Homeಮುಖಪುಟನ್ಯಾ. ಶರ್ಮಾರ ಇಬ್ಬರು ಮಕ್ಕಳು ಕೇಂದ್ರ ಸರ್ಕಾರದ ವಕೀಲರು : ಹೊಸ ಅಫಿಡವಿಟ್ ಸಲ್ಲಿಸಿದ ಕೇಜ್ರಿವಾಲ್,...

ನ್ಯಾ. ಶರ್ಮಾರ ಇಬ್ಬರು ಮಕ್ಕಳು ಕೇಂದ್ರ ಸರ್ಕಾರದ ವಕೀಲರು : ಹೊಸ ಅಫಿಡವಿಟ್ ಸಲ್ಲಿಸಿದ ಕೇಜ್ರಿವಾಲ್, ವಿಚಾರಣೆಯಿಂದ ಹಿಂದೆ ಸರಿಯಲು ಆಗ್ರಹ

- Advertisement -
- Advertisement -

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ವಿರುದ್ಧ ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ (ಏ.15) ಹೊಸ ಹೆಚ್ಚುವರಿ ಅಫಿಡವಿಟ್ ಸಲ್ಲಿಸಿದ್ದಾರೆ. 

ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮನ್ನು ಖುಲಾಸೆಗೊಳಿಸಿದ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಶರ್ಮಾ ಅವರು ವಿಚಾರಣೆ ನಡೆಸಬಾರದು ಎಂದು ಕೇಜ್ರಿವಾಲ್ ಈ ಅಫಿಡವಿಟ್‌ನಲ್ಲಿ ಪುನರುಚ್ಚರಿಸಿದ್ದಾರೆ.

ನ್ಯಯಾಮೂರ್ತಿ ಶರ್ಮಾ ಅವರ ಮಗ ಮತ್ತು ಮಗಳು ಇಬ್ಬರೂ ಕೇಂದ್ರ ಸರ್ಕಾರದ ವಕೀಲರಾಗಿ (Central Government Counsel) ಪಟ್ಟಿಯಲ್ಲಿದ್ದಾರೆ (empanelled) ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

ಈ ಪ್ರಕರಣದಲ್ಲಿ ಸಿಬಿಐ ಪರವಾಗಿ ಹಾಜರಾಗಿರುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರೇ ನ್ಯಾಯಮೂರ್ತಿಗಳ ಮಕ್ಕಳಿಗೆ ಕೆಲಸಗಳನ್ನು ಹಂಚಿಕೆ ಮಾಡುತ್ತಾರೆ. ಇದು ನೇರ ಹಿತಾಸಕ್ತಿ ಸಂಘರ್ಷಕ್ಕೆ ಕಾರಣವಾಗುತ್ತದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ನ್ಯಾಯಮೂರ್ತಿ ಶರ್ಮಾ ಅವರ ಮಕ್ಕಳನ್ನು ಕೇಂದ್ರ ಸರ್ಕಾರಿ ವಕೀಲರನ್ನಾಗಿ ನೇಮಕ ಮಾಡಿಕೊಂಡಿರುವುದನ್ನು ತೋರಿಸುವ ದಾಖಲೆಗಳು ತನಗೆ ದೊರೆತಿವೆ. ಅವರ ಮಗ ಸುಪ್ರೀಂ ಕೋರ್ಟ್‌ನ ಗ್ರೂಪ್ ಎ ಪ್ಯಾನಲ್ ಕೌನ್ಸಿಲ್ ಆಗಿದ್ದರೆ, ಅವರ ಮಗಳು ಗ್ರೂಪ್ ಸಿ ಪ್ಯಾನಲ್ ಕೌನ್ಸಿಲ್ ಆಗಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಕಾನೂನು ವರದಿಗಾರ ಸೌರವ್ ದಾಸ್ ಅವರು ಬಹಿರಂಗಗೊಳಿಸಿರುವ ದಾಖಲೆಗಳನ್ನು ಅವರು ಉಲ್ಲೇಖಿಸಿದ್ದಾರೆ.

ಕಾನೂನು ಮತ್ತು ನ್ಯಾಯ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಪದೇ ಪದೇ ಕೇಳಲಾಗುವ ಪ್ರಶ್ನೆಗಳ (ಎಫ್‌ಎಕ್ಯೂ) ಉತ್ತರಗಳನ್ನು ಕೇಜ್ರಿವಾಲ್ ಉಲ್ಲೇಖಿಸಿದ್ದು, ಅದು, “ಸುಪ್ರೀಂ ಕೋರ್ಟ್‌ನಲ್ಲಿ, ಭಾರತದ ಗೌರವಾನ್ವಿತ ಅಟಾರ್ನಿ ಜನರಲ್ ಅವರು ತಾವು ಹಾಜರಾಗಬೇಕಾದ ಪ್ರಕರಣಗಳನ್ನು ತಾವೇ ಆಯ್ಕೆ ಮಾಡಿಕೊಳ್ಳುತ್ತಾರೆ. ಉಳಿದ ಪ್ರಕರಣಗಳನ್ನು ಭಾರತದ ಗೌರವಾನ್ವಿತ ಸಾಲಿಸಿಟರ್ ಜನರಲ್ ಅವರು ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್‌ಗಳಿಗೆ ಮತ್ತು ಪ್ಯಾನಲ್ ಕೌನ್ಸಿಲ್‌ಗಳಿಗೆ ಹಂಚಿಕೆ ಮಾಡುತ್ತಾರೆ” ಎಂದು ಹೇಳಿದೆ ಎಂದಿದ್ದಾರೆ.

“ಯಾವ ಕಾನೂನು ಅಧಿಕಾರಿ ಮತ್ತು ಕಾನೂನು ವ್ಯವಸ್ಥೆಯು ಈ ಗೌರವಾನ್ವಿತ ನ್ಯಾಯಾಲಯದ ಮುಂದೆ ಪ್ರಾಸಿಕ್ಯೂಷನ್ ಪರವಾಗಿ ಪ್ರತಿನಿಧಿಸುತ್ತಿದೆಯೋ, ಅದೇ ವ್ಯವಸ್ಥೆಯು ಈ ಪ್ರಕರಣದ ವಿಚಾರಣೆ ನಡೆಸುತ್ತಿರುವ ಗೌರವಾನ್ವಿತ ನ್ಯಾಯಾಧೀಶರ ಹತ್ತಿರದ ಕುಟುಂಬ ಸದಸ್ಯರಿಗೆ ಕೇಂದ್ರ ಸರ್ಕಾರದ ಪ್ರಕರಣಗಳನ್ನು ಮತ್ತು ಸರ್ಕಾರಿ ಕೆಲಸಗಳನ್ನು ಹಂಚಿಕೆ ಮಾಡುವ ಸಾಂಸ್ಥಿಕ ಕಾರ್ಯವಿಧಾನದ ಭಾಗವಾಗಿದೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಸಿಬಿಐ ಪರವಾಗಿ ಹಾಜರಾಗಿ ತಮ್ಮ ಬಿಡುಗಡೆಯನ್ನು ವಿರೋಧಿಸುತ್ತಿರುವ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಕ್ರಮವು, ನ್ಯಾಯಮೂರ್ತಿ ಶರ್ಮಾ ಅವರ ಮುಂದೆ ನೇರ ಮತ್ತು ಗಂಭೀರವಾದ ಹಿತಾಸಕ್ತಿ ಸಂಘರ್ಷಕ್ಕೆ ಕಾರಣವಾಗುತ್ತದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಸಾಲಿಸಿಟರ್ ಜನರಲ್ ಅವರು ವಿಚಾರಣೆಯ ಮೊದಲ ದಿನದಂದೇ ಈ ಸಂಬಂಧದ ಬಗ್ಗೆ ಬಹಿರಂಗಪಡಿಸಬೇಕಿತ್ತು ಎಂದು ಅವರು ವಾದಿಸಿದ್ದಾರೆ.

ಸಾಲಿಸಿಟರ್ ಜನರಲ್ ಮೂಲಕ ಮಕ್ಕಳಿಗೆ ವೃತ್ತಿಪರ ಕೆಲಸ ಸಿಗುತ್ತಿರುವುದರಿಂದ, ನ್ಯಾಯಮೂರ್ತಿಗಳು ನಿಷ್ಪಕ್ಷಪಾತವಾಗಿ ತೀರ್ಪು ನೀಡಲು ಸಾಧ್ಯವಿಲ್ಲ ಎಂಬ ‘ಸಮಂಜಸವಾದ ಆತಂಕ’ (Reasonable apprehension of bias) ಉಂಟಾಗಿದೆ ಎಂದು ಕೇಜ್ರಿವಾಲ್ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಇತ್ತೀಚೆಗೆ ಆರ್‌ಟಿಐ ಮೂಲಕ ದೊರೆತ ದಾಖಲೆಗಳು ಮತ್ತು ಸರ್ಕಾರಿ ಅಧಿಸೂಚನೆಗಳ ಆಧಾರದ ಮೇಲೆ ಈ ಅಂಶಗಳನ್ನು ಕೇಜ್ರಿವಾಲ್ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಈ ಹೊಸ ವಿಚಾರಗಳ ಬಗ್ಗೆ ವಾದ ಮಂಡಿಸಲು ತಮಗೆ ಹೆಚ್ಚಿನ ಸಮಯ ನೀಡಬೇಕು ಮತ್ತು ನ್ಯಾಯಮೂರ್ತಿಗಳು ಈ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯಬೇಕು ಎಂದು ಅವರು ವಿನಂತಿಸಿದ್ದಾರೆ.

ಈ ಹಿಂದೆ ಏಪ್ರಿಲ್ 13ರಂದು ನಡೆದ ವಿಚಾರಣೆಯಲ್ಲಿ ಕೇಜ್ರಿವಾಲ್ ಸ್ವತಃ ಹಾಜರಾಗಿ ನ್ಯಾಯಮೂರ್ತಿಗಳು ಆರ್‌ಎಸ್‌ಎಸ್ ಸಂಯೋಜಿತ ಅಧಿವಕ್ತ ಪರಿಷತ್ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದನ್ನು ಪ್ರಶ್ನಿಸಿ ವಿಚಾರಣೆಯಿಂದ ಹಿಂದೆ ಸರಿಯುವಂತೆ ಕೇಳಿಕೊಂಡಿದ್ದರು. ನ್ಯಾಯಮೂರ್ತಿಗಳು ಸದ್ಯ ತಮ್ಮ ಆದೇಶವನ್ನು ಕಾಯ್ದಿರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...