Homeಕರ್ನಾಟಕಹೆಣ್ಣು ಮಕ್ಕಳಿಗೆ ದೇವಸ್ಥಾನಗಳಲ್ಲಿ ಸ್ವಯಂ ರಕ್ಷಣಾ ತರಬೇತಿ: ಸರ್ಕಾರದ ಆದೇಶಕ್ಕೆ ಮಹಿಳಾ ಒಕ್ಕೂಟ ಖಂಡನೆ

ಹೆಣ್ಣು ಮಕ್ಕಳಿಗೆ ದೇವಸ್ಥಾನಗಳಲ್ಲಿ ಸ್ವಯಂ ರಕ್ಷಣಾ ತರಬೇತಿ: ಸರ್ಕಾರದ ಆದೇಶಕ್ಕೆ ಮಹಿಳಾ ಒಕ್ಕೂಟ ಖಂಡನೆ

- Advertisement -
- Advertisement -

ರಾಜ್ಯದಾದ್ಯಂತ ಇರುವ ದೇವಾಲಯಗಳಲ್ಲಿ ಹೆಣ್ಣುಮಕ್ಕಳಿಗೆ ಸ್ವಯಂ ರಕ್ಷಣಾ ತರಬೇತಿ ನೀಡಬೇಕು ಎನ್ನುವ ಸರ್ಕಾರದ ಆದೇಶವನ್ನು ಖಂಡಿಸಿರುವ ಅಖಿಲ ಭಾರತ ಪ್ರಗತಿಪರ ಮಹಿಳಾ ಒಕ್ಕೂಟ, ಇದರ ವಿರುದ್ಧ ಪತ್ರ ಅಭಿಯಾನವನ್ನು ಆರಂಭಿಸಿದೆ.

ಮಹಿಳೆಯರ ಮೇಲಿನ ಲೈಂಗಿಕ ಮತ್ತು ಇತರೆ ದೌರ್ಜನ್ಯವನ್ನು ತಡೆಗಟ್ಟುವ ಕ್ರಮವಾಗಿ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಈ ಆದೇಶ ಹೊರಡಿಸಿದೆ. ಆದರೆ ಈ ಆದೇಶವನ್ನು ಖಂಡಿರುವ ಮಹಿಳಾ ಒಕ್ಕೂಟ, ‘ಇದು ನಮ್ಮ ಸಾಂವಿಧಾನಿಕ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಲ್ಲಂಘಿಸಿದೆ’ ಎಂದು ಆರೋಪಿಸಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಮಹಿಳಾ ಒಕ್ಕೂಟದ ಸದಸ್ಯರಾದ ಶಿಲ್ಪ, “ಈ ಆದೇಶವನ್ನು ಸರ್ಕಾರ ಹೊರಡಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಆದೇಶ ನಿಜಕ್ಕೂ ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಉಲ್ಲಂಘಿಸಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಅಸ್ಸಾಂ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ: ಮರುಮತದಾನಕ್ಕೆ ಆದೇಶ, 4 ಅಧಿಕಾರಿಗಳ ಅಮಾನತು!

“ಸರ್ಕಾರದ ಈ ಆದೇಶದ ಹಿಂದೆ ಸೂಕ್ಷ್ಮವಾಗಿ ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವ ಹೊಣೆಯನ್ನು ಸಂಪೂರ್ಣ ಮಹಿಳೆಯರ ಮೇಲೆ ಹಾಕುವ ಹುನ್ನಾರವಿದೆ. ಅಂದರೆ ದೌರ್ಜನ್ಯ ಮಾಡುವವರನ್ನು ಶಿಕ್ಷಿತರನ್ನಾಗಿರಸುವ ಬದಲಿಗೆ ಮಹಿಳೆಯರೇ ಸ್ವಯಂ ರಕ್ಷಿಸಿಕೊಳ್ಳುವಂತೆ ತರಬೇತಿ ನೀಡಲಾಗುತ್ತಿದೆ. ಇದು ಸರಿಯಲ್ಲ. ಬದಲಿಗೆ ಹೆಣ್ಣು ಮಕ್ಕಳಿಗೆ ಸ್ವರಕ್ಷಣೆಯ ತರಬೇತಿ ನೀಡುತ್ತಲೇ ಮಹಿಳಾ ದೌರ್ಜನ್ಯವನ್ನು ತಡೆಯಲು ಶಾಲಾ ಹಂತದಿಂದಲೇ ಎಲ್ಲಾ ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಆದರೆ ಸರ್ಕಾರ ಅಂತಹ ಯಾವುದೇ ಕೆಲಸಗಳನ್ನು ಮಾಡಿಲ್ಲ” ಎಂದು ಹೇಳಿದರು.

“ಇನ್ನು, ನಮ್ಮ ದೇಶದಲ್ಲಿ ಎಷ್ಟೋ ಜಾತಿಗಳಿಗೆ ದೇವಸ್ಥಾನದೊಳಗೆ ಪ್ರವೇಶವಿಲ್ಲ. ಹಾಗಾಗಿ ಕೆಲವು ನಿರ್ದಿಷ್ಟ ಜಾತಿಗಳು ಮಾತ್ರ ಈ ಸೌಲಭ್ಯವನ್ನು ಪಡೆದುಕೊಳ್ಳಲಿವೆ. ಜೊತೆಗೆ ಅನ್ಯಧರ್ಮೀಯರೂ ಸಹ ಈ ಸೌಲಭ್ಯದಿಂದ ವಂಚಿತರಾಗುತ್ತಾರೆ. ಹಾಗಾಗಿ ಸರ್ಕಾರದ ಈ ಆದೇಶ ಜಾತ್ಯಾತೀತ ಮತ್ತು ಧರ್ಮನಿರಪೇಕ್ಷ ವಿರೋಧಿಯಾಗಿದೆ” ಎಂದು ಹೇಳಿದರು.

ಇನ್ನೊಂದು ಪ್ರಮುಖವಾದ ವಿಷಯವೆಂದರೆ, ನಮ್ಮ ದೇವಸ್ಥಾನಗಳಲ್ಲಿ ‘ಪರಿಶುದ್ದತೆ’ ಎನ್ನುವ ಪರಿಕಲ್ಪನೆಯಿದೆ. ಅಂದರೆ ಹೆಣ್ಣುಮಕ್ಕಳು ಮಾಸಿಕ ಋತು ಚಕ್ರಕ್ಕೆ ಒಳಗಾದಾಗ ದೇವಸ್ಥಾನಗಳಿಗೆ ಪ್ರವೇಶಿಸಬಾರದು ಎನ್ನುವ ಮನೋಭಾವವಿರುತ್ತದೆ. ಹಾಗಾಗಿ ಸರ್ಕಾರದ ಈ ಕ್ರಮ ಸಾಕಷ್ಟು ಸಮಸ್ಯೆಗಳಿಂದ ಕೂಡಿದೆ. ಈ ಕಾರಣಕ್ಕಾಗಿಯೇ ನಮ್ಮ ಒಕ್ಕೂಟದ ವತಿಯಿಂದ ಇದನ್ನು ವಿರೋಧಿಸಿ ಮುಕ್ತ ಪತ್ರ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

ಈ ಪತ್ರಕ್ಕೆ ಸಹಿ ಹಾಕುವುದರ ಮೂಲಕ ನಮ್ಮ ದನಿಗೆ ದನಿಗೂಡಿಸಿ ಎಂದು ಮಹಿಳಾ ಒಕ್ಕೂಟ ಮನವಿ ಮಾಡಿದೆ. ಈ ಪತ್ರಕ್ಕೆ ಸಹಿಮಾಡಲು ಈ ಲಿಂಕ್ ಕ್ಲಿಕ್ ಮಾಡಿ. https://forms.gle/icJwrZYSYMSYsXVcA


ಇದನ್ನೂ ಓದಿ: ಸಿಡಿ ಕೇಸ್: ಆರೋಗ್ಯ ಸಮಸ್ಯೆ ಎಂದು ವಿಚಾರಣೆಗೆ ಗೈರಾದ ರಮೇಶ್ ಜಾರಕಿಹೊಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...