Homeಕರ್ನಾಟಕಹೆಣ್ಣು ಮಕ್ಕಳಿಗೆ ದೇವಸ್ಥಾನಗಳಲ್ಲಿ ಸ್ವಯಂ ರಕ್ಷಣಾ ತರಬೇತಿ: ಸರ್ಕಾರದ ಆದೇಶಕ್ಕೆ ಮಹಿಳಾ ಒಕ್ಕೂಟ ಖಂಡನೆ

ಹೆಣ್ಣು ಮಕ್ಕಳಿಗೆ ದೇವಸ್ಥಾನಗಳಲ್ಲಿ ಸ್ವಯಂ ರಕ್ಷಣಾ ತರಬೇತಿ: ಸರ್ಕಾರದ ಆದೇಶಕ್ಕೆ ಮಹಿಳಾ ಒಕ್ಕೂಟ ಖಂಡನೆ

- Advertisement -
- Advertisement -

ರಾಜ್ಯದಾದ್ಯಂತ ಇರುವ ದೇವಾಲಯಗಳಲ್ಲಿ ಹೆಣ್ಣುಮಕ್ಕಳಿಗೆ ಸ್ವಯಂ ರಕ್ಷಣಾ ತರಬೇತಿ ನೀಡಬೇಕು ಎನ್ನುವ ಸರ್ಕಾರದ ಆದೇಶವನ್ನು ಖಂಡಿಸಿರುವ ಅಖಿಲ ಭಾರತ ಪ್ರಗತಿಪರ ಮಹಿಳಾ ಒಕ್ಕೂಟ, ಇದರ ವಿರುದ್ಧ ಪತ್ರ ಅಭಿಯಾನವನ್ನು ಆರಂಭಿಸಿದೆ.

ಮಹಿಳೆಯರ ಮೇಲಿನ ಲೈಂಗಿಕ ಮತ್ತು ಇತರೆ ದೌರ್ಜನ್ಯವನ್ನು ತಡೆಗಟ್ಟುವ ಕ್ರಮವಾಗಿ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಈ ಆದೇಶ ಹೊರಡಿಸಿದೆ. ಆದರೆ ಈ ಆದೇಶವನ್ನು ಖಂಡಿರುವ ಮಹಿಳಾ ಒಕ್ಕೂಟ, ‘ಇದು ನಮ್ಮ ಸಾಂವಿಧಾನಿಕ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಲ್ಲಂಘಿಸಿದೆ’ ಎಂದು ಆರೋಪಿಸಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಮಹಿಳಾ ಒಕ್ಕೂಟದ ಸದಸ್ಯರಾದ ಶಿಲ್ಪ, “ಈ ಆದೇಶವನ್ನು ಸರ್ಕಾರ ಹೊರಡಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಆದೇಶ ನಿಜಕ್ಕೂ ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಉಲ್ಲಂಘಿಸಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಅಸ್ಸಾಂ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ: ಮರುಮತದಾನಕ್ಕೆ ಆದೇಶ, 4 ಅಧಿಕಾರಿಗಳ ಅಮಾನತು!

“ಸರ್ಕಾರದ ಈ ಆದೇಶದ ಹಿಂದೆ ಸೂಕ್ಷ್ಮವಾಗಿ ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವ ಹೊಣೆಯನ್ನು ಸಂಪೂರ್ಣ ಮಹಿಳೆಯರ ಮೇಲೆ ಹಾಕುವ ಹುನ್ನಾರವಿದೆ. ಅಂದರೆ ದೌರ್ಜನ್ಯ ಮಾಡುವವರನ್ನು ಶಿಕ್ಷಿತರನ್ನಾಗಿರಸುವ ಬದಲಿಗೆ ಮಹಿಳೆಯರೇ ಸ್ವಯಂ ರಕ್ಷಿಸಿಕೊಳ್ಳುವಂತೆ ತರಬೇತಿ ನೀಡಲಾಗುತ್ತಿದೆ. ಇದು ಸರಿಯಲ್ಲ. ಬದಲಿಗೆ ಹೆಣ್ಣು ಮಕ್ಕಳಿಗೆ ಸ್ವರಕ್ಷಣೆಯ ತರಬೇತಿ ನೀಡುತ್ತಲೇ ಮಹಿಳಾ ದೌರ್ಜನ್ಯವನ್ನು ತಡೆಯಲು ಶಾಲಾ ಹಂತದಿಂದಲೇ ಎಲ್ಲಾ ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಆದರೆ ಸರ್ಕಾರ ಅಂತಹ ಯಾವುದೇ ಕೆಲಸಗಳನ್ನು ಮಾಡಿಲ್ಲ” ಎಂದು ಹೇಳಿದರು.

“ಇನ್ನು, ನಮ್ಮ ದೇಶದಲ್ಲಿ ಎಷ್ಟೋ ಜಾತಿಗಳಿಗೆ ದೇವಸ್ಥಾನದೊಳಗೆ ಪ್ರವೇಶವಿಲ್ಲ. ಹಾಗಾಗಿ ಕೆಲವು ನಿರ್ದಿಷ್ಟ ಜಾತಿಗಳು ಮಾತ್ರ ಈ ಸೌಲಭ್ಯವನ್ನು ಪಡೆದುಕೊಳ್ಳಲಿವೆ. ಜೊತೆಗೆ ಅನ್ಯಧರ್ಮೀಯರೂ ಸಹ ಈ ಸೌಲಭ್ಯದಿಂದ ವಂಚಿತರಾಗುತ್ತಾರೆ. ಹಾಗಾಗಿ ಸರ್ಕಾರದ ಈ ಆದೇಶ ಜಾತ್ಯಾತೀತ ಮತ್ತು ಧರ್ಮನಿರಪೇಕ್ಷ ವಿರೋಧಿಯಾಗಿದೆ” ಎಂದು ಹೇಳಿದರು.

ಇನ್ನೊಂದು ಪ್ರಮುಖವಾದ ವಿಷಯವೆಂದರೆ, ನಮ್ಮ ದೇವಸ್ಥಾನಗಳಲ್ಲಿ ‘ಪರಿಶುದ್ದತೆ’ ಎನ್ನುವ ಪರಿಕಲ್ಪನೆಯಿದೆ. ಅಂದರೆ ಹೆಣ್ಣುಮಕ್ಕಳು ಮಾಸಿಕ ಋತು ಚಕ್ರಕ್ಕೆ ಒಳಗಾದಾಗ ದೇವಸ್ಥಾನಗಳಿಗೆ ಪ್ರವೇಶಿಸಬಾರದು ಎನ್ನುವ ಮನೋಭಾವವಿರುತ್ತದೆ. ಹಾಗಾಗಿ ಸರ್ಕಾರದ ಈ ಕ್ರಮ ಸಾಕಷ್ಟು ಸಮಸ್ಯೆಗಳಿಂದ ಕೂಡಿದೆ. ಈ ಕಾರಣಕ್ಕಾಗಿಯೇ ನಮ್ಮ ಒಕ್ಕೂಟದ ವತಿಯಿಂದ ಇದನ್ನು ವಿರೋಧಿಸಿ ಮುಕ್ತ ಪತ್ರ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

ಈ ಪತ್ರಕ್ಕೆ ಸಹಿ ಹಾಕುವುದರ ಮೂಲಕ ನಮ್ಮ ದನಿಗೆ ದನಿಗೂಡಿಸಿ ಎಂದು ಮಹಿಳಾ ಒಕ್ಕೂಟ ಮನವಿ ಮಾಡಿದೆ. ಈ ಪತ್ರಕ್ಕೆ ಸಹಿಮಾಡಲು ಈ ಲಿಂಕ್ ಕ್ಲಿಕ್ ಮಾಡಿ. https://forms.gle/icJwrZYSYMSYsXVcA


ಇದನ್ನೂ ಓದಿ: ಸಿಡಿ ಕೇಸ್: ಆರೋಗ್ಯ ಸಮಸ್ಯೆ ಎಂದು ವಿಚಾರಣೆಗೆ ಗೈರಾದ ರಮೇಶ್ ಜಾರಕಿಹೊಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...