Homeಮುಖಪುಟಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ

ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ

- Advertisement -
- Advertisement -

ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿರವರು ತನ್ನ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು 35 ವರ್ಷದ ಮಹಿಳೆಯೊಬ್ಬರು ಆರೋಪಿಸಿ, ಏಪ್ರಿಲ್ 19ರ ಶುಕ್ರವಾರ ಸುಪ್ರೀಂ ಕೋರ್ಟ್‍ನ 22 ನ್ಯಾಯಾಧೀಶರಿಗೆ ಅಫಿಡವಿಟ್ ಸಲ್ಲಿಸಿದ್ದಾರೆ.

2018ರ ಅಕ್ಟೋಬರ್ 10 ಮತ್ತು 11ರಂದು ನಾನು ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದಾಗ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿರವರು ಅವರ ಗೃಹಕಚೇರಿಯಲ್ಲಿ ನನ್ನೊಡನೆ ಬಹಳ ಅನುಚಿತವಾಗಿ ವರ್ತಿಸುವ ಮೂಲಕ ಲೈಂಗಿಕವಾಗಿ ಶೋಷಿಸಿದ್ದರು ಎಂದು ಆಕೆ ದೂರಿದ್ದಾರೆ.

ಅಲ್ಲದೇ ಈ ಘಟನೆಯ ಎರಡು ತಿಂಗಳ ನಂತರ ಆಕೆಯನ್ನು ಡಿಸೆಂಬರ್‍ನಲ್ಲಿ ಕೆಲಸದಿಂದ ವಜಾಗೊಳಿಸಲಾಗಿತ್ತು. ಕಾರಣ ಕೇಳಿದ್ದಲ್ಲಿ, ಆಕೆಯ ಮೇಲೆ ತನಿಖಾ ಸಮಿತಿಯೊಂದನ್ನು ರಚಿಸಿದ್ದು, ಆಕೆ ಒಂದು ದಿನ ಅನುಮತಿಯಿಲ್ಲದೇ ರಜೆ ತೆಗೆದುಕೊಂಡ ಕಾರಣಕ್ಕಾಗಿ ಕೆಲಸದಿಂದ ತೆಗೆಯಲಾಗಿದೆ ಎಂದು ತಿಳಿಸಿದೆ.

ಕೆಲಸದಿಂದ ವಜಾಗೊಳಿಸಿದ ಮಾತ್ರಕ್ಕೆ ಆಕೆಯ ಮೇಲಿನ ದೌರ್ಜನ್ಯ ನಿಂತಿಲ್ಲ. ಆಕೆಯ ಇಡೀ ಕುಟುಂಬವನ್ನೇ ಗುರಿ ಮಾಡಿ ತೊಂದರೆ ಕೊಡಲಾಗಿದೆ ಎಂದು ಅಫಿಡವಿಟ್‍ನಲ್ಲಿ ತಿಳಿಸಿದ್ದಾರೆ. ಆಕೆಯ ಗಂಡ ಮತ್ತು ಆತನ ತಮ್ಮ ಇಬ್ಬರೂ ಇಬ್ಬರು ದೆಹಲಿ ಪೋಲಿಸ್ ಇಲಾಖೆಯಲ್ಲಿ ಪೇದೆಗಳಾಗಿ ಕೆಲಸ ನಿರ್ವಹಿಸುತ್ತಿರುವಾಗಲೇ 2012ರ ಕಾಲೋನಿ ಭೂವಿವಾದದ ಹಳೆಯ ಕೇಸನ್ನು ಉಲ್ಲೇಖಿಸಿ ಅವರಿಬ್ಬರನ್ನು ಡಿಸೆಂಬರ್‍ನಿಂದಲೇ ಅಮಾನತು ಮಾಡಲಾಗಿದೆ.

ಅಲ್ಲಿಂದ ಮುಂದುವರೆದು ನವೀನ್ ಎಂಬ ವ್ಯಕ್ತಿಯು ಈಕೆಯ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿ ದೂರು ದಾಖಲಿಸಿದ್ದಾನೆ. 2017ರಲ್ಲಿ ಈಕೆ ಸುಪ್ರೀಂ ಕೋರ್ಟ್‍ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ನನ್ನಿಂದ 50000 ಸಾವಿರ ಹಣ ಪಡೆದು ವಂಚಿಸಿದ್ದಾಳೆ ಎಂಬುದು ಆ ದೂರಿನ ಸಾರಂಶ. ಇದಕ್ಕಾಗಿ ಆಕೆಯ ಮೇಲೆ ಎಫ್‍ಐಆರ್ ದಾಖಲಾದುದು ಮಾತ್ರವಲ್ಲ ಒಂದು ದಿನ ಜೈಲಿಗೂ ಕೂಡ ಹೋಗಿದ್ದು ಸದ್ಯ ಬೇಲ್ ಪಡೆದಿದ್ದಾಳೆ. ‘ಆ ಕೇಸ್‍ನಲ್ಲಿ ಭ್ರಷ್ಟಾಚಾರದ ದೂರು ದಾಖಲಿಸಿರುವ ನವೀನ್ ಎಂಬಾತನ ಮೇಲೂ ಕೂಡ ಲಂಚ ಕೊಟ್ಟ ಆರೋಪದ ಮೇಲೆ ದೂರು ದಾಖಲಿಸಬಹುದು, ಆದರೆ ಅದನ್ನು ಮಾಡದ ಪೋಲೀಸರು ಈಗ ಈಕೆಯ ಬೇಲ್ ರದ್ದುಗೊಳಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ಆಕೆಯ ಪರ ವಕೀಲ ಗ್ರೋವರ್ ಆರೋಪಿಸಿದ್ದಾರೆ.

ಆಕೆ ತನ್ನ ಮೇಲಿನ ದೌರ್ಜನ್ಯದ ವಿರುದ್ಧ ಹೋರಾಡದ ಕಾರಣಕ್ಕಾಗಿ ತನ್ನ ಉದ್ಯೋಗವನ್ನು ಕಳೆದುಕೊಳ್ಳಬೇಕಾಯಿತು, ಆಕೆಯ ಕುಟುಂಬದ ಇಬ್ಬರೂ ಅಮಾನತಾಗಿದ್ದಾರೆ. ಆಕೆ ಜೈಲಿಗೆ ಹೋದ ನಂತರ ಇದು ಇಲ್ಲಿಗೆ ನಿಲ್ಲುವುದಿಲ್ಲ ಎಂಬುದು ಅರ್ಥವಾಗಿದೆ. ಹಾಗಾಗಿ ಆಕೆ ತನಗಾದ ಅನ್ಯಾಯವನ್ನು ಸಾರ್ವಜನಿಕವಾಗಿ ತೆರೆದಿಡುವುದು ಮತ್ತು ಸುಪ್ರೀಂ ಕೋರ್ಟ್‍ನ ನ್ಯಾಯಾಧೀಶರಿಗೆ ಪತ್ರ ಬರೆಯದೇ ಬೇರೆ ಆಯ್ಕೆಗಳೇ ಇಲ್ಲ ಎಂದು ಗ್ರೋವರ್ ಅಭಿಪ್ರಾಯಪಡುತ್ತಾರೆ.

ನ್ಯಾಯಾಂಗ ಅಪಾಯದಲ್ಲಿದೆ – ರಂಜನ್ ಗಗೋಯಿ
ತನ್ನ ಮೇಲಿನ ಆರೋಪವನ್ನು ತಳ್ಳಿಹಾಕಿರುವ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ, ನ್ಯಾಯಾಂಗ ಅಪಾಯದಲ್ಲಿದೆ ಎಂದಿದ್ದಲ್ಲದೇ, ಈ ಪ್ರಕರಣ ಸ್ವತಂತ್ರ ನ್ಯಾಯಾಂಗ ಮತ್ತು ಮುಖ್ಯ ನ್ಯಾಯಮೂರ್ತಿಗಳ ಕಚೇರಿಯನ್ನು ದುರ್ಬಲಗೊಳಿಸಲು ಹೆಣೆದಿರುವ ದೊಡ್ಡ ಪಿತೂರಿಯಾಗಿದೆ ಎಂದ ಆರೋಪಿಸಿದ್ದಾರೆ.

ಒಬ್ಬ ನ್ಯಾಯಾಧೀಶನಿಗೆ ತನ್ನ ಹುದ್ದೆಗಿಂತಲೂ ಮಿಗಿಲಾದುದು ಯಾವುದು ಇಲ್ಲ ಹಾಗಾಗಿ ಅದರ ಮೇಲೆಯೇ ದಾಳಿ ನಡೆದರೆ ಸಹಿಸಲಾಗುವುದಿಲ್ಲ ಎಂದಿದ್ದಾರೆ.ಇಂದು ನ್ಯಾಯಾಂಗದ ಸ್ವಾತಂತ್ರ್ಯ ಅಪಾಯದಲ್ಲಿದ್ದು ಇಂತಹ ಪರಿಸ್ಥಿತಿಯಲ್ಲಿ ನ್ಯಾಯಾಧೀಶರು ಕೆಲಸ ಮಾಡಬೇಕೆಂದರೆ ಯಾರು ಸಹ ಮುಂದೆ ಬರುವುದಿಲ್ಲ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...