Homeಮುಖಪುಟಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ

ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ

- Advertisement -
- Advertisement -

ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿರವರು ತನ್ನ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು 35 ವರ್ಷದ ಮಹಿಳೆಯೊಬ್ಬರು ಆರೋಪಿಸಿ, ಏಪ್ರಿಲ್ 19ರ ಶುಕ್ರವಾರ ಸುಪ್ರೀಂ ಕೋರ್ಟ್‍ನ 22 ನ್ಯಾಯಾಧೀಶರಿಗೆ ಅಫಿಡವಿಟ್ ಸಲ್ಲಿಸಿದ್ದಾರೆ.

2018ರ ಅಕ್ಟೋಬರ್ 10 ಮತ್ತು 11ರಂದು ನಾನು ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದಾಗ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿರವರು ಅವರ ಗೃಹಕಚೇರಿಯಲ್ಲಿ ನನ್ನೊಡನೆ ಬಹಳ ಅನುಚಿತವಾಗಿ ವರ್ತಿಸುವ ಮೂಲಕ ಲೈಂಗಿಕವಾಗಿ ಶೋಷಿಸಿದ್ದರು ಎಂದು ಆಕೆ ದೂರಿದ್ದಾರೆ.

ಅಲ್ಲದೇ ಈ ಘಟನೆಯ ಎರಡು ತಿಂಗಳ ನಂತರ ಆಕೆಯನ್ನು ಡಿಸೆಂಬರ್‍ನಲ್ಲಿ ಕೆಲಸದಿಂದ ವಜಾಗೊಳಿಸಲಾಗಿತ್ತು. ಕಾರಣ ಕೇಳಿದ್ದಲ್ಲಿ, ಆಕೆಯ ಮೇಲೆ ತನಿಖಾ ಸಮಿತಿಯೊಂದನ್ನು ರಚಿಸಿದ್ದು, ಆಕೆ ಒಂದು ದಿನ ಅನುಮತಿಯಿಲ್ಲದೇ ರಜೆ ತೆಗೆದುಕೊಂಡ ಕಾರಣಕ್ಕಾಗಿ ಕೆಲಸದಿಂದ ತೆಗೆಯಲಾಗಿದೆ ಎಂದು ತಿಳಿಸಿದೆ.

ಕೆಲಸದಿಂದ ವಜಾಗೊಳಿಸಿದ ಮಾತ್ರಕ್ಕೆ ಆಕೆಯ ಮೇಲಿನ ದೌರ್ಜನ್ಯ ನಿಂತಿಲ್ಲ. ಆಕೆಯ ಇಡೀ ಕುಟುಂಬವನ್ನೇ ಗುರಿ ಮಾಡಿ ತೊಂದರೆ ಕೊಡಲಾಗಿದೆ ಎಂದು ಅಫಿಡವಿಟ್‍ನಲ್ಲಿ ತಿಳಿಸಿದ್ದಾರೆ. ಆಕೆಯ ಗಂಡ ಮತ್ತು ಆತನ ತಮ್ಮ ಇಬ್ಬರೂ ಇಬ್ಬರು ದೆಹಲಿ ಪೋಲಿಸ್ ಇಲಾಖೆಯಲ್ಲಿ ಪೇದೆಗಳಾಗಿ ಕೆಲಸ ನಿರ್ವಹಿಸುತ್ತಿರುವಾಗಲೇ 2012ರ ಕಾಲೋನಿ ಭೂವಿವಾದದ ಹಳೆಯ ಕೇಸನ್ನು ಉಲ್ಲೇಖಿಸಿ ಅವರಿಬ್ಬರನ್ನು ಡಿಸೆಂಬರ್‍ನಿಂದಲೇ ಅಮಾನತು ಮಾಡಲಾಗಿದೆ.

ಅಲ್ಲಿಂದ ಮುಂದುವರೆದು ನವೀನ್ ಎಂಬ ವ್ಯಕ್ತಿಯು ಈಕೆಯ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿ ದೂರು ದಾಖಲಿಸಿದ್ದಾನೆ. 2017ರಲ್ಲಿ ಈಕೆ ಸುಪ್ರೀಂ ಕೋರ್ಟ್‍ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ನನ್ನಿಂದ 50000 ಸಾವಿರ ಹಣ ಪಡೆದು ವಂಚಿಸಿದ್ದಾಳೆ ಎಂಬುದು ಆ ದೂರಿನ ಸಾರಂಶ. ಇದಕ್ಕಾಗಿ ಆಕೆಯ ಮೇಲೆ ಎಫ್‍ಐಆರ್ ದಾಖಲಾದುದು ಮಾತ್ರವಲ್ಲ ಒಂದು ದಿನ ಜೈಲಿಗೂ ಕೂಡ ಹೋಗಿದ್ದು ಸದ್ಯ ಬೇಲ್ ಪಡೆದಿದ್ದಾಳೆ. ‘ಆ ಕೇಸ್‍ನಲ್ಲಿ ಭ್ರಷ್ಟಾಚಾರದ ದೂರು ದಾಖಲಿಸಿರುವ ನವೀನ್ ಎಂಬಾತನ ಮೇಲೂ ಕೂಡ ಲಂಚ ಕೊಟ್ಟ ಆರೋಪದ ಮೇಲೆ ದೂರು ದಾಖಲಿಸಬಹುದು, ಆದರೆ ಅದನ್ನು ಮಾಡದ ಪೋಲೀಸರು ಈಗ ಈಕೆಯ ಬೇಲ್ ರದ್ದುಗೊಳಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ಆಕೆಯ ಪರ ವಕೀಲ ಗ್ರೋವರ್ ಆರೋಪಿಸಿದ್ದಾರೆ.

ಆಕೆ ತನ್ನ ಮೇಲಿನ ದೌರ್ಜನ್ಯದ ವಿರುದ್ಧ ಹೋರಾಡದ ಕಾರಣಕ್ಕಾಗಿ ತನ್ನ ಉದ್ಯೋಗವನ್ನು ಕಳೆದುಕೊಳ್ಳಬೇಕಾಯಿತು, ಆಕೆಯ ಕುಟುಂಬದ ಇಬ್ಬರೂ ಅಮಾನತಾಗಿದ್ದಾರೆ. ಆಕೆ ಜೈಲಿಗೆ ಹೋದ ನಂತರ ಇದು ಇಲ್ಲಿಗೆ ನಿಲ್ಲುವುದಿಲ್ಲ ಎಂಬುದು ಅರ್ಥವಾಗಿದೆ. ಹಾಗಾಗಿ ಆಕೆ ತನಗಾದ ಅನ್ಯಾಯವನ್ನು ಸಾರ್ವಜನಿಕವಾಗಿ ತೆರೆದಿಡುವುದು ಮತ್ತು ಸುಪ್ರೀಂ ಕೋರ್ಟ್‍ನ ನ್ಯಾಯಾಧೀಶರಿಗೆ ಪತ್ರ ಬರೆಯದೇ ಬೇರೆ ಆಯ್ಕೆಗಳೇ ಇಲ್ಲ ಎಂದು ಗ್ರೋವರ್ ಅಭಿಪ್ರಾಯಪಡುತ್ತಾರೆ.

ನ್ಯಾಯಾಂಗ ಅಪಾಯದಲ್ಲಿದೆ – ರಂಜನ್ ಗಗೋಯಿ
ತನ್ನ ಮೇಲಿನ ಆರೋಪವನ್ನು ತಳ್ಳಿಹಾಕಿರುವ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ, ನ್ಯಾಯಾಂಗ ಅಪಾಯದಲ್ಲಿದೆ ಎಂದಿದ್ದಲ್ಲದೇ, ಈ ಪ್ರಕರಣ ಸ್ವತಂತ್ರ ನ್ಯಾಯಾಂಗ ಮತ್ತು ಮುಖ್ಯ ನ್ಯಾಯಮೂರ್ತಿಗಳ ಕಚೇರಿಯನ್ನು ದುರ್ಬಲಗೊಳಿಸಲು ಹೆಣೆದಿರುವ ದೊಡ್ಡ ಪಿತೂರಿಯಾಗಿದೆ ಎಂದ ಆರೋಪಿಸಿದ್ದಾರೆ.

ಒಬ್ಬ ನ್ಯಾಯಾಧೀಶನಿಗೆ ತನ್ನ ಹುದ್ದೆಗಿಂತಲೂ ಮಿಗಿಲಾದುದು ಯಾವುದು ಇಲ್ಲ ಹಾಗಾಗಿ ಅದರ ಮೇಲೆಯೇ ದಾಳಿ ನಡೆದರೆ ಸಹಿಸಲಾಗುವುದಿಲ್ಲ ಎಂದಿದ್ದಾರೆ.ಇಂದು ನ್ಯಾಯಾಂಗದ ಸ್ವಾತಂತ್ರ್ಯ ಅಪಾಯದಲ್ಲಿದ್ದು ಇಂತಹ ಪರಿಸ್ಥಿತಿಯಲ್ಲಿ ನ್ಯಾಯಾಧೀಶರು ಕೆಲಸ ಮಾಡಬೇಕೆಂದರೆ ಯಾರು ಸಹ ಮುಂದೆ ಬರುವುದಿಲ್ಲ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...