Homeಅಂಕಣಗಳುಬಿಜೆಪಿ ಯಂಗೆ ಚೊಕ್ಕ ಮಾಡಿವಿ ನೋಡಿ!

ಬಿಜೆಪಿ ಯಂಗೆ ಚೊಕ್ಕ ಮಾಡಿವಿ ನೋಡಿ!

- Advertisement -
- Advertisement -

ಅದೊಂದು ಕಾಲವಿತ್ತು; ಚುನಾವಣೆ ಬಂತೆಂದರೆ ಲೀಡರ್‌ಗಳು ತಮ್ಮ ನಾಲಗೆಯನ್ನು ಮಸೆದುಕೊಂಡು, ಪರಿಣಾಮಕಾರಿ ಸುಭಾಷಿತಗಳನ್ನು ಬಾಯಿಪಾಠ ಮಾಡಿಕೊಂಡು, ಉಪಕತೆಗಳನ್ನು ಹೊಸೆದುಕೊಂಡು ಬಹಿರಂಗ ಸಭೆಗಳಲ್ಲಿ ಭಾಷಣ ಬಿಗಿದು ಓಟು ಕೇಳುತ್ತಿದ್ದರು. ಶಾಂತವೇರಿ ಗೋಪಾಲಗೌಡರಂತೂ ಗಂಟೆಗಟ್ಟಲೆ ಮಾತನಾಡಿ ರಾಜ್ಯ, ದೇಶ ಮತ್ತು ಅಂತಾರಾಷ್ಟ್ರೀಯ ಮಟ್ಟದ ರಾಜಕಾರಣ ಮಾತನಾಡಿ ಓಟನ್ನೇ ಕೇಳುತ್ತಿರಲಿಲ್ಲ. “ಓಟು ಕೇಳಿ ಸಾರ್” ಎಂದರೆ “ಜನಗಳಿಗೆ ಗೊತ್ತಿಲ್ಲವೆ” ಎಂದುಬಿಡುತ್ತಿದ್ದರು. ಅಂದಿನ ಸಮಾಜವಾದಿಗಳೆಲ್ಲ ಭಯಂಕರ ಭಾಷಣಕಾರರಾಗಿದ್ದರು. ಭಾಷಣದಿಂದಲೇ ಮತ ಪಡೆಯುತ್ತಿದ್ದರು. ಈಗ ಹಠಾತ್ ಎಲ್ಲವೂ ಬದಲುಗೊಂಡಿದೆ. ಮತದಾರರ ಪಟ್ಟಿ ಹಿಡಿದು, ಹಂಚಬಹುದಾದ ಸಾಮಗ್ರಿಯ ದಾಸ್ತಾನಿನ ಮೇಲೆ ಮತಗಳ ಎಣಿಕೆ ನಡೆಯುತ್ತಿದೆ. ಜನರಿಗೆ ಮಾಂಸ, ಮದ್ಯ ಮತ್ತು ಕಾಸುಕೊಟ್ಟ ಮೇಲೆ ಅವರೊಡನೆ ಮಾತನಾಡುವ ಅಗತ್ಯವಿಲ್ಲ, ಭಾಷಣದ ಅಗತ್ಯವಿಲ್ಲ, ಭಾವನಿಕೆ ಮಾತಿಲ್ಲ; ಮೌನದಲ್ಲಿಯೇ ಮತದ ವ್ಯವಹಾರ ಮುಗಿದ ಮೇಲೆ ಪ್ರಜಾಪ್ರಭುತ್ವವೂ ಕೂಡ ಯಕ್ಕುಟ್ಟಿ ಹೋಗಿದೆಯಂತಲ್ಲಾ, ಥೂತ್ತೇರಿ.

******

ತೊಂಭತ್ತೆರಡು ವರ್ಷದ ದೇವೇಗೌಡರು ಸ್ವತಂತ್ರವಾಗಿ ನಡೆಯಲಾರರು, ವಯೋಸಹಜವಾಗಿ ಮಾತನಾಡುವುದು ತ್ರಾಸವಾದರೂ ಅವರನ್ನು ಕರೆಸಿ ಒಂದೆರಡು ತೊಟ್ಟು ಕಣ್ಣೀರು ಹಾಕಿಸಿಬಿಟ್ಟರೆ ನನ್ನ ಗೆಲುವು ಗ್ಯಾರಂಟಿ ಎಂದು ಭಾವಿಸಿದ ನಾಗಮಂಗಲ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಗೌಡರ ಮನೆಗೆ ಹೋಗಿ ಕೈ ಮುಗಿದಾಗ, ಇಲ್ಲ ಗೌಡರನ್ನು ಕಳುಹಿಸಲು ವೈದ್ಯರ ಒಪ್ಪಿಗೆ ಕಡ್ಡಾಯ ಎಂದರಂತಲ್ಲಾ. ಆಗ ದಿಕ್ಕು ಕಾಣದಂತಾದ ಜೆಡಿಎಸ್ ಅಭ್ಯರ್ಥಿ ದೇವೇಗೌಡರ ಎದುರು ನಿಂತು “ಅಪ್ಪಾ ನಿಮ್ಮ ವೈರಿಯಾದ ಚಲುವರಾಯಸ್ವಾಮಿ ಗೆಲ್ಲುವಂತೆ ಕಾಣುತ್ತಿದ್ದಾನೆ, ನನಗೆ ದಿಕ್ಕೇತೋಚದಂತಾಗಿದೆ” ಎಂದ ಕೂಡಲೇ ಗೌಡರು ಮೈಮೇಲೆ ದೆವ್ವ ಬಂದಂತೆ ಎದ್ದು ನಿಂತು, ಅಲ್ಲೇ ಇದ್ದ ಅಪ್ಪಾಜಿ ಹೆಗಲ ಮೇಲೆ ಬಲಗೈ ಊರಿ ಎಡಗೈಯ್ಯನ್ನು ಸುರೇಶಗೌಡನ ಭುಜಕ್ಕೆ ಹಾಕಿಕೊಂಡು ನಾಗಮಂಗಲದ ಕಡೆ ನಡೆದೇಬಿಟ್ಟರಂತಲ್ಲಾ. ನಾಗಮಂಗಲದಲ್ಲಿ ಗೌಡರನ್ನು ನೋಡಿದ ಗತಕಾಲದ ಜನ “ಅಬ್ಬಾಬ್ಬಾ ಸೇಡು ಅಂದರೆ ಇದು, ತೊಂಭತ್ತೆರಡು ವರ್ಷವಾಗಿದ್ದರೂ ಐವತ್ತು ವರ್ಷದ ವೈರಿಯನ್ನು ಹೊಡೆದುರುಳಿಸಲು ಬಂದು ನಿಂತಿರುವ ಗೌಡರ ಛಲ ಸಾಮಾನ್ಯವೇ ಅಂದರಂತಲ್ಲಾ. ಮನುಷ್ಯನಿಗೆ ವಯಸ್ಸಾದಂತೆ ದ್ವೇಷ ಅಸೂಯೆಗಳು ಕಡಿಮೆಯಾಗುತ್ತದಂತೆ, ಆದರೆ ನಮ್ಮ ಗೌಡರನ್ನ ನೋಡಿದರೆ ಆ ಮಾತು ಸುಳ್ಳಾಗಿ ಕಾಣುತ್ತಿದೆಯಲ್ಲಾ ಎಂದು ಉದ್ಘಾರ ತೆಗೆದರಂತಲ್ಲಾ, ಥೂತ್ತೇರಿ.

ಇದನ್ನೂ ಓದಿ: ಎಲೆಕ್ಷನ್ ಬಂದಾಕ್ಷಣ ಪಾರ್ಟಿನೇ ತಾಯಿ ಅಂತಾರೆ; ದೇಶನೇ ಮರ್ತೋಗ್ತಾರಲ್ಲಾ!

ನಾಗಮಂಗಲದಲ್ಲಿ ಕಾಣಿಸಿಕೊಂಡ ಗೌಡರು, “ಬರಗಾಲವೆಂಬ ಭೀಕರತೆಗೆ ಸಿಕ್ಕಿ ಗುಳೆ ಹೋಗುತ್ತಿದ್ದ ನಾಗಮಂಗಲದ ಜನ ನೋಡಲಾಗದೆ ನಾನು ಈ ತಾಲೂಕಿಗೆ ಹೇಮಾವತಿ ಹರಿಸಿದೆ; ಅಂದಿನಿಂದ ಜನ ಅನ್ನ ಉಣ್ಣುತ್ತಿದ್ದಾರೆ” ಎಂದು ಹಸಿಸುಳ್ಳು ಹೇಳಿ ಜನರನ್ನು ದಂಗು ಬಡಿಸಿದರಲ್ಲಾ. ನಾಗಮಂಗಲದ ಜನರ ಅಭಿಪ್ರಾಯದಂತೆ ಅಂದು ಸಂಸ್ಥಾ ಕಾಂಗ್ರೆಸ್ಸಿನ ಶಾಸಕರಾಗಿದ್ದ ಎಚ್.ಟಿ.ಕೃಷ್ಣಪ್ಪನವರನ್ನ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಪಾರ್ಟಿಗೆ ಕರೆದಾಗ, ಅವರು “ನನ್ನ ನಾಗಮಂಗಲ ತಾಲೂಕಿಗೆ ಹೇಮಾವತಿ ನೀರು ಕೊಡುವುದಾದರೆ ನಿಮ್ಮ ಪಾರ್ಟಿಗೆ ಬರುತ್ತೇನೆ” ಎಂದರು. ಕೂಡಲೇ ಇಂಜಿನಿಯರ್ ಕರೆದ ಅರಸು ನಾಗಮಂಗಲಕ್ಕೆ ಸಾಧ್ಯವಾದಷ್ಟು ಹೇಮಾವತಿ ನೀರು ಹರಿಸಿ ಎಂದು ಹೇಳಿ ಕೃಷ್ಣಪ್ಪನವರನ್ನು ತಮ್ಮ ಪಾರ್ಟಿಗೆ ಸೇರಿಸಿಕೊಂಡರು. ಇದು ಇತಿಹಾಸದಲ್ಲಿ ದಾಖಲಾಗಿರುವ ಸತ್ಯ. ಆದರೆ ದೇವೇಗೌಡರು ತುಮಕೂರಿಗಾಗಲಿ, ನಾಗಮಂಗಲಕ್ಕಾಗಲಿ ಹೇಮಾವತಿ ಹರಿಸಲಿಲ್ಲ. ಅವರು ಮುಖ್ಯಮಂತ್ರಿಯಾಗಿದದ್ದು ಕೇವಲ ಹದಿನೆಂಟು ತಿಂಗಳು. ಸೇಡಿಗಾಗಿ ಸುಳ್ಳು ಹೇಳಬಾರದು. ಸತ್ಯ ಸಂಗತಿಯ ಅರಿವಿರುವ ಜನರು ನಗಾಡಬಹುದೆಂಬ ಎಚ್ಚರ ಗೌಡರಲ್ಲಿ ಕಾಣಲಿಲ್ಲವಂತಲ್ಲಾ, ಥೂತ್ತೇರಿ.

******

ಇತ್ತ ಬಿಜೆಪಿ ಅಜೆಂಡಾಗಳು ಒಂದೊಂದೇ ಅನಾವರಣಗೊಂಡು ಜನತೆ ಬೆಚ್ಚಿ ಬೀಳುವಂತಾಗಿದೆಯಲ್ಲಾ. ಎರಡು ದಶಕದ ಹಿಂದೆ ತಯಾರಾದ ಬಿಜೆಪಿ ಅಜೆಂಡಾದ ಮುಖ್ಯಾಂಶಗಳ ಸಂಖ್ಯೆ 25. ಅವುಗಳಲ್ಲಿ ಈಗಾಗಲೇ ಕೆಲವು ಜಾರಿಯಾಗಿವೆ. ಒಂದೆರಡನ್ನು ಮಾತ್ರ ಉಲ್ಲೇಖಿಸುವುದಾದರೆ, ಮಸೀದಿ ಕೆಡವಿ ಈ ದೇಶದಲ್ಲಿ ಕೋಮು ಸಾಮರಸ್ಯ ಕದಡಲಾಗಿದೆ. ರಾಮಮಂದಿರ ಕಟ್ಟಲಾಗಿದೆ. ಹಾಗೆಯೇ ರಾಮಮಂದಿರಗಳನ್ನ ದೇಶದ ಎಲ್ಲಾ ರಾಜ್ಯಗಳಲ್ಲಿ ನಿರ್ಮಿಸಲಾಗುತ್ತದೆ. ನಂತರ ಜಿಲ್ಲೆಗಳಲ್ಲಿ ನಿರ್ಮಾಣ ಮಾಡಲಾಗುತ್ತದೆ. ಇದರ ಸೂಚನೆ ಅಶ್ವತ್ಥನಾರಾಯಣ ಎಂಬುವವರ ಬಾಯಿಂದ ಬಂದಿದೆ. ಆ ಪ್ರಕಾರ ರಾಮನಗರಕ್ಕೂ ರಾಮಮಂದಿರ ಬರಲಿದೆ. ಹೀಗೆ ವ್ಯಾಪಕವಾಗಿ ಹರಡುವ ರಾಮಮಂದಿರಗಳ ಮುಖಾಂತರ ಆಡಳಿತ ನಡೆಯಲಿದೆ. ಪೂಜಾರಿಗಳು ಎರಡೆರೆಡು ಶಿಫ್ಟ್‌ನಂತೆ ಕೆಲಸ ನಿರ್ವಹಿಸಲಿದ್ದಾರೆ. ಪ್ರಧಾನ ಅರ್ಚಕರ ಕೆಳಗೆ ಸರಕಾರದ ಕರ್ಮಚಾರಿಗಳು ಬರುತ್ತಾರೆ, ಸರಕಾರಿ ಯಂತ್ರದಲ್ಲಿ ಯಾವ ಶೂದ್ರನು ಇರುವುದಿಲ್ಲ. ಬ್ರಾಹ್ಮಣರೇ ತುಂಬಿಕೊಂಡ ರಾಮಮಂದಿರದ ಆಡಳಿತದ ದೆಸೆಯಿಂದ ರಾಮರಾಜ್ಯ ಸ್ಥಾಪನೆಯಾಗಲಿದೆಯಂತಲ್ಲಾ, ಥೂತ್ತೇರಿ.

******

ಬಿಜೆಪಿಗಳ ಅಧಿಕೃತ ಘೋಷಣೆಯಂತಲೇ, “ನೀವು ಬಂದರೆ ಜೊತೆಯಾಗಿ, ಬಾರದಿದ್ದರೆ ನಿಮ್ಮನ್ನ ಬಿಟ್ಟು, ಅಡ್ಡಿಪಡಿಸಿದರೆ ಹತ್ತಿಕ್ಕಿ ನಾವು ರಾಮರಾಜ್ಯ ಸ್ಥಾಪನೆ ಮಾಡಿಯೇ ಮಾಡುತ್ತೇವೆ” ಎಂಬುದು ಈಗಾಗಲೇ ಜಾರಿಯಾಗಿದೆಯಂತಲ್ಲಾ. “ನೀವು ಬಾರದಿದ್ದರೆ, ನಿಮ್ಮನ್ನ ಬಿಟ್ಟೇ ನಾವು ರಾಮರಾಜ್ಯ ಕಟ್ಟುತ್ತೇವೆ” ಎಂಬುದು ಎಡೂರಪ್ಪ, ಈಶ್ವರಪ್ಪ, ಜಗದೀಶ್ ಶೆಟ್ಟರ್ ವಿಷಯದಲ್ಲಿ ನಿಜವಾಗಿದೆಯಲ್ಲಾ. ಈ ಬಗ್ಗೆ ಬಿಜೆಪಿ ಬುದ್ದಿಜೀವಿ ಮಂಜನನ್ನ ಕೇಳಿದರೆ ನೋಡಿ ಅದ್ವಾನಿಗಿಂತ ಇವರಾರೂ ದೊಡ್ಡವರಲ್ಲಾ, ಅದ್ವಾನಿ ಬಾಬ್ರಿ ಮಸೀದಿ ಕೆಡವಿಸಿದ ಲೀಡ್ರು, ಅದಕ್ಕೂ ಮೊದಲು ರಾಮನನ್ನ ರಸ್ತೆಗೆ ತಂದು ಮೆರವಣಿಗೆ ಮಾಡಿದರು. ನಂತರ ಇಟ್ಟಿಗೆ ಮೆರವಣಿಗೆ ಮಾಡಿದರು, ರಾಮ ಪಾದುಕ ಮೆರವಣಿಗೆ ಮಾಡಿದರು, ಜ್ಯೋತಿ ಮೆರವಣಿಗೆ ಮಾಡಿದರು, ಈ ದೇಶದಲ್ಲಿ ಬಿಜೆಪಿ ಆವರಿಸಿಕೊಳ್ಳುವಂತೆ ಮಾಡಿದರು. ಆದರೆ ಜಿನ್ನಾ ಸೆಕ್ಯುಲರಾಗಿದ್ದ ಅನ್ನ ಮಾತಿಗೆ ಅದ್ವಾನಿಯನ್ನೇ ಆಚೆಗೆ ಎಸೆದ ಬಿಜೆಪಿಗೆ ಈಶ್ವರ, ಎಡೂರಪ್ಪ, ಶೆಟ್ಟರ್ ಯಾವ ಲೆಕ್ಕಾರಿ. ಅಂಗೇ ನೋಡ್ತಾಯಿರಿ “ಬಿಜೆಪಿನ ಇನ್ನೂ ಹ್ಯಂಗೆ ಚೊಕ್ಕ ಮಾಡ್ತಿವಿ” ಅಂತ ಜಾರುತ್ತಿದ್ದ ಖಾಕಿ ಚೆಡ್ಡಿಯನ್ನ ಮೇಲೆಳೆದುಕೊಂಡು ಹೋದನಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...