Homeಮುಖಪುಟಅತ್ಯಾಚಾರಿಗಳಿಗೆ ಸ್ವಾಗತ ನೀಡುವುದನ್ನು ನೋಡಿದರೆ ರಕ್ತ ಕುದಿಯುತ್ತೆ: ನಿರ್ಭಯಾ ತಾಯಿ ಆಕ್ರೋಶ

ಅತ್ಯಾಚಾರಿಗಳಿಗೆ ಸ್ವಾಗತ ನೀಡುವುದನ್ನು ನೋಡಿದರೆ ರಕ್ತ ಕುದಿಯುತ್ತೆ: ನಿರ್ಭಯಾ ತಾಯಿ ಆಕ್ರೋಶ

ಬಿಲ್ಕಿಸ್ ಬಾನೊ ಅತ್ಯಾಚಾರಿಗಳಿಗೆ ಹೂಮಾಲೆ ಹಾಕಿ, ಸಿಹಿ ಹಂಚಿ ಸ್ವಾಗತಿಸಿದವರನ್ನು ನಿರ್ಭಯಾ ತಾಯಿ ಆಶಾದೇವಿ ಕಟುವಾಗಿ ಟೀಕಿಸಿದ್ದಾರೆ.

- Advertisement -
- Advertisement -

ಬಿಲ್ಕಿಸ್ ಬಾನೊ ಅವರ ಮೇಲೆ ಅತ್ಯಾಚಾರವೆಸಗಿ, ಅವರ ಕುಟುಂಬದ ಏಳು ಜನರನ್ನು ಹತ್ಯೆ ಮಾಡಿದ ಹನ್ನೊಂದು ಮಂದಿ ಅತ್ಯಾಚಾರಿಗಳನ್ನು ಗುಜರಾತ್ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿದ್ದು, 2012ರ ದೆಹಲಿ ಗ್ಯಾಂಗ್‌ರೇಪ್ ಸಂತ್ರಸ್ತೆ ನಿರ್ಭಯಾ ಅವರ ತಾಯಿ ಆಕ್ರೋಶವನ್ನು ಹೊರಹಾಕಿದ್ದಾರೆ.

‘ಇಂಡಿಯಾ ಟುಡೇ’ ಚಾನೆಲ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಿರ್ಭಯಾ ಅವರ ತಾಯಿ ಆಶಾ ದೇವಿ, “ಅತ್ಯಾಚಾರಿಗಳಿಗೆ ಆತ್ಮೀಯ ಸ್ವಾಗತ ನೀಡುವುದನ್ನು ನೋಡಿದಾಗ ರಕ್ತ ಕುದಿಯುತ್ತದೆ” ಎಂದಿದ್ದಾರೆ.

ಬಿಲ್ಕಿಸ್ ಬಾನೊ ಅತ್ಯಾಚಾರಿಗಳಿಗೆ ಹೂಮಾಲೆ ಮತ್ತು ಸಿಹಿತಿಂಡಿಗಳೊಂದಿಗೆ ಸ್ವಾಗತಿಸಿದವರನ್ನು ನಿರ್ಭಯಾ ತಾಯಿ ಆಶಾದೇವಿ ಕಟುವಾಗಿ ಟೀಕಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅತ್ಯಾಚಾರಿಗಳ ಪರ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದವರನ್ನು ಉದ್ದೇಶಿಸಿ ಮಾತನಾಡಿರುವ ಅವರು, “ಸಮಾಜ ಪ್ರತಿಷ್ಟಿತ ವ್ಯಕ್ತಿಯಾಗಿರುವ ನೀವು ನಡೆದುಕೊಳ್ಳುತ್ತಿರುವ ರೀತಿ ಬೇಸರ ತಂದಿದೆ. ಹತ್ತು ವರ್ಷಗಳ ಬಳಿಕ ಅತ್ಯಾಚಾರವೆಸಗಿದ ಅಪರಾಧಿ ಹೊರಗಡೆ ಬಂದಾಗ ಮನೆಯವರು ಬರಮಾಡಿಕೊಳ್ಳುವುದು ಸರಿ. ಆದರೆ ಸಮಾಜದ ಹೊರಗಿನ ವ್ಯಕ್ತಿಯೊಬ್ಬರು ಸ್ವಾಗತಿಸುತ್ತಿರುವುದು ಏಕೆ? ಇದು ನಾಚಿಕೆಗೇಡಿನ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಅತ್ಯಾಚಾರಿಗಳ ಬಗ್ಗೆ ಕೆಲವು ಜನರು ತೋರುತ್ತಿರುವ ಇಂತಹ ವರ್ತನೆಗಳೇ ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆಯಲು ಕಾರಣವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿರ್ಭಯಾ ಅವರ ತಾಯಿ ಆಶಾದೇವಿಯವರು ಹೇಳಿದ್ದಿಷ್ಟು:

“ನಮ್ಮ ಮನಸ್ಸಿಗೆ ನೋವಾಗಿದೆ ಅಂತ ನಾವು ಕೊರಗುತ್ತಿದ್ದೇವೆ. ನೋವಾಗಿರುವುದು, ಕೊರಗಿರುವುದು ನಮ್ಮ ಸಮಾಜಕ್ಕೆ ಬೇಕಾಗಿಲ್ಲ. ಆದರೆ ನನಗಂತೂ ರಕ್ತ ಕುದಿಯುತ್ತಿದೆ. ನಮ್ಮ ಸಮಾಜದಲ್ಲಿ ಇದ್ಯಾವ ರೀತಿಯಲ್ಲಿ ಅತ್ಯಾಚಾರಿಗಳನ್ನು ಸನ್ಮಾನಿಸುವ ಉತ್ಸಾಹ ಬಂದುಬಿಟ್ಟಿದೆ?”

“ಒಂದು ಮಗುವಿನ ಪ್ರಕರಣದಲ್ಲಿ (ನಿರ್ಭಯಾ ಪ್ರಕರಣದಲ್ಲಿ) ನ್ಯಾಯವೇನೋ ಸಿಕ್ಕಿತು ಅಷ್ಟೇ. ಆದರೆ ಅದೇ ರೀತಿಯ ಅತ್ಯಾಚಾರ ಘಟನೆಗಳು ಹೆಚ್ಚುತ್ತಿವೆ. ಈಗ ಹನ್ನೊಂದು ಅತ್ಯಾಚಾರಿಗಳು ಬಿಡುಗಡೆಯಾಗಿದ್ದಾರೆ. ಯಾವ ಹೆಣ್ಣಿನ ಮೇಲೂ ಅತ್ಯಾಚಾರ ಆಗುವುದಿಲ್ಲ ಎಂಬ ಭರವಸೆ ಇಡಬೇಕೆ?”

“ಸಮಾಜ ಪ್ರತಿಷ್ಟಿತ ವ್ಯಕ್ತಿಯಾಗಿರುವ ನೀವು ನಡೆದುಕೊಳ್ಳುತ್ತಿರುವ ರೀತಿ ಬೇಸರ ತಂದಿದೆ. ಹತ್ತು ವರ್ಷಗಳ ಬಳಿಕ ಅತ್ಯಾಚಾರವೆಸಗಿದ ಅಪರಾಧಿ ಹೊರಗಡೆ ಬಂದಾಗ ಮನೆಯವರು ಬರಮಾಡಿಕೊಳ್ಳುವುದು ಸರಿ. ಆದರೆ ಸಮಾಜದ ಹೊರಗಿನ ವ್ಯಕ್ತಿಯೊಬ್ಬರು ಸ್ವಾಗತಿಸುತ್ತಿರುವುದು ಏಕೆ? ಇದು ನಾಚಿಕೆಗೇಡಿನ ಸಂಗತಿ.”

“ಅತ್ಯಾಚಾರಗಳಿಗೆ ಹಾರ ಹಾಕಿ, ಸಹಿ ಹಂಚುತ್ತಿರುವುದು ನೋಡಿದರೆ ಏನನಿಸುತ್ತದೆ? ಇವು ಒಪ್ಪಲಾಗದ ಸಂಗತಿ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವಾಗ ರೇಪಿಸ್ಟ್‌ಗಳಿಗೆ ಈ ರೀತಿ ಬೆಂಬಲಿಸಲಾಗುತ್ತಿದೆ. ಬೆಂಬಲಕ್ಕೆ ಉತ್ಸುಕರಾಗಿ ನಿಂತಿದ್ದಾರೆ. ಸಮಾಜದ ಪ್ರತಿಷ್ಟಿತ ವ್ಯಕ್ತಿಯಾಗಿರುವವರು ಈ ರೀತಿಯ ನಡೆಯಿಂದ ಯಾವ ಸಂದೇಶವನ್ನು ನೀಡಲು ಹೊರಟಿದ್ದಿರಿ?”

“ನಿರ್ಭಯ ಪ್ರಕರಣದಲ್ಲಿ ಶಿಕ್ಷೆಯಾದ ಮೇಲೂ ಅತ್ಯಾಚಾರ ಪ್ರಕರಣಗಳು ನಡೆದವು. ಈಗ ಅತ್ಯಾಚಾರಿಗಳು ಬಿಡುಗಡೆಯಾಗಿದ್ದಾರೆ. ಮುಂದೆ ಅತ್ಯಾಚಾರ ಪ್ರಕರಣಗಳು  ನಡೆಯುವುದಿಲ್ಲವೇ? ನ್ಯಾಯ ಸಿಗುವುದೇ? ಸಮಾಜದ ಮಾನಸಿಕ ಸ್ವಾಸ್ಥ್ಯ ಹದಗೆಟ್ಟಿದೆ. ಹಾಗಾಗಿ ನ್ಯಾಯ ಸಿಗದು”

“ಕಾನೂನು ಕೆಲಸ ಮಾಡುತ್ತಿಲ್ಲ ಎನ್ನುತ್ತಾರೆ. ಆದರೆ ಕಾನೂನು ಕೆಲಸ ಮಾಡಲು ಬಿಡುತ್ತಿಲ್ಲ. ಇತ್ತೀಚೆಗೆ ಬಿಹಾರದಲ್ಲಿ ಒದು ಹೆಣ್ಣುಮಗುವಿನ ಹತ್ಯೆಯಾಯಿತು. ನ್ಯಾಯಾಧೀಶರು ಬಹುಶಃ ಒಂದು ವಾರದಲ್ಲಿ ತೀರ್ಪು ನೀಡಲಿದರು. ಗಲ್ಲು ಶಿಕ್ಷೆ ನೀಡುತ್ತಾರೆಂದು ಆ ನ್ಯಾಯಾಧೀಶರನ್ನೇ ವರ್ಗ ಮಾಡಿಸುವ ಪ್ರಯತ್ನ ನಡೆಯಿತು ಎಂಬ ಸುದ್ದಿಯನ್ನು ಓದಿದೆ.”

“ಹನ್ನೊಂದು ಅತ್ಯಾಚಾರಿಗಳನ್ನು ಸ್ವಾಗತಿಸಿ ಮಹಿಳೆಯೊಬ್ಬರು ಸಹಿತಿನಿಸು ನೀಡಿದ್ದನ್ನೂ ನೋಡಿದೆ. ಅವರು ಹೆಣ್ಣುಕುಲಕ್ಕೆ ಕಳಂಕ. ಒಂದು ವೇಳೆ ಅತ್ಯಾಚಾರ ಮಾಡಿದ ವ್ಯಕ್ತಿ ಮನೆಗೆ ಬಂದರೆ ಅವರ ಅಮ್ಮನಾಗಲಿ, ಸಹೋದರಿಯಾಗಲಿ ಆತನನ್ನು ಸ್ವಾಗತಿಸಿದರೆ ಅಂಥವರಿಗೆ ನನ್ನ ಧಿಕ್ಕಾರವಿದೆ.”

ಇದನ್ನೂ ಓದಿರಿ: ಅವರು ಬ್ರಾಹ್ಮಣರು..: ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಬಿಜೆಪಿ ಶಾಸಕ

ಮೋದಿ ಭಾಷಣದ ಬಳಿಕ ಬಿಡುಗಡೆ

ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಹಿಳಾ ಸಬಲೀಕರಣದ ಕುರಿತು ಮಾತನಾಡಿದ ಕೆಲವೇ ಗಂಟೆಗಳ ನಂತರ, ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳನ್ನು ಗುಜರಾತ್‌ ಸರ್ಕಾರ ಬಿಡುಗಡೆ ಮಾಡಿತ್ತು.

2002ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಅವರ 3 ವರ್ಷದ ಮಗಳು ಸೇರಿದಂತೆ ಅವರ ಕುಟುಂಬದ ಏಳು ಸದಸ್ಯರನ್ನು ಹತ್ಯೆ ಮಾಡಲಾಗಿತ್ತು. ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬಿಡುಗಡೆಯಾಗಿರುವ ಹನ್ನೊಂದು ವ್ಯಕ್ತಿಗಳು ಶಿಕ್ಷೆಗೊಳಗಾಗಿದ್ದರು. ಇವರಿಗೆ ಸರ್ಕಾರ ಕ್ಷಮಾದಾನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕನಿಷ್ಟ ನೀವಾದರು ಜಾತಿ ಮತ ಭೇದವಿಲ್ಲದೆ ಅ ದರಿದ್ರ ಮಾನಾಮರ್ಯಾದೆ ಇಲ್ಲದ ಪಶುಗಳು ಆಳುತ್ತಿರುವ ಬಿಜೆಪಿ ಸರ್ಕಾರಗಳಿಗೆ ಕ್ಯಾಕರಿಸಿ ಉಗಿದಿದ್ದಿರಾ, ಈ ಘಟನೆಗಳನ್ನು ಸೋಕಾಲ್ಡ್ ಕುಲೀನ ? ಜಾತಿ ಸಮುದಾಯಗಳ ಹೆಂಗಸರ ಬಾಯಿಯಿಂದ ಇದು ಹೆಣ್ಣು ಕುಲಕ್ಕೆ ಮುಖ್ಯ ವಾಗಿ ನಮ್ಮ ಮಹಾನ್ ಸಮಾಜಕ್ಕೆ ಅಮಾನುಷ ಎಂದು ಹೇಳಲು ಸದ್ದೆ ಆಗಲಿಲ್ಲ.

  2. ಅತ್ಯಾಚಾರದ ಅಪರಾಧಿಗಳನ್ನು ಸ್ವಾಗತಿಸುವುದು ಎಂದರೆ, ಅತ್ಯಾಚಾರವನ್ನು ಬೆಂಬಲಿಸಿದಂತೆ. ಆದ್ದರಿಂದ ಯಾರು ಈ ಅತ್ಯಾಚಾರಿಗಳನ್ನು ಸ್ವಾಗತಿಸಿದ್ದಾರೋ, ಮತ್ತು ಅವರನ್ನು ಸನ್ಮಾನಿಸಿದ್ದಾರೋ, ಅವರಿಗೂ ಸಹ ಕಾನೂನಿನ ಪ್ರಕಾರ ಶಿಕ್ಷೆ ಆಗಬೇಕು. ಇವರನ್ನು ಶಿಕ್ಷಿಸಲು ಈಗ ಇರುವ ಕಾನೂನಿನಲ್ಲಿ ಅವಕಾಶ ಇಲ್ಲದಿದ್ದರೆ, ಹೊಸದಾಗಿ ಕಾನೂನನ್ನು ರೂಪಿಸಬೇಕು, ಇಂತಹ ಕಾನೂನಿಗಾಗಿ ಪ್ರಜ್ಞಾವಂತರು ದನಿ ಎತ್ತಬೇಕು.

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...