾರಣ ಮಾತನಾಡಿ ಓಟನ್ನೇ ಕೇಳುತ್ತಿರಲಿಲ್ಲ. “ಓಟು ಕೇಳಿ ಸಾರ್” ಎಂದರೆ “ಜನಗಳಿಗೆ ಗೊತ್ತಿಲ್ಲವೆ” ಎಂದುಬಿಡುತ್ತಿದ್ದರು. ಅಂದಿನ ಸಮಾಜವಾದಿಗಳೆಲ್ಲ ಭಯಂಕರ ಭಾಷಣಕಾರರಾಗಿದ್ದರು. ಭಾಷಣದಿಂದಲೇ ಮತ ಪಡೆಯುತ್ತಿದ್ದರು. ಈಗ ಹಠಾತ್ ಎಲ್ಲವೂ ಬದಲುಗೊಂಡಿದೆ. ಮತದಾರರ ಪಟ್ಟಿ ಹಿಡಿದು, ಹಂಚಬಹುದಾದ ಸಾಮಗ್ರಿಯ ದಾಸ್ತಾನಿನ ಮೇಲೆ ಮತಗಳ ಎಣಿಕೆ ನಡೆಯುತ್ತಿದೆ. ಜನರಿಗೆ ಮಾಂಸ, ಮದ್ಯ ಮತ್ತು ಕಾಸುಕೊಟ್ಟ ಮೇಲೆ ಅವರೊಡನೆ ಮಾತನಾಡುವ ಅಗತ್ಯವಿಲ್ಲ, ಭಾಷಣದ ಅಗತ್ಯವಿಲ್ಲ, ಭಾವನಿಕೆ ಮಾತಿಲ್ಲ; ಮೌನದಲ್ಲಿಯೇ ಮತದ ವ್ಯವಹಾರ ಮುಗಿದ ಮೇಲೆ ಪ್ರಜಾಪ್ರಭುತ್ವವೂ ಕೂಡ ಯಕ್ಕುಟ್ಟಿ ಹೋಗಿದೆಯಂತಲ್ಲಾ, ಥೂತ್ತೇರಿ.

******

ತೊಂಭತ್ತೆರಡು ವರ್ಷದ ದೇವೇಗೌಡರು ಸ್ವತಂತ್ರವಾಗಿ ನಡೆಯಲಾರರು, ವಯೋಸಹಜವಾಗಿ ಮಾತನಾಡುವುದು ತ್ರಾಸವಾದರೂ ಅವರನ್ನು ಕರೆಸಿ ಒಂದೆರಡು ತೊಟ್ಟು ಕಣ್ಣೀರು ಹಾಕಿಸಿಬಿಟ್ಟರೆ ನನ್ನ ಗೆಲುವು ಗ್ಯಾರಂಟಿ ಎಂದು ಭಾವಿಸಿದ ನಾಗಮಂಗಲ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಗೌಡರ ಮನೆಗೆ ಹೋಗಿ ಕೈ ಮುಗಿದಾಗ, ಇಲ್ಲ ಗೌಡರನ್ನು ಕಳುಹಿಸಲು ವೈದ್ಯರ ಒಪ್ಪಿಗೆ ಕಡ್ಡಾಯ ಎಂದರಂತಲ್ಲಾ. ಆಗ ದಿಕ್ಕು ಕಾಣದಂತಾದ ಜೆಡಿಎಸ್ ಅಭ್ಯರ್ಥಿ ದೇವೇಗೌಡರ ಎದುರು ನಿಂತು “ಅಪ್ಪಾ ನಿಮ್ಮ ವೈರಿಯಾದ ಚಲುವರಾಯಸ್ವಾಮಿ ಗೆಲ್ಲುವಂತೆ ಕಾಣುತ್ತಿದ್ದಾನೆ, ನನಗೆ ದಿಕ್ಕೇತೋಚದಂತಾಗಿದೆ” ಎಂದ ಕೂಡಲೇ ಗೌಡರು ಮೈಮೇಲೆ ದೆವ್ವ ಬಂದಂತೆ ಎದ್ದು ನಿಂತು, ಅಲ್ಲೇ ಇದ್ದ ಅಪ್ಪಾಜಿ ಹೆಗಲ ಮೇಲೆ ಬಲಗೈ ಊರಿ ಎಡಗೈಯ್ಯನ್ನು ಸುರೇಶಗೌಡನ ಭುಜಕ್ಕೆ ಹಾಕಿಕೊಂಡು ನಾಗಮಂಗಲದ ಕಡೆ ನಡೆದೇಬಿಟ್ಟರಂತಲ್ಲಾ. ನಾಗಮಂಗಲದಲ್ಲಿ ಗೌಡರನ್ನು ನೋಡಿದ ಗತಕಾಲದ ಜನ “ಅಬ್ಬಾಬ್ಬಾ ಸೇಡು ಅಂದರೆ ಇದು, ತೊಂಭತ್ತೆರಡು ವರ್ಷವಾಗಿದ್ದರೂ ಐವತ್ತು ವರ್ಷದ ವೈರಿಯನ್ನು ಹೊಡೆದುರುಳಿಸಲು ಬಂದು ನಿಂತಿರುವ ಗೌಡರ ಛಲ ಸಾಮಾನ್ಯವೇ ಅಂದರಂತಲ್ಲಾ. ಮನುಷ್ಯನಿಗೆ ವಯಸ್ಸಾದಂತೆ ದ್ವೇಷ ಅಸೂಯೆಗಳು ಕಡಿಮೆಯಾಗುತ್ತದಂತೆ, ಆದರೆ ನಮ್ಮ ಗೌಡರನ್ನ ನೋಡಿದರೆ ಆ ಮಾತು ಸುಳ್ಳಾಗಿ ಕಾಣುತ್ತಿದೆಯಲ್ಲಾ ಎಂದು ಉದ್ಘಾರ ತೆಗೆದರಂತಲ್ಲಾ, ಥೂತ್ತೇರಿ.

ಇದನ್ನೂ ಓದಿ: ಎಲೆಕ್ಷನ್ ಬಂದಾಕ್ಷಣ ಪಾರ್ಟಿನೇ ತಾಯಿ ಅಂತಾರೆ; ದೇಶನೇ ಮರ್ತೋಗ್ತಾರಲ್ಲಾ!

ನಾಗಮಂಗಲದಲ್ಲಿ ಕಾಣಿಸಿಕೊಂಡ ಗೌಡರು, “ಬರಗಾಲವೆಂಬ ಭೀಕರತೆಗೆ ಸಿಕ್ಕಿ ಗುಳೆ ಹೋಗುತ್ತಿದ್ದ ನಾಗಮಂಗಲದ ಜನ ನೋಡಲಾಗದೆ ನಾನು ಈ ತಾಲೂಕಿಗೆ ಹೇಮಾವತಿ ಹರಿಸಿದೆ; ಅಂದಿನಿಂದ ಜನ ಅನ್ನ ಉಣ್ಣುತ್ತಿದ್ದಾರೆ” ಎಂದು ಹಸಿಸುಳ್ಳು ಹೇಳಿ ಜನರನ್ನು ದಂಗು ಬಡಿಸಿದರಲ್ಲಾ. ನಾಗಮಂಗಲದ ಜನರ ಅಭಿಪ್ರಾಯದಂತೆ ಅಂದು ಸಂಸ್ಥಾ ಕಾಂಗ್ರೆಸ್ಸಿನ ಶಾಸಕರಾಗಿದ್ದ ಎಚ್.ಟಿ.ಕೃಷ್ಣಪ್ಪನವರನ್ನ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಪಾರ್ಟಿಗೆ ಕರೆದಾಗ, ಅವರು “ನನ್ನ ನಾಗಮಂಗಲ ತಾಲೂಕಿಗೆ ಹೇಮಾವತಿ ನೀರು ಕೊಡುವುದಾದರೆ ನಿಮ್ಮ ಪಾರ್ಟಿಗೆ ಬರುತ್ತೇನೆ” ಎಂದರು. ಕೂಡಲೇ ಇಂಜಿನಿಯರ್ ಕರೆದ ಅರಸು ನಾಗಮಂಗಲಕ್ಕೆ ಸಾಧ್ಯವಾದಷ್ಟು ಹೇಮಾವತಿ ನೀರು ಹರಿಸಿ ಎಂದು ಹೇಳಿ ಕೃಷ್ಣಪ್ಪನವರನ್ನು ತಮ್ಮ ಪಾರ್ಟಿಗೆ ಸೇರಿಸಿಕೊಂಡರು. ಇದು ಇತಿಹಾಸದಲ್ಲಿ ದಾಖಲಾಗಿರುವ ಸತ್ಯ. ಆದರೆ ದೇವೇಗೌಡರು ತುಮಕೂರಿಗಾಗಲಿ, ನಾಗಮಂಗಲಕ್ಕಾಗಲಿ ಹೇಮಾವತಿ ಹರಿಸಲಿಲ್ಲ. ಅವರು ಮುಖ್ಯಮಂತ್ರಿಯಾಗಿದದ್ದು ಕೇವಲ ಹದಿನೆಂಟು ತಿಂಗಳು. ಸೇಡಿಗಾಗಿ ಸುಳ್ಳು ಹೇಳಬಾರದು. ಸತ್ಯ ಸಂಗತಿಯ ಅರಿವಿರುವ ಜನರು ನಗಾಡಬಹುದೆಂಬ ಎಚ್ಚರ ಗೌಡರಲ್ಲಿ ಕಾಣಲಿಲ್ಲವಂತಲ್ಲಾ, ಥೂತ್ತೇರಿ.

******

ಇತ್ತ ಬಿಜೆಪಿ ಅಜೆಂಡಾಗಳು ಒಂದೊಂದೇ ಅನಾವರಣಗೊಂಡು ಜನತೆ ಬೆಚ್ಚಿ ಬೀಳುವಂತಾಗಿದೆಯಲ್ಲಾ. ಎರಡು ದಶಕದ ಹಿಂದೆ ತಯಾರಾದ ಬಿಜೆಪಿ ಅಜೆಂಡಾದ ಮುಖ್ಯಾಂಶಗಳ ಸಂಖ್ಯೆ 25. ಅವುಗಳಲ್ಲಿ ಈಗಾಗಲೇ ಕೆಲವು ಜಾರಿಯಾಗಿವೆ. ಒಂದೆರಡನ್ನು ಮಾತ್ರ ಉಲ್ಲೇಖಿಸುವುದಾದರೆ, ಮಸೀದಿ ಕೆಡವಿ ಈ ದೇಶದಲ್ಲಿ ಕೋಮು ಸಾಮರಸ್ಯ ಕದಡಲಾಗಿದೆ. ರಾಮಮಂದಿರ ಕಟ್ಟಲಾಗಿದೆ. ಹಾಗೆಯೇ ರಾಮಮಂದಿರಗಳನ್ನ ದೇಶದ ಎಲ್ಲಾ ರಾಜ್ಯಗಳಲ್ಲಿ ನಿರ್ಮಿಸಲಾಗುತ್ತದೆ. ನಂತರ ಜಿಲ್ಲೆಗಳಲ್ಲಿ ನಿರ್ಮಾಣ ಮಾಡಲಾಗುತ್ತದೆ. ಇದರ ಸೂಚನೆ ಅಶ್ವತ್ಥನಾರಾಯಣ ಎಂಬುವವರ ಬಾಯಿಂದ ಬಂದಿದೆ. ಆ ಪ್ರಕಾರ ರಾಮನಗರಕ್ಕೂ ರಾಮಮಂದಿರ ಬರಲಿದೆ. ಹೀಗೆ ವ್ಯಾಪಕವಾಗಿ ಹರಡುವ ರಾಮಮಂದಿರಗಳ ಮುಖಾಂತರ ಆಡಳಿತ ನಡೆಯಲಿದೆ. ಪೂಜಾರಿಗಳು ಎರಡೆರೆಡು ಶಿಫ್ಟ್‌ನಂತೆ ಕೆಲಸ ನಿರ್ವಹಿಸಲಿದ್ದಾರೆ. ಪ್ರಧಾನ ಅರ್ಚಕರ ಕೆಳಗೆ ಸರಕಾರದ ಕರ್ಮಚಾರಿಗಳು ಬರುತ್ತಾರೆ, ಸರಕಾರಿ ಯಂತ್ರದಲ್ಲಿ ಯಾವ ಶೂದ್ರನು ಇರುವುದಿಲ್ಲ. ಬ್ರಾಹ್ಮಣರೇ ತುಂಬಿಕೊಂಡ ರಾಮಮಂದಿರದ ಆಡಳಿತದ ದೆಸೆಯಿಂದ ರಾಮರಾಜ್ಯ ಸ್ಥಾಪನೆಯಾಗಲಿದೆಯಂತಲ್ಲಾ, ಥೂತ್ತೇರಿ.

******

ಬಿಜೆಪಿಗಳ ಅಧಿಕೃತ ಘೋಷಣೆಯಂತಲೇ, “ನೀವು ಬಂದರೆ ಜೊತೆಯಾಗಿ, ಬಾರದಿದ್ದರೆ ನಿಮ್ಮನ್ನ ಬಿಟ್ಟು, ಅಡ್ಡಿಪಡಿಸಿದರೆ ಹತ್ತಿಕ್ಕಿ ನಾವು ರಾಮರಾಜ್ಯ ಸ್ಥಾಪನೆ ಮಾಡಿಯೇ ಮಾಡುತ್ತೇವೆ” ಎಂಬುದು ಈಗಾಗಲೇ ಜಾರಿಯಾಗಿದೆಯಂತಲ್ಲಾ. “ನೀವು ಬಾರದಿದ್ದರೆ, ನಿಮ್ಮನ್ನ ಬಿಟ್ಟೇ ನಾವು ರಾಮರಾಜ್ಯ ಕಟ್ಟುತ್ತೇವೆ” ಎಂಬುದು ಎಡೂರಪ್ಪ, ಈಶ್ವರಪ್ಪ, ಜಗದೀಶ್ ಶೆಟ್ಟರ್ ವಿಷಯದಲ್ಲಿ ನಿಜವಾಗಿದೆಯಲ್ಲಾ. ಈ ಬಗ್ಗೆ ಬಿಜೆಪಿ ಬುದ್ದಿಜೀವಿ ಮಂಜನನ್ನ ಕೇಳಿದರೆ ನೋಡಿ ಅದ್ವಾನಿಗಿಂತ ಇವರಾರೂ ದೊಡ್ಡವರಲ್ಲಾ, ಅದ್ವಾನಿ ಬಾಬ್ರಿ ಮಸೀದಿ ಕೆಡವಿಸಿದ ಲೀಡ್ರು, ಅದಕ್ಕೂ ಮೊದಲು ರಾಮನನ್ನ ರಸ್ತೆಗೆ ತಂದು ಮೆರವಣಿಗೆ ಮಾಡಿದರು. ನಂತರ ಇಟ್ಟಿಗೆ ಮೆರವಣಿಗೆ ಮಾಡಿದರು, ರಾಮ ಪಾದುಕ ಮೆರವಣಿಗೆ ಮಾಡಿದರು, ಜ್ಯೋತಿ ಮೆರವಣಿಗೆ ಮಾಡಿದರು, ಈ ದೇಶದಲ್ಲಿ ಬಿಜೆಪಿ ಆವರಿಸಿಕೊಳ್ಳುವಂತೆ ಮಾಡಿದರು. ಆದರೆ ಜಿನ್ನಾ ಸೆಕ್ಯುಲರಾಗಿದ್ದ ಅನ್ನ ಮಾತಿಗೆ ಅದ್ವಾನಿಯನ್ನೇ ಆಚೆಗೆ ಎಸೆದ ಬಿಜೆಪಿಗೆ ಈಶ್ವರ, ಎಡೂರಪ್ಪ, ಶೆಟ್ಟರ್ ಯಾವ ಲೆಕ್ಕಾರಿ. ಅಂಗೇ ನೋಡ್ತಾಯಿರಿ “ಬಿಜೆಪಿನ ಇನ್ನೂ ಹ್ಯಂಗೆ ಚೊಕ್ಕ ಮಾಡ್ತಿವಿ” ಅಂತ ಜಾರುತ್ತಿದ್ದ ಖಾಕಿ ಚೆಡ್ಡಿಯನ್ನ ಮೇಲೆಳೆದುಕೊಂಡು ಹೋದನಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...

ಚೆನ್ನೈನಲ್ಲಿ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಹೋರಾಟ ನಡೆಸುತ್ತಿದ್ದ ಅಂಗವಿಕಲರ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

ಚೆನ್ನೈ: ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಒತ್ತಾಯಿಸಿ ಚೆನ್ನೈನಲ್ಲಿ ಅಂಗವಿಕಲರು ನಡೆಸುತ್ತಿರುವ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ.  ಅಂಗವಿಕಲರು ನಡೆಸುತ್ತಿದ್ದ ಈ ಪ್ರತಿಭಟನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವಾರು ಪ್ರತಿಭಟನಾಕಾರರನ್ನು...

ರಾಜ್ಯಸಭೆ 37 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ; ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

10 ರಾಜ್ಯಗಳಿಂದ ಖಾಲಿ ಇರುವ 37 ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗ (ಇಸಿಐ) ಬುಧವಾರ ವೇಳಾಪಟ್ಟಿ ಪ್ರಕಟಿಸಿದೆ. ಆಯೋಗದ ಪ್ರಕಾರ, ಮಾರ್ಚ್ 16 ರಂದು ಬೆಳಿಗ್ಗೆ 9:00...

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಮಂಗಳವಾರ ಲಕ್ನೋದ ಸರಸ್ವತಿ ಶಿಶು ಮಂದಿರದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, ಹಿಂದೂ...

5% ಮುಸ್ಲಿಂ ಮೀಸಲಾತಿ ಪ್ರಕ್ರಿಯೆ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿಗಾಗಿ ಜಾತಿ ಪರಿಶೀಲನೆ ಮತ್ತು ಪ್ರಮಾಣೀಕರಣ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ ಮಂಗಳವಾರ (ಫೆ.17) ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದು ಪ್ರಸ್ತುತ ಪರಿಸ್ಥಿತಿಯಲ್ಲಿ ಯಾವುದೇ ತಕ್ಷಣದ ಬದಲಾವಣೆಯನ್ನು ತರದಿದ್ದರೂ,...

‘ಆರ್‌ಎಸ್‌ಎಸ್ ನೋಂದಣಿಗೆ ಕಾಂಗ್ರೆಸ್ ಕಾನೂನು ತರಲಿದೆ’: ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕುರಿತ ತಮ್ಮ ಹೇಳಿಕೆಗಳನ್ನು ಮತ್ತು ಕರಾವಳಿ ಕರ್ನಾಟಕದ ಹೂಡಿಕೆಗಳ ಮೇಲೆ ಕೋಮು ಉದ್ವಿಗ್ನತೆ ಪರಿಣಾಮ...