Homeಮುಖಪುಟಮಹಾರಾಷ್ಟ್ರ ಸಚಿವರ ವಿರುದ್ಧ ಸಿಬಿಐ ತನಿಖೆ ಕೋರಿ ಅರ್ಜಿ: ಅಗ್ಗದ ಪ್ರಚಾರಕ್ಕಾಗಿ ಅರ್ಜಿ ಎಂದ ಬಾಂಬೆ...

ಮಹಾರಾಷ್ಟ್ರ ಸಚಿವರ ವಿರುದ್ಧ ಸಿಬಿಐ ತನಿಖೆ ಕೋರಿ ಅರ್ಜಿ: ಅಗ್ಗದ ಪ್ರಚಾರಕ್ಕಾಗಿ ಅರ್ಜಿ ಎಂದ ಬಾಂಬೆ ಹೈಕೋರ್ಟ್

- Advertisement -
- Advertisement -

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ಮತ್ತು ಮುಂಬೈ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್ ಬೀರ್ ಸಿಂಗ್ ವಿರುದ್ಧ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಅಗ್ಗದ ಪ್ರಚಾರಕ್ಕಾಗಿ ಅರ್ಜಿ ಸಲ್ಲಿಕೆ ಎಂದು ಬಾಂಬೆ ಹೈಕೋರ್ಟ್ ಹೇಳಿದ್ದು, ವಕೀಲರನ್ನು ತರಾಟೆಗೆ ತೆಗೆದುಕೊಂಡಿದೆ.

ಅನಿಲ್ ದೇಶ್‌ಮುಖ್ ವಿರುದ್ಧದ ಭ್ರಷ್ಟಾಚಾರದ ಆರೋಪದ ಬಗ್ಗೆ ತನಿಖೆ ನಡೆಸಲು ಕೇಂದ್ರೀಯ ತನಿಖಾ ದಳ (CBI) ಅಥವಾ ಇನ್ನಾವುದೇ ಸ್ವತಂತ್ರ ಸಂಸ್ಥೆಗೆ ನಿರ್ದೇಶನ ನೀಡುವಂತೆ ಹೈಕೋರ್ಟ್‌ಗೆ ಒತ್ತಾಯಿಸಿ, ವಕೀಲೆ ಜೈಶ್ರೀ ಪಾಟೀಲ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ ಮತ್ತು ಮನೀಶ್ ಪಿಟಾಲೆ ಅವರ ನ್ಯಾಯಪೀಠ ವಿಚಾರಣೆ ನಡೆಸಿದೆ.

ಕಳೆದ ವಾರ ವಕೀಲೆ ಜೈಶ್ರೀ ಪಾಟೀಲ್ ಸಲ್ಲಿಸಿದ್ದ ಅರ್ಜಿಯಲ್ಲಿ, ಅನಿಲ್ ದೇಶ್‌ಮುಖ್ ಮತ್ತು ಪರಮ್ ಬೀರ್ ಸಿಂಗ್ ಇಬ್ಬರು ತಮ್ಮ ವೃತ್ತಿಪರ ಕರ್ತವ್ಯಗಳನ್ನು ಉಲ್ಲಂಘಿಸಿ ವರ್ತಿಸಿದ್ದಾರೆ. ಮುಖೇಶ್ ಅಂಬಾನಿ ಅವರ ನಿವಾಸದ ಬಳಿ ಪತ್ತೆಯಾಗಿದ್ದ ಸ್ಫೋಟಕಗಳಿಂದ ತುಂಬಿದ ಕಾರಿನ ತನಿಖೆ, ವಾಹನದ ಮಾಲೀಕ ಮನ್ಸುಖ್ ಹಿರಾನ್ ಸಾವು, ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರ ಬಂಧನ ಮತ್ತು ಸಂಬಂಧಿತ ಘಟನೆಗಳನ್ನು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿಯ ದಕ್ಷಿಣ ಭಾರತ ಭೇಟಿ: ‘ಗೋ ಬ್ಯಾಕ್ ಫ್ಯಾಸಿಸ್ಟ್‌ ಮೋದಿ’ ಟ್ವಿಟರ್‌ ಟ್ರೆಂಡ್!

ಗೃಹ ಸಚಿವ ಅನಿಲ್ ದೇಶ್‌ಮುಖ್ ತಮ್ಮ ವಿರುದ್ಧ ಮಾಡಿರುವ ಆರೋಪಗಳನ್ನು ನಿರಾಕರಿಸಿದ್ದಾರೆ. ವಕೀಲೆ ಜೈಶ್ರೀ ಪಾಟೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ ಎಂದು ಮಂಗಳವಾರ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಪೀಠವು “ನಮ್ಮ ಅನುಭವದಂತೆ ನೋಡುವುದಾದರೇ ಅಗ್ಗದ ಜನಪ್ರಿಯತೆಗಾಗಿ ಇಂತಹ ಅರ್ಜಿಗಳನ್ನು ಸಲ್ಲಿಸಲಾಗುತ್ತದೆ ಎಂದು ನಾವು ಭಾವಿಸುತ್ತೇವೆ. ಇದು ಸ್ವೀಕಾರಾರ್ಹವಲ್ಲ” ಎಂದು ಹೇಳಿದ್ದಾರೆ.

ಐಪಿಎಸ್ ಅಧಿಕಾರಿ ಪರಮ್ ಬೀರ್‌ ಸಿಂಗ್ ಕೂಡ ಹೈಕೋರ್ಟ್‌ನನ್ನು ಸಂಪರ್ಕಿಸಿದ್ದು, ಅವರ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ನ್ಯಾಯಾಲಯದ ಮುಂದೆ ಬುಧವಾರ ವಿಚಾರಣೆಗೆ ಇಡಲಾಗಿದೆ ಎಂದು ಅಡ್ವೊಕೇಟ್ ಜನರಲ್ ಅಶುತೋಷ್ ಕುಂಭಕೋಣಿ ನ್ಯಾಯಪೀಠಕ್ಕೆ ತಿಳಿಸಿದರು.

ಜೈಶ್ರೀ ಪಾಟೀಲ್ ಅರ್ಜಿಯನ್ನು ಬಹಳ ಕೆಟ್ಟದಾಗಿ ರಚಿಸಿದ್ದಾರೆ ಎಂದು ಅಡ್ವೊಕೇಟ್ ಜನರಲ್ ಅಶುತೋಷ್ ಕುಂಭಕೋಣಿ ಆರೋಪಿಸಿದ್ದಾರೆ. ಅಸಮಂಜಸ ಆದೇಶಗಳ ಸಾಧ್ಯತೆಯನ್ನು ತಪ್ಪಿಸಲು ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ಒಟ್ಟಿಗೆ ಸೇರಿಸುವಂತೆ ಹೈಕೋರ್ಟ್ ಕುಂಭಕೋಣಿಯವರಿಗೆ ತಿಳಿಸಿದೆ.

ಜೈಶ್ರೀ ಪಾಟೀಲ್‌ರವರ ಇತರ ಸಂಬಂಧಿತ ಮನವಿಗಳನ್ನು ಹೈಕೋರ್ಟ್ ಏಪ್ರಿಲ್ 1 ರಂದು ವಿಚಾರಣೆ ನಡೆಸಲಿದೆ.


ಇದನ್ನೂ ಓದಿ: ತಿಂಗಳಿಗೆ 100 ಕೋಟಿ ಲಂಚ ಸಂಗ್ರಹಕ್ಕೆ ಗೃಹ ಸಚಿವರ ಸೂಚನೆ- ಪರಮ್ ಬೀರ್ ಸಿಂಗ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...