Homeಮುಖಪುಟಅತ್ಯಾಚಾರಿಗಳಿಗೆ ಸ್ವಾಗತ ನೀಡುವುದನ್ನು ನೋಡಿದರೆ ರಕ್ತ ಕುದಿಯುತ್ತೆ: ನಿರ್ಭಯಾ ತಾಯಿ ಆಕ್ರೋಶ

ಅತ್ಯಾಚಾರಿಗಳಿಗೆ ಸ್ವಾಗತ ನೀಡುವುದನ್ನು ನೋಡಿದರೆ ರಕ್ತ ಕುದಿಯುತ್ತೆ: ನಿರ್ಭಯಾ ತಾಯಿ ಆಕ್ರೋಶ

ಬಿಲ್ಕಿಸ್ ಬಾನೊ ಅತ್ಯಾಚಾರಿಗಳಿಗೆ ಹೂಮಾಲೆ ಹಾಕಿ, ಸಿಹಿ ಹಂಚಿ ಸ್ವಾಗತಿಸಿದವರನ್ನು ನಿರ್ಭಯಾ ತಾಯಿ ಆಶಾದೇವಿ ಕಟುವಾಗಿ ಟೀಕಿಸಿದ್ದಾರೆ.

- Advertisement -
- Advertisement -

ಬಿಲ್ಕಿಸ್ ಬಾನೊ ಅವರ ಮೇಲೆ ಅತ್ಯಾಚಾರವೆಸಗಿ, ಅವರ ಕುಟುಂಬದ ಏಳು ಜನರನ್ನು ಹತ್ಯೆ ಮಾಡಿದ ಹನ್ನೊಂದು ಮಂದಿ ಅತ್ಯಾಚಾರಿಗಳನ್ನು ಗುಜರಾತ್ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿದ್ದು, 2012ರ ದೆಹಲಿ ಗ್ಯಾಂಗ್‌ರೇಪ್ ಸಂತ್ರಸ್ತೆ ನಿರ್ಭಯಾ ಅವರ ತಾಯಿ ಆಕ್ರೋಶವನ್ನು ಹೊರಹಾಕಿದ್ದಾರೆ.

‘ಇಂಡಿಯಾ ಟುಡೇ’ ಚಾನೆಲ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಿರ್ಭಯಾ ಅವರ ತಾಯಿ ಆಶಾ ದೇವಿ, “ಅತ್ಯಾಚಾರಿಗಳಿಗೆ ಆತ್ಮೀಯ ಸ್ವಾಗತ ನೀಡುವುದನ್ನು ನೋಡಿದಾಗ ರಕ್ತ ಕುದಿಯುತ್ತದೆ” ಎಂದಿದ್ದಾರೆ.

ಬಿಲ್ಕಿಸ್ ಬಾನೊ ಅತ್ಯಾಚಾರಿಗಳಿಗೆ ಹೂಮಾಲೆ ಮತ್ತು ಸಿಹಿತಿಂಡಿಗಳೊಂದಿಗೆ ಸ್ವಾಗತಿಸಿದವರನ್ನು ನಿರ್ಭಯಾ ತಾಯಿ ಆಶಾದೇವಿ ಕಟುವಾಗಿ ಟೀಕಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅತ್ಯಾಚಾರಿಗಳ ಪರ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದವರನ್ನು ಉದ್ದೇಶಿಸಿ ಮಾತನಾಡಿರುವ ಅವರು, “ಸಮಾಜ ಪ್ರತಿಷ್ಟಿತ ವ್ಯಕ್ತಿಯಾಗಿರುವ ನೀವು ನಡೆದುಕೊಳ್ಳುತ್ತಿರುವ ರೀತಿ ಬೇಸರ ತಂದಿದೆ. ಹತ್ತು ವರ್ಷಗಳ ಬಳಿಕ ಅತ್ಯಾಚಾರವೆಸಗಿದ ಅಪರಾಧಿ ಹೊರಗಡೆ ಬಂದಾಗ ಮನೆಯವರು ಬರಮಾಡಿಕೊಳ್ಳುವುದು ಸರಿ. ಆದರೆ ಸಮಾಜದ ಹೊರಗಿನ ವ್ಯಕ್ತಿಯೊಬ್ಬರು ಸ್ವಾಗತಿಸುತ್ತಿರುವುದು ಏಕೆ? ಇದು ನಾಚಿಕೆಗೇಡಿನ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಅತ್ಯಾಚಾರಿಗಳ ಬಗ್ಗೆ ಕೆಲವು ಜನರು ತೋರುತ್ತಿರುವ ಇಂತಹ ವರ್ತನೆಗಳೇ ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆಯಲು ಕಾರಣವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿರ್ಭಯಾ ಅವರ ತಾಯಿ ಆಶಾದೇವಿಯವರು ಹೇಳಿದ್ದಿಷ್ಟು:

“ನಮ್ಮ ಮನಸ್ಸಿಗೆ ನೋವಾಗಿದೆ ಅಂತ ನಾವು ಕೊರಗುತ್ತಿದ್ದೇವೆ. ನೋವಾಗಿರುವುದು, ಕೊರಗಿರುವುದು ನಮ್ಮ ಸಮಾಜಕ್ಕೆ ಬೇಕಾಗಿಲ್ಲ. ಆದರೆ ನನಗಂತೂ ರಕ್ತ ಕುದಿಯುತ್ತಿದೆ. ನಮ್ಮ ಸಮಾಜದಲ್ಲಿ ಇದ್ಯಾವ ರೀತಿಯಲ್ಲಿ ಅತ್ಯಾಚಾರಿಗಳನ್ನು ಸನ್ಮಾನಿಸುವ ಉತ್ಸಾಹ ಬಂದುಬಿಟ್ಟಿದೆ?”

“ಒಂದು ಮಗುವಿನ ಪ್ರಕರಣದಲ್ಲಿ (ನಿರ್ಭಯಾ ಪ್ರಕರಣದಲ್ಲಿ) ನ್ಯಾಯವೇನೋ ಸಿಕ್ಕಿತು ಅಷ್ಟೇ. ಆದರೆ ಅದೇ ರೀತಿಯ ಅತ್ಯಾಚಾರ ಘಟನೆಗಳು ಹೆಚ್ಚುತ್ತಿವೆ. ಈಗ ಹನ್ನೊಂದು ಅತ್ಯಾಚಾರಿಗಳು ಬಿಡುಗಡೆಯಾಗಿದ್ದಾರೆ. ಯಾವ ಹೆಣ್ಣಿನ ಮೇಲೂ ಅತ್ಯಾಚಾರ ಆಗುವುದಿಲ್ಲ ಎಂಬ ಭರವಸೆ ಇಡಬೇಕೆ?”

“ಸಮಾಜ ಪ್ರತಿಷ್ಟಿತ ವ್ಯಕ್ತಿಯಾಗಿರುವ ನೀವು ನಡೆದುಕೊಳ್ಳುತ್ತಿರುವ ರೀತಿ ಬೇಸರ ತಂದಿದೆ. ಹತ್ತು ವರ್ಷಗಳ ಬಳಿಕ ಅತ್ಯಾಚಾರವೆಸಗಿದ ಅಪರಾಧಿ ಹೊರಗಡೆ ಬಂದಾಗ ಮನೆಯವರು ಬರಮಾಡಿಕೊಳ್ಳುವುದು ಸರಿ. ಆದರೆ ಸಮಾಜದ ಹೊರಗಿನ ವ್ಯಕ್ತಿಯೊಬ್ಬರು ಸ್ವಾಗತಿಸುತ್ತಿರುವುದು ಏಕೆ? ಇದು ನಾಚಿಕೆಗೇಡಿನ ಸಂಗತಿ.”

“ಅತ್ಯಾಚಾರಗಳಿಗೆ ಹಾರ ಹಾಕಿ, ಸಹಿ ಹಂಚುತ್ತಿರುವುದು ನೋಡಿದರೆ ಏನನಿಸುತ್ತದೆ? ಇವು ಒಪ್ಪಲಾಗದ ಸಂಗತಿ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವಾಗ ರೇಪಿಸ್ಟ್‌ಗಳಿಗೆ ಈ ರೀತಿ ಬೆಂಬಲಿಸಲಾಗುತ್ತಿದೆ. ಬೆಂಬಲಕ್ಕೆ ಉತ್ಸುಕರಾಗಿ ನಿಂತಿದ್ದಾರೆ. ಸಮಾಜದ ಪ್ರತಿಷ್ಟಿತ ವ್ಯಕ್ತಿಯಾಗಿರುವವರು ಈ ರೀತಿಯ ನಡೆಯಿಂದ ಯಾವ ಸಂದೇಶವನ್ನು ನೀಡಲು ಹೊರಟಿದ್ದಿರಿ?”

“ನಿರ್ಭಯ ಪ್ರಕರಣದಲ್ಲಿ ಶಿಕ್ಷೆಯಾದ ಮೇಲೂ ಅತ್ಯಾಚಾರ ಪ್ರಕರಣಗಳು ನಡೆದವು. ಈಗ ಅತ್ಯಾಚಾರಿಗಳು ಬಿಡುಗಡೆಯಾಗಿದ್ದಾರೆ. ಮುಂದೆ ಅತ್ಯಾಚಾರ ಪ್ರಕರಣಗಳು  ನಡೆಯುವುದಿಲ್ಲವೇ? ನ್ಯಾಯ ಸಿಗುವುದೇ? ಸಮಾಜದ ಮಾನಸಿಕ ಸ್ವಾಸ್ಥ್ಯ ಹದಗೆಟ್ಟಿದೆ. ಹಾಗಾಗಿ ನ್ಯಾಯ ಸಿಗದು”

“ಕಾನೂನು ಕೆಲಸ ಮಾಡುತ್ತಿಲ್ಲ ಎನ್ನುತ್ತಾರೆ. ಆದರೆ ಕಾನೂನು ಕೆಲಸ ಮಾಡಲು ಬಿಡುತ್ತಿಲ್ಲ. ಇತ್ತೀಚೆಗೆ ಬಿಹಾರದಲ್ಲಿ ಒದು ಹೆಣ್ಣುಮಗುವಿನ ಹತ್ಯೆಯಾಯಿತು. ನ್ಯಾಯಾಧೀಶರು ಬಹುಶಃ ಒಂದು ವಾರದಲ್ಲಿ ತೀರ್ಪು ನೀಡಲಿದರು. ಗಲ್ಲು ಶಿಕ್ಷೆ ನೀಡುತ್ತಾರೆಂದು ಆ ನ್ಯಾಯಾಧೀಶರನ್ನೇ ವರ್ಗ ಮಾಡಿಸುವ ಪ್ರಯತ್ನ ನಡೆಯಿತು ಎಂಬ ಸುದ್ದಿಯನ್ನು ಓದಿದೆ.”

“ಹನ್ನೊಂದು ಅತ್ಯಾಚಾರಿಗಳನ್ನು ಸ್ವಾಗತಿಸಿ ಮಹಿಳೆಯೊಬ್ಬರು ಸಹಿತಿನಿಸು ನೀಡಿದ್ದನ್ನೂ ನೋಡಿದೆ. ಅವರು ಹೆಣ್ಣುಕುಲಕ್ಕೆ ಕಳಂಕ. ಒಂದು ವೇಳೆ ಅತ್ಯಾಚಾರ ಮಾಡಿದ ವ್ಯಕ್ತಿ ಮನೆಗೆ ಬಂದರೆ ಅವರ ಅಮ್ಮನಾಗಲಿ, ಸಹೋದರಿಯಾಗಲಿ ಆತನನ್ನು ಸ್ವಾಗತಿಸಿದರೆ ಅಂಥವರಿಗೆ ನನ್ನ ಧಿಕ್ಕಾರವಿದೆ.”

ಇದನ್ನೂ ಓದಿರಿ: ಅವರು ಬ್ರಾಹ್ಮಣರು..: ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಬಿಜೆಪಿ ಶಾಸಕ

ಮೋದಿ ಭಾಷಣದ ಬಳಿಕ ಬಿಡುಗಡೆ

ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಹಿಳಾ ಸಬಲೀಕರಣದ ಕುರಿತು ಮಾತನಾಡಿದ ಕೆಲವೇ ಗಂಟೆಗಳ ನಂತರ, ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳನ್ನು ಗುಜರಾತ್‌ ಸರ್ಕಾರ ಬಿಡುಗಡೆ ಮಾಡಿತ್ತು.

2002ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಅವರ 3 ವರ್ಷದ ಮಗಳು ಸೇರಿದಂತೆ ಅವರ ಕುಟುಂಬದ ಏಳು ಸದಸ್ಯರನ್ನು ಹತ್ಯೆ ಮಾಡಲಾಗಿತ್ತು. ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬಿಡುಗಡೆಯಾಗಿರುವ ಹನ್ನೊಂದು ವ್ಯಕ್ತಿಗಳು ಶಿಕ್ಷೆಗೊಳಗಾಗಿದ್ದರು. ಇವರಿಗೆ ಸರ್ಕಾರ ಕ್ಷಮಾದಾನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕನಿಷ್ಟ ನೀವಾದರು ಜಾತಿ ಮತ ಭೇದವಿಲ್ಲದೆ ಅ ದರಿದ್ರ ಮಾನಾಮರ್ಯಾದೆ ಇಲ್ಲದ ಪಶುಗಳು ಆಳುತ್ತಿರುವ ಬಿಜೆಪಿ ಸರ್ಕಾರಗಳಿಗೆ ಕ್ಯಾಕರಿಸಿ ಉಗಿದಿದ್ದಿರಾ, ಈ ಘಟನೆಗಳನ್ನು ಸೋಕಾಲ್ಡ್ ಕುಲೀನ ? ಜಾತಿ ಸಮುದಾಯಗಳ ಹೆಂಗಸರ ಬಾಯಿಯಿಂದ ಇದು ಹೆಣ್ಣು ಕುಲಕ್ಕೆ ಮುಖ್ಯ ವಾಗಿ ನಮ್ಮ ಮಹಾನ್ ಸಮಾಜಕ್ಕೆ ಅಮಾನುಷ ಎಂದು ಹೇಳಲು ಸದ್ದೆ ಆಗಲಿಲ್ಲ.

  2. ಅತ್ಯಾಚಾರದ ಅಪರಾಧಿಗಳನ್ನು ಸ್ವಾಗತಿಸುವುದು ಎಂದರೆ, ಅತ್ಯಾಚಾರವನ್ನು ಬೆಂಬಲಿಸಿದಂತೆ. ಆದ್ದರಿಂದ ಯಾರು ಈ ಅತ್ಯಾಚಾರಿಗಳನ್ನು ಸ್ವಾಗತಿಸಿದ್ದಾರೋ, ಮತ್ತು ಅವರನ್ನು ಸನ್ಮಾನಿಸಿದ್ದಾರೋ, ಅವರಿಗೂ ಸಹ ಕಾನೂನಿನ ಪ್ರಕಾರ ಶಿಕ್ಷೆ ಆಗಬೇಕು. ಇವರನ್ನು ಶಿಕ್ಷಿಸಲು ಈಗ ಇರುವ ಕಾನೂನಿನಲ್ಲಿ ಅವಕಾಶ ಇಲ್ಲದಿದ್ದರೆ, ಹೊಸದಾಗಿ ಕಾನೂನನ್ನು ರೂಪಿಸಬೇಕು, ಇಂತಹ ಕಾನೂನಿಗಾಗಿ ಪ್ರಜ್ಞಾವಂತರು ದನಿ ಎತ್ತಬೇಕು.

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...