Homeಮುಖಪುಟಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ

ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ

- Advertisement -
- Advertisement -

ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿರವರು ತನ್ನ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು 35 ವರ್ಷದ ಮಹಿಳೆಯೊಬ್ಬರು ಆರೋಪಿಸಿ, ಏಪ್ರಿಲ್ 19ರ ಶುಕ್ರವಾರ ಸುಪ್ರೀಂ ಕೋರ್ಟ್‍ನ 22 ನ್ಯಾಯಾಧೀಶರಿಗೆ ಅಫಿಡವಿಟ್ ಸಲ್ಲಿಸಿದ್ದಾರೆ.

2018ರ ಅಕ್ಟೋಬರ್ 10 ಮತ್ತು 11ರಂದು ನಾನು ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದಾಗ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿರವರು ಅವರ ಗೃಹಕಚೇರಿಯಲ್ಲಿ ನನ್ನೊಡನೆ ಬಹಳ ಅನುಚಿತವಾಗಿ ವರ್ತಿಸುವ ಮೂಲಕ ಲೈಂಗಿಕವಾಗಿ ಶೋಷಿಸಿದ್ದರು ಎಂದು ಆಕೆ ದೂರಿದ್ದಾರೆ.

ಅಲ್ಲದೇ ಈ ಘಟನೆಯ ಎರಡು ತಿಂಗಳ ನಂತರ ಆಕೆಯನ್ನು ಡಿಸೆಂಬರ್‍ನಲ್ಲಿ ಕೆಲಸದಿಂದ ವಜಾಗೊಳಿಸಲಾಗಿತ್ತು. ಕಾರಣ ಕೇಳಿದ್ದಲ್ಲಿ, ಆಕೆಯ ಮೇಲೆ ತನಿಖಾ ಸಮಿತಿಯೊಂದನ್ನು ರಚಿಸಿದ್ದು, ಆಕೆ ಒಂದು ದಿನ ಅನುಮತಿಯಿಲ್ಲದೇ ರಜೆ ತೆಗೆದುಕೊಂಡ ಕಾರಣಕ್ಕಾಗಿ ಕೆಲಸದಿಂದ ತೆಗೆಯಲಾಗಿದೆ ಎಂದು ತಿಳಿಸಿದೆ.

ಕೆಲಸದಿಂದ ವಜಾಗೊಳಿಸಿದ ಮಾತ್ರಕ್ಕೆ ಆಕೆಯ ಮೇಲಿನ ದೌರ್ಜನ್ಯ ನಿಂತಿಲ್ಲ. ಆಕೆಯ ಇಡೀ ಕುಟುಂಬವನ್ನೇ ಗುರಿ ಮಾಡಿ ತೊಂದರೆ ಕೊಡಲಾಗಿದೆ ಎಂದು ಅಫಿಡವಿಟ್‍ನಲ್ಲಿ ತಿಳಿಸಿದ್ದಾರೆ. ಆಕೆಯ ಗಂಡ ಮತ್ತು ಆತನ ತಮ್ಮ ಇಬ್ಬರೂ ಇಬ್ಬರು ದೆಹಲಿ ಪೋಲಿಸ್ ಇಲಾಖೆಯಲ್ಲಿ ಪೇದೆಗಳಾಗಿ ಕೆಲಸ ನಿರ್ವಹಿಸುತ್ತಿರುವಾಗಲೇ 2012ರ ಕಾಲೋನಿ ಭೂವಿವಾದದ ಹಳೆಯ ಕೇಸನ್ನು ಉಲ್ಲೇಖಿಸಿ ಅವರಿಬ್ಬರನ್ನು ಡಿಸೆಂಬರ್‍ನಿಂದಲೇ ಅಮಾನತು ಮಾಡಲಾಗಿದೆ.

ಅಲ್ಲಿಂದ ಮುಂದುವರೆದು ನವೀನ್ ಎಂಬ ವ್ಯಕ್ತಿಯು ಈಕೆಯ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿ ದೂರು ದಾಖಲಿಸಿದ್ದಾನೆ. 2017ರಲ್ಲಿ ಈಕೆ ಸುಪ್ರೀಂ ಕೋರ್ಟ್‍ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ನನ್ನಿಂದ 50000 ಸಾವಿರ ಹಣ ಪಡೆದು ವಂಚಿಸಿದ್ದಾಳೆ ಎಂಬುದು ಆ ದೂರಿನ ಸಾರಂಶ. ಇದಕ್ಕಾಗಿ ಆಕೆಯ ಮೇಲೆ ಎಫ್‍ಐಆರ್ ದಾಖಲಾದುದು ಮಾತ್ರವಲ್ಲ ಒಂದು ದಿನ ಜೈಲಿಗೂ ಕೂಡ ಹೋಗಿದ್ದು ಸದ್ಯ ಬೇಲ್ ಪಡೆದಿದ್ದಾಳೆ. ‘ಆ ಕೇಸ್‍ನಲ್ಲಿ ಭ್ರಷ್ಟಾಚಾರದ ದೂರು ದಾಖಲಿಸಿರುವ ನವೀನ್ ಎಂಬಾತನ ಮೇಲೂ ಕೂಡ ಲಂಚ ಕೊಟ್ಟ ಆರೋಪದ ಮೇಲೆ ದೂರು ದಾಖಲಿಸಬಹುದು, ಆದರೆ ಅದನ್ನು ಮಾಡದ ಪೋಲೀಸರು ಈಗ ಈಕೆಯ ಬೇಲ್ ರದ್ದುಗೊಳಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ಆಕೆಯ ಪರ ವಕೀಲ ಗ್ರೋವರ್ ಆರೋಪಿಸಿದ್ದಾರೆ.

ಆಕೆ ತನ್ನ ಮೇಲಿನ ದೌರ್ಜನ್ಯದ ವಿರುದ್ಧ ಹೋರಾಡದ ಕಾರಣಕ್ಕಾಗಿ ತನ್ನ ಉದ್ಯೋಗವನ್ನು ಕಳೆದುಕೊಳ್ಳಬೇಕಾಯಿತು, ಆಕೆಯ ಕುಟುಂಬದ ಇಬ್ಬರೂ ಅಮಾನತಾಗಿದ್ದಾರೆ. ಆಕೆ ಜೈಲಿಗೆ ಹೋದ ನಂತರ ಇದು ಇಲ್ಲಿಗೆ ನಿಲ್ಲುವುದಿಲ್ಲ ಎಂಬುದು ಅರ್ಥವಾಗಿದೆ. ಹಾಗಾಗಿ ಆಕೆ ತನಗಾದ ಅನ್ಯಾಯವನ್ನು ಸಾರ್ವಜನಿಕವಾಗಿ ತೆರೆದಿಡುವುದು ಮತ್ತು ಸುಪ್ರೀಂ ಕೋರ್ಟ್‍ನ ನ್ಯಾಯಾಧೀಶರಿಗೆ ಪತ್ರ ಬರೆಯದೇ ಬೇರೆ ಆಯ್ಕೆಗಳೇ ಇಲ್ಲ ಎಂದು ಗ್ರೋವರ್ ಅಭಿಪ್ರಾಯಪಡುತ್ತಾರೆ.

ನ್ಯಾಯಾಂಗ ಅಪಾಯದಲ್ಲಿದೆ – ರಂಜನ್ ಗಗೋಯಿ
ತನ್ನ ಮೇಲಿನ ಆರೋಪವನ್ನು ತಳ್ಳಿಹಾಕಿರುವ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ, ನ್ಯಾಯಾಂಗ ಅಪಾಯದಲ್ಲಿದೆ ಎಂದಿದ್ದಲ್ಲದೇ, ಈ ಪ್ರಕರಣ ಸ್ವತಂತ್ರ ನ್ಯಾಯಾಂಗ ಮತ್ತು ಮುಖ್ಯ ನ್ಯಾಯಮೂರ್ತಿಗಳ ಕಚೇರಿಯನ್ನು ದುರ್ಬಲಗೊಳಿಸಲು ಹೆಣೆದಿರುವ ದೊಡ್ಡ ಪಿತೂರಿಯಾಗಿದೆ ಎಂದ ಆರೋಪಿಸಿದ್ದಾರೆ.

ಒಬ್ಬ ನ್ಯಾಯಾಧೀಶನಿಗೆ ತನ್ನ ಹುದ್ದೆಗಿಂತಲೂ ಮಿಗಿಲಾದುದು ಯಾವುದು ಇಲ್ಲ ಹಾಗಾಗಿ ಅದರ ಮೇಲೆಯೇ ದಾಳಿ ನಡೆದರೆ ಸಹಿಸಲಾಗುವುದಿಲ್ಲ ಎಂದಿದ್ದಾರೆ.ಇಂದು ನ್ಯಾಯಾಂಗದ ಸ್ವಾತಂತ್ರ್ಯ ಅಪಾಯದಲ್ಲಿದ್ದು ಇಂತಹ ಪರಿಸ್ಥಿತಿಯಲ್ಲಿ ನ್ಯಾಯಾಧೀಶರು ಕೆಲಸ ಮಾಡಬೇಕೆಂದರೆ ಯಾರು ಸಹ ಮುಂದೆ ಬರುವುದಿಲ್ಲ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...