Homeಅಂಕಣಗಳುಬಿಜೆಪಿ ಯಂಗೆ ಚೊಕ್ಕ ಮಾಡಿವಿ ನೋಡಿ!

ಬಿಜೆಪಿ ಯಂಗೆ ಚೊಕ್ಕ ಮಾಡಿವಿ ನೋಡಿ!

- Advertisement -
- Advertisement -

ಅದೊಂದು ಕಾಲವಿತ್ತು; ಚುನಾವಣೆ ಬಂತೆಂದರೆ ಲೀಡರ್‌ಗಳು ತಮ್ಮ ನಾಲಗೆಯನ್ನು ಮಸೆದುಕೊಂಡು, ಪರಿಣಾಮಕಾರಿ ಸುಭಾಷಿತಗಳನ್ನು ಬಾಯಿಪಾಠ ಮಾಡಿಕೊಂಡು, ಉಪಕತೆಗಳನ್ನು ಹೊಸೆದುಕೊಂಡು ಬಹಿರಂಗ ಸಭೆಗಳಲ್ಲಿ ಭಾಷಣ ಬಿಗಿದು ಓಟು ಕೇಳುತ್ತಿದ್ದರು. ಶಾಂತವೇರಿ ಗೋಪಾಲಗೌಡರಂತೂ ಗಂಟೆಗಟ್ಟಲೆ ಮಾತನಾಡಿ ರಾಜ್ಯ, ದೇಶ ಮತ್ತು ಅಂತಾರಾಷ್ಟ್ರೀಯ ಮಟ್ಟದ ರಾಜಕಾರಣ ಮಾತನಾಡಿ ಓಟನ್ನೇ ಕೇಳುತ್ತಿರಲಿಲ್ಲ. “ಓಟು ಕೇಳಿ ಸಾರ್” ಎಂದರೆ “ಜನಗಳಿಗೆ ಗೊತ್ತಿಲ್ಲವೆ” ಎಂದುಬಿಡುತ್ತಿದ್ದರು. ಅಂದಿನ ಸಮಾಜವಾದಿಗಳೆಲ್ಲ ಭಯಂಕರ ಭಾಷಣಕಾರರಾಗಿದ್ದರು. ಭಾಷಣದಿಂದಲೇ ಮತ ಪಡೆಯುತ್ತಿದ್ದರು. ಈಗ ಹಠಾತ್ ಎಲ್ಲವೂ ಬದಲುಗೊಂಡಿದೆ. ಮತದಾರರ ಪಟ್ಟಿ ಹಿಡಿದು, ಹಂಚಬಹುದಾದ ಸಾಮಗ್ರಿಯ ದಾಸ್ತಾನಿನ ಮೇಲೆ ಮತಗಳ ಎಣಿಕೆ ನಡೆಯುತ್ತಿದೆ. ಜನರಿಗೆ ಮಾಂಸ, ಮದ್ಯ ಮತ್ತು ಕಾಸುಕೊಟ್ಟ ಮೇಲೆ ಅವರೊಡನೆ ಮಾತನಾಡುವ ಅಗತ್ಯವಿಲ್ಲ, ಭಾಷಣದ ಅಗತ್ಯವಿಲ್ಲ, ಭಾವನಿಕೆ ಮಾತಿಲ್ಲ; ಮೌನದಲ್ಲಿಯೇ ಮತದ ವ್ಯವಹಾರ ಮುಗಿದ ಮೇಲೆ ಪ್ರಜಾಪ್ರಭುತ್ವವೂ ಕೂಡ ಯಕ್ಕುಟ್ಟಿ ಹೋಗಿದೆಯಂತಲ್ಲಾ, ಥೂತ್ತೇರಿ.

******

ತೊಂಭತ್ತೆರಡು ವರ್ಷದ ದೇವೇಗೌಡರು ಸ್ವತಂತ್ರವಾಗಿ ನಡೆಯಲಾರರು, ವಯೋಸಹಜವಾಗಿ ಮಾತನಾಡುವುದು ತ್ರಾಸವಾದರೂ ಅವರನ್ನು ಕರೆಸಿ ಒಂದೆರಡು ತೊಟ್ಟು ಕಣ್ಣೀರು ಹಾಕಿಸಿಬಿಟ್ಟರೆ ನನ್ನ ಗೆಲುವು ಗ್ಯಾರಂಟಿ ಎಂದು ಭಾವಿಸಿದ ನಾಗಮಂಗಲ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಗೌಡರ ಮನೆಗೆ ಹೋಗಿ ಕೈ ಮುಗಿದಾಗ, ಇಲ್ಲ ಗೌಡರನ್ನು ಕಳುಹಿಸಲು ವೈದ್ಯರ ಒಪ್ಪಿಗೆ ಕಡ್ಡಾಯ ಎಂದರಂತಲ್ಲಾ. ಆಗ ದಿಕ್ಕು ಕಾಣದಂತಾದ ಜೆಡಿಎಸ್ ಅಭ್ಯರ್ಥಿ ದೇವೇಗೌಡರ ಎದುರು ನಿಂತು “ಅಪ್ಪಾ ನಿಮ್ಮ ವೈರಿಯಾದ ಚಲುವರಾಯಸ್ವಾಮಿ ಗೆಲ್ಲುವಂತೆ ಕಾಣುತ್ತಿದ್ದಾನೆ, ನನಗೆ ದಿಕ್ಕೇತೋಚದಂತಾಗಿದೆ” ಎಂದ ಕೂಡಲೇ ಗೌಡರು ಮೈಮೇಲೆ ದೆವ್ವ ಬಂದಂತೆ ಎದ್ದು ನಿಂತು, ಅಲ್ಲೇ ಇದ್ದ ಅಪ್ಪಾಜಿ ಹೆಗಲ ಮೇಲೆ ಬಲಗೈ ಊರಿ ಎಡಗೈಯ್ಯನ್ನು ಸುರೇಶಗೌಡನ ಭುಜಕ್ಕೆ ಹಾಕಿಕೊಂಡು ನಾಗಮಂಗಲದ ಕಡೆ ನಡೆದೇಬಿಟ್ಟರಂತಲ್ಲಾ. ನಾಗಮಂಗಲದಲ್ಲಿ ಗೌಡರನ್ನು ನೋಡಿದ ಗತಕಾಲದ ಜನ “ಅಬ್ಬಾಬ್ಬಾ ಸೇಡು ಅಂದರೆ ಇದು, ತೊಂಭತ್ತೆರಡು ವರ್ಷವಾಗಿದ್ದರೂ ಐವತ್ತು ವರ್ಷದ ವೈರಿಯನ್ನು ಹೊಡೆದುರುಳಿಸಲು ಬಂದು ನಿಂತಿರುವ ಗೌಡರ ಛಲ ಸಾಮಾನ್ಯವೇ ಅಂದರಂತಲ್ಲಾ. ಮನುಷ್ಯನಿಗೆ ವಯಸ್ಸಾದಂತೆ ದ್ವೇಷ ಅಸೂಯೆಗಳು ಕಡಿಮೆಯಾಗುತ್ತದಂತೆ, ಆದರೆ ನಮ್ಮ ಗೌಡರನ್ನ ನೋಡಿದರೆ ಆ ಮಾತು ಸುಳ್ಳಾಗಿ ಕಾಣುತ್ತಿದೆಯಲ್ಲಾ ಎಂದು ಉದ್ಘಾರ ತೆಗೆದರಂತಲ್ಲಾ, ಥೂತ್ತೇರಿ.

ಇದನ್ನೂ ಓದಿ: ಎಲೆಕ್ಷನ್ ಬಂದಾಕ್ಷಣ ಪಾರ್ಟಿನೇ ತಾಯಿ ಅಂತಾರೆ; ದೇಶನೇ ಮರ್ತೋಗ್ತಾರಲ್ಲಾ!

ನಾಗಮಂಗಲದಲ್ಲಿ ಕಾಣಿಸಿಕೊಂಡ ಗೌಡರು, “ಬರಗಾಲವೆಂಬ ಭೀಕರತೆಗೆ ಸಿಕ್ಕಿ ಗುಳೆ ಹೋಗುತ್ತಿದ್ದ ನಾಗಮಂಗಲದ ಜನ ನೋಡಲಾಗದೆ ನಾನು ಈ ತಾಲೂಕಿಗೆ ಹೇಮಾವತಿ ಹರಿಸಿದೆ; ಅಂದಿನಿಂದ ಜನ ಅನ್ನ ಉಣ್ಣುತ್ತಿದ್ದಾರೆ” ಎಂದು ಹಸಿಸುಳ್ಳು ಹೇಳಿ ಜನರನ್ನು ದಂಗು ಬಡಿಸಿದರಲ್ಲಾ. ನಾಗಮಂಗಲದ ಜನರ ಅಭಿಪ್ರಾಯದಂತೆ ಅಂದು ಸಂಸ್ಥಾ ಕಾಂಗ್ರೆಸ್ಸಿನ ಶಾಸಕರಾಗಿದ್ದ ಎಚ್.ಟಿ.ಕೃಷ್ಣಪ್ಪನವರನ್ನ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಪಾರ್ಟಿಗೆ ಕರೆದಾಗ, ಅವರು “ನನ್ನ ನಾಗಮಂಗಲ ತಾಲೂಕಿಗೆ ಹೇಮಾವತಿ ನೀರು ಕೊಡುವುದಾದರೆ ನಿಮ್ಮ ಪಾರ್ಟಿಗೆ ಬರುತ್ತೇನೆ” ಎಂದರು. ಕೂಡಲೇ ಇಂಜಿನಿಯರ್ ಕರೆದ ಅರಸು ನಾಗಮಂಗಲಕ್ಕೆ ಸಾಧ್ಯವಾದಷ್ಟು ಹೇಮಾವತಿ ನೀರು ಹರಿಸಿ ಎಂದು ಹೇಳಿ ಕೃಷ್ಣಪ್ಪನವರನ್ನು ತಮ್ಮ ಪಾರ್ಟಿಗೆ ಸೇರಿಸಿಕೊಂಡರು. ಇದು ಇತಿಹಾಸದಲ್ಲಿ ದಾಖಲಾಗಿರುವ ಸತ್ಯ. ಆದರೆ ದೇವೇಗೌಡರು ತುಮಕೂರಿಗಾಗಲಿ, ನಾಗಮಂಗಲಕ್ಕಾಗಲಿ ಹೇಮಾವತಿ ಹರಿಸಲಿಲ್ಲ. ಅವರು ಮುಖ್ಯಮಂತ್ರಿಯಾಗಿದದ್ದು ಕೇವಲ ಹದಿನೆಂಟು ತಿಂಗಳು. ಸೇಡಿಗಾಗಿ ಸುಳ್ಳು ಹೇಳಬಾರದು. ಸತ್ಯ ಸಂಗತಿಯ ಅರಿವಿರುವ ಜನರು ನಗಾಡಬಹುದೆಂಬ ಎಚ್ಚರ ಗೌಡರಲ್ಲಿ ಕಾಣಲಿಲ್ಲವಂತಲ್ಲಾ, ಥೂತ್ತೇರಿ.

******

ಇತ್ತ ಬಿಜೆಪಿ ಅಜೆಂಡಾಗಳು ಒಂದೊಂದೇ ಅನಾವರಣಗೊಂಡು ಜನತೆ ಬೆಚ್ಚಿ ಬೀಳುವಂತಾಗಿದೆಯಲ್ಲಾ. ಎರಡು ದಶಕದ ಹಿಂದೆ ತಯಾರಾದ ಬಿಜೆಪಿ ಅಜೆಂಡಾದ ಮುಖ್ಯಾಂಶಗಳ ಸಂಖ್ಯೆ 25. ಅವುಗಳಲ್ಲಿ ಈಗಾಗಲೇ ಕೆಲವು ಜಾರಿಯಾಗಿವೆ. ಒಂದೆರಡನ್ನು ಮಾತ್ರ ಉಲ್ಲೇಖಿಸುವುದಾದರೆ, ಮಸೀದಿ ಕೆಡವಿ ಈ ದೇಶದಲ್ಲಿ ಕೋಮು ಸಾಮರಸ್ಯ ಕದಡಲಾಗಿದೆ. ರಾಮಮಂದಿರ ಕಟ್ಟಲಾಗಿದೆ. ಹಾಗೆಯೇ ರಾಮಮಂದಿರಗಳನ್ನ ದೇಶದ ಎಲ್ಲಾ ರಾಜ್ಯಗಳಲ್ಲಿ ನಿರ್ಮಿಸಲಾಗುತ್ತದೆ. ನಂತರ ಜಿಲ್ಲೆಗಳಲ್ಲಿ ನಿರ್ಮಾಣ ಮಾಡಲಾಗುತ್ತದೆ. ಇದರ ಸೂಚನೆ ಅಶ್ವತ್ಥನಾರಾಯಣ ಎಂಬುವವರ ಬಾಯಿಂದ ಬಂದಿದೆ. ಆ ಪ್ರಕಾರ ರಾಮನಗರಕ್ಕೂ ರಾಮಮಂದಿರ ಬರಲಿದೆ. ಹೀಗೆ ವ್ಯಾಪಕವಾಗಿ ಹರಡುವ ರಾಮಮಂದಿರಗಳ ಮುಖಾಂತರ ಆಡಳಿತ ನಡೆಯಲಿದೆ. ಪೂಜಾರಿಗಳು ಎರಡೆರೆಡು ಶಿಫ್ಟ್‌ನಂತೆ ಕೆಲಸ ನಿರ್ವಹಿಸಲಿದ್ದಾರೆ. ಪ್ರಧಾನ ಅರ್ಚಕರ ಕೆಳಗೆ ಸರಕಾರದ ಕರ್ಮಚಾರಿಗಳು ಬರುತ್ತಾರೆ, ಸರಕಾರಿ ಯಂತ್ರದಲ್ಲಿ ಯಾವ ಶೂದ್ರನು ಇರುವುದಿಲ್ಲ. ಬ್ರಾಹ್ಮಣರೇ ತುಂಬಿಕೊಂಡ ರಾಮಮಂದಿರದ ಆಡಳಿತದ ದೆಸೆಯಿಂದ ರಾಮರಾಜ್ಯ ಸ್ಥಾಪನೆಯಾಗಲಿದೆಯಂತಲ್ಲಾ, ಥೂತ್ತೇರಿ.

******

ಬಿಜೆಪಿಗಳ ಅಧಿಕೃತ ಘೋಷಣೆಯಂತಲೇ, “ನೀವು ಬಂದರೆ ಜೊತೆಯಾಗಿ, ಬಾರದಿದ್ದರೆ ನಿಮ್ಮನ್ನ ಬಿಟ್ಟು, ಅಡ್ಡಿಪಡಿಸಿದರೆ ಹತ್ತಿಕ್ಕಿ ನಾವು ರಾಮರಾಜ್ಯ ಸ್ಥಾಪನೆ ಮಾಡಿಯೇ ಮಾಡುತ್ತೇವೆ” ಎಂಬುದು ಈಗಾಗಲೇ ಜಾರಿಯಾಗಿದೆಯಂತಲ್ಲಾ. “ನೀವು ಬಾರದಿದ್ದರೆ, ನಿಮ್ಮನ್ನ ಬಿಟ್ಟೇ ನಾವು ರಾಮರಾಜ್ಯ ಕಟ್ಟುತ್ತೇವೆ” ಎಂಬುದು ಎಡೂರಪ್ಪ, ಈಶ್ವರಪ್ಪ, ಜಗದೀಶ್ ಶೆಟ್ಟರ್ ವಿಷಯದಲ್ಲಿ ನಿಜವಾಗಿದೆಯಲ್ಲಾ. ಈ ಬಗ್ಗೆ ಬಿಜೆಪಿ ಬುದ್ದಿಜೀವಿ ಮಂಜನನ್ನ ಕೇಳಿದರೆ ನೋಡಿ ಅದ್ವಾನಿಗಿಂತ ಇವರಾರೂ ದೊಡ್ಡವರಲ್ಲಾ, ಅದ್ವಾನಿ ಬಾಬ್ರಿ ಮಸೀದಿ ಕೆಡವಿಸಿದ ಲೀಡ್ರು, ಅದಕ್ಕೂ ಮೊದಲು ರಾಮನನ್ನ ರಸ್ತೆಗೆ ತಂದು ಮೆರವಣಿಗೆ ಮಾಡಿದರು. ನಂತರ ಇಟ್ಟಿಗೆ ಮೆರವಣಿಗೆ ಮಾಡಿದರು, ರಾಮ ಪಾದುಕ ಮೆರವಣಿಗೆ ಮಾಡಿದರು, ಜ್ಯೋತಿ ಮೆರವಣಿಗೆ ಮಾಡಿದರು, ಈ ದೇಶದಲ್ಲಿ ಬಿಜೆಪಿ ಆವರಿಸಿಕೊಳ್ಳುವಂತೆ ಮಾಡಿದರು. ಆದರೆ ಜಿನ್ನಾ ಸೆಕ್ಯುಲರಾಗಿದ್ದ ಅನ್ನ ಮಾತಿಗೆ ಅದ್ವಾನಿಯನ್ನೇ ಆಚೆಗೆ ಎಸೆದ ಬಿಜೆಪಿಗೆ ಈಶ್ವರ, ಎಡೂರಪ್ಪ, ಶೆಟ್ಟರ್ ಯಾವ ಲೆಕ್ಕಾರಿ. ಅಂಗೇ ನೋಡ್ತಾಯಿರಿ “ಬಿಜೆಪಿನ ಇನ್ನೂ ಹ್ಯಂಗೆ ಚೊಕ್ಕ ಮಾಡ್ತಿವಿ” ಅಂತ ಜಾರುತ್ತಿದ್ದ ಖಾಕಿ ಚೆಡ್ಡಿಯನ್ನ ಮೇಲೆಳೆದುಕೊಂಡು ಹೋದನಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...