Homeಮುಖಪುಟಅಧೀರ್ ಚೌಧರಿಗೆ ಸೆಡ್ಡು ಹೊಡೆಯಲು ಯೂಸುಫ್ ಪಠಾಣ್‌ಗೆ ಕಣಕ್ಕಿಳಿಸಿದ ದೀದಿ?

ಅಧೀರ್ ಚೌಧರಿಗೆ ಸೆಡ್ಡು ಹೊಡೆಯಲು ಯೂಸುಫ್ ಪಠಾಣ್‌ಗೆ ಕಣಕ್ಕಿಳಿಸಿದ ದೀದಿ?

- Advertisement -
- Advertisement -

ಪ.ಬಂಗಾಳದಲ್ಲಿ ಟಿಎಂಸಿ ಮತ್ತು ಕಾಂಗ್ರೆಸ್‌ ನಾಯಕ ಅಧೀರ್ ಚೌಧರಿ ನಡುವೆ ನಡೆಯುತ್ತಿದ್ದ ಜಟಾಪಟಿ ಯೂಸುಫ್ ಪಠಾಣ್ ಅವರನ್ನು ಟಿಎಂಸಿ ಲೋಕಸಭೆ ಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿದ ಬಳಿಕ  ಮತ್ತಷ್ಟು ತಾರಕಕ್ಕೇರಿದೆ. ಯೂಸುಫ್ ಪಠಾಣ್ ಅವರಿಗೆ ಬಹರಂಪುರ ಕ್ಷೇತ್ರದಿಂದ ಟಿಎಂಸಿ ಟಿಕೆಟ್‌ ನೀಡಿದೆ. ಬಹರಂಪುರ ಕ್ಷೇತ್ರ 5 ಅವಧಿಗಳ ಕಾಲ ಅಧೀರ್‌ ಚೌಧರಿ ಅವರು ಕಾಂಗ್ರೆಸ್‌ನಿಂದ ಪ್ರತಿನಿಧಿಸಿದ ಕ್ಷೇತ್ರವಾಗಿದೆ. ಈ ಕ್ಷೇತ್ರದಲ್ಲಿ ಯೂಸುಫ್ ಪಠಾಣ್ ಅವರನ್ನು ಟಿಎಂಸಿ ಕಣಕ್ಕಿಳಿಸಿರುವುದು ಅಧೀರ್ ಚೌಧರಿಗೆ ದೊಡ್ಡ ಹೊಡೆತವನ್ನು ನೀಡುವ ಟಿಎಂಸಿಯ ತಂತ್ರದ ಭಾಗವಾಗಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಅಧೀರ್ ಚೌಧರಿ, ಬಹರಂಪುರ ಕ್ಷೇತ್ರದಲ್ಲಿ ಯೂಸುಫ್ ಪಠಾಣ್ ಅವರನ್ನು ಅಭ್ಯರ್ಥಿಯಾಗಿ ನೇಮಿಸುವ ಮೂಲಕ ಮಮತಾ ಬ್ಯಾನರ್ಜಿ ಮೋದಿಗೆ, ನನ್ನ ಬಗ್ಗೆ ಅಸಮಾಧಾನಗೊಳ್ಳಬೇಡಿ, ನಾನು ಬಿಜೆಪಿ ವಿರುದ್ಧ ಹೋರಾಡಲು ನಿಂತಿಲ್ಲ ಎಂದು ಸಂದೇಶ ಕಳುಹಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಜನಸಾಮಾನ್ಯರನ್ನು ಧ್ರುವೀಕರಿಸಲು ಮತ್ತು ಬಿಜೆಪಿಗೆ ಸಹಾಯ ಮಾಡಲು ಇರ್ಫಾನ್‌ ಪಠಾಣ್ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ, ಇದರಿಂದ ಕಾಂಗ್ರೆಸ್‌ನ್ನು ಸೋಲಿಸಬಹುದು. ಭಾರತದ ಯಾವುದೇ ರಾಜಕೀಯ ಪಕ್ಷಗಳು ತಮ್ಮಂತಹ ನಾಯಕರನ್ನು ನಂಬಬಾರದು ಎಂದು ಮಮತಾ ಬ್ಯಾನರ್ಜಿ ಇಂದು ಸಾಬೀತುಪಡಿಸಿದ್ದಾರೆ. ಮಮತಾ ಬ್ಯಾನರ್ಜಿ ಅವರು ಇಂಡಿಯಾ ಮೈತ್ರಿಯಲ್ಲಿ ಮುಂದುವರಿದರೆ, ಪ್ರಧಾನಿ ಮೋದಿ ಅತೃಪ್ತರಾಗುತ್ತಾರೆ ಎಂಬ ಭಯದಲ್ಲಿದ್ದಾರೆ. ಇಂಡಿಯಾ ಮೈತ್ರಿಕೂಟದಿಂದ ಬೇರ್ಪಡುವ ಮೂಲಕ ಅವರು ಪಿಎಂಒಗೆ ಸಂದೇಶವನ್ನು ಕಳುಹಿಸಿದ್ದಾರೆ ಎಂದು ಹೇಳಿದ್ದಾರೆ.

ಯೂಸುಫ್ ಪಠಾಣ್ ಅವರನ್ನು ಟಿಎಂಸಿ ರಾಜ್ಯಸಭೆಗೆ ನಾಮನಿರ್ದೇಶನ ಮಾಡಬೇಕಿತ್ತು ಅಥವಾ ಇಂಡಿಯಾ ಬ್ಲಾಕ್ ಮೂಲಕ ಗುಜರಾತ್‌ನಲ್ಲಿ ಸ್ಪರ್ಧೆಗಿಳಿಸಬೇಕಿತ್ತು. ಟಿಎಂಸಿ ಯೂಸುಫ್ ಪಠಾಣ್ ಅವರನ್ನು ಗೌರವಿಸಲು ಬಯಸಿದರೆ, ಅವರನ್ನು ರಾಜ್ಯಸಭೆಗೆ ಕಳುಹಿಸಬೇಕಿತ್ತು. ಮಮತಾ ಬ್ಯಾನರ್ಜಿ ಅವರಿಗೆ ಯೂಸುಫ್ ಪಠಾಣ್ ಬಗ್ಗೆ ಒಳ್ಳೆಯ ಉದ್ದೇಶವಿದ್ದರೆ, ಅವರಿಗೆ ಇಂಡಿಯಾ ಮೈತ್ರಿಯ ಜೊತೆ ಸ್ಥಾನ ಕೇಳುತ್ತಿದ್ದರು ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಟಿಎಂಸಿ 42 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಹಲವು ಹೊಸ ಮುಖಗಳಿವೆ. ಭಾರತದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರನ್ನು ಬಹ್ರಂಪುರದಿಂದ ಟಿಎಂಸಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿದೆ. ಟಿಕೆಟ್‌ ಘೋಷಣೆ ಬಳಿಕ ಪಠಾಣ್ ಅವರು ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಸಂಸತ್ತಿನಲ್ಲಿ ಜನರ ಧ್ವನಿಯಾಗುವ ಜವಾಬ್ದಾರಿಯೊಂದಿಗೆ ತನ್ನನ್ನು ನಂಬಿದ್ದಕ್ಕಾಗಿ ಸಿಎಂಗೆ ಕೃತಜ್ಞತೆ ಸಲ್ಲಿಸುತ್ತೇನೆ, ಜನಪ್ರತಿನಿಧಿಗಳಾಗಿ, ಬಡವರು ಮತ್ತು ವಂಚಿತರನ್ನು ಮೇಲಕ್ಕೆತ್ತುವುದು ನಮ್ಮ ಕರ್ತವ್ಯ ಮತ್ತು ಅದನ್ನು ಸಾಧಿಸುವ ಇರಾದೆಯನ್ನು ತಾನು ಹೊಂದಿರುವುದಾಗಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷ ಅಧೀರ್‌ ಚೌಧರಿ ಮತ್ತು ಟಿಎಂಸಿ ನಡುವೆ ಈ ಮೊದಲು ಕೂಡ ಜಟಾಪಟಿ ನಡೆದಿತ್ತು. ಬಂಗಾಳದಲ್ಲಿ ಮೈತ್ರಿ ಕಾರ್ಯರೂಪಕ್ಕೆ ಬರದಿರಲು ಅಧೀರ್ ರಂಜನ್ ಚೌಧರಿ ಕಾರಣ ಎಂದು ಓಬ್ರಿಯಾನ್ ಹೇಳಿದ್ದರು. ಚೌಧರಿ ಅವರು ಬಂಗಾಳದಲ್ಲಿ ಇಂಡಿಯಾ ಮೈತ್ರಿಯ ಸಮಾಧಿಗಾರ ಎಂದು ಕೂಡ ಟಿಎಂಸಿ ನಾಯಕರು ಈ ಮೊದಲು ಆರೋಪಿಸಿದ್ದರು. ಲೋಕಸಭೆಯಲ್ಲಿ ಕಾಂಗ್ರೆಸ್‌ನ ನಾಯಕರಾಗಿರುವ ಚೌಧರಿ ಅವರು ತೃಣಮೂಲ ಮುಖ್ಯಸ್ಥರನ್ನು “ಅವಕಾಶವಾದಿ” ನಾಯಕಿ ಎಂದು ಈ ಮೊದಲು ಕರೆದಿದ್ದರು. ಆದರೆ ಕಾಂಗ್ರೆಸ್‌ ಹೈಕಮಾಂಡ್‌ ಮಮತಾ ಇಲ್ಲದೆ ಇಂಡಿಯಾ ಮೈತ್ರಿ ಅಪೂರ್ಣ ಎಂದು ಹೇಳಿಕೊಂಡು ಟಿಎಂಸಿ ಜೊತೆಗಿನ ಡ್ಯಾಮೇಜ್‌ ಕಂಟ್ರೋಲ್‌ಗೆ ಪ್ರಯತ್ನಿಸಿದ್ದರು. ಬಂಗಾಳದಲ್ಲಿ ಕಾಂಗ್ರೆಸ್‌ಗಿಂತ, ಅಧೀರ್‌ ಚೌಧರಿ ವಿರುದ್ಧವೇ ಮಮತಾ ಮುನಿಸಿಕೊಂಡಿದ್ದು, ಅವರ ವಿರುದ್ಧ ಯೂಸುಫ್ ಪಠಾಣ್ ಅವರನ್ನು ಕಣಕ್ಕಿಳಿಸಲು ಕಾರಣ ಎಂದು ಹೇಳಲಾಗಿದೆ.

ಇದನ್ನು ಓದಿ: ನಾಳೆಯೊಳಗೆ ಚುನಾವಣಾ ಬಾಂಡ್ ಕುರಿತ ಮಾಹಿತಿ ನೀಡಿ: ಎಸ್‌ಬಿಐಗೆ ಸುಪ್ರೀಂಕೋರ್ಟ್ ಖಡಕ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...