Homeಮುಖಪುಟನ್ಯಾ. ಶರ್ಮಾರ ಇಬ್ಬರು ಮಕ್ಕಳು ಕೇಂದ್ರ ಸರ್ಕಾರದ ವಕೀಲರು : ಹೊಸ ಅಫಿಡವಿಟ್ ಸಲ್ಲಿಸಿದ ಕೇಜ್ರಿವಾಲ್,...

ನ್ಯಾ. ಶರ್ಮಾರ ಇಬ್ಬರು ಮಕ್ಕಳು ಕೇಂದ್ರ ಸರ್ಕಾರದ ವಕೀಲರು : ಹೊಸ ಅಫಿಡವಿಟ್ ಸಲ್ಲಿಸಿದ ಕೇಜ್ರಿವಾಲ್, ವಿಚಾರಣೆಯಿಂದ ಹಿಂದೆ ಸರಿಯಲು ಆಗ್ರಹ

- Advertisement -
- Advertisement -

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ವಿರುದ್ಧ ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ (ಏ.15) ಹೊಸ ಹೆಚ್ಚುವರಿ ಅಫಿಡವಿಟ್ ಸಲ್ಲಿಸಿದ್ದಾರೆ. 

ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮನ್ನು ಖುಲಾಸೆಗೊಳಿಸಿದ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಶರ್ಮಾ ಅವರು ವಿಚಾರಣೆ ನಡೆಸಬಾರದು ಎಂದು ಕೇಜ್ರಿವಾಲ್ ಈ ಅಫಿಡವಿಟ್‌ನಲ್ಲಿ ಪುನರುಚ್ಚರಿಸಿದ್ದಾರೆ.

ನ್ಯಯಾಮೂರ್ತಿ ಶರ್ಮಾ ಅವರ ಮಗ ಮತ್ತು ಮಗಳು ಇಬ್ಬರೂ ಕೇಂದ್ರ ಸರ್ಕಾರದ ವಕೀಲರಾಗಿ (Central Government Counsel) ಪಟ್ಟಿಯಲ್ಲಿದ್ದಾರೆ (empanelled) ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

ಈ ಪ್ರಕರಣದಲ್ಲಿ ಸಿಬಿಐ ಪರವಾಗಿ ಹಾಜರಾಗಿರುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರೇ ನ್ಯಾಯಮೂರ್ತಿಗಳ ಮಕ್ಕಳಿಗೆ ಕೆಲಸಗಳನ್ನು ಹಂಚಿಕೆ ಮಾಡುತ್ತಾರೆ. ಇದು ನೇರ ಹಿತಾಸಕ್ತಿ ಸಂಘರ್ಷಕ್ಕೆ ಕಾರಣವಾಗುತ್ತದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ನ್ಯಾಯಮೂರ್ತಿ ಶರ್ಮಾ ಅವರ ಮಕ್ಕಳನ್ನು ಕೇಂದ್ರ ಸರ್ಕಾರಿ ವಕೀಲರನ್ನಾಗಿ ನೇಮಕ ಮಾಡಿಕೊಂಡಿರುವುದನ್ನು ತೋರಿಸುವ ದಾಖಲೆಗಳು ತನಗೆ ದೊರೆತಿವೆ. ಅವರ ಮಗ ಸುಪ್ರೀಂ ಕೋರ್ಟ್‌ನ ಗ್ರೂಪ್ ಎ ಪ್ಯಾನಲ್ ಕೌನ್ಸಿಲ್ ಆಗಿದ್ದರೆ, ಅವರ ಮಗಳು ಗ್ರೂಪ್ ಸಿ ಪ್ಯಾನಲ್ ಕೌನ್ಸಿಲ್ ಆಗಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಕಾನೂನು ವರದಿಗಾರ ಸೌರವ್ ದಾಸ್ ಅವರು ಬಹಿರಂಗಗೊಳಿಸಿರುವ ದಾಖಲೆಗಳನ್ನು ಅವರು ಉಲ್ಲೇಖಿಸಿದ್ದಾರೆ.

ಕಾನೂನು ಮತ್ತು ನ್ಯಾಯ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಪದೇ ಪದೇ ಕೇಳಲಾಗುವ ಪ್ರಶ್ನೆಗಳ (ಎಫ್‌ಎಕ್ಯೂ) ಉತ್ತರಗಳನ್ನು ಕೇಜ್ರಿವಾಲ್ ಉಲ್ಲೇಖಿಸಿದ್ದು, ಅದು, “ಸುಪ್ರೀಂ ಕೋರ್ಟ್‌ನಲ್ಲಿ, ಭಾರತದ ಗೌರವಾನ್ವಿತ ಅಟಾರ್ನಿ ಜನರಲ್ ಅವರು ತಾವು ಹಾಜರಾಗಬೇಕಾದ ಪ್ರಕರಣಗಳನ್ನು ತಾವೇ ಆಯ್ಕೆ ಮಾಡಿಕೊಳ್ಳುತ್ತಾರೆ. ಉಳಿದ ಪ್ರಕರಣಗಳನ್ನು ಭಾರತದ ಗೌರವಾನ್ವಿತ ಸಾಲಿಸಿಟರ್ ಜನರಲ್ ಅವರು ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್‌ಗಳಿಗೆ ಮತ್ತು ಪ್ಯಾನಲ್ ಕೌನ್ಸಿಲ್‌ಗಳಿಗೆ ಹಂಚಿಕೆ ಮಾಡುತ್ತಾರೆ” ಎಂದು ಹೇಳಿದೆ ಎಂದಿದ್ದಾರೆ.

“ಯಾವ ಕಾನೂನು ಅಧಿಕಾರಿ ಮತ್ತು ಕಾನೂನು ವ್ಯವಸ್ಥೆಯು ಈ ಗೌರವಾನ್ವಿತ ನ್ಯಾಯಾಲಯದ ಮುಂದೆ ಪ್ರಾಸಿಕ್ಯೂಷನ್ ಪರವಾಗಿ ಪ್ರತಿನಿಧಿಸುತ್ತಿದೆಯೋ, ಅದೇ ವ್ಯವಸ್ಥೆಯು ಈ ಪ್ರಕರಣದ ವಿಚಾರಣೆ ನಡೆಸುತ್ತಿರುವ ಗೌರವಾನ್ವಿತ ನ್ಯಾಯಾಧೀಶರ ಹತ್ತಿರದ ಕುಟುಂಬ ಸದಸ್ಯರಿಗೆ ಕೇಂದ್ರ ಸರ್ಕಾರದ ಪ್ರಕರಣಗಳನ್ನು ಮತ್ತು ಸರ್ಕಾರಿ ಕೆಲಸಗಳನ್ನು ಹಂಚಿಕೆ ಮಾಡುವ ಸಾಂಸ್ಥಿಕ ಕಾರ್ಯವಿಧಾನದ ಭಾಗವಾಗಿದೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಸಿಬಿಐ ಪರವಾಗಿ ಹಾಜರಾಗಿ ತಮ್ಮ ಬಿಡುಗಡೆಯನ್ನು ವಿರೋಧಿಸುತ್ತಿರುವ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಕ್ರಮವು, ನ್ಯಾಯಮೂರ್ತಿ ಶರ್ಮಾ ಅವರ ಮುಂದೆ ನೇರ ಮತ್ತು ಗಂಭೀರವಾದ ಹಿತಾಸಕ್ತಿ ಸಂಘರ್ಷಕ್ಕೆ ಕಾರಣವಾಗುತ್ತದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಸಾಲಿಸಿಟರ್ ಜನರಲ್ ಅವರು ವಿಚಾರಣೆಯ ಮೊದಲ ದಿನದಂದೇ ಈ ಸಂಬಂಧದ ಬಗ್ಗೆ ಬಹಿರಂಗಪಡಿಸಬೇಕಿತ್ತು ಎಂದು ಅವರು ವಾದಿಸಿದ್ದಾರೆ.

ಸಾಲಿಸಿಟರ್ ಜನರಲ್ ಮೂಲಕ ಮಕ್ಕಳಿಗೆ ವೃತ್ತಿಪರ ಕೆಲಸ ಸಿಗುತ್ತಿರುವುದರಿಂದ, ನ್ಯಾಯಮೂರ್ತಿಗಳು ನಿಷ್ಪಕ್ಷಪಾತವಾಗಿ ತೀರ್ಪು ನೀಡಲು ಸಾಧ್ಯವಿಲ್ಲ ಎಂಬ ‘ಸಮಂಜಸವಾದ ಆತಂಕ’ (Reasonable apprehension of bias) ಉಂಟಾಗಿದೆ ಎಂದು ಕೇಜ್ರಿವಾಲ್ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಇತ್ತೀಚೆಗೆ ಆರ್‌ಟಿಐ ಮೂಲಕ ದೊರೆತ ದಾಖಲೆಗಳು ಮತ್ತು ಸರ್ಕಾರಿ ಅಧಿಸೂಚನೆಗಳ ಆಧಾರದ ಮೇಲೆ ಈ ಅಂಶಗಳನ್ನು ಕೇಜ್ರಿವಾಲ್ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಈ ಹೊಸ ವಿಚಾರಗಳ ಬಗ್ಗೆ ವಾದ ಮಂಡಿಸಲು ತಮಗೆ ಹೆಚ್ಚಿನ ಸಮಯ ನೀಡಬೇಕು ಮತ್ತು ನ್ಯಾಯಮೂರ್ತಿಗಳು ಈ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯಬೇಕು ಎಂದು ಅವರು ವಿನಂತಿಸಿದ್ದಾರೆ.

ಈ ಹಿಂದೆ ಏಪ್ರಿಲ್ 13ರಂದು ನಡೆದ ವಿಚಾರಣೆಯಲ್ಲಿ ಕೇಜ್ರಿವಾಲ್ ಸ್ವತಃ ಹಾಜರಾಗಿ ನ್ಯಾಯಮೂರ್ತಿಗಳು ಆರ್‌ಎಸ್‌ಎಸ್ ಸಂಯೋಜಿತ ಅಧಿವಕ್ತ ಪರಿಷತ್ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದನ್ನು ಪ್ರಶ್ನಿಸಿ ವಿಚಾರಣೆಯಿಂದ ಹಿಂದೆ ಸರಿಯುವಂತೆ ಕೇಳಿಕೊಂಡಿದ್ದರು. ನ್ಯಾಯಮೂರ್ತಿಗಳು ಸದ್ಯ ತಮ್ಮ ಆದೇಶವನ್ನು ಕಾಯ್ದಿರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...