Homeಕರ್ನಾಟಕಅಂಬೇಡ್ಕರ್‌ವಾದಿ ದೃಷ್ಟಿಯಲ್ಲಿ ಸಾವರ್ಕರ್‌ ನೋಡುತ್ತಿದ್ದೇನೆ: ಎನ್‌.ಮಹೇಶ್‌

ಅಂಬೇಡ್ಕರ್‌ವಾದಿ ದೃಷ್ಟಿಯಲ್ಲಿ ಸಾವರ್ಕರ್‌ ನೋಡುತ್ತಿದ್ದೇನೆ: ಎನ್‌.ಮಹೇಶ್‌

- Advertisement -
- Advertisement -

ಅಂಬೇಡ್ಕರ್ ವಾದಿ ದೃಷ್ಟಿಕೋನದಲ್ಲಿ ವಿ.ಡಿ.ಸಾವರ್ಕರ್ ಅವರನ್ನು ನೋಡಲು ಶುರುಮಾಡಿದ್ದೇನೆ ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿರುವುದಾಗಿ ‘ಆಂದೋಲನ’ ವರದಿ ಮಾಡಿದೆ.

ಬಹುಜನ ಚಳವಳಿಯಿಂದ ಬಂದು, ನಂತರದಲ್ಲಿ ಬಿಜೆಪಿ ಸೇರಿದ ಎನ್‌.ಮಹೇಶ್ ಅವರ ನಿಲುವುಗಳಿಗೆ ದಲಿತ ಸಮುದಾಯದಿಂದ ತೀವ್ರ ಆಕ್ಷೇಪಗಳು ವ್ಯಕ್ತವಾಗುತ್ತಿವೆ. ಇತ್ತೀಚೆಗೆ ಅವರು ‘ವಿಜಯ ಕರ್ನಾಟಕ’ ಪತ್ರಿಕೆಯಲ್ಲಿ ಸಾವರ್ಕರ್‌ ಕುರಿತು ಬರೆದ ಲೇಖನಕ್ಕೂ ತೀವ್ರ ವಿರೋಧ ವ್ಯಕ್ತವಾಗಿದ್ದವು.

ಚಾಮರಾಜನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಸಾವರ್ಕರ್ ಪ್ರತಿಷ್ಠಾನದ ವತಿಯಿಂದ ನಡೆದ ಸಾವರ್ಕರ್ ರಥಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಸಾವರ್ಕರ್ ರಥಯಾತ್ರೆಯ ಮೂಲ ಉದ್ದೇಶವೆಂದರೆ ಅವರ ಜೀವನ, ಸಾಧನೆ ಮತ್ತು ಹೋರಾಟವನ್ನು ಜನಮಾನಸಕ್ಕೆ ತಿಳಿಸುವುದೇ ಆಗಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಂದುವರಿದು, “ಈ ದೇಶದಲ್ಲಿ ಸಮಾನತೆಗಾಗಿ ಸಾಕಷ್ಟು ಜನ ಹೋರಾಟ ಮಾಡಿದ್ದಾರೆ. ಆ ನಿಟ್ಟಿನಲ್ಲಿ ಸಾಗಿದ ಸಾವರ್ಕರ್ ಅವರ ನೈಜ ಜೀವನವನ್ನು ಪರಿಚಯಿಸುವ ಕೆಲಸವನ್ನು ಮಾಡುತ್ತಿದ್ದೇವೆ. ನನ್ನ ನಿಲುವನ್ನು ಸ್ಪಷ್ಟಪಡಿಸುತ್ತೇನೆ. ನಾನು ಅಂಬೇಡ್ಕರ್ ವಾದಿಯಾಗಿದ್ದು ಆ ದೃಷ್ಟಿಕೋನದಲ್ಲಿ ಸಾವರ್ಕರ್ ನೋಡಲು ಶುರುಮಾಡಿದ್ದೇನೆ” ಎಂದು ಹೇಳಿಕೆ ನೀಡಿದ್ದಾರೆ.

“82 ವರ್ಷ ಬದುಕಿದ್ದ ಸಾವರ್ಕರ್ ಅವರು 50 ವರ್ಷಗಳ ಶಿಕ್ಷೆ ಅನುಭವಿಸುತ್ತಿದ್ದರು. ಬ್ರಿಟೀಷರಿಗೆ ಅತ್ಯಂತ ಅಪಾಯಕಾರಿ ವ್ಯಕ್ತಿಯಾಗಿದ್ದ ಕಾರಣಕ್ಕೆ ಅವರಿಗೆ ಅಷ್ಟೊಂದು ಶಿಕ್ಷೆ ವಿಧಿಸಲಾಯಿತು” ಎಂದು ಹೇಳಿಕೆ ನೀಡಿದ್ದಾರೆ.

ಅಂಬೇಡ್ಕರ್ ಅವರ ಹೋರಾಟದ ಘಟನೆಗಳು ಸಾವರ್ಕರ್ ಅವರಲ್ಲಿ ದೊಡ್ಡ ಪರಿವರ್ತನೆ ತಂದಿತು ಎಂಬುದು ನನ್ನ ಗ್ರಹಿಕೆಯಾಗಿದೆ. ವೇದೋಕ್ತ ನಿಷೇಧ, ಉದ್ಯೋಗ ನಿಷೇಧ, ಅಸ್ಪೃಶ್ಯತೆ, ಸಮುದ್ರ ಪರ್ಯಟನೆ ನಿಷೇಧ, ಶುದ್ಧಿ ನಿಷೇಧ, ಸಹಭೋಜನ ನಿಷೇಧ, ಅಂತರ್ಜಾತಿ ಮದುವೆ ನಿಷೇಧ ಎಂಬ 7 ಸಂಕೋಲೆಗಳ ವಿರುದ್ಧ ಸಾವರ್ಕರ್ ಹೋರಾಟ ನಡೆಸಿದರು ಎಂದು ಅವರು ತಿಳಿಸಿದ್ದಾರೆ.

ಈ ಏಳು ಸಂಕೋಲೆಗಳಿಂದ ಮುಕ್ತಿ ಹೊಂದದ ಹೊರತು ನಮಗೆ ಸ್ವಾತಂತ್ರ್ಯ ದಕ್ಕಿದರೂ ಪ್ರಯೋಜನವಿಲ್ಲ ಎಂದಿದ್ದರು. ಇದೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೋರಾಟದ ನಿಲುವು ಕೂಡ ಆಗಿತ್ತು. ಈ 7 ಸಂಕೋಲೆಗಳಿಂದ ನಾವು ಬಿಡುಗಡೆಯಾಗಬೇಕಿದೆ. ಹಿಂದೂ ಸಮಾಜವನ್ನು ಮತ್ತಷ್ಟು ಗಟ್ಟಿಗೊಳಿಸಬೇಕಿದೆ ಎಂದು ಹೇಳಿದ್ದಾರೆ.

ಇದೆಲ್ಲವನ್ನೂ ಓರ್ವ ಅಂಬೇಡ್ಕರ್ ವಾದಿಯಾಗಿಯೇ ಹೇಳುತ್ತಿದ್ದೇನೆ, ಪ್ರತಿಯೊಂದು ಹೋರಾಟದ ಮಾರ್ಗದಲ್ಲೂ ಧನಾತ್ಮಕ ಹಾಗೂ ಋಣಾತ್ಮಕ ಚಿಂತನೆಗಳು ಇದೆ. ನಾನು ಧನಾತ್ಮಕ ಚಿಂತನೆಗಳನ್ನೇ ಮಾತನಾಡಲು ಶುರು ಮಾಡಿದ್ದೇನೆ. ಈ ನಿಟ್ಟಿನಲ್ಲಿ ನೋಡಿದ್ದೆ ಆದರೆ ಮೊದ ಮೊದಲು ಕ್ರಾಂತಿಕಾರಿಯಾಗಿದ್ದ ಸಾವರ್ಕರ್ ಬರಬರುತ್ತಾ ಸಮಾಜ ಸುಧಾರಕರಾದರು ಎಂದು ಹೇಳಿದ್ದಾರೆ.

ಆಧಾರವಿಲ್ಲದೆ ಬರೆದರೆ ಎನ್‌.ಮಹೇಶ್‌?

ಶಾಸಕ ಎನ್‌. ಮಹೇಶ್‌ ಅವರು ವಿಜಯ ಕರ್ನಾಟಕ ಪತ್ರಿಕೆಗೆ ಬರೆದ ಅಂಕಣ ಬರಹದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌‌.ಅಂಬೇಡ್ಕರ್‌ ಅವರ ಹೇಳಿಕೆಯನ್ನು ತಿರುಚಿ ಬರೆದಿದ್ದಾರೆ ಎಂಬ ಆರೋಪಗಳು ಬಂದಿವೆ. ಈ ಆರೋಪಕ್ಕೆ ಉತ್ತರಿಸಿರುವ ಅವರು, “ಈ ಬಗ್ಗೆ ಬೇರೆ ಯಾರೊ ಬರೆದಿದ್ದನ್ನು ತೆಗೆದುಕೊಂಡಿದ್ದೇನೆ. ಅವರಲ್ಲಿ ಉಲ್ಲೇಖ ಕೇಳುತ್ತಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

ಈ ಬರಹದ ಮೊದಲ ಪ್ಯಾರಾದಲ್ಲಿ, “ಸಮಾಜ ಸುಧಾರಣೆಯ ದಿವ್ಯಚೈತನ್ಯದ ಸೊಡರು ಸ್ವಾತಂತ್ಯ್ರವೀರ ಸಾವರ್ಕರ್‌. ಹಿಂದೂ ಧರ್ಮದಲ್ಲಿರುವ ಅಸ್ಪೃಶ್ಯತೆಯ ಆಚರಣೆಯು ಒಂದು ಕಳಂಕವಾಗಿದ್ದ, ಇಂಥ ಅಮಾನವೀಯ ಆಚರಣೆಯಿಂದ ನನ್ನಂಥವರಿಗೆ ಆಗುವ ಅವಮಾನ ಅಷ್ಟಿಷ್ಟಲ್ಲ. ಆದರೆ, ಸಾವರ್ಕರ್‌ ಅವರು ಇದರ ನಿವಾರಣೆಗೆ ಕೈಗೊಂಡಿರುವ ಕ್ರಮಗಳು ಕ್ರಾಂತಿಕಾರಿಯಾಗಿವೆ. ಇಂಥ ಐದೋ ಹತ್ತೋ ಮಂದಿ ಇದ್ದರೆ ಅಸ್ಪೃಶ್ಯತೆಯು ಮುಂದಿನ ಕೆಲವೇ ವರ್ಷಗಳಲ್ಲಿ ಇತಿಹಾಸದ ಸಂಗತಿಯಾಗುತ್ತದೆ ಎನ್ನುವ ವಿಶ್ವಾಸ ನನಗಿದೆ” ಎಂದು ಅಂಬೇಡ್ಕರ್‌ ಅವರ ಹೇಳಿದ್ದಾರೆ ಎಂದು ಎನ್. ಮಹೇಶ್ ಅವರು ಬರೆದಿದ್ದಾರೆ.

ಆದರೆ ಈ ಬಗ್ಗೆ ಅನೇಕ ಅಂಬೇಡ್ಕರ್‌‌ವಾದಿಗಳು ಆಕ್ಷೇಪವೆತ್ತಿದ್ದು, ಅಂಬೇಡ್ಕರ್‌ ಅವರು ಈ ರೀತಿ ಅಥವಾ ಇದೇ ರೀತಿ ಅರ್ಥ ಬರುವ ಮಾತು ಹಾಗೂ ಬರಹವನ್ನಾಗಲಿ ಹೇಳಿಯೆ ಇಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎನ್ ಮಹೇಶ ಅವರು ಅವಕಾಶ ವಾದಿ ರಾಜಕೀಯ ಮಾಡುತ್ತಿದ್ದಾರೆ ಅವರು ಸಿದ್ಧಾಂತಗಳು ಮರೆತಿರುವರು ಅವರಿಗೆ ಬೇಕು ರಾಜಕೀಯ ಮುಂದೆ ಅವರಿಗೆ ರಾಜಕೀಯ ಭವಿಷ್ಯ ಇಲ್ಲ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...