Homeಕರ್ನಾಟಕಅಂಬೇಡ್ಕರ್‌ವಾದಿ ದೃಷ್ಟಿಯಲ್ಲಿ ಸಾವರ್ಕರ್‌ ನೋಡುತ್ತಿದ್ದೇನೆ: ಎನ್‌.ಮಹೇಶ್‌

ಅಂಬೇಡ್ಕರ್‌ವಾದಿ ದೃಷ್ಟಿಯಲ್ಲಿ ಸಾವರ್ಕರ್‌ ನೋಡುತ್ತಿದ್ದೇನೆ: ಎನ್‌.ಮಹೇಶ್‌

- Advertisement -
- Advertisement -

ಅಂಬೇಡ್ಕರ್ ವಾದಿ ದೃಷ್ಟಿಕೋನದಲ್ಲಿ ವಿ.ಡಿ.ಸಾವರ್ಕರ್ ಅವರನ್ನು ನೋಡಲು ಶುರುಮಾಡಿದ್ದೇನೆ ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿರುವುದಾಗಿ ‘ಆಂದೋಲನ’ ವರದಿ ಮಾಡಿದೆ.

ಬಹುಜನ ಚಳವಳಿಯಿಂದ ಬಂದು, ನಂತರದಲ್ಲಿ ಬಿಜೆಪಿ ಸೇರಿದ ಎನ್‌.ಮಹೇಶ್ ಅವರ ನಿಲುವುಗಳಿಗೆ ದಲಿತ ಸಮುದಾಯದಿಂದ ತೀವ್ರ ಆಕ್ಷೇಪಗಳು ವ್ಯಕ್ತವಾಗುತ್ತಿವೆ. ಇತ್ತೀಚೆಗೆ ಅವರು ‘ವಿಜಯ ಕರ್ನಾಟಕ’ ಪತ್ರಿಕೆಯಲ್ಲಿ ಸಾವರ್ಕರ್‌ ಕುರಿತು ಬರೆದ ಲೇಖನಕ್ಕೂ ತೀವ್ರ ವಿರೋಧ ವ್ಯಕ್ತವಾಗಿದ್ದವು.

ಚಾಮರಾಜನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಸಾವರ್ಕರ್ ಪ್ರತಿಷ್ಠಾನದ ವತಿಯಿಂದ ನಡೆದ ಸಾವರ್ಕರ್ ರಥಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಸಾವರ್ಕರ್ ರಥಯಾತ್ರೆಯ ಮೂಲ ಉದ್ದೇಶವೆಂದರೆ ಅವರ ಜೀವನ, ಸಾಧನೆ ಮತ್ತು ಹೋರಾಟವನ್ನು ಜನಮಾನಸಕ್ಕೆ ತಿಳಿಸುವುದೇ ಆಗಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಂದುವರಿದು, “ಈ ದೇಶದಲ್ಲಿ ಸಮಾನತೆಗಾಗಿ ಸಾಕಷ್ಟು ಜನ ಹೋರಾಟ ಮಾಡಿದ್ದಾರೆ. ಆ ನಿಟ್ಟಿನಲ್ಲಿ ಸಾಗಿದ ಸಾವರ್ಕರ್ ಅವರ ನೈಜ ಜೀವನವನ್ನು ಪರಿಚಯಿಸುವ ಕೆಲಸವನ್ನು ಮಾಡುತ್ತಿದ್ದೇವೆ. ನನ್ನ ನಿಲುವನ್ನು ಸ್ಪಷ್ಟಪಡಿಸುತ್ತೇನೆ. ನಾನು ಅಂಬೇಡ್ಕರ್ ವಾದಿಯಾಗಿದ್ದು ಆ ದೃಷ್ಟಿಕೋನದಲ್ಲಿ ಸಾವರ್ಕರ್ ನೋಡಲು ಶುರುಮಾಡಿದ್ದೇನೆ” ಎಂದು ಹೇಳಿಕೆ ನೀಡಿದ್ದಾರೆ.

“82 ವರ್ಷ ಬದುಕಿದ್ದ ಸಾವರ್ಕರ್ ಅವರು 50 ವರ್ಷಗಳ ಶಿಕ್ಷೆ ಅನುಭವಿಸುತ್ತಿದ್ದರು. ಬ್ರಿಟೀಷರಿಗೆ ಅತ್ಯಂತ ಅಪಾಯಕಾರಿ ವ್ಯಕ್ತಿಯಾಗಿದ್ದ ಕಾರಣಕ್ಕೆ ಅವರಿಗೆ ಅಷ್ಟೊಂದು ಶಿಕ್ಷೆ ವಿಧಿಸಲಾಯಿತು” ಎಂದು ಹೇಳಿಕೆ ನೀಡಿದ್ದಾರೆ.

ಅಂಬೇಡ್ಕರ್ ಅವರ ಹೋರಾಟದ ಘಟನೆಗಳು ಸಾವರ್ಕರ್ ಅವರಲ್ಲಿ ದೊಡ್ಡ ಪರಿವರ್ತನೆ ತಂದಿತು ಎಂಬುದು ನನ್ನ ಗ್ರಹಿಕೆಯಾಗಿದೆ. ವೇದೋಕ್ತ ನಿಷೇಧ, ಉದ್ಯೋಗ ನಿಷೇಧ, ಅಸ್ಪೃಶ್ಯತೆ, ಸಮುದ್ರ ಪರ್ಯಟನೆ ನಿಷೇಧ, ಶುದ್ಧಿ ನಿಷೇಧ, ಸಹಭೋಜನ ನಿಷೇಧ, ಅಂತರ್ಜಾತಿ ಮದುವೆ ನಿಷೇಧ ಎಂಬ 7 ಸಂಕೋಲೆಗಳ ವಿರುದ್ಧ ಸಾವರ್ಕರ್ ಹೋರಾಟ ನಡೆಸಿದರು ಎಂದು ಅವರು ತಿಳಿಸಿದ್ದಾರೆ.

ಈ ಏಳು ಸಂಕೋಲೆಗಳಿಂದ ಮುಕ್ತಿ ಹೊಂದದ ಹೊರತು ನಮಗೆ ಸ್ವಾತಂತ್ರ್ಯ ದಕ್ಕಿದರೂ ಪ್ರಯೋಜನವಿಲ್ಲ ಎಂದಿದ್ದರು. ಇದೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೋರಾಟದ ನಿಲುವು ಕೂಡ ಆಗಿತ್ತು. ಈ 7 ಸಂಕೋಲೆಗಳಿಂದ ನಾವು ಬಿಡುಗಡೆಯಾಗಬೇಕಿದೆ. ಹಿಂದೂ ಸಮಾಜವನ್ನು ಮತ್ತಷ್ಟು ಗಟ್ಟಿಗೊಳಿಸಬೇಕಿದೆ ಎಂದು ಹೇಳಿದ್ದಾರೆ.

ಇದೆಲ್ಲವನ್ನೂ ಓರ್ವ ಅಂಬೇಡ್ಕರ್ ವಾದಿಯಾಗಿಯೇ ಹೇಳುತ್ತಿದ್ದೇನೆ, ಪ್ರತಿಯೊಂದು ಹೋರಾಟದ ಮಾರ್ಗದಲ್ಲೂ ಧನಾತ್ಮಕ ಹಾಗೂ ಋಣಾತ್ಮಕ ಚಿಂತನೆಗಳು ಇದೆ. ನಾನು ಧನಾತ್ಮಕ ಚಿಂತನೆಗಳನ್ನೇ ಮಾತನಾಡಲು ಶುರು ಮಾಡಿದ್ದೇನೆ. ಈ ನಿಟ್ಟಿನಲ್ಲಿ ನೋಡಿದ್ದೆ ಆದರೆ ಮೊದ ಮೊದಲು ಕ್ರಾಂತಿಕಾರಿಯಾಗಿದ್ದ ಸಾವರ್ಕರ್ ಬರಬರುತ್ತಾ ಸಮಾಜ ಸುಧಾರಕರಾದರು ಎಂದು ಹೇಳಿದ್ದಾರೆ.

ಆಧಾರವಿಲ್ಲದೆ ಬರೆದರೆ ಎನ್‌.ಮಹೇಶ್‌?

ಶಾಸಕ ಎನ್‌. ಮಹೇಶ್‌ ಅವರು ವಿಜಯ ಕರ್ನಾಟಕ ಪತ್ರಿಕೆಗೆ ಬರೆದ ಅಂಕಣ ಬರಹದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌‌.ಅಂಬೇಡ್ಕರ್‌ ಅವರ ಹೇಳಿಕೆಯನ್ನು ತಿರುಚಿ ಬರೆದಿದ್ದಾರೆ ಎಂಬ ಆರೋಪಗಳು ಬಂದಿವೆ. ಈ ಆರೋಪಕ್ಕೆ ಉತ್ತರಿಸಿರುವ ಅವರು, “ಈ ಬಗ್ಗೆ ಬೇರೆ ಯಾರೊ ಬರೆದಿದ್ದನ್ನು ತೆಗೆದುಕೊಂಡಿದ್ದೇನೆ. ಅವರಲ್ಲಿ ಉಲ್ಲೇಖ ಕೇಳುತ್ತಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

ಈ ಬರಹದ ಮೊದಲ ಪ್ಯಾರಾದಲ್ಲಿ, “ಸಮಾಜ ಸುಧಾರಣೆಯ ದಿವ್ಯಚೈತನ್ಯದ ಸೊಡರು ಸ್ವಾತಂತ್ಯ್ರವೀರ ಸಾವರ್ಕರ್‌. ಹಿಂದೂ ಧರ್ಮದಲ್ಲಿರುವ ಅಸ್ಪೃಶ್ಯತೆಯ ಆಚರಣೆಯು ಒಂದು ಕಳಂಕವಾಗಿದ್ದ, ಇಂಥ ಅಮಾನವೀಯ ಆಚರಣೆಯಿಂದ ನನ್ನಂಥವರಿಗೆ ಆಗುವ ಅವಮಾನ ಅಷ್ಟಿಷ್ಟಲ್ಲ. ಆದರೆ, ಸಾವರ್ಕರ್‌ ಅವರು ಇದರ ನಿವಾರಣೆಗೆ ಕೈಗೊಂಡಿರುವ ಕ್ರಮಗಳು ಕ್ರಾಂತಿಕಾರಿಯಾಗಿವೆ. ಇಂಥ ಐದೋ ಹತ್ತೋ ಮಂದಿ ಇದ್ದರೆ ಅಸ್ಪೃಶ್ಯತೆಯು ಮುಂದಿನ ಕೆಲವೇ ವರ್ಷಗಳಲ್ಲಿ ಇತಿಹಾಸದ ಸಂಗತಿಯಾಗುತ್ತದೆ ಎನ್ನುವ ವಿಶ್ವಾಸ ನನಗಿದೆ” ಎಂದು ಅಂಬೇಡ್ಕರ್‌ ಅವರ ಹೇಳಿದ್ದಾರೆ ಎಂದು ಎನ್. ಮಹೇಶ್ ಅವರು ಬರೆದಿದ್ದಾರೆ.

ಆದರೆ ಈ ಬಗ್ಗೆ ಅನೇಕ ಅಂಬೇಡ್ಕರ್‌‌ವಾದಿಗಳು ಆಕ್ಷೇಪವೆತ್ತಿದ್ದು, ಅಂಬೇಡ್ಕರ್‌ ಅವರು ಈ ರೀತಿ ಅಥವಾ ಇದೇ ರೀತಿ ಅರ್ಥ ಬರುವ ಮಾತು ಹಾಗೂ ಬರಹವನ್ನಾಗಲಿ ಹೇಳಿಯೆ ಇಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎನ್ ಮಹೇಶ ಅವರು ಅವಕಾಶ ವಾದಿ ರಾಜಕೀಯ ಮಾಡುತ್ತಿದ್ದಾರೆ ಅವರು ಸಿದ್ಧಾಂತಗಳು ಮರೆತಿರುವರು ಅವರಿಗೆ ಬೇಕು ರಾಜಕೀಯ ಮುಂದೆ ಅವರಿಗೆ ರಾಜಕೀಯ ಭವಿಷ್ಯ ಇಲ್ಲ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...