Homeಮುಖಪುಟಜಿಗ್ನೇಶ್ ಮೇವಾನಿ ಸಂಘಟನೆಯ ನೇತೃತ್ವದಲ್ಲಿ ಬಾಲಕಿಯರಿಗೆ ಸ್ವರಕ್ಷಣಾ ತರಬೇತಿ

ಜಿಗ್ನೇಶ್ ಮೇವಾನಿ ಸಂಘಟನೆಯ ನೇತೃತ್ವದಲ್ಲಿ ಬಾಲಕಿಯರಿಗೆ ಸ್ವರಕ್ಷಣಾ ತರಬೇತಿ

- Advertisement -
- Advertisement -

ಅತ್ಯಾಚಾರ ಮತ್ತು ದೌರ್ಜನ್ಯಗಳನ್ನು ತಪ್ಪಿಸಲು ಬಾಲಕಿಯರಿಗೆ ಸ್ವರಕ್ಷಣಾ ತರಬೇತಿ ನೀಡಲು ಗುಜರಾತ್‌‌ನ ಮೆಹ್ಸಾನಾದ ಸ್ವಯಂಸೇವಕ ಗುಂಪು ನಿರ್ಧರಿಸಿದ್ದು, ಅಕ್ಟೋಬರ್ 20 ರಂದು ಮೆಹ್ಸಾನಾ ಪಟ್ಟಣದಲ್ಲಿ ಕಾರ್ಯಕ್ರಮವನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ.

ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ನೇತೃತ್ವದ ಸಂಘಟನೆಯಾದ ರಾಷ್ಟ್ರೀಯ ದಲಿತ ಅಧಿಕಾರ್‌ ಮಂಚ್ (RDAM) ನ ಮೆಹ್ಸಾನಾ ಘಟಕದಿಂದ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಇದನ್ನೂ ಓದಿ: ’ಓ ಭರತವರ್ಷದ ನಾಯಕರೆ, ಅವಮಾನದಲ್ಲೇ ಮುಳುಗಿ ಸಾಯಿರಿ’; ಜಿಗ್ನೇಶ್ ಮೇವಾನಿ ಆಕ್ರೋಶ

“ದೇಶದ ವಿವಿಧ ಭಾಗಗಳಲ್ಲಿ ಹುಡುಗಿಯರ ಮೇಲೆ, ವಿಶೇಷವಾಗಿ ದಲಿತರ ಮೇಲೆ ಹಲ್ಲೆ ಪ್ರಕರಣಗಳು ಸಾಕಷ್ಟು ನಡೆದಿವೆ. ಆದ್ದರಿಂದ, ಇಂತಹ ಘಟನೆಗಳನ್ನು ತಪ್ಪಿಸಲು ಹುಡುಗಿಯರಿಗೆ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ತರಬೇತಿ ನೀಡಲಾಗುತ್ತದೆ ಎಂದು ನಾವು ಭಾವಿಸಿದ್ದೇವೆ. ಆದ್ದರಿಂದ, ಮೆಹ್ಸಾನಾದಲ್ಲಿ ಬಾಲಕಿಯರಿಗೆ ಸ್ವರಕ್ಷಣೆ ತರಬೇತಿ ನೀಡಲು ಪ್ರಾಯೋಗಿಕ ಆಧಾರದ ಮೇಲೆ ನಾವು ಇದನ್ನು ಪ್ರಾರಂಭಿಸುತ್ತಿದ್ದೇವೆ. ದಲಿತ ಹುಡುಗಿಯರು ನಮ್ಮ ಆದ್ಯತೆ. ಆದಾಗ್ಯೂ, ತರಬೇತಿಯು ಎಲ್ಲಾ ಧರ್ಮ ಮತ್ತು ಜಾತಿಯ ಹುಡುಗಿಯರಿಗೆ ಮುಕ್ತವಾಗಿದೆ” ಎಂದು RDAM ಮೆಹ್ಸಾನಾದ ಪದಾಧಿಕಾರಿ ಕೌಶಿಕ್ ಪರ್ಮಾರ್ ಹೇಳಿದ್ದಾರೆ.

“ಇದು 15 ದಿನಗಳ ತರಬೇತಿಯಾಗಿದ್ದು, ಭಾಗವಹಿಸುವ ಪ್ರತಿಯೊಬ್ಬರಿಂದ 100 ರೂ.ಗಳ ಟೋಕನ್ ಶುಲ್ಕ ವಿಧಿಸಲು ನಾವು ಯೋಜಿಸುತ್ತಿದ್ದೇವೆ. 15 ದಿನಗಳ ತರಬೇತಿಯನ್ನು ಪೂರ್ಣಗೊಳಿಸಿದ ನಂತರ ಈ ಶುಲ್ಕವನ್ನು ಹುಡುಗಿಯರಿಗೆ ಹಿಂದಿರುಗಿಸಲಾಗುತ್ತದೆ” ಎಂದು ಪರ್ಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಚಂದ್ರಯಾನ ಇರಲಿ; ಒಳಚರಂಡಿ ಸ್ವಚ್ಛಗೊಳಿಸುವ ತಂತ್ರಜ್ಞಾನ ಎಲ್ಲಿದೆ? ಗುಜರಾತ್ ಸರಕಾರಕ್ಕೆ ಜಿಗ್ನೇಶ್ ಮೇವಾನಿ ಪ್ರಶ್ನೆ

ತರಬೇತಿ ನೀಡಲು ವೃತ್ತಿಪರ ಟೇಕ್ವಾಂಡೋ ಸಮರ ಕಲಾ ಬೋಧಕರಾದ ಮೆಹ್ಸಾನಾದ ದೀಪಕ್ ಚಾವ್ಡಾ ಒಪ್ಪಿಕೊಂಡಿದ್ದಾರೆ ಎಂದು ಪರ್ಮಾರ್‌ ಹೇಳಿದ್ದಾರೆ. ದೀಪಕ್ ಚಾವ್ಡಾ ಈಗಾಗಲೇ ಮೆಹ್ಸಾನಾದ ವಿವಿಧ ಕಡೆ ಸಮರ ಕಲಾ ತರಬೇತಿಯನ್ನು ನೀಡುತ್ತಿದ್ದು, ವರ್ಷಗಳಿಂದ ಬಾಲಕಿಯರಿಗೆ ಆತ್ಮರಕ್ಷಣೆಗಾಗಿ ತರಬೇತಿ ನೀಡುತ್ತಿದ್ದಾರೆ.

“ಪ್ರತಿಯೊಬ್ಬ ಹುಡುಗಿಯೂ ತನ್ನನ್ನು ತಾನು ರಕ್ಷಿಸಿಕೊಳ್ಳಲು ಮೂಲಭೂತ ಕೌಶಲ್ಯಗಳನ್ನು ಹೊಂದಿರಬೇಕೆಂದು ನಾನು ನಂಬುತ್ತೇನೆ. ಹಾಗಾಗಿ, ನಾನು ಬಹಳ ಹಿಂದಿನಿಂದಲೂ ಹುಡುಗಿಯರಿಗೆ ಸ್ವರಕ್ಷಣೆಗಾಗಿ ಉಚಿತ ತರಬೇತಿಯನ್ನು ನೀಡುತ್ತಿದ್ದೇನೆ. ನಾನು ಟೇಕ್ವಾಂಡೋದಲ್ಲಿ ಪರಿಣಿತನಾಗಿದ್ದು, ಹುಡುಗಿಯರಿಗೆ ಮೂಲಭೂತ ಸ್ವರಕ್ಷಣೆ ತಂತ್ರಗಳಲ್ಲಿ ತರಬೇತಿ ನೀಡಲಾಗುವುದು. ಈ ಪ್ರಯೋಗವು ಯಶಸ್ವಿಯಾದರೆ, ನಾವು ಅದನ್ನು ಗುಜರಾತ್‌ನ ಇತರ ಭಾಗಗಳಿಗೂ ವಿಸ್ತರಿಸಬಹುದು” ಎಂದು ಚಾವ್ಡಾ ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್‌ ಮಾಡೆಲ್ ಧ್ವಂಸ ಮಾಡಬೇಕೆಂದು ಜಿಗ್ನೇಶ್‌ ಮೇವಾನಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...