Homeಮುಖಪುಟಸ್ವಾಭಿಮಾನಿ ಮಹಿಳೆಯರು ಸಮಾಜದ ಶಕ್ತಿಯಾಗುತ್ತಾರೆ; ಭಾರತದ ಭವಿಷ್ಯವನ್ನು ಬದಲಿಸುತ್ತಾರೆ: ರಾಹುಲ್ ಗಾಂಧಿ

ಸ್ವಾಭಿಮಾನಿ ಮಹಿಳೆಯರು ಸಮಾಜದ ಶಕ್ತಿಯಾಗುತ್ತಾರೆ; ಭಾರತದ ಭವಿಷ್ಯವನ್ನು ಬದಲಿಸುತ್ತಾರೆ: ರಾಹುಲ್ ಗಾಂಧಿ

- Advertisement -
- Advertisement -

‘ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಶೇ.50ರಷ್ಟು ಸರ್ಕಾರಿ ಉದ್ಯೋಗಗಳನ್ನು ಮಹಿಳೆಯರಿಗೆ ಮೀಸಲಿಡಲಾಗುವುದು, ಸ್ವಾಭಿಮಾನಿ ಮಹಿಳೆಯರು ಸಮಾಜದ ಶಕ್ತಿಯಾಗುತ್ತಾರೆ; ಅವರು ಭಾರತದ ಭವಿಷ್ಯವನ್ನು ಬದಲಿಸುತ್ತಾರೆ’ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶುಕ್ರವಾರ ಭರವಸೆ ನೀಡಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, “ಭಾರತದಲ್ಲಿ ಮಹಿಳೆಯರ ಜನಸಂಖ್ಯೆ ಶೇಕಡಾ 50 ಅಲ್ಲವೇ? ಹೈಯರ್ ಸೆಕೆಂಡರಿ ಮತ್ತು ಹೈಯರ್ ಎಜುಕೇಷನ್ ನಲ್ಲಿ ಮಹಿಳೆಯರ ಉಪಸ್ಥಿತಿ ಶೇಕಡ 50 ಅಲ್ಲವೇ? ಹಾಗಿದ್ದಲ್ಲಿ, ವ್ಯವಸ್ಥೆಯಲ್ಲಿ ಅವರ ಪಾಲು ಏಕೆ ಕಡಿಮೆಯಾಗಿದೆ. ‘ಆಧಿ ಅಬಾದಿ ಪೂರಾ ಹಕ್’, ದೇಶವನ್ನು ನಡೆಸುವ ಸರ್ಕಾರದಲ್ಲಿ ಮಹಿಳೆಯರಿಗೆ ಸಮಾನ ಕೊಡುಗೆ ನೀಡಿದಾಗ ಮಾತ್ರ ಮಹಿಳೆಯರ ಸಾಮರ್ಥ್ಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲಾಗುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ; ಕಾಂಗ್ರೆಸ್ ಅದನ್ನೇ ಬಯಸುತ್ತದೆ” ಎಂದು ಪೋಸ್ಟ್ ಮಾಡಿದ್ದಾರೆ.

‘ಎಲ್ಲಾ ಸರ್ಕಾರಿ ಉದ್ಯೋಗಗಳಿಗೆ ಅರ್ಧದಷ್ಟು ನೇಮಕಾತಿಗಳನ್ನು ಮಹಿಳೆಯರಿಗೆ ಮೀಸಲಿಡಬೇಕು ಎಂದು ಕಾಂಗ್ರೆಸ್ ನಿರ್ಧರಿಸಿದೆ. ಸಂಸತ್ತಿನಲ್ಲಿ ಮತ್ತು ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿಯ ತಕ್ಷಣದ ಅನುಷ್ಠಾನದ ಪರವಾಗಿ ನಾವು ಕೂಡ ಇದ್ದೇವೆ’ ಎಂದು ಅವರು ಹೇಳಿದ್ದಾರೆ.

‘ಸುರಕ್ಷಿತ ಆದಾಯ, ಭವಿಷ್ಯ, ಸ್ಥಿರತೆ ಮತ್ತು ಸ್ವಾಭಿಮಾನ ಹೊಂದಿರುವ ಮಹಿಳೆಯರು ನಿಜವಾಗಿಯೂ ಸಮಾಜದ ಶಕ್ತಿಯಾಗುತ್ತಾರೆ. ಶೇ.50 ರಷ್ಟು ಸರ್ಕಾರಿ ಹುದ್ದೆಗಳಲ್ಲಿ ಮಹಿಳೆಯರು ಇರುವುದು ದೇಶದ ಪ್ರತಿಯೊಬ್ಬ ಮಹಿಳೆಗೆ ಬಲವನ್ನು ನೀಡುತ್ತದೆ ಮತ್ತು ಶಕ್ತಿಯುತ ಮಹಿಳೆಯರು ಭಾರತದ ಭವಿಷ್ಯವನ್ನು ಬದಲಾಯಿಸುತ್ತಾರೆ” ಎಂದು ಅವರು ಹೇಳಿದರು.

ಈ ಹಿಂದೆ, ಸಾರ್ವತ್ರಿಕ ಚುನಾವಣೆಗೆ ಮುನ್ನ ಕಾಂಗ್ರೆಸ್ ಮಹಿಳೆಯರಿಗೆ ಐದು ಭರವಸೆಗಳನ್ನು ಘೋಷಿಸಿತ್ತು. ಪಕ್ಷದ “ಮಹಾಲಕ್ಷ್ಮಿ” ಖಾತ್ರಿಯಡಿ, ಪ್ರತಿ ಬಡ ಕುಟುಂಬದಿಂದ ಒಬ್ಬ ಮಹಿಳೆಗೆ ನೇರ ನಗದು ವರ್ಗಾವಣೆಯ ಮೂಲಕ ವಾರ್ಷಿಕ ₹1 ಲಕ್ಷ ಸಹಾಯವನ್ನು ನೀಡಲಾಗುತ್ತದೆ.

ಇದಲ್ಲದೆ, ಕಾಂಗ್ರೆಸ್ “ಆಧಿ ಆಬಾದಿ, ಪೂರಾ ಹಕ್” ಅನ್ನು ಖಚಿತಪಡಿಸುತ್ತದೆ. ಅದರ ಅಡಿಯಲ್ಲಿ ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಎಲ್ಲಾ ಹೊಸ ನೇಮಕಾತಿಗಳಲ್ಲಿ ಶೇ.50 ಪ್ರತಿಶತವನ್ನು ಮಹಿಳೆಯರಿಗೆ ಮೀಸಲಿಡಲಾಗುತ್ತದೆ.

“ಶಕ್ತಿ ಕಾ ಸಮ್ಮಾನ್” ಖಾತರಿ ಅಡಿಯಲ್ಲಿ, ಆಶಾ, ಅಂಗನವಾಡಿ ಮತ್ತು ಮಧ್ಯಾಹ್ನದ ಊಟದ ಕಾರ್ಯಕರ್ತೆಯರ ಮಾಸಿಕ ವೇತನಕ್ಕೆ ಕೇಂದ್ರದ ಕೊಡುಗೆಯನ್ನು ದ್ವಿಗುಣಗೊಳಿಸಲಾಗುವುದು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

“ಅಧಿಕಾರ ಮೈತ್ರಿ” ಗ್ಯಾರಂಟಿ ಅಡಿಯಲ್ಲಿ, ಮಹಿಳೆಯರಿಗೆ ತಮ್ಮ ಕಾನೂನು ಹಕ್ಕುಗಳ ಬಗ್ಗೆ ಶಿಕ್ಷಣ ನೀಡಲು ಮತ್ತು ಅವರ ಜಾರಿಯಲ್ಲಿ ಅವರಿಗೆ ಸಹಾಯ ಮಾಡಲು ಪ್ಯಾರಾ-ಲೀಗಲ್ ಕಾರ್ಯಕಾರಿಯಾಗಿ ಸೇವೆ ಸಲ್ಲಿಸಲು ಕಾಂಗ್ರೆಸ್ ಪ್ರತಿ ಪಂಚಾಯತ್‌ನಲ್ಲಿ “ಅಧಿಕಾರ ಮೈತ್ರಿ” ಯನ್ನು ನೇಮಿಸುತ್ತದೆ.

“ಸಾವಿತ್ರಿ ಬಾಯಿ ಫುಲೆ ಹಾಸ್ಟೆಲ್‌ಗಳು” ಖಾತರಿಯಡಿಯಲ್ಲಿ, ಕಾಂಗ್ರೆಸ್ ನೇತೃತ್ವದ ಕೇಂದ್ರವು ದೇಶದಲ್ಲಿ ಉದ್ಯೋಗಿ ಮಹಿಳೆಯರಿಗಾಗಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದರಂತೆ ಹಾಸ್ಟೆಲ್‌ಗಳ ಸಂಖ್ಯೆಯನ್ನು ದ್ವಿಗುಣಗೊಳಿಸುತ್ತದೆ.

ಇದನ್ನೂ ಓದಿ; ನ್ಯಾಯಾಂಗ ಪರಾಮರ್ಶೆಯ ಅಧಿಕಾರವು ನೀತಿ ಬದಲಾವಣೆಗಳನ್ನು ಸಹ ನಡೆಸಬೇಕು: ನ್ಯಾಯಮೂರ್ತಿ ಗವಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...