Homeಮುಖಪುಟಅತ್ಯಾಚಾರಿಗಳಿಗೆ ಸ್ವಾಗತ ನೀಡುವುದನ್ನು ನೋಡಿದರೆ ರಕ್ತ ಕುದಿಯುತ್ತೆ: ನಿರ್ಭಯಾ ತಾಯಿ ಆಕ್ರೋಶ

ಅತ್ಯಾಚಾರಿಗಳಿಗೆ ಸ್ವಾಗತ ನೀಡುವುದನ್ನು ನೋಡಿದರೆ ರಕ್ತ ಕುದಿಯುತ್ತೆ: ನಿರ್ಭಯಾ ತಾಯಿ ಆಕ್ರೋಶ

ಬಿಲ್ಕಿಸ್ ಬಾನೊ ಅತ್ಯಾಚಾರಿಗಳಿಗೆ ಹೂಮಾಲೆ ಹಾಕಿ, ಸಿಹಿ ಹಂಚಿ ಸ್ವಾಗತಿಸಿದವರನ್ನು ನಿರ್ಭಯಾ ತಾಯಿ ಆಶಾದೇವಿ ಕಟುವಾಗಿ ಟೀಕಿಸಿದ್ದಾರೆ.

- Advertisement -
- Advertisement -

ಬಿಲ್ಕಿಸ್ ಬಾನೊ ಅವರ ಮೇಲೆ ಅತ್ಯಾಚಾರವೆಸಗಿ, ಅವರ ಕುಟುಂಬದ ಏಳು ಜನರನ್ನು ಹತ್ಯೆ ಮಾಡಿದ ಹನ್ನೊಂದು ಮಂದಿ ಅತ್ಯಾಚಾರಿಗಳನ್ನು ಗುಜರಾತ್ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿದ್ದು, 2012ರ ದೆಹಲಿ ಗ್ಯಾಂಗ್‌ರೇಪ್ ಸಂತ್ರಸ್ತೆ ನಿರ್ಭಯಾ ಅವರ ತಾಯಿ ಆಕ್ರೋಶವನ್ನು ಹೊರಹಾಕಿದ್ದಾರೆ.

‘ಇಂಡಿಯಾ ಟುಡೇ’ ಚಾನೆಲ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಿರ್ಭಯಾ ಅವರ ತಾಯಿ ಆಶಾ ದೇವಿ, “ಅತ್ಯಾಚಾರಿಗಳಿಗೆ ಆತ್ಮೀಯ ಸ್ವಾಗತ ನೀಡುವುದನ್ನು ನೋಡಿದಾಗ ರಕ್ತ ಕುದಿಯುತ್ತದೆ” ಎಂದಿದ್ದಾರೆ.

ಬಿಲ್ಕಿಸ್ ಬಾನೊ ಅತ್ಯಾಚಾರಿಗಳಿಗೆ ಹೂಮಾಲೆ ಮತ್ತು ಸಿಹಿತಿಂಡಿಗಳೊಂದಿಗೆ ಸ್ವಾಗತಿಸಿದವರನ್ನು ನಿರ್ಭಯಾ ತಾಯಿ ಆಶಾದೇವಿ ಕಟುವಾಗಿ ಟೀಕಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅತ್ಯಾಚಾರಿಗಳ ಪರ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದವರನ್ನು ಉದ್ದೇಶಿಸಿ ಮಾತನಾಡಿರುವ ಅವರು, “ಸಮಾಜ ಪ್ರತಿಷ್ಟಿತ ವ್ಯಕ್ತಿಯಾಗಿರುವ ನೀವು ನಡೆದುಕೊಳ್ಳುತ್ತಿರುವ ರೀತಿ ಬೇಸರ ತಂದಿದೆ. ಹತ್ತು ವರ್ಷಗಳ ಬಳಿಕ ಅತ್ಯಾಚಾರವೆಸಗಿದ ಅಪರಾಧಿ ಹೊರಗಡೆ ಬಂದಾಗ ಮನೆಯವರು ಬರಮಾಡಿಕೊಳ್ಳುವುದು ಸರಿ. ಆದರೆ ಸಮಾಜದ ಹೊರಗಿನ ವ್ಯಕ್ತಿಯೊಬ್ಬರು ಸ್ವಾಗತಿಸುತ್ತಿರುವುದು ಏಕೆ? ಇದು ನಾಚಿಕೆಗೇಡಿನ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಅತ್ಯಾಚಾರಿಗಳ ಬಗ್ಗೆ ಕೆಲವು ಜನರು ತೋರುತ್ತಿರುವ ಇಂತಹ ವರ್ತನೆಗಳೇ ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆಯಲು ಕಾರಣವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿರ್ಭಯಾ ಅವರ ತಾಯಿ ಆಶಾದೇವಿಯವರು ಹೇಳಿದ್ದಿಷ್ಟು:

“ನಮ್ಮ ಮನಸ್ಸಿಗೆ ನೋವಾಗಿದೆ ಅಂತ ನಾವು ಕೊರಗುತ್ತಿದ್ದೇವೆ. ನೋವಾಗಿರುವುದು, ಕೊರಗಿರುವುದು ನಮ್ಮ ಸಮಾಜಕ್ಕೆ ಬೇಕಾಗಿಲ್ಲ. ಆದರೆ ನನಗಂತೂ ರಕ್ತ ಕುದಿಯುತ್ತಿದೆ. ನಮ್ಮ ಸಮಾಜದಲ್ಲಿ ಇದ್ಯಾವ ರೀತಿಯಲ್ಲಿ ಅತ್ಯಾಚಾರಿಗಳನ್ನು ಸನ್ಮಾನಿಸುವ ಉತ್ಸಾಹ ಬಂದುಬಿಟ್ಟಿದೆ?”

“ಒಂದು ಮಗುವಿನ ಪ್ರಕರಣದಲ್ಲಿ (ನಿರ್ಭಯಾ ಪ್ರಕರಣದಲ್ಲಿ) ನ್ಯಾಯವೇನೋ ಸಿಕ್ಕಿತು ಅಷ್ಟೇ. ಆದರೆ ಅದೇ ರೀತಿಯ ಅತ್ಯಾಚಾರ ಘಟನೆಗಳು ಹೆಚ್ಚುತ್ತಿವೆ. ಈಗ ಹನ್ನೊಂದು ಅತ್ಯಾಚಾರಿಗಳು ಬಿಡುಗಡೆಯಾಗಿದ್ದಾರೆ. ಯಾವ ಹೆಣ್ಣಿನ ಮೇಲೂ ಅತ್ಯಾಚಾರ ಆಗುವುದಿಲ್ಲ ಎಂಬ ಭರವಸೆ ಇಡಬೇಕೆ?”

“ಸಮಾಜ ಪ್ರತಿಷ್ಟಿತ ವ್ಯಕ್ತಿಯಾಗಿರುವ ನೀವು ನಡೆದುಕೊಳ್ಳುತ್ತಿರುವ ರೀತಿ ಬೇಸರ ತಂದಿದೆ. ಹತ್ತು ವರ್ಷಗಳ ಬಳಿಕ ಅತ್ಯಾಚಾರವೆಸಗಿದ ಅಪರಾಧಿ ಹೊರಗಡೆ ಬಂದಾಗ ಮನೆಯವರು ಬರಮಾಡಿಕೊಳ್ಳುವುದು ಸರಿ. ಆದರೆ ಸಮಾಜದ ಹೊರಗಿನ ವ್ಯಕ್ತಿಯೊಬ್ಬರು ಸ್ವಾಗತಿಸುತ್ತಿರುವುದು ಏಕೆ? ಇದು ನಾಚಿಕೆಗೇಡಿನ ಸಂಗತಿ.”

“ಅತ್ಯಾಚಾರಗಳಿಗೆ ಹಾರ ಹಾಕಿ, ಸಹಿ ಹಂಚುತ್ತಿರುವುದು ನೋಡಿದರೆ ಏನನಿಸುತ್ತದೆ? ಇವು ಒಪ್ಪಲಾಗದ ಸಂಗತಿ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವಾಗ ರೇಪಿಸ್ಟ್‌ಗಳಿಗೆ ಈ ರೀತಿ ಬೆಂಬಲಿಸಲಾಗುತ್ತಿದೆ. ಬೆಂಬಲಕ್ಕೆ ಉತ್ಸುಕರಾಗಿ ನಿಂತಿದ್ದಾರೆ. ಸಮಾಜದ ಪ್ರತಿಷ್ಟಿತ ವ್ಯಕ್ತಿಯಾಗಿರುವವರು ಈ ರೀತಿಯ ನಡೆಯಿಂದ ಯಾವ ಸಂದೇಶವನ್ನು ನೀಡಲು ಹೊರಟಿದ್ದಿರಿ?”

“ನಿರ್ಭಯ ಪ್ರಕರಣದಲ್ಲಿ ಶಿಕ್ಷೆಯಾದ ಮೇಲೂ ಅತ್ಯಾಚಾರ ಪ್ರಕರಣಗಳು ನಡೆದವು. ಈಗ ಅತ್ಯಾಚಾರಿಗಳು ಬಿಡುಗಡೆಯಾಗಿದ್ದಾರೆ. ಮುಂದೆ ಅತ್ಯಾಚಾರ ಪ್ರಕರಣಗಳು  ನಡೆಯುವುದಿಲ್ಲವೇ? ನ್ಯಾಯ ಸಿಗುವುದೇ? ಸಮಾಜದ ಮಾನಸಿಕ ಸ್ವಾಸ್ಥ್ಯ ಹದಗೆಟ್ಟಿದೆ. ಹಾಗಾಗಿ ನ್ಯಾಯ ಸಿಗದು”

“ಕಾನೂನು ಕೆಲಸ ಮಾಡುತ್ತಿಲ್ಲ ಎನ್ನುತ್ತಾರೆ. ಆದರೆ ಕಾನೂನು ಕೆಲಸ ಮಾಡಲು ಬಿಡುತ್ತಿಲ್ಲ. ಇತ್ತೀಚೆಗೆ ಬಿಹಾರದಲ್ಲಿ ಒದು ಹೆಣ್ಣುಮಗುವಿನ ಹತ್ಯೆಯಾಯಿತು. ನ್ಯಾಯಾಧೀಶರು ಬಹುಶಃ ಒಂದು ವಾರದಲ್ಲಿ ತೀರ್ಪು ನೀಡಲಿದರು. ಗಲ್ಲು ಶಿಕ್ಷೆ ನೀಡುತ್ತಾರೆಂದು ಆ ನ್ಯಾಯಾಧೀಶರನ್ನೇ ವರ್ಗ ಮಾಡಿಸುವ ಪ್ರಯತ್ನ ನಡೆಯಿತು ಎಂಬ ಸುದ್ದಿಯನ್ನು ಓದಿದೆ.”

“ಹನ್ನೊಂದು ಅತ್ಯಾಚಾರಿಗಳನ್ನು ಸ್ವಾಗತಿಸಿ ಮಹಿಳೆಯೊಬ್ಬರು ಸಹಿತಿನಿಸು ನೀಡಿದ್ದನ್ನೂ ನೋಡಿದೆ. ಅವರು ಹೆಣ್ಣುಕುಲಕ್ಕೆ ಕಳಂಕ. ಒಂದು ವೇಳೆ ಅತ್ಯಾಚಾರ ಮಾಡಿದ ವ್ಯಕ್ತಿ ಮನೆಗೆ ಬಂದರೆ ಅವರ ಅಮ್ಮನಾಗಲಿ, ಸಹೋದರಿಯಾಗಲಿ ಆತನನ್ನು ಸ್ವಾಗತಿಸಿದರೆ ಅಂಥವರಿಗೆ ನನ್ನ ಧಿಕ್ಕಾರವಿದೆ.”

ಇದನ್ನೂ ಓದಿರಿ: ಅವರು ಬ್ರಾಹ್ಮಣರು..: ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಬಿಜೆಪಿ ಶಾಸಕ

ಮೋದಿ ಭಾಷಣದ ಬಳಿಕ ಬಿಡುಗಡೆ

ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಹಿಳಾ ಸಬಲೀಕರಣದ ಕುರಿತು ಮಾತನಾಡಿದ ಕೆಲವೇ ಗಂಟೆಗಳ ನಂತರ, ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳನ್ನು ಗುಜರಾತ್‌ ಸರ್ಕಾರ ಬಿಡುಗಡೆ ಮಾಡಿತ್ತು.

2002ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಅವರ 3 ವರ್ಷದ ಮಗಳು ಸೇರಿದಂತೆ ಅವರ ಕುಟುಂಬದ ಏಳು ಸದಸ್ಯರನ್ನು ಹತ್ಯೆ ಮಾಡಲಾಗಿತ್ತು. ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬಿಡುಗಡೆಯಾಗಿರುವ ಹನ್ನೊಂದು ವ್ಯಕ್ತಿಗಳು ಶಿಕ್ಷೆಗೊಳಗಾಗಿದ್ದರು. ಇವರಿಗೆ ಸರ್ಕಾರ ಕ್ಷಮಾದಾನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕನಿಷ್ಟ ನೀವಾದರು ಜಾತಿ ಮತ ಭೇದವಿಲ್ಲದೆ ಅ ದರಿದ್ರ ಮಾನಾಮರ್ಯಾದೆ ಇಲ್ಲದ ಪಶುಗಳು ಆಳುತ್ತಿರುವ ಬಿಜೆಪಿ ಸರ್ಕಾರಗಳಿಗೆ ಕ್ಯಾಕರಿಸಿ ಉಗಿದಿದ್ದಿರಾ, ಈ ಘಟನೆಗಳನ್ನು ಸೋಕಾಲ್ಡ್ ಕುಲೀನ ? ಜಾತಿ ಸಮುದಾಯಗಳ ಹೆಂಗಸರ ಬಾಯಿಯಿಂದ ಇದು ಹೆಣ್ಣು ಕುಲಕ್ಕೆ ಮುಖ್ಯ ವಾಗಿ ನಮ್ಮ ಮಹಾನ್ ಸಮಾಜಕ್ಕೆ ಅಮಾನುಷ ಎಂದು ಹೇಳಲು ಸದ್ದೆ ಆಗಲಿಲ್ಲ.

  2. ಅತ್ಯಾಚಾರದ ಅಪರಾಧಿಗಳನ್ನು ಸ್ವಾಗತಿಸುವುದು ಎಂದರೆ, ಅತ್ಯಾಚಾರವನ್ನು ಬೆಂಬಲಿಸಿದಂತೆ. ಆದ್ದರಿಂದ ಯಾರು ಈ ಅತ್ಯಾಚಾರಿಗಳನ್ನು ಸ್ವಾಗತಿಸಿದ್ದಾರೋ, ಮತ್ತು ಅವರನ್ನು ಸನ್ಮಾನಿಸಿದ್ದಾರೋ, ಅವರಿಗೂ ಸಹ ಕಾನೂನಿನ ಪ್ರಕಾರ ಶಿಕ್ಷೆ ಆಗಬೇಕು. ಇವರನ್ನು ಶಿಕ್ಷಿಸಲು ಈಗ ಇರುವ ಕಾನೂನಿನಲ್ಲಿ ಅವಕಾಶ ಇಲ್ಲದಿದ್ದರೆ, ಹೊಸದಾಗಿ ಕಾನೂನನ್ನು ರೂಪಿಸಬೇಕು, ಇಂತಹ ಕಾನೂನಿಗಾಗಿ ಪ್ರಜ್ಞಾವಂತರು ದನಿ ಎತ್ತಬೇಕು.

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...