Homeಮುಖಪುಟಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ

ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ

- Advertisement -
- Advertisement -

ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿರವರು ತನ್ನ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು 35 ವರ್ಷದ ಮಹಿಳೆಯೊಬ್ಬರು ಆರೋಪಿಸಿ, ಏಪ್ರಿಲ್ 19ರ ಶುಕ್ರವಾರ ಸುಪ್ರೀಂ ಕೋರ್ಟ್‍ನ 22 ನ್ಯಾಯಾಧೀಶರಿಗೆ ಅಫಿಡವಿಟ್ ಸಲ್ಲಿಸಿದ್ದಾರೆ.

2018ರ ಅಕ್ಟೋಬರ್ 10 ಮತ್ತು 11ರಂದು ನಾನು ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದಾಗ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿರವರು ಅವರ ಗೃಹಕಚೇರಿಯಲ್ಲಿ ನನ್ನೊಡನೆ ಬಹಳ ಅನುಚಿತವಾಗಿ ವರ್ತಿಸುವ ಮೂಲಕ ಲೈಂಗಿಕವಾಗಿ ಶೋಷಿಸಿದ್ದರು ಎಂದು ಆಕೆ ದೂರಿದ್ದಾರೆ.

ಅಲ್ಲದೇ ಈ ಘಟನೆಯ ಎರಡು ತಿಂಗಳ ನಂತರ ಆಕೆಯನ್ನು ಡಿಸೆಂಬರ್‍ನಲ್ಲಿ ಕೆಲಸದಿಂದ ವಜಾಗೊಳಿಸಲಾಗಿತ್ತು. ಕಾರಣ ಕೇಳಿದ್ದಲ್ಲಿ, ಆಕೆಯ ಮೇಲೆ ತನಿಖಾ ಸಮಿತಿಯೊಂದನ್ನು ರಚಿಸಿದ್ದು, ಆಕೆ ಒಂದು ದಿನ ಅನುಮತಿಯಿಲ್ಲದೇ ರಜೆ ತೆಗೆದುಕೊಂಡ ಕಾರಣಕ್ಕಾಗಿ ಕೆಲಸದಿಂದ ತೆಗೆಯಲಾಗಿದೆ ಎಂದು ತಿಳಿಸಿದೆ.

ಕೆಲಸದಿಂದ ವಜಾಗೊಳಿಸಿದ ಮಾತ್ರಕ್ಕೆ ಆಕೆಯ ಮೇಲಿನ ದೌರ್ಜನ್ಯ ನಿಂತಿಲ್ಲ. ಆಕೆಯ ಇಡೀ ಕುಟುಂಬವನ್ನೇ ಗುರಿ ಮಾಡಿ ತೊಂದರೆ ಕೊಡಲಾಗಿದೆ ಎಂದು ಅಫಿಡವಿಟ್‍ನಲ್ಲಿ ತಿಳಿಸಿದ್ದಾರೆ. ಆಕೆಯ ಗಂಡ ಮತ್ತು ಆತನ ತಮ್ಮ ಇಬ್ಬರೂ ಇಬ್ಬರು ದೆಹಲಿ ಪೋಲಿಸ್ ಇಲಾಖೆಯಲ್ಲಿ ಪೇದೆಗಳಾಗಿ ಕೆಲಸ ನಿರ್ವಹಿಸುತ್ತಿರುವಾಗಲೇ 2012ರ ಕಾಲೋನಿ ಭೂವಿವಾದದ ಹಳೆಯ ಕೇಸನ್ನು ಉಲ್ಲೇಖಿಸಿ ಅವರಿಬ್ಬರನ್ನು ಡಿಸೆಂಬರ್‍ನಿಂದಲೇ ಅಮಾನತು ಮಾಡಲಾಗಿದೆ.

ಅಲ್ಲಿಂದ ಮುಂದುವರೆದು ನವೀನ್ ಎಂಬ ವ್ಯಕ್ತಿಯು ಈಕೆಯ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿ ದೂರು ದಾಖಲಿಸಿದ್ದಾನೆ. 2017ರಲ್ಲಿ ಈಕೆ ಸುಪ್ರೀಂ ಕೋರ್ಟ್‍ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ನನ್ನಿಂದ 50000 ಸಾವಿರ ಹಣ ಪಡೆದು ವಂಚಿಸಿದ್ದಾಳೆ ಎಂಬುದು ಆ ದೂರಿನ ಸಾರಂಶ. ಇದಕ್ಕಾಗಿ ಆಕೆಯ ಮೇಲೆ ಎಫ್‍ಐಆರ್ ದಾಖಲಾದುದು ಮಾತ್ರವಲ್ಲ ಒಂದು ದಿನ ಜೈಲಿಗೂ ಕೂಡ ಹೋಗಿದ್ದು ಸದ್ಯ ಬೇಲ್ ಪಡೆದಿದ್ದಾಳೆ. ‘ಆ ಕೇಸ್‍ನಲ್ಲಿ ಭ್ರಷ್ಟಾಚಾರದ ದೂರು ದಾಖಲಿಸಿರುವ ನವೀನ್ ಎಂಬಾತನ ಮೇಲೂ ಕೂಡ ಲಂಚ ಕೊಟ್ಟ ಆರೋಪದ ಮೇಲೆ ದೂರು ದಾಖಲಿಸಬಹುದು, ಆದರೆ ಅದನ್ನು ಮಾಡದ ಪೋಲೀಸರು ಈಗ ಈಕೆಯ ಬೇಲ್ ರದ್ದುಗೊಳಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ಆಕೆಯ ಪರ ವಕೀಲ ಗ್ರೋವರ್ ಆರೋಪಿಸಿದ್ದಾರೆ.

ಆಕೆ ತನ್ನ ಮೇಲಿನ ದೌರ್ಜನ್ಯದ ವಿರುದ್ಧ ಹೋರಾಡದ ಕಾರಣಕ್ಕಾಗಿ ತನ್ನ ಉದ್ಯೋಗವನ್ನು ಕಳೆದುಕೊಳ್ಳಬೇಕಾಯಿತು, ಆಕೆಯ ಕುಟುಂಬದ ಇಬ್ಬರೂ ಅಮಾನತಾಗಿದ್ದಾರೆ. ಆಕೆ ಜೈಲಿಗೆ ಹೋದ ನಂತರ ಇದು ಇಲ್ಲಿಗೆ ನಿಲ್ಲುವುದಿಲ್ಲ ಎಂಬುದು ಅರ್ಥವಾಗಿದೆ. ಹಾಗಾಗಿ ಆಕೆ ತನಗಾದ ಅನ್ಯಾಯವನ್ನು ಸಾರ್ವಜನಿಕವಾಗಿ ತೆರೆದಿಡುವುದು ಮತ್ತು ಸುಪ್ರೀಂ ಕೋರ್ಟ್‍ನ ನ್ಯಾಯಾಧೀಶರಿಗೆ ಪತ್ರ ಬರೆಯದೇ ಬೇರೆ ಆಯ್ಕೆಗಳೇ ಇಲ್ಲ ಎಂದು ಗ್ರೋವರ್ ಅಭಿಪ್ರಾಯಪಡುತ್ತಾರೆ.

ನ್ಯಾಯಾಂಗ ಅಪಾಯದಲ್ಲಿದೆ – ರಂಜನ್ ಗಗೋಯಿ
ತನ್ನ ಮೇಲಿನ ಆರೋಪವನ್ನು ತಳ್ಳಿಹಾಕಿರುವ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ, ನ್ಯಾಯಾಂಗ ಅಪಾಯದಲ್ಲಿದೆ ಎಂದಿದ್ದಲ್ಲದೇ, ಈ ಪ್ರಕರಣ ಸ್ವತಂತ್ರ ನ್ಯಾಯಾಂಗ ಮತ್ತು ಮುಖ್ಯ ನ್ಯಾಯಮೂರ್ತಿಗಳ ಕಚೇರಿಯನ್ನು ದುರ್ಬಲಗೊಳಿಸಲು ಹೆಣೆದಿರುವ ದೊಡ್ಡ ಪಿತೂರಿಯಾಗಿದೆ ಎಂದ ಆರೋಪಿಸಿದ್ದಾರೆ.

ಒಬ್ಬ ನ್ಯಾಯಾಧೀಶನಿಗೆ ತನ್ನ ಹುದ್ದೆಗಿಂತಲೂ ಮಿಗಿಲಾದುದು ಯಾವುದು ಇಲ್ಲ ಹಾಗಾಗಿ ಅದರ ಮೇಲೆಯೇ ದಾಳಿ ನಡೆದರೆ ಸಹಿಸಲಾಗುವುದಿಲ್ಲ ಎಂದಿದ್ದಾರೆ.ಇಂದು ನ್ಯಾಯಾಂಗದ ಸ್ವಾತಂತ್ರ್ಯ ಅಪಾಯದಲ್ಲಿದ್ದು ಇಂತಹ ಪರಿಸ್ಥಿತಿಯಲ್ಲಿ ನ್ಯಾಯಾಧೀಶರು ಕೆಲಸ ಮಾಡಬೇಕೆಂದರೆ ಯಾರು ಸಹ ಮುಂದೆ ಬರುವುದಿಲ್ಲ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...