Homeಅಂಕಣಗಳುಬಿಜೆಪಿ ಯಂಗೆ ಚೊಕ್ಕ ಮಾಡಿವಿ ನೋಡಿ!

ಬಿಜೆಪಿ ಯಂಗೆ ಚೊಕ್ಕ ಮಾಡಿವಿ ನೋಡಿ!

- Advertisement -
- Advertisement -

ಅದೊಂದು ಕಾಲವಿತ್ತು; ಚುನಾವಣೆ ಬಂತೆಂದರೆ ಲೀಡರ್‌ಗಳು ತಮ್ಮ ನಾಲಗೆಯನ್ನು ಮಸೆದುಕೊಂಡು, ಪರಿಣಾಮಕಾರಿ ಸುಭಾಷಿತಗಳನ್ನು ಬಾಯಿಪಾಠ ಮಾಡಿಕೊಂಡು, ಉಪಕತೆಗಳನ್ನು ಹೊಸೆದುಕೊಂಡು ಬಹಿರಂಗ ಸಭೆಗಳಲ್ಲಿ ಭಾಷಣ ಬಿಗಿದು ಓಟು ಕೇಳುತ್ತಿದ್ದರು. ಶಾಂತವೇರಿ ಗೋಪಾಲಗೌಡರಂತೂ ಗಂಟೆಗಟ್ಟಲೆ ಮಾತನಾಡಿ ರಾಜ್ಯ, ದೇಶ ಮತ್ತು ಅಂತಾರಾಷ್ಟ್ರೀಯ ಮಟ್ಟದ ರಾಜಕಾರಣ ಮಾತನಾಡಿ ಓಟನ್ನೇ ಕೇಳುತ್ತಿರಲಿಲ್ಲ. “ಓಟು ಕೇಳಿ ಸಾರ್” ಎಂದರೆ “ಜನಗಳಿಗೆ ಗೊತ್ತಿಲ್ಲವೆ” ಎಂದುಬಿಡುತ್ತಿದ್ದರು. ಅಂದಿನ ಸಮಾಜವಾದಿಗಳೆಲ್ಲ ಭಯಂಕರ ಭಾಷಣಕಾರರಾಗಿದ್ದರು. ಭಾಷಣದಿಂದಲೇ ಮತ ಪಡೆಯುತ್ತಿದ್ದರು. ಈಗ ಹಠಾತ್ ಎಲ್ಲವೂ ಬದಲುಗೊಂಡಿದೆ. ಮತದಾರರ ಪಟ್ಟಿ ಹಿಡಿದು, ಹಂಚಬಹುದಾದ ಸಾಮಗ್ರಿಯ ದಾಸ್ತಾನಿನ ಮೇಲೆ ಮತಗಳ ಎಣಿಕೆ ನಡೆಯುತ್ತಿದೆ. ಜನರಿಗೆ ಮಾಂಸ, ಮದ್ಯ ಮತ್ತು ಕಾಸುಕೊಟ್ಟ ಮೇಲೆ ಅವರೊಡನೆ ಮಾತನಾಡುವ ಅಗತ್ಯವಿಲ್ಲ, ಭಾಷಣದ ಅಗತ್ಯವಿಲ್ಲ, ಭಾವನಿಕೆ ಮಾತಿಲ್ಲ; ಮೌನದಲ್ಲಿಯೇ ಮತದ ವ್ಯವಹಾರ ಮುಗಿದ ಮೇಲೆ ಪ್ರಜಾಪ್ರಭುತ್ವವೂ ಕೂಡ ಯಕ್ಕುಟ್ಟಿ ಹೋಗಿದೆಯಂತಲ್ಲಾ, ಥೂತ್ತೇರಿ.

******

ತೊಂಭತ್ತೆರಡು ವರ್ಷದ ದೇವೇಗೌಡರು ಸ್ವತಂತ್ರವಾಗಿ ನಡೆಯಲಾರರು, ವಯೋಸಹಜವಾಗಿ ಮಾತನಾಡುವುದು ತ್ರಾಸವಾದರೂ ಅವರನ್ನು ಕರೆಸಿ ಒಂದೆರಡು ತೊಟ್ಟು ಕಣ್ಣೀರು ಹಾಕಿಸಿಬಿಟ್ಟರೆ ನನ್ನ ಗೆಲುವು ಗ್ಯಾರಂಟಿ ಎಂದು ಭಾವಿಸಿದ ನಾಗಮಂಗಲ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಗೌಡರ ಮನೆಗೆ ಹೋಗಿ ಕೈ ಮುಗಿದಾಗ, ಇಲ್ಲ ಗೌಡರನ್ನು ಕಳುಹಿಸಲು ವೈದ್ಯರ ಒಪ್ಪಿಗೆ ಕಡ್ಡಾಯ ಎಂದರಂತಲ್ಲಾ. ಆಗ ದಿಕ್ಕು ಕಾಣದಂತಾದ ಜೆಡಿಎಸ್ ಅಭ್ಯರ್ಥಿ ದೇವೇಗೌಡರ ಎದುರು ನಿಂತು “ಅಪ್ಪಾ ನಿಮ್ಮ ವೈರಿಯಾದ ಚಲುವರಾಯಸ್ವಾಮಿ ಗೆಲ್ಲುವಂತೆ ಕಾಣುತ್ತಿದ್ದಾನೆ, ನನಗೆ ದಿಕ್ಕೇತೋಚದಂತಾಗಿದೆ” ಎಂದ ಕೂಡಲೇ ಗೌಡರು ಮೈಮೇಲೆ ದೆವ್ವ ಬಂದಂತೆ ಎದ್ದು ನಿಂತು, ಅಲ್ಲೇ ಇದ್ದ ಅಪ್ಪಾಜಿ ಹೆಗಲ ಮೇಲೆ ಬಲಗೈ ಊರಿ ಎಡಗೈಯ್ಯನ್ನು ಸುರೇಶಗೌಡನ ಭುಜಕ್ಕೆ ಹಾಕಿಕೊಂಡು ನಾಗಮಂಗಲದ ಕಡೆ ನಡೆದೇಬಿಟ್ಟರಂತಲ್ಲಾ. ನಾಗಮಂಗಲದಲ್ಲಿ ಗೌಡರನ್ನು ನೋಡಿದ ಗತಕಾಲದ ಜನ “ಅಬ್ಬಾಬ್ಬಾ ಸೇಡು ಅಂದರೆ ಇದು, ತೊಂಭತ್ತೆರಡು ವರ್ಷವಾಗಿದ್ದರೂ ಐವತ್ತು ವರ್ಷದ ವೈರಿಯನ್ನು ಹೊಡೆದುರುಳಿಸಲು ಬಂದು ನಿಂತಿರುವ ಗೌಡರ ಛಲ ಸಾಮಾನ್ಯವೇ ಅಂದರಂತಲ್ಲಾ. ಮನುಷ್ಯನಿಗೆ ವಯಸ್ಸಾದಂತೆ ದ್ವೇಷ ಅಸೂಯೆಗಳು ಕಡಿಮೆಯಾಗುತ್ತದಂತೆ, ಆದರೆ ನಮ್ಮ ಗೌಡರನ್ನ ನೋಡಿದರೆ ಆ ಮಾತು ಸುಳ್ಳಾಗಿ ಕಾಣುತ್ತಿದೆಯಲ್ಲಾ ಎಂದು ಉದ್ಘಾರ ತೆಗೆದರಂತಲ್ಲಾ, ಥೂತ್ತೇರಿ.

ಇದನ್ನೂ ಓದಿ: ಎಲೆಕ್ಷನ್ ಬಂದಾಕ್ಷಣ ಪಾರ್ಟಿನೇ ತಾಯಿ ಅಂತಾರೆ; ದೇಶನೇ ಮರ್ತೋಗ್ತಾರಲ್ಲಾ!

ನಾಗಮಂಗಲದಲ್ಲಿ ಕಾಣಿಸಿಕೊಂಡ ಗೌಡರು, “ಬರಗಾಲವೆಂಬ ಭೀಕರತೆಗೆ ಸಿಕ್ಕಿ ಗುಳೆ ಹೋಗುತ್ತಿದ್ದ ನಾಗಮಂಗಲದ ಜನ ನೋಡಲಾಗದೆ ನಾನು ಈ ತಾಲೂಕಿಗೆ ಹೇಮಾವತಿ ಹರಿಸಿದೆ; ಅಂದಿನಿಂದ ಜನ ಅನ್ನ ಉಣ್ಣುತ್ತಿದ್ದಾರೆ” ಎಂದು ಹಸಿಸುಳ್ಳು ಹೇಳಿ ಜನರನ್ನು ದಂಗು ಬಡಿಸಿದರಲ್ಲಾ. ನಾಗಮಂಗಲದ ಜನರ ಅಭಿಪ್ರಾಯದಂತೆ ಅಂದು ಸಂಸ್ಥಾ ಕಾಂಗ್ರೆಸ್ಸಿನ ಶಾಸಕರಾಗಿದ್ದ ಎಚ್.ಟಿ.ಕೃಷ್ಣಪ್ಪನವರನ್ನ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಪಾರ್ಟಿಗೆ ಕರೆದಾಗ, ಅವರು “ನನ್ನ ನಾಗಮಂಗಲ ತಾಲೂಕಿಗೆ ಹೇಮಾವತಿ ನೀರು ಕೊಡುವುದಾದರೆ ನಿಮ್ಮ ಪಾರ್ಟಿಗೆ ಬರುತ್ತೇನೆ” ಎಂದರು. ಕೂಡಲೇ ಇಂಜಿನಿಯರ್ ಕರೆದ ಅರಸು ನಾಗಮಂಗಲಕ್ಕೆ ಸಾಧ್ಯವಾದಷ್ಟು ಹೇಮಾವತಿ ನೀರು ಹರಿಸಿ ಎಂದು ಹೇಳಿ ಕೃಷ್ಣಪ್ಪನವರನ್ನು ತಮ್ಮ ಪಾರ್ಟಿಗೆ ಸೇರಿಸಿಕೊಂಡರು. ಇದು ಇತಿಹಾಸದಲ್ಲಿ ದಾಖಲಾಗಿರುವ ಸತ್ಯ. ಆದರೆ ದೇವೇಗೌಡರು ತುಮಕೂರಿಗಾಗಲಿ, ನಾಗಮಂಗಲಕ್ಕಾಗಲಿ ಹೇಮಾವತಿ ಹರಿಸಲಿಲ್ಲ. ಅವರು ಮುಖ್ಯಮಂತ್ರಿಯಾಗಿದದ್ದು ಕೇವಲ ಹದಿನೆಂಟು ತಿಂಗಳು. ಸೇಡಿಗಾಗಿ ಸುಳ್ಳು ಹೇಳಬಾರದು. ಸತ್ಯ ಸಂಗತಿಯ ಅರಿವಿರುವ ಜನರು ನಗಾಡಬಹುದೆಂಬ ಎಚ್ಚರ ಗೌಡರಲ್ಲಿ ಕಾಣಲಿಲ್ಲವಂತಲ್ಲಾ, ಥೂತ್ತೇರಿ.

******

ಇತ್ತ ಬಿಜೆಪಿ ಅಜೆಂಡಾಗಳು ಒಂದೊಂದೇ ಅನಾವರಣಗೊಂಡು ಜನತೆ ಬೆಚ್ಚಿ ಬೀಳುವಂತಾಗಿದೆಯಲ್ಲಾ. ಎರಡು ದಶಕದ ಹಿಂದೆ ತಯಾರಾದ ಬಿಜೆಪಿ ಅಜೆಂಡಾದ ಮುಖ್ಯಾಂಶಗಳ ಸಂಖ್ಯೆ 25. ಅವುಗಳಲ್ಲಿ ಈಗಾಗಲೇ ಕೆಲವು ಜಾರಿಯಾಗಿವೆ. ಒಂದೆರಡನ್ನು ಮಾತ್ರ ಉಲ್ಲೇಖಿಸುವುದಾದರೆ, ಮಸೀದಿ ಕೆಡವಿ ಈ ದೇಶದಲ್ಲಿ ಕೋಮು ಸಾಮರಸ್ಯ ಕದಡಲಾಗಿದೆ. ರಾಮಮಂದಿರ ಕಟ್ಟಲಾಗಿದೆ. ಹಾಗೆಯೇ ರಾಮಮಂದಿರಗಳನ್ನ ದೇಶದ ಎಲ್ಲಾ ರಾಜ್ಯಗಳಲ್ಲಿ ನಿರ್ಮಿಸಲಾಗುತ್ತದೆ. ನಂತರ ಜಿಲ್ಲೆಗಳಲ್ಲಿ ನಿರ್ಮಾಣ ಮಾಡಲಾಗುತ್ತದೆ. ಇದರ ಸೂಚನೆ ಅಶ್ವತ್ಥನಾರಾಯಣ ಎಂಬುವವರ ಬಾಯಿಂದ ಬಂದಿದೆ. ಆ ಪ್ರಕಾರ ರಾಮನಗರಕ್ಕೂ ರಾಮಮಂದಿರ ಬರಲಿದೆ. ಹೀಗೆ ವ್ಯಾಪಕವಾಗಿ ಹರಡುವ ರಾಮಮಂದಿರಗಳ ಮುಖಾಂತರ ಆಡಳಿತ ನಡೆಯಲಿದೆ. ಪೂಜಾರಿಗಳು ಎರಡೆರೆಡು ಶಿಫ್ಟ್‌ನಂತೆ ಕೆಲಸ ನಿರ್ವಹಿಸಲಿದ್ದಾರೆ. ಪ್ರಧಾನ ಅರ್ಚಕರ ಕೆಳಗೆ ಸರಕಾರದ ಕರ್ಮಚಾರಿಗಳು ಬರುತ್ತಾರೆ, ಸರಕಾರಿ ಯಂತ್ರದಲ್ಲಿ ಯಾವ ಶೂದ್ರನು ಇರುವುದಿಲ್ಲ. ಬ್ರಾಹ್ಮಣರೇ ತುಂಬಿಕೊಂಡ ರಾಮಮಂದಿರದ ಆಡಳಿತದ ದೆಸೆಯಿಂದ ರಾಮರಾಜ್ಯ ಸ್ಥಾಪನೆಯಾಗಲಿದೆಯಂತಲ್ಲಾ, ಥೂತ್ತೇರಿ.

******

ಬಿಜೆಪಿಗಳ ಅಧಿಕೃತ ಘೋಷಣೆಯಂತಲೇ, “ನೀವು ಬಂದರೆ ಜೊತೆಯಾಗಿ, ಬಾರದಿದ್ದರೆ ನಿಮ್ಮನ್ನ ಬಿಟ್ಟು, ಅಡ್ಡಿಪಡಿಸಿದರೆ ಹತ್ತಿಕ್ಕಿ ನಾವು ರಾಮರಾಜ್ಯ ಸ್ಥಾಪನೆ ಮಾಡಿಯೇ ಮಾಡುತ್ತೇವೆ” ಎಂಬುದು ಈಗಾಗಲೇ ಜಾರಿಯಾಗಿದೆಯಂತಲ್ಲಾ. “ನೀವು ಬಾರದಿದ್ದರೆ, ನಿಮ್ಮನ್ನ ಬಿಟ್ಟೇ ನಾವು ರಾಮರಾಜ್ಯ ಕಟ್ಟುತ್ತೇವೆ” ಎಂಬುದು ಎಡೂರಪ್ಪ, ಈಶ್ವರಪ್ಪ, ಜಗದೀಶ್ ಶೆಟ್ಟರ್ ವಿಷಯದಲ್ಲಿ ನಿಜವಾಗಿದೆಯಲ್ಲಾ. ಈ ಬಗ್ಗೆ ಬಿಜೆಪಿ ಬುದ್ದಿಜೀವಿ ಮಂಜನನ್ನ ಕೇಳಿದರೆ ನೋಡಿ ಅದ್ವಾನಿಗಿಂತ ಇವರಾರೂ ದೊಡ್ಡವರಲ್ಲಾ, ಅದ್ವಾನಿ ಬಾಬ್ರಿ ಮಸೀದಿ ಕೆಡವಿಸಿದ ಲೀಡ್ರು, ಅದಕ್ಕೂ ಮೊದಲು ರಾಮನನ್ನ ರಸ್ತೆಗೆ ತಂದು ಮೆರವಣಿಗೆ ಮಾಡಿದರು. ನಂತರ ಇಟ್ಟಿಗೆ ಮೆರವಣಿಗೆ ಮಾಡಿದರು, ರಾಮ ಪಾದುಕ ಮೆರವಣಿಗೆ ಮಾಡಿದರು, ಜ್ಯೋತಿ ಮೆರವಣಿಗೆ ಮಾಡಿದರು, ಈ ದೇಶದಲ್ಲಿ ಬಿಜೆಪಿ ಆವರಿಸಿಕೊಳ್ಳುವಂತೆ ಮಾಡಿದರು. ಆದರೆ ಜಿನ್ನಾ ಸೆಕ್ಯುಲರಾಗಿದ್ದ ಅನ್ನ ಮಾತಿಗೆ ಅದ್ವಾನಿಯನ್ನೇ ಆಚೆಗೆ ಎಸೆದ ಬಿಜೆಪಿಗೆ ಈಶ್ವರ, ಎಡೂರಪ್ಪ, ಶೆಟ್ಟರ್ ಯಾವ ಲೆಕ್ಕಾರಿ. ಅಂಗೇ ನೋಡ್ತಾಯಿರಿ “ಬಿಜೆಪಿನ ಇನ್ನೂ ಹ್ಯಂಗೆ ಚೊಕ್ಕ ಮಾಡ್ತಿವಿ” ಅಂತ ಜಾರುತ್ತಿದ್ದ ಖಾಕಿ ಚೆಡ್ಡಿಯನ್ನ ಮೇಲೆಳೆದುಕೊಂಡು ಹೋದನಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...