Homeಮುಖಪುಟಅಧೀರ್ ಚೌಧರಿಗೆ ಸೆಡ್ಡು ಹೊಡೆಯಲು ಯೂಸುಫ್ ಪಠಾಣ್‌ಗೆ ಕಣಕ್ಕಿಳಿಸಿದ ದೀದಿ?

ಅಧೀರ್ ಚೌಧರಿಗೆ ಸೆಡ್ಡು ಹೊಡೆಯಲು ಯೂಸುಫ್ ಪಠಾಣ್‌ಗೆ ಕಣಕ್ಕಿಳಿಸಿದ ದೀದಿ?

- Advertisement -
- Advertisement -

ಪ.ಬಂಗಾಳದಲ್ಲಿ ಟಿಎಂಸಿ ಮತ್ತು ಕಾಂಗ್ರೆಸ್‌ ನಾಯಕ ಅಧೀರ್ ಚೌಧರಿ ನಡುವೆ ನಡೆಯುತ್ತಿದ್ದ ಜಟಾಪಟಿ ಯೂಸುಫ್ ಪಠಾಣ್ ಅವರನ್ನು ಟಿಎಂಸಿ ಲೋಕಸಭೆ ಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿದ ಬಳಿಕ  ಮತ್ತಷ್ಟು ತಾರಕಕ್ಕೇರಿದೆ. ಯೂಸುಫ್ ಪಠಾಣ್ ಅವರಿಗೆ ಬಹರಂಪುರ ಕ್ಷೇತ್ರದಿಂದ ಟಿಎಂಸಿ ಟಿಕೆಟ್‌ ನೀಡಿದೆ. ಬಹರಂಪುರ ಕ್ಷೇತ್ರ 5 ಅವಧಿಗಳ ಕಾಲ ಅಧೀರ್‌ ಚೌಧರಿ ಅವರು ಕಾಂಗ್ರೆಸ್‌ನಿಂದ ಪ್ರತಿನಿಧಿಸಿದ ಕ್ಷೇತ್ರವಾಗಿದೆ. ಈ ಕ್ಷೇತ್ರದಲ್ಲಿ ಯೂಸುಫ್ ಪಠಾಣ್ ಅವರನ್ನು ಟಿಎಂಸಿ ಕಣಕ್ಕಿಳಿಸಿರುವುದು ಅಧೀರ್ ಚೌಧರಿಗೆ ದೊಡ್ಡ ಹೊಡೆತವನ್ನು ನೀಡುವ ಟಿಎಂಸಿಯ ತಂತ್ರದ ಭಾಗವಾಗಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಅಧೀರ್ ಚೌಧರಿ, ಬಹರಂಪುರ ಕ್ಷೇತ್ರದಲ್ಲಿ ಯೂಸುಫ್ ಪಠಾಣ್ ಅವರನ್ನು ಅಭ್ಯರ್ಥಿಯಾಗಿ ನೇಮಿಸುವ ಮೂಲಕ ಮಮತಾ ಬ್ಯಾನರ್ಜಿ ಮೋದಿಗೆ, ನನ್ನ ಬಗ್ಗೆ ಅಸಮಾಧಾನಗೊಳ್ಳಬೇಡಿ, ನಾನು ಬಿಜೆಪಿ ವಿರುದ್ಧ ಹೋರಾಡಲು ನಿಂತಿಲ್ಲ ಎಂದು ಸಂದೇಶ ಕಳುಹಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಜನಸಾಮಾನ್ಯರನ್ನು ಧ್ರುವೀಕರಿಸಲು ಮತ್ತು ಬಿಜೆಪಿಗೆ ಸಹಾಯ ಮಾಡಲು ಇರ್ಫಾನ್‌ ಪಠಾಣ್ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ, ಇದರಿಂದ ಕಾಂಗ್ರೆಸ್‌ನ್ನು ಸೋಲಿಸಬಹುದು. ಭಾರತದ ಯಾವುದೇ ರಾಜಕೀಯ ಪಕ್ಷಗಳು ತಮ್ಮಂತಹ ನಾಯಕರನ್ನು ನಂಬಬಾರದು ಎಂದು ಮಮತಾ ಬ್ಯಾನರ್ಜಿ ಇಂದು ಸಾಬೀತುಪಡಿಸಿದ್ದಾರೆ. ಮಮತಾ ಬ್ಯಾನರ್ಜಿ ಅವರು ಇಂಡಿಯಾ ಮೈತ್ರಿಯಲ್ಲಿ ಮುಂದುವರಿದರೆ, ಪ್ರಧಾನಿ ಮೋದಿ ಅತೃಪ್ತರಾಗುತ್ತಾರೆ ಎಂಬ ಭಯದಲ್ಲಿದ್ದಾರೆ. ಇಂಡಿಯಾ ಮೈತ್ರಿಕೂಟದಿಂದ ಬೇರ್ಪಡುವ ಮೂಲಕ ಅವರು ಪಿಎಂಒಗೆ ಸಂದೇಶವನ್ನು ಕಳುಹಿಸಿದ್ದಾರೆ ಎಂದು ಹೇಳಿದ್ದಾರೆ.

ಯೂಸುಫ್ ಪಠಾಣ್ ಅವರನ್ನು ಟಿಎಂಸಿ ರಾಜ್ಯಸಭೆಗೆ ನಾಮನಿರ್ದೇಶನ ಮಾಡಬೇಕಿತ್ತು ಅಥವಾ ಇಂಡಿಯಾ ಬ್ಲಾಕ್ ಮೂಲಕ ಗುಜರಾತ್‌ನಲ್ಲಿ ಸ್ಪರ್ಧೆಗಿಳಿಸಬೇಕಿತ್ತು. ಟಿಎಂಸಿ ಯೂಸುಫ್ ಪಠಾಣ್ ಅವರನ್ನು ಗೌರವಿಸಲು ಬಯಸಿದರೆ, ಅವರನ್ನು ರಾಜ್ಯಸಭೆಗೆ ಕಳುಹಿಸಬೇಕಿತ್ತು. ಮಮತಾ ಬ್ಯಾನರ್ಜಿ ಅವರಿಗೆ ಯೂಸುಫ್ ಪಠಾಣ್ ಬಗ್ಗೆ ಒಳ್ಳೆಯ ಉದ್ದೇಶವಿದ್ದರೆ, ಅವರಿಗೆ ಇಂಡಿಯಾ ಮೈತ್ರಿಯ ಜೊತೆ ಸ್ಥಾನ ಕೇಳುತ್ತಿದ್ದರು ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಟಿಎಂಸಿ 42 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಹಲವು ಹೊಸ ಮುಖಗಳಿವೆ. ಭಾರತದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರನ್ನು ಬಹ್ರಂಪುರದಿಂದ ಟಿಎಂಸಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿದೆ. ಟಿಕೆಟ್‌ ಘೋಷಣೆ ಬಳಿಕ ಪಠಾಣ್ ಅವರು ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಸಂಸತ್ತಿನಲ್ಲಿ ಜನರ ಧ್ವನಿಯಾಗುವ ಜವಾಬ್ದಾರಿಯೊಂದಿಗೆ ತನ್ನನ್ನು ನಂಬಿದ್ದಕ್ಕಾಗಿ ಸಿಎಂಗೆ ಕೃತಜ್ಞತೆ ಸಲ್ಲಿಸುತ್ತೇನೆ, ಜನಪ್ರತಿನಿಧಿಗಳಾಗಿ, ಬಡವರು ಮತ್ತು ವಂಚಿತರನ್ನು ಮೇಲಕ್ಕೆತ್ತುವುದು ನಮ್ಮ ಕರ್ತವ್ಯ ಮತ್ತು ಅದನ್ನು ಸಾಧಿಸುವ ಇರಾದೆಯನ್ನು ತಾನು ಹೊಂದಿರುವುದಾಗಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷ ಅಧೀರ್‌ ಚೌಧರಿ ಮತ್ತು ಟಿಎಂಸಿ ನಡುವೆ ಈ ಮೊದಲು ಕೂಡ ಜಟಾಪಟಿ ನಡೆದಿತ್ತು. ಬಂಗಾಳದಲ್ಲಿ ಮೈತ್ರಿ ಕಾರ್ಯರೂಪಕ್ಕೆ ಬರದಿರಲು ಅಧೀರ್ ರಂಜನ್ ಚೌಧರಿ ಕಾರಣ ಎಂದು ಓಬ್ರಿಯಾನ್ ಹೇಳಿದ್ದರು. ಚೌಧರಿ ಅವರು ಬಂಗಾಳದಲ್ಲಿ ಇಂಡಿಯಾ ಮೈತ್ರಿಯ ಸಮಾಧಿಗಾರ ಎಂದು ಕೂಡ ಟಿಎಂಸಿ ನಾಯಕರು ಈ ಮೊದಲು ಆರೋಪಿಸಿದ್ದರು. ಲೋಕಸಭೆಯಲ್ಲಿ ಕಾಂಗ್ರೆಸ್‌ನ ನಾಯಕರಾಗಿರುವ ಚೌಧರಿ ಅವರು ತೃಣಮೂಲ ಮುಖ್ಯಸ್ಥರನ್ನು “ಅವಕಾಶವಾದಿ” ನಾಯಕಿ ಎಂದು ಈ ಮೊದಲು ಕರೆದಿದ್ದರು. ಆದರೆ ಕಾಂಗ್ರೆಸ್‌ ಹೈಕಮಾಂಡ್‌ ಮಮತಾ ಇಲ್ಲದೆ ಇಂಡಿಯಾ ಮೈತ್ರಿ ಅಪೂರ್ಣ ಎಂದು ಹೇಳಿಕೊಂಡು ಟಿಎಂಸಿ ಜೊತೆಗಿನ ಡ್ಯಾಮೇಜ್‌ ಕಂಟ್ರೋಲ್‌ಗೆ ಪ್ರಯತ್ನಿಸಿದ್ದರು. ಬಂಗಾಳದಲ್ಲಿ ಕಾಂಗ್ರೆಸ್‌ಗಿಂತ, ಅಧೀರ್‌ ಚೌಧರಿ ವಿರುದ್ಧವೇ ಮಮತಾ ಮುನಿಸಿಕೊಂಡಿದ್ದು, ಅವರ ವಿರುದ್ಧ ಯೂಸುಫ್ ಪಠಾಣ್ ಅವರನ್ನು ಕಣಕ್ಕಿಳಿಸಲು ಕಾರಣ ಎಂದು ಹೇಳಲಾಗಿದೆ.

ಇದನ್ನು ಓದಿ: ನಾಳೆಯೊಳಗೆ ಚುನಾವಣಾ ಬಾಂಡ್ ಕುರಿತ ಮಾಹಿತಿ ನೀಡಿ: ಎಸ್‌ಬಿಐಗೆ ಸುಪ್ರೀಂಕೋರ್ಟ್ ಖಡಕ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...