Homeಮುಖಪುಟಜಿಗ್ನೇಶ್ ಮೇವಾನಿ ಸಂಘಟನೆಯ ನೇತೃತ್ವದಲ್ಲಿ ಬಾಲಕಿಯರಿಗೆ ಸ್ವರಕ್ಷಣಾ ತರಬೇತಿ

ಜಿಗ್ನೇಶ್ ಮೇವಾನಿ ಸಂಘಟನೆಯ ನೇತೃತ್ವದಲ್ಲಿ ಬಾಲಕಿಯರಿಗೆ ಸ್ವರಕ್ಷಣಾ ತರಬೇತಿ

- Advertisement -
- Advertisement -

ಅತ್ಯಾಚಾರ ಮತ್ತು ದೌರ್ಜನ್ಯಗಳನ್ನು ತಪ್ಪಿಸಲು ಬಾಲಕಿಯರಿಗೆ ಸ್ವರಕ್ಷಣಾ ತರಬೇತಿ ನೀಡಲು ಗುಜರಾತ್‌‌ನ ಮೆಹ್ಸಾನಾದ ಸ್ವಯಂಸೇವಕ ಗುಂಪು ನಿರ್ಧರಿಸಿದ್ದು, ಅಕ್ಟೋಬರ್ 20 ರಂದು ಮೆಹ್ಸಾನಾ ಪಟ್ಟಣದಲ್ಲಿ ಕಾರ್ಯಕ್ರಮವನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ.

ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ನೇತೃತ್ವದ ಸಂಘಟನೆಯಾದ ರಾಷ್ಟ್ರೀಯ ದಲಿತ ಅಧಿಕಾರ್‌ ಮಂಚ್ (RDAM) ನ ಮೆಹ್ಸಾನಾ ಘಟಕದಿಂದ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಇದನ್ನೂ ಓದಿ: ’ಓ ಭರತವರ್ಷದ ನಾಯಕರೆ, ಅವಮಾನದಲ್ಲೇ ಮುಳುಗಿ ಸಾಯಿರಿ’; ಜಿಗ್ನೇಶ್ ಮೇವಾನಿ ಆಕ್ರೋಶ

“ದೇಶದ ವಿವಿಧ ಭಾಗಗಳಲ್ಲಿ ಹುಡುಗಿಯರ ಮೇಲೆ, ವಿಶೇಷವಾಗಿ ದಲಿತರ ಮೇಲೆ ಹಲ್ಲೆ ಪ್ರಕರಣಗಳು ಸಾಕಷ್ಟು ನಡೆದಿವೆ. ಆದ್ದರಿಂದ, ಇಂತಹ ಘಟನೆಗಳನ್ನು ತಪ್ಪಿಸಲು ಹುಡುಗಿಯರಿಗೆ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ತರಬೇತಿ ನೀಡಲಾಗುತ್ತದೆ ಎಂದು ನಾವು ಭಾವಿಸಿದ್ದೇವೆ. ಆದ್ದರಿಂದ, ಮೆಹ್ಸಾನಾದಲ್ಲಿ ಬಾಲಕಿಯರಿಗೆ ಸ್ವರಕ್ಷಣೆ ತರಬೇತಿ ನೀಡಲು ಪ್ರಾಯೋಗಿಕ ಆಧಾರದ ಮೇಲೆ ನಾವು ಇದನ್ನು ಪ್ರಾರಂಭಿಸುತ್ತಿದ್ದೇವೆ. ದಲಿತ ಹುಡುಗಿಯರು ನಮ್ಮ ಆದ್ಯತೆ. ಆದಾಗ್ಯೂ, ತರಬೇತಿಯು ಎಲ್ಲಾ ಧರ್ಮ ಮತ್ತು ಜಾತಿಯ ಹುಡುಗಿಯರಿಗೆ ಮುಕ್ತವಾಗಿದೆ” ಎಂದು RDAM ಮೆಹ್ಸಾನಾದ ಪದಾಧಿಕಾರಿ ಕೌಶಿಕ್ ಪರ್ಮಾರ್ ಹೇಳಿದ್ದಾರೆ.

“ಇದು 15 ದಿನಗಳ ತರಬೇತಿಯಾಗಿದ್ದು, ಭಾಗವಹಿಸುವ ಪ್ರತಿಯೊಬ್ಬರಿಂದ 100 ರೂ.ಗಳ ಟೋಕನ್ ಶುಲ್ಕ ವಿಧಿಸಲು ನಾವು ಯೋಜಿಸುತ್ತಿದ್ದೇವೆ. 15 ದಿನಗಳ ತರಬೇತಿಯನ್ನು ಪೂರ್ಣಗೊಳಿಸಿದ ನಂತರ ಈ ಶುಲ್ಕವನ್ನು ಹುಡುಗಿಯರಿಗೆ ಹಿಂದಿರುಗಿಸಲಾಗುತ್ತದೆ” ಎಂದು ಪರ್ಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಚಂದ್ರಯಾನ ಇರಲಿ; ಒಳಚರಂಡಿ ಸ್ವಚ್ಛಗೊಳಿಸುವ ತಂತ್ರಜ್ಞಾನ ಎಲ್ಲಿದೆ? ಗುಜರಾತ್ ಸರಕಾರಕ್ಕೆ ಜಿಗ್ನೇಶ್ ಮೇವಾನಿ ಪ್ರಶ್ನೆ

ತರಬೇತಿ ನೀಡಲು ವೃತ್ತಿಪರ ಟೇಕ್ವಾಂಡೋ ಸಮರ ಕಲಾ ಬೋಧಕರಾದ ಮೆಹ್ಸಾನಾದ ದೀಪಕ್ ಚಾವ್ಡಾ ಒಪ್ಪಿಕೊಂಡಿದ್ದಾರೆ ಎಂದು ಪರ್ಮಾರ್‌ ಹೇಳಿದ್ದಾರೆ. ದೀಪಕ್ ಚಾವ್ಡಾ ಈಗಾಗಲೇ ಮೆಹ್ಸಾನಾದ ವಿವಿಧ ಕಡೆ ಸಮರ ಕಲಾ ತರಬೇತಿಯನ್ನು ನೀಡುತ್ತಿದ್ದು, ವರ್ಷಗಳಿಂದ ಬಾಲಕಿಯರಿಗೆ ಆತ್ಮರಕ್ಷಣೆಗಾಗಿ ತರಬೇತಿ ನೀಡುತ್ತಿದ್ದಾರೆ.

“ಪ್ರತಿಯೊಬ್ಬ ಹುಡುಗಿಯೂ ತನ್ನನ್ನು ತಾನು ರಕ್ಷಿಸಿಕೊಳ್ಳಲು ಮೂಲಭೂತ ಕೌಶಲ್ಯಗಳನ್ನು ಹೊಂದಿರಬೇಕೆಂದು ನಾನು ನಂಬುತ್ತೇನೆ. ಹಾಗಾಗಿ, ನಾನು ಬಹಳ ಹಿಂದಿನಿಂದಲೂ ಹುಡುಗಿಯರಿಗೆ ಸ್ವರಕ್ಷಣೆಗಾಗಿ ಉಚಿತ ತರಬೇತಿಯನ್ನು ನೀಡುತ್ತಿದ್ದೇನೆ. ನಾನು ಟೇಕ್ವಾಂಡೋದಲ್ಲಿ ಪರಿಣಿತನಾಗಿದ್ದು, ಹುಡುಗಿಯರಿಗೆ ಮೂಲಭೂತ ಸ್ವರಕ್ಷಣೆ ತಂತ್ರಗಳಲ್ಲಿ ತರಬೇತಿ ನೀಡಲಾಗುವುದು. ಈ ಪ್ರಯೋಗವು ಯಶಸ್ವಿಯಾದರೆ, ನಾವು ಅದನ್ನು ಗುಜರಾತ್‌ನ ಇತರ ಭಾಗಗಳಿಗೂ ವಿಸ್ತರಿಸಬಹುದು” ಎಂದು ಚಾವ್ಡಾ ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್‌ ಮಾಡೆಲ್ ಧ್ವಂಸ ಮಾಡಬೇಕೆಂದು ಜಿಗ್ನೇಶ್‌ ಮೇವಾನಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...