Homeಕರ್ನಾಟಕಅಂಬೇಡ್ಕರ್‌ವಾದಿ ದೃಷ್ಟಿಯಲ್ಲಿ ಸಾವರ್ಕರ್‌ ನೋಡುತ್ತಿದ್ದೇನೆ: ಎನ್‌.ಮಹೇಶ್‌

ಅಂಬೇಡ್ಕರ್‌ವಾದಿ ದೃಷ್ಟಿಯಲ್ಲಿ ಸಾವರ್ಕರ್‌ ನೋಡುತ್ತಿದ್ದೇನೆ: ಎನ್‌.ಮಹೇಶ್‌

- Advertisement -
- Advertisement -

ಅಂಬೇಡ್ಕರ್ ವಾದಿ ದೃಷ್ಟಿಕೋನದಲ್ಲಿ ವಿ.ಡಿ.ಸಾವರ್ಕರ್ ಅವರನ್ನು ನೋಡಲು ಶುರುಮಾಡಿದ್ದೇನೆ ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿರುವುದಾಗಿ ‘ಆಂದೋಲನ’ ವರದಿ ಮಾಡಿದೆ.

ಬಹುಜನ ಚಳವಳಿಯಿಂದ ಬಂದು, ನಂತರದಲ್ಲಿ ಬಿಜೆಪಿ ಸೇರಿದ ಎನ್‌.ಮಹೇಶ್ ಅವರ ನಿಲುವುಗಳಿಗೆ ದಲಿತ ಸಮುದಾಯದಿಂದ ತೀವ್ರ ಆಕ್ಷೇಪಗಳು ವ್ಯಕ್ತವಾಗುತ್ತಿವೆ. ಇತ್ತೀಚೆಗೆ ಅವರು ‘ವಿಜಯ ಕರ್ನಾಟಕ’ ಪತ್ರಿಕೆಯಲ್ಲಿ ಸಾವರ್ಕರ್‌ ಕುರಿತು ಬರೆದ ಲೇಖನಕ್ಕೂ ತೀವ್ರ ವಿರೋಧ ವ್ಯಕ್ತವಾಗಿದ್ದವು.

ಚಾಮರಾಜನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಸಾವರ್ಕರ್ ಪ್ರತಿಷ್ಠಾನದ ವತಿಯಿಂದ ನಡೆದ ಸಾವರ್ಕರ್ ರಥಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಸಾವರ್ಕರ್ ರಥಯಾತ್ರೆಯ ಮೂಲ ಉದ್ದೇಶವೆಂದರೆ ಅವರ ಜೀವನ, ಸಾಧನೆ ಮತ್ತು ಹೋರಾಟವನ್ನು ಜನಮಾನಸಕ್ಕೆ ತಿಳಿಸುವುದೇ ಆಗಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಂದುವರಿದು, “ಈ ದೇಶದಲ್ಲಿ ಸಮಾನತೆಗಾಗಿ ಸಾಕಷ್ಟು ಜನ ಹೋರಾಟ ಮಾಡಿದ್ದಾರೆ. ಆ ನಿಟ್ಟಿನಲ್ಲಿ ಸಾಗಿದ ಸಾವರ್ಕರ್ ಅವರ ನೈಜ ಜೀವನವನ್ನು ಪರಿಚಯಿಸುವ ಕೆಲಸವನ್ನು ಮಾಡುತ್ತಿದ್ದೇವೆ. ನನ್ನ ನಿಲುವನ್ನು ಸ್ಪಷ್ಟಪಡಿಸುತ್ತೇನೆ. ನಾನು ಅಂಬೇಡ್ಕರ್ ವಾದಿಯಾಗಿದ್ದು ಆ ದೃಷ್ಟಿಕೋನದಲ್ಲಿ ಸಾವರ್ಕರ್ ನೋಡಲು ಶುರುಮಾಡಿದ್ದೇನೆ” ಎಂದು ಹೇಳಿಕೆ ನೀಡಿದ್ದಾರೆ.

“82 ವರ್ಷ ಬದುಕಿದ್ದ ಸಾವರ್ಕರ್ ಅವರು 50 ವರ್ಷಗಳ ಶಿಕ್ಷೆ ಅನುಭವಿಸುತ್ತಿದ್ದರು. ಬ್ರಿಟೀಷರಿಗೆ ಅತ್ಯಂತ ಅಪಾಯಕಾರಿ ವ್ಯಕ್ತಿಯಾಗಿದ್ದ ಕಾರಣಕ್ಕೆ ಅವರಿಗೆ ಅಷ್ಟೊಂದು ಶಿಕ್ಷೆ ವಿಧಿಸಲಾಯಿತು” ಎಂದು ಹೇಳಿಕೆ ನೀಡಿದ್ದಾರೆ.

ಅಂಬೇಡ್ಕರ್ ಅವರ ಹೋರಾಟದ ಘಟನೆಗಳು ಸಾವರ್ಕರ್ ಅವರಲ್ಲಿ ದೊಡ್ಡ ಪರಿವರ್ತನೆ ತಂದಿತು ಎಂಬುದು ನನ್ನ ಗ್ರಹಿಕೆಯಾಗಿದೆ. ವೇದೋಕ್ತ ನಿಷೇಧ, ಉದ್ಯೋಗ ನಿಷೇಧ, ಅಸ್ಪೃಶ್ಯತೆ, ಸಮುದ್ರ ಪರ್ಯಟನೆ ನಿಷೇಧ, ಶುದ್ಧಿ ನಿಷೇಧ, ಸಹಭೋಜನ ನಿಷೇಧ, ಅಂತರ್ಜಾತಿ ಮದುವೆ ನಿಷೇಧ ಎಂಬ 7 ಸಂಕೋಲೆಗಳ ವಿರುದ್ಧ ಸಾವರ್ಕರ್ ಹೋರಾಟ ನಡೆಸಿದರು ಎಂದು ಅವರು ತಿಳಿಸಿದ್ದಾರೆ.

ಈ ಏಳು ಸಂಕೋಲೆಗಳಿಂದ ಮುಕ್ತಿ ಹೊಂದದ ಹೊರತು ನಮಗೆ ಸ್ವಾತಂತ್ರ್ಯ ದಕ್ಕಿದರೂ ಪ್ರಯೋಜನವಿಲ್ಲ ಎಂದಿದ್ದರು. ಇದೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೋರಾಟದ ನಿಲುವು ಕೂಡ ಆಗಿತ್ತು. ಈ 7 ಸಂಕೋಲೆಗಳಿಂದ ನಾವು ಬಿಡುಗಡೆಯಾಗಬೇಕಿದೆ. ಹಿಂದೂ ಸಮಾಜವನ್ನು ಮತ್ತಷ್ಟು ಗಟ್ಟಿಗೊಳಿಸಬೇಕಿದೆ ಎಂದು ಹೇಳಿದ್ದಾರೆ.

ಇದೆಲ್ಲವನ್ನೂ ಓರ್ವ ಅಂಬೇಡ್ಕರ್ ವಾದಿಯಾಗಿಯೇ ಹೇಳುತ್ತಿದ್ದೇನೆ, ಪ್ರತಿಯೊಂದು ಹೋರಾಟದ ಮಾರ್ಗದಲ್ಲೂ ಧನಾತ್ಮಕ ಹಾಗೂ ಋಣಾತ್ಮಕ ಚಿಂತನೆಗಳು ಇದೆ. ನಾನು ಧನಾತ್ಮಕ ಚಿಂತನೆಗಳನ್ನೇ ಮಾತನಾಡಲು ಶುರು ಮಾಡಿದ್ದೇನೆ. ಈ ನಿಟ್ಟಿನಲ್ಲಿ ನೋಡಿದ್ದೆ ಆದರೆ ಮೊದ ಮೊದಲು ಕ್ರಾಂತಿಕಾರಿಯಾಗಿದ್ದ ಸಾವರ್ಕರ್ ಬರಬರುತ್ತಾ ಸಮಾಜ ಸುಧಾರಕರಾದರು ಎಂದು ಹೇಳಿದ್ದಾರೆ.

ಆಧಾರವಿಲ್ಲದೆ ಬರೆದರೆ ಎನ್‌.ಮಹೇಶ್‌?

ಶಾಸಕ ಎನ್‌. ಮಹೇಶ್‌ ಅವರು ವಿಜಯ ಕರ್ನಾಟಕ ಪತ್ರಿಕೆಗೆ ಬರೆದ ಅಂಕಣ ಬರಹದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌‌.ಅಂಬೇಡ್ಕರ್‌ ಅವರ ಹೇಳಿಕೆಯನ್ನು ತಿರುಚಿ ಬರೆದಿದ್ದಾರೆ ಎಂಬ ಆರೋಪಗಳು ಬಂದಿವೆ. ಈ ಆರೋಪಕ್ಕೆ ಉತ್ತರಿಸಿರುವ ಅವರು, “ಈ ಬಗ್ಗೆ ಬೇರೆ ಯಾರೊ ಬರೆದಿದ್ದನ್ನು ತೆಗೆದುಕೊಂಡಿದ್ದೇನೆ. ಅವರಲ್ಲಿ ಉಲ್ಲೇಖ ಕೇಳುತ್ತಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

ಈ ಬರಹದ ಮೊದಲ ಪ್ಯಾರಾದಲ್ಲಿ, “ಸಮಾಜ ಸುಧಾರಣೆಯ ದಿವ್ಯಚೈತನ್ಯದ ಸೊಡರು ಸ್ವಾತಂತ್ಯ್ರವೀರ ಸಾವರ್ಕರ್‌. ಹಿಂದೂ ಧರ್ಮದಲ್ಲಿರುವ ಅಸ್ಪೃಶ್ಯತೆಯ ಆಚರಣೆಯು ಒಂದು ಕಳಂಕವಾಗಿದ್ದ, ಇಂಥ ಅಮಾನವೀಯ ಆಚರಣೆಯಿಂದ ನನ್ನಂಥವರಿಗೆ ಆಗುವ ಅವಮಾನ ಅಷ್ಟಿಷ್ಟಲ್ಲ. ಆದರೆ, ಸಾವರ್ಕರ್‌ ಅವರು ಇದರ ನಿವಾರಣೆಗೆ ಕೈಗೊಂಡಿರುವ ಕ್ರಮಗಳು ಕ್ರಾಂತಿಕಾರಿಯಾಗಿವೆ. ಇಂಥ ಐದೋ ಹತ್ತೋ ಮಂದಿ ಇದ್ದರೆ ಅಸ್ಪೃಶ್ಯತೆಯು ಮುಂದಿನ ಕೆಲವೇ ವರ್ಷಗಳಲ್ಲಿ ಇತಿಹಾಸದ ಸಂಗತಿಯಾಗುತ್ತದೆ ಎನ್ನುವ ವಿಶ್ವಾಸ ನನಗಿದೆ” ಎಂದು ಅಂಬೇಡ್ಕರ್‌ ಅವರ ಹೇಳಿದ್ದಾರೆ ಎಂದು ಎನ್. ಮಹೇಶ್ ಅವರು ಬರೆದಿದ್ದಾರೆ.

ಆದರೆ ಈ ಬಗ್ಗೆ ಅನೇಕ ಅಂಬೇಡ್ಕರ್‌‌ವಾದಿಗಳು ಆಕ್ಷೇಪವೆತ್ತಿದ್ದು, ಅಂಬೇಡ್ಕರ್‌ ಅವರು ಈ ರೀತಿ ಅಥವಾ ಇದೇ ರೀತಿ ಅರ್ಥ ಬರುವ ಮಾತು ಹಾಗೂ ಬರಹವನ್ನಾಗಲಿ ಹೇಳಿಯೆ ಇಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎನ್ ಮಹೇಶ ಅವರು ಅವಕಾಶ ವಾದಿ ರಾಜಕೀಯ ಮಾಡುತ್ತಿದ್ದಾರೆ ಅವರು ಸಿದ್ಧಾಂತಗಳು ಮರೆತಿರುವರು ಅವರಿಗೆ ಬೇಕು ರಾಜಕೀಯ ಮುಂದೆ ಅವರಿಗೆ ರಾಜಕೀಯ ಭವಿಷ್ಯ ಇಲ್ಲ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...