Homeಕರ್ನಾಟಕಹೆಣ್ಣು ಮಕ್ಕಳಿಗೆ ದೇವಸ್ಥಾನಗಳಲ್ಲಿ ಸ್ವಯಂ ರಕ್ಷಣಾ ತರಬೇತಿ: ಸರ್ಕಾರದ ಆದೇಶಕ್ಕೆ ಮಹಿಳಾ ಒಕ್ಕೂಟ ಖಂಡನೆ

ಹೆಣ್ಣು ಮಕ್ಕಳಿಗೆ ದೇವಸ್ಥಾನಗಳಲ್ಲಿ ಸ್ವಯಂ ರಕ್ಷಣಾ ತರಬೇತಿ: ಸರ್ಕಾರದ ಆದೇಶಕ್ಕೆ ಮಹಿಳಾ ಒಕ್ಕೂಟ ಖಂಡನೆ

- Advertisement -
- Advertisement -

ರಾಜ್ಯದಾದ್ಯಂತ ಇರುವ ದೇವಾಲಯಗಳಲ್ಲಿ ಹೆಣ್ಣುಮಕ್ಕಳಿಗೆ ಸ್ವಯಂ ರಕ್ಷಣಾ ತರಬೇತಿ ನೀಡಬೇಕು ಎನ್ನುವ ಸರ್ಕಾರದ ಆದೇಶವನ್ನು ಖಂಡಿಸಿರುವ ಅಖಿಲ ಭಾರತ ಪ್ರಗತಿಪರ ಮಹಿಳಾ ಒಕ್ಕೂಟ, ಇದರ ವಿರುದ್ಧ ಪತ್ರ ಅಭಿಯಾನವನ್ನು ಆರಂಭಿಸಿದೆ.

ಮಹಿಳೆಯರ ಮೇಲಿನ ಲೈಂಗಿಕ ಮತ್ತು ಇತರೆ ದೌರ್ಜನ್ಯವನ್ನು ತಡೆಗಟ್ಟುವ ಕ್ರಮವಾಗಿ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಈ ಆದೇಶ ಹೊರಡಿಸಿದೆ. ಆದರೆ ಈ ಆದೇಶವನ್ನು ಖಂಡಿರುವ ಮಹಿಳಾ ಒಕ್ಕೂಟ, ‘ಇದು ನಮ್ಮ ಸಾಂವಿಧಾನಿಕ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಲ್ಲಂಘಿಸಿದೆ’ ಎಂದು ಆರೋಪಿಸಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಮಹಿಳಾ ಒಕ್ಕೂಟದ ಸದಸ್ಯರಾದ ಶಿಲ್ಪ, “ಈ ಆದೇಶವನ್ನು ಸರ್ಕಾರ ಹೊರಡಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಆದೇಶ ನಿಜಕ್ಕೂ ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಉಲ್ಲಂಘಿಸಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಅಸ್ಸಾಂ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ: ಮರುಮತದಾನಕ್ಕೆ ಆದೇಶ, 4 ಅಧಿಕಾರಿಗಳ ಅಮಾನತು!

“ಸರ್ಕಾರದ ಈ ಆದೇಶದ ಹಿಂದೆ ಸೂಕ್ಷ್ಮವಾಗಿ ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವ ಹೊಣೆಯನ್ನು ಸಂಪೂರ್ಣ ಮಹಿಳೆಯರ ಮೇಲೆ ಹಾಕುವ ಹುನ್ನಾರವಿದೆ. ಅಂದರೆ ದೌರ್ಜನ್ಯ ಮಾಡುವವರನ್ನು ಶಿಕ್ಷಿತರನ್ನಾಗಿರಸುವ ಬದಲಿಗೆ ಮಹಿಳೆಯರೇ ಸ್ವಯಂ ರಕ್ಷಿಸಿಕೊಳ್ಳುವಂತೆ ತರಬೇತಿ ನೀಡಲಾಗುತ್ತಿದೆ. ಇದು ಸರಿಯಲ್ಲ. ಬದಲಿಗೆ ಹೆಣ್ಣು ಮಕ್ಕಳಿಗೆ ಸ್ವರಕ್ಷಣೆಯ ತರಬೇತಿ ನೀಡುತ್ತಲೇ ಮಹಿಳಾ ದೌರ್ಜನ್ಯವನ್ನು ತಡೆಯಲು ಶಾಲಾ ಹಂತದಿಂದಲೇ ಎಲ್ಲಾ ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಆದರೆ ಸರ್ಕಾರ ಅಂತಹ ಯಾವುದೇ ಕೆಲಸಗಳನ್ನು ಮಾಡಿಲ್ಲ” ಎಂದು ಹೇಳಿದರು.

“ಇನ್ನು, ನಮ್ಮ ದೇಶದಲ್ಲಿ ಎಷ್ಟೋ ಜಾತಿಗಳಿಗೆ ದೇವಸ್ಥಾನದೊಳಗೆ ಪ್ರವೇಶವಿಲ್ಲ. ಹಾಗಾಗಿ ಕೆಲವು ನಿರ್ದಿಷ್ಟ ಜಾತಿಗಳು ಮಾತ್ರ ಈ ಸೌಲಭ್ಯವನ್ನು ಪಡೆದುಕೊಳ್ಳಲಿವೆ. ಜೊತೆಗೆ ಅನ್ಯಧರ್ಮೀಯರೂ ಸಹ ಈ ಸೌಲಭ್ಯದಿಂದ ವಂಚಿತರಾಗುತ್ತಾರೆ. ಹಾಗಾಗಿ ಸರ್ಕಾರದ ಈ ಆದೇಶ ಜಾತ್ಯಾತೀತ ಮತ್ತು ಧರ್ಮನಿರಪೇಕ್ಷ ವಿರೋಧಿಯಾಗಿದೆ” ಎಂದು ಹೇಳಿದರು.

ಇನ್ನೊಂದು ಪ್ರಮುಖವಾದ ವಿಷಯವೆಂದರೆ, ನಮ್ಮ ದೇವಸ್ಥಾನಗಳಲ್ಲಿ ‘ಪರಿಶುದ್ದತೆ’ ಎನ್ನುವ ಪರಿಕಲ್ಪನೆಯಿದೆ. ಅಂದರೆ ಹೆಣ್ಣುಮಕ್ಕಳು ಮಾಸಿಕ ಋತು ಚಕ್ರಕ್ಕೆ ಒಳಗಾದಾಗ ದೇವಸ್ಥಾನಗಳಿಗೆ ಪ್ರವೇಶಿಸಬಾರದು ಎನ್ನುವ ಮನೋಭಾವವಿರುತ್ತದೆ. ಹಾಗಾಗಿ ಸರ್ಕಾರದ ಈ ಕ್ರಮ ಸಾಕಷ್ಟು ಸಮಸ್ಯೆಗಳಿಂದ ಕೂಡಿದೆ. ಈ ಕಾರಣಕ್ಕಾಗಿಯೇ ನಮ್ಮ ಒಕ್ಕೂಟದ ವತಿಯಿಂದ ಇದನ್ನು ವಿರೋಧಿಸಿ ಮುಕ್ತ ಪತ್ರ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

ಈ ಪತ್ರಕ್ಕೆ ಸಹಿ ಹಾಕುವುದರ ಮೂಲಕ ನಮ್ಮ ದನಿಗೆ ದನಿಗೂಡಿಸಿ ಎಂದು ಮಹಿಳಾ ಒಕ್ಕೂಟ ಮನವಿ ಮಾಡಿದೆ. ಈ ಪತ್ರಕ್ಕೆ ಸಹಿಮಾಡಲು ಈ ಲಿಂಕ್ ಕ್ಲಿಕ್ ಮಾಡಿ. https://forms.gle/icJwrZYSYMSYsXVcA


ಇದನ್ನೂ ಓದಿ: ಸಿಡಿ ಕೇಸ್: ಆರೋಗ್ಯ ಸಮಸ್ಯೆ ಎಂದು ವಿಚಾರಣೆಗೆ ಗೈರಾದ ರಮೇಶ್ ಜಾರಕಿಹೊಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...