Homeಕರ್ನಾಟಕಅಂಬೇಡ್ಕರ್‌ವಾದಿ ದೃಷ್ಟಿಯಲ್ಲಿ ಸಾವರ್ಕರ್‌ ನೋಡುತ್ತಿದ್ದೇನೆ: ಎನ್‌.ಮಹೇಶ್‌

ಅಂಬೇಡ್ಕರ್‌ವಾದಿ ದೃಷ್ಟಿಯಲ್ಲಿ ಸಾವರ್ಕರ್‌ ನೋಡುತ್ತಿದ್ದೇನೆ: ಎನ್‌.ಮಹೇಶ್‌

- Advertisement -
- Advertisement -

ಅಂಬೇಡ್ಕರ್ ವಾದಿ ದೃಷ್ಟಿಕೋನದಲ್ಲಿ ವಿ.ಡಿ.ಸಾವರ್ಕರ್ ಅವರನ್ನು ನೋಡಲು ಶುರುಮಾಡಿದ್ದೇನೆ ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿರುವುದಾಗಿ ‘ಆಂದೋಲನ’ ವರದಿ ಮಾಡಿದೆ.

ಬಹುಜನ ಚಳವಳಿಯಿಂದ ಬಂದು, ನಂತರದಲ್ಲಿ ಬಿಜೆಪಿ ಸೇರಿದ ಎನ್‌.ಮಹೇಶ್ ಅವರ ನಿಲುವುಗಳಿಗೆ ದಲಿತ ಸಮುದಾಯದಿಂದ ತೀವ್ರ ಆಕ್ಷೇಪಗಳು ವ್ಯಕ್ತವಾಗುತ್ತಿವೆ. ಇತ್ತೀಚೆಗೆ ಅವರು ‘ವಿಜಯ ಕರ್ನಾಟಕ’ ಪತ್ರಿಕೆಯಲ್ಲಿ ಸಾವರ್ಕರ್‌ ಕುರಿತು ಬರೆದ ಲೇಖನಕ್ಕೂ ತೀವ್ರ ವಿರೋಧ ವ್ಯಕ್ತವಾಗಿದ್ದವು.

ಚಾಮರಾಜನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಸಾವರ್ಕರ್ ಪ್ರತಿಷ್ಠಾನದ ವತಿಯಿಂದ ನಡೆದ ಸಾವರ್ಕರ್ ರಥಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಸಾವರ್ಕರ್ ರಥಯಾತ್ರೆಯ ಮೂಲ ಉದ್ದೇಶವೆಂದರೆ ಅವರ ಜೀವನ, ಸಾಧನೆ ಮತ್ತು ಹೋರಾಟವನ್ನು ಜನಮಾನಸಕ್ಕೆ ತಿಳಿಸುವುದೇ ಆಗಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಂದುವರಿದು, “ಈ ದೇಶದಲ್ಲಿ ಸಮಾನತೆಗಾಗಿ ಸಾಕಷ್ಟು ಜನ ಹೋರಾಟ ಮಾಡಿದ್ದಾರೆ. ಆ ನಿಟ್ಟಿನಲ್ಲಿ ಸಾಗಿದ ಸಾವರ್ಕರ್ ಅವರ ನೈಜ ಜೀವನವನ್ನು ಪರಿಚಯಿಸುವ ಕೆಲಸವನ್ನು ಮಾಡುತ್ತಿದ್ದೇವೆ. ನನ್ನ ನಿಲುವನ್ನು ಸ್ಪಷ್ಟಪಡಿಸುತ್ತೇನೆ. ನಾನು ಅಂಬೇಡ್ಕರ್ ವಾದಿಯಾಗಿದ್ದು ಆ ದೃಷ್ಟಿಕೋನದಲ್ಲಿ ಸಾವರ್ಕರ್ ನೋಡಲು ಶುರುಮಾಡಿದ್ದೇನೆ” ಎಂದು ಹೇಳಿಕೆ ನೀಡಿದ್ದಾರೆ.

“82 ವರ್ಷ ಬದುಕಿದ್ದ ಸಾವರ್ಕರ್ ಅವರು 50 ವರ್ಷಗಳ ಶಿಕ್ಷೆ ಅನುಭವಿಸುತ್ತಿದ್ದರು. ಬ್ರಿಟೀಷರಿಗೆ ಅತ್ಯಂತ ಅಪಾಯಕಾರಿ ವ್ಯಕ್ತಿಯಾಗಿದ್ದ ಕಾರಣಕ್ಕೆ ಅವರಿಗೆ ಅಷ್ಟೊಂದು ಶಿಕ್ಷೆ ವಿಧಿಸಲಾಯಿತು” ಎಂದು ಹೇಳಿಕೆ ನೀಡಿದ್ದಾರೆ.

ಅಂಬೇಡ್ಕರ್ ಅವರ ಹೋರಾಟದ ಘಟನೆಗಳು ಸಾವರ್ಕರ್ ಅವರಲ್ಲಿ ದೊಡ್ಡ ಪರಿವರ್ತನೆ ತಂದಿತು ಎಂಬುದು ನನ್ನ ಗ್ರಹಿಕೆಯಾಗಿದೆ. ವೇದೋಕ್ತ ನಿಷೇಧ, ಉದ್ಯೋಗ ನಿಷೇಧ, ಅಸ್ಪೃಶ್ಯತೆ, ಸಮುದ್ರ ಪರ್ಯಟನೆ ನಿಷೇಧ, ಶುದ್ಧಿ ನಿಷೇಧ, ಸಹಭೋಜನ ನಿಷೇಧ, ಅಂತರ್ಜಾತಿ ಮದುವೆ ನಿಷೇಧ ಎಂಬ 7 ಸಂಕೋಲೆಗಳ ವಿರುದ್ಧ ಸಾವರ್ಕರ್ ಹೋರಾಟ ನಡೆಸಿದರು ಎಂದು ಅವರು ತಿಳಿಸಿದ್ದಾರೆ.

ಈ ಏಳು ಸಂಕೋಲೆಗಳಿಂದ ಮುಕ್ತಿ ಹೊಂದದ ಹೊರತು ನಮಗೆ ಸ್ವಾತಂತ್ರ್ಯ ದಕ್ಕಿದರೂ ಪ್ರಯೋಜನವಿಲ್ಲ ಎಂದಿದ್ದರು. ಇದೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೋರಾಟದ ನಿಲುವು ಕೂಡ ಆಗಿತ್ತು. ಈ 7 ಸಂಕೋಲೆಗಳಿಂದ ನಾವು ಬಿಡುಗಡೆಯಾಗಬೇಕಿದೆ. ಹಿಂದೂ ಸಮಾಜವನ್ನು ಮತ್ತಷ್ಟು ಗಟ್ಟಿಗೊಳಿಸಬೇಕಿದೆ ಎಂದು ಹೇಳಿದ್ದಾರೆ.

ಇದೆಲ್ಲವನ್ನೂ ಓರ್ವ ಅಂಬೇಡ್ಕರ್ ವಾದಿಯಾಗಿಯೇ ಹೇಳುತ್ತಿದ್ದೇನೆ, ಪ್ರತಿಯೊಂದು ಹೋರಾಟದ ಮಾರ್ಗದಲ್ಲೂ ಧನಾತ್ಮಕ ಹಾಗೂ ಋಣಾತ್ಮಕ ಚಿಂತನೆಗಳು ಇದೆ. ನಾನು ಧನಾತ್ಮಕ ಚಿಂತನೆಗಳನ್ನೇ ಮಾತನಾಡಲು ಶುರು ಮಾಡಿದ್ದೇನೆ. ಈ ನಿಟ್ಟಿನಲ್ಲಿ ನೋಡಿದ್ದೆ ಆದರೆ ಮೊದ ಮೊದಲು ಕ್ರಾಂತಿಕಾರಿಯಾಗಿದ್ದ ಸಾವರ್ಕರ್ ಬರಬರುತ್ತಾ ಸಮಾಜ ಸುಧಾರಕರಾದರು ಎಂದು ಹೇಳಿದ್ದಾರೆ.

ಆಧಾರವಿಲ್ಲದೆ ಬರೆದರೆ ಎನ್‌.ಮಹೇಶ್‌?

ಶಾಸಕ ಎನ್‌. ಮಹೇಶ್‌ ಅವರು ವಿಜಯ ಕರ್ನಾಟಕ ಪತ್ರಿಕೆಗೆ ಬರೆದ ಅಂಕಣ ಬರಹದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌‌.ಅಂಬೇಡ್ಕರ್‌ ಅವರ ಹೇಳಿಕೆಯನ್ನು ತಿರುಚಿ ಬರೆದಿದ್ದಾರೆ ಎಂಬ ಆರೋಪಗಳು ಬಂದಿವೆ. ಈ ಆರೋಪಕ್ಕೆ ಉತ್ತರಿಸಿರುವ ಅವರು, “ಈ ಬಗ್ಗೆ ಬೇರೆ ಯಾರೊ ಬರೆದಿದ್ದನ್ನು ತೆಗೆದುಕೊಂಡಿದ್ದೇನೆ. ಅವರಲ್ಲಿ ಉಲ್ಲೇಖ ಕೇಳುತ್ತಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

ಈ ಬರಹದ ಮೊದಲ ಪ್ಯಾರಾದಲ್ಲಿ, “ಸಮಾಜ ಸುಧಾರಣೆಯ ದಿವ್ಯಚೈತನ್ಯದ ಸೊಡರು ಸ್ವಾತಂತ್ಯ್ರವೀರ ಸಾವರ್ಕರ್‌. ಹಿಂದೂ ಧರ್ಮದಲ್ಲಿರುವ ಅಸ್ಪೃಶ್ಯತೆಯ ಆಚರಣೆಯು ಒಂದು ಕಳಂಕವಾಗಿದ್ದ, ಇಂಥ ಅಮಾನವೀಯ ಆಚರಣೆಯಿಂದ ನನ್ನಂಥವರಿಗೆ ಆಗುವ ಅವಮಾನ ಅಷ್ಟಿಷ್ಟಲ್ಲ. ಆದರೆ, ಸಾವರ್ಕರ್‌ ಅವರು ಇದರ ನಿವಾರಣೆಗೆ ಕೈಗೊಂಡಿರುವ ಕ್ರಮಗಳು ಕ್ರಾಂತಿಕಾರಿಯಾಗಿವೆ. ಇಂಥ ಐದೋ ಹತ್ತೋ ಮಂದಿ ಇದ್ದರೆ ಅಸ್ಪೃಶ್ಯತೆಯು ಮುಂದಿನ ಕೆಲವೇ ವರ್ಷಗಳಲ್ಲಿ ಇತಿಹಾಸದ ಸಂಗತಿಯಾಗುತ್ತದೆ ಎನ್ನುವ ವಿಶ್ವಾಸ ನನಗಿದೆ” ಎಂದು ಅಂಬೇಡ್ಕರ್‌ ಅವರ ಹೇಳಿದ್ದಾರೆ ಎಂದು ಎನ್. ಮಹೇಶ್ ಅವರು ಬರೆದಿದ್ದಾರೆ.

ಆದರೆ ಈ ಬಗ್ಗೆ ಅನೇಕ ಅಂಬೇಡ್ಕರ್‌‌ವಾದಿಗಳು ಆಕ್ಷೇಪವೆತ್ತಿದ್ದು, ಅಂಬೇಡ್ಕರ್‌ ಅವರು ಈ ರೀತಿ ಅಥವಾ ಇದೇ ರೀತಿ ಅರ್ಥ ಬರುವ ಮಾತು ಹಾಗೂ ಬರಹವನ್ನಾಗಲಿ ಹೇಳಿಯೆ ಇಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎನ್ ಮಹೇಶ ಅವರು ಅವಕಾಶ ವಾದಿ ರಾಜಕೀಯ ಮಾಡುತ್ತಿದ್ದಾರೆ ಅವರು ಸಿದ್ಧಾಂತಗಳು ಮರೆತಿರುವರು ಅವರಿಗೆ ಬೇಕು ರಾಜಕೀಯ ಮುಂದೆ ಅವರಿಗೆ ರಾಜಕೀಯ ಭವಿಷ್ಯ ಇಲ್ಲ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....