Homeಮುಖಪುಟಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ

ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ

- Advertisement -
- Advertisement -

ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿರವರು ತನ್ನ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು 35 ವರ್ಷದ ಮಹಿಳೆಯೊಬ್ಬರು ಆರೋಪಿಸಿ, ಏಪ್ರಿಲ್ 19ರ ಶುಕ್ರವಾರ ಸುಪ್ರೀಂ ಕೋರ್ಟ್‍ನ 22 ನ್ಯಾಯಾಧೀಶರಿಗೆ ಅಫಿಡವಿಟ್ ಸಲ್ಲಿಸಿದ್ದಾರೆ.

2018ರ ಅಕ್ಟೋಬರ್ 10 ಮತ್ತು 11ರಂದು ನಾನು ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದಾಗ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿರವರು ಅವರ ಗೃಹಕಚೇರಿಯಲ್ಲಿ ನನ್ನೊಡನೆ ಬಹಳ ಅನುಚಿತವಾಗಿ ವರ್ತಿಸುವ ಮೂಲಕ ಲೈಂಗಿಕವಾಗಿ ಶೋಷಿಸಿದ್ದರು ಎಂದು ಆಕೆ ದೂರಿದ್ದಾರೆ.

ಅಲ್ಲದೇ ಈ ಘಟನೆಯ ಎರಡು ತಿಂಗಳ ನಂತರ ಆಕೆಯನ್ನು ಡಿಸೆಂಬರ್‍ನಲ್ಲಿ ಕೆಲಸದಿಂದ ವಜಾಗೊಳಿಸಲಾಗಿತ್ತು. ಕಾರಣ ಕೇಳಿದ್ದಲ್ಲಿ, ಆಕೆಯ ಮೇಲೆ ತನಿಖಾ ಸಮಿತಿಯೊಂದನ್ನು ರಚಿಸಿದ್ದು, ಆಕೆ ಒಂದು ದಿನ ಅನುಮತಿಯಿಲ್ಲದೇ ರಜೆ ತೆಗೆದುಕೊಂಡ ಕಾರಣಕ್ಕಾಗಿ ಕೆಲಸದಿಂದ ತೆಗೆಯಲಾಗಿದೆ ಎಂದು ತಿಳಿಸಿದೆ.

ಕೆಲಸದಿಂದ ವಜಾಗೊಳಿಸಿದ ಮಾತ್ರಕ್ಕೆ ಆಕೆಯ ಮೇಲಿನ ದೌರ್ಜನ್ಯ ನಿಂತಿಲ್ಲ. ಆಕೆಯ ಇಡೀ ಕುಟುಂಬವನ್ನೇ ಗುರಿ ಮಾಡಿ ತೊಂದರೆ ಕೊಡಲಾಗಿದೆ ಎಂದು ಅಫಿಡವಿಟ್‍ನಲ್ಲಿ ತಿಳಿಸಿದ್ದಾರೆ. ಆಕೆಯ ಗಂಡ ಮತ್ತು ಆತನ ತಮ್ಮ ಇಬ್ಬರೂ ಇಬ್ಬರು ದೆಹಲಿ ಪೋಲಿಸ್ ಇಲಾಖೆಯಲ್ಲಿ ಪೇದೆಗಳಾಗಿ ಕೆಲಸ ನಿರ್ವಹಿಸುತ್ತಿರುವಾಗಲೇ 2012ರ ಕಾಲೋನಿ ಭೂವಿವಾದದ ಹಳೆಯ ಕೇಸನ್ನು ಉಲ್ಲೇಖಿಸಿ ಅವರಿಬ್ಬರನ್ನು ಡಿಸೆಂಬರ್‍ನಿಂದಲೇ ಅಮಾನತು ಮಾಡಲಾಗಿದೆ.

ಅಲ್ಲಿಂದ ಮುಂದುವರೆದು ನವೀನ್ ಎಂಬ ವ್ಯಕ್ತಿಯು ಈಕೆಯ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿ ದೂರು ದಾಖಲಿಸಿದ್ದಾನೆ. 2017ರಲ್ಲಿ ಈಕೆ ಸುಪ್ರೀಂ ಕೋರ್ಟ್‍ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ನನ್ನಿಂದ 50000 ಸಾವಿರ ಹಣ ಪಡೆದು ವಂಚಿಸಿದ್ದಾಳೆ ಎಂಬುದು ಆ ದೂರಿನ ಸಾರಂಶ. ಇದಕ್ಕಾಗಿ ಆಕೆಯ ಮೇಲೆ ಎಫ್‍ಐಆರ್ ದಾಖಲಾದುದು ಮಾತ್ರವಲ್ಲ ಒಂದು ದಿನ ಜೈಲಿಗೂ ಕೂಡ ಹೋಗಿದ್ದು ಸದ್ಯ ಬೇಲ್ ಪಡೆದಿದ್ದಾಳೆ. ‘ಆ ಕೇಸ್‍ನಲ್ಲಿ ಭ್ರಷ್ಟಾಚಾರದ ದೂರು ದಾಖಲಿಸಿರುವ ನವೀನ್ ಎಂಬಾತನ ಮೇಲೂ ಕೂಡ ಲಂಚ ಕೊಟ್ಟ ಆರೋಪದ ಮೇಲೆ ದೂರು ದಾಖಲಿಸಬಹುದು, ಆದರೆ ಅದನ್ನು ಮಾಡದ ಪೋಲೀಸರು ಈಗ ಈಕೆಯ ಬೇಲ್ ರದ್ದುಗೊಳಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ಆಕೆಯ ಪರ ವಕೀಲ ಗ್ರೋವರ್ ಆರೋಪಿಸಿದ್ದಾರೆ.

ಆಕೆ ತನ್ನ ಮೇಲಿನ ದೌರ್ಜನ್ಯದ ವಿರುದ್ಧ ಹೋರಾಡದ ಕಾರಣಕ್ಕಾಗಿ ತನ್ನ ಉದ್ಯೋಗವನ್ನು ಕಳೆದುಕೊಳ್ಳಬೇಕಾಯಿತು, ಆಕೆಯ ಕುಟುಂಬದ ಇಬ್ಬರೂ ಅಮಾನತಾಗಿದ್ದಾರೆ. ಆಕೆ ಜೈಲಿಗೆ ಹೋದ ನಂತರ ಇದು ಇಲ್ಲಿಗೆ ನಿಲ್ಲುವುದಿಲ್ಲ ಎಂಬುದು ಅರ್ಥವಾಗಿದೆ. ಹಾಗಾಗಿ ಆಕೆ ತನಗಾದ ಅನ್ಯಾಯವನ್ನು ಸಾರ್ವಜನಿಕವಾಗಿ ತೆರೆದಿಡುವುದು ಮತ್ತು ಸುಪ್ರೀಂ ಕೋರ್ಟ್‍ನ ನ್ಯಾಯಾಧೀಶರಿಗೆ ಪತ್ರ ಬರೆಯದೇ ಬೇರೆ ಆಯ್ಕೆಗಳೇ ಇಲ್ಲ ಎಂದು ಗ್ರೋವರ್ ಅಭಿಪ್ರಾಯಪಡುತ್ತಾರೆ.

ನ್ಯಾಯಾಂಗ ಅಪಾಯದಲ್ಲಿದೆ – ರಂಜನ್ ಗಗೋಯಿ
ತನ್ನ ಮೇಲಿನ ಆರೋಪವನ್ನು ತಳ್ಳಿಹಾಕಿರುವ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ, ನ್ಯಾಯಾಂಗ ಅಪಾಯದಲ್ಲಿದೆ ಎಂದಿದ್ದಲ್ಲದೇ, ಈ ಪ್ರಕರಣ ಸ್ವತಂತ್ರ ನ್ಯಾಯಾಂಗ ಮತ್ತು ಮುಖ್ಯ ನ್ಯಾಯಮೂರ್ತಿಗಳ ಕಚೇರಿಯನ್ನು ದುರ್ಬಲಗೊಳಿಸಲು ಹೆಣೆದಿರುವ ದೊಡ್ಡ ಪಿತೂರಿಯಾಗಿದೆ ಎಂದ ಆರೋಪಿಸಿದ್ದಾರೆ.

ಒಬ್ಬ ನ್ಯಾಯಾಧೀಶನಿಗೆ ತನ್ನ ಹುದ್ದೆಗಿಂತಲೂ ಮಿಗಿಲಾದುದು ಯಾವುದು ಇಲ್ಲ ಹಾಗಾಗಿ ಅದರ ಮೇಲೆಯೇ ದಾಳಿ ನಡೆದರೆ ಸಹಿಸಲಾಗುವುದಿಲ್ಲ ಎಂದಿದ್ದಾರೆ.ಇಂದು ನ್ಯಾಯಾಂಗದ ಸ್ವಾತಂತ್ರ್ಯ ಅಪಾಯದಲ್ಲಿದ್ದು ಇಂತಹ ಪರಿಸ್ಥಿತಿಯಲ್ಲಿ ನ್ಯಾಯಾಧೀಶರು ಕೆಲಸ ಮಾಡಬೇಕೆಂದರೆ ಯಾರು ಸಹ ಮುಂದೆ ಬರುವುದಿಲ್ಲ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...