Homeಮುಖಪುಟಸ್ವಾಭಿಮಾನಿ ಮಹಿಳೆಯರು ಸಮಾಜದ ಶಕ್ತಿಯಾಗುತ್ತಾರೆ; ಭಾರತದ ಭವಿಷ್ಯವನ್ನು ಬದಲಿಸುತ್ತಾರೆ: ರಾಹುಲ್ ಗಾಂಧಿ

ಸ್ವಾಭಿಮಾನಿ ಮಹಿಳೆಯರು ಸಮಾಜದ ಶಕ್ತಿಯಾಗುತ್ತಾರೆ; ಭಾರತದ ಭವಿಷ್ಯವನ್ನು ಬದಲಿಸುತ್ತಾರೆ: ರಾಹುಲ್ ಗಾಂಧಿ

- Advertisement -
- Advertisement -

‘ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಶೇ.50ರಷ್ಟು ಸರ್ಕಾರಿ ಉದ್ಯೋಗಗಳನ್ನು ಮಹಿಳೆಯರಿಗೆ ಮೀಸಲಿಡಲಾಗುವುದು, ಸ್ವಾಭಿಮಾನಿ ಮಹಿಳೆಯರು ಸಮಾಜದ ಶಕ್ತಿಯಾಗುತ್ತಾರೆ; ಅವರು ಭಾರತದ ಭವಿಷ್ಯವನ್ನು ಬದಲಿಸುತ್ತಾರೆ’ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶುಕ್ರವಾರ ಭರವಸೆ ನೀಡಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, “ಭಾರತದಲ್ಲಿ ಮಹಿಳೆಯರ ಜನಸಂಖ್ಯೆ ಶೇಕಡಾ 50 ಅಲ್ಲವೇ? ಹೈಯರ್ ಸೆಕೆಂಡರಿ ಮತ್ತು ಹೈಯರ್ ಎಜುಕೇಷನ್ ನಲ್ಲಿ ಮಹಿಳೆಯರ ಉಪಸ್ಥಿತಿ ಶೇಕಡ 50 ಅಲ್ಲವೇ? ಹಾಗಿದ್ದಲ್ಲಿ, ವ್ಯವಸ್ಥೆಯಲ್ಲಿ ಅವರ ಪಾಲು ಏಕೆ ಕಡಿಮೆಯಾಗಿದೆ. ‘ಆಧಿ ಅಬಾದಿ ಪೂರಾ ಹಕ್’, ದೇಶವನ್ನು ನಡೆಸುವ ಸರ್ಕಾರದಲ್ಲಿ ಮಹಿಳೆಯರಿಗೆ ಸಮಾನ ಕೊಡುಗೆ ನೀಡಿದಾಗ ಮಾತ್ರ ಮಹಿಳೆಯರ ಸಾಮರ್ಥ್ಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲಾಗುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ; ಕಾಂಗ್ರೆಸ್ ಅದನ್ನೇ ಬಯಸುತ್ತದೆ” ಎಂದು ಪೋಸ್ಟ್ ಮಾಡಿದ್ದಾರೆ.

‘ಎಲ್ಲಾ ಸರ್ಕಾರಿ ಉದ್ಯೋಗಗಳಿಗೆ ಅರ್ಧದಷ್ಟು ನೇಮಕಾತಿಗಳನ್ನು ಮಹಿಳೆಯರಿಗೆ ಮೀಸಲಿಡಬೇಕು ಎಂದು ಕಾಂಗ್ರೆಸ್ ನಿರ್ಧರಿಸಿದೆ. ಸಂಸತ್ತಿನಲ್ಲಿ ಮತ್ತು ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿಯ ತಕ್ಷಣದ ಅನುಷ್ಠಾನದ ಪರವಾಗಿ ನಾವು ಕೂಡ ಇದ್ದೇವೆ’ ಎಂದು ಅವರು ಹೇಳಿದ್ದಾರೆ.

‘ಸುರಕ್ಷಿತ ಆದಾಯ, ಭವಿಷ್ಯ, ಸ್ಥಿರತೆ ಮತ್ತು ಸ್ವಾಭಿಮಾನ ಹೊಂದಿರುವ ಮಹಿಳೆಯರು ನಿಜವಾಗಿಯೂ ಸಮಾಜದ ಶಕ್ತಿಯಾಗುತ್ತಾರೆ. ಶೇ.50 ರಷ್ಟು ಸರ್ಕಾರಿ ಹುದ್ದೆಗಳಲ್ಲಿ ಮಹಿಳೆಯರು ಇರುವುದು ದೇಶದ ಪ್ರತಿಯೊಬ್ಬ ಮಹಿಳೆಗೆ ಬಲವನ್ನು ನೀಡುತ್ತದೆ ಮತ್ತು ಶಕ್ತಿಯುತ ಮಹಿಳೆಯರು ಭಾರತದ ಭವಿಷ್ಯವನ್ನು ಬದಲಾಯಿಸುತ್ತಾರೆ” ಎಂದು ಅವರು ಹೇಳಿದರು.

ಈ ಹಿಂದೆ, ಸಾರ್ವತ್ರಿಕ ಚುನಾವಣೆಗೆ ಮುನ್ನ ಕಾಂಗ್ರೆಸ್ ಮಹಿಳೆಯರಿಗೆ ಐದು ಭರವಸೆಗಳನ್ನು ಘೋಷಿಸಿತ್ತು. ಪಕ್ಷದ “ಮಹಾಲಕ್ಷ್ಮಿ” ಖಾತ್ರಿಯಡಿ, ಪ್ರತಿ ಬಡ ಕುಟುಂಬದಿಂದ ಒಬ್ಬ ಮಹಿಳೆಗೆ ನೇರ ನಗದು ವರ್ಗಾವಣೆಯ ಮೂಲಕ ವಾರ್ಷಿಕ ₹1 ಲಕ್ಷ ಸಹಾಯವನ್ನು ನೀಡಲಾಗುತ್ತದೆ.

ಇದಲ್ಲದೆ, ಕಾಂಗ್ರೆಸ್ “ಆಧಿ ಆಬಾದಿ, ಪೂರಾ ಹಕ್” ಅನ್ನು ಖಚಿತಪಡಿಸುತ್ತದೆ. ಅದರ ಅಡಿಯಲ್ಲಿ ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಎಲ್ಲಾ ಹೊಸ ನೇಮಕಾತಿಗಳಲ್ಲಿ ಶೇ.50 ಪ್ರತಿಶತವನ್ನು ಮಹಿಳೆಯರಿಗೆ ಮೀಸಲಿಡಲಾಗುತ್ತದೆ.

“ಶಕ್ತಿ ಕಾ ಸಮ್ಮಾನ್” ಖಾತರಿ ಅಡಿಯಲ್ಲಿ, ಆಶಾ, ಅಂಗನವಾಡಿ ಮತ್ತು ಮಧ್ಯಾಹ್ನದ ಊಟದ ಕಾರ್ಯಕರ್ತೆಯರ ಮಾಸಿಕ ವೇತನಕ್ಕೆ ಕೇಂದ್ರದ ಕೊಡುಗೆಯನ್ನು ದ್ವಿಗುಣಗೊಳಿಸಲಾಗುವುದು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

“ಅಧಿಕಾರ ಮೈತ್ರಿ” ಗ್ಯಾರಂಟಿ ಅಡಿಯಲ್ಲಿ, ಮಹಿಳೆಯರಿಗೆ ತಮ್ಮ ಕಾನೂನು ಹಕ್ಕುಗಳ ಬಗ್ಗೆ ಶಿಕ್ಷಣ ನೀಡಲು ಮತ್ತು ಅವರ ಜಾರಿಯಲ್ಲಿ ಅವರಿಗೆ ಸಹಾಯ ಮಾಡಲು ಪ್ಯಾರಾ-ಲೀಗಲ್ ಕಾರ್ಯಕಾರಿಯಾಗಿ ಸೇವೆ ಸಲ್ಲಿಸಲು ಕಾಂಗ್ರೆಸ್ ಪ್ರತಿ ಪಂಚಾಯತ್‌ನಲ್ಲಿ “ಅಧಿಕಾರ ಮೈತ್ರಿ” ಯನ್ನು ನೇಮಿಸುತ್ತದೆ.

“ಸಾವಿತ್ರಿ ಬಾಯಿ ಫುಲೆ ಹಾಸ್ಟೆಲ್‌ಗಳು” ಖಾತರಿಯಡಿಯಲ್ಲಿ, ಕಾಂಗ್ರೆಸ್ ನೇತೃತ್ವದ ಕೇಂದ್ರವು ದೇಶದಲ್ಲಿ ಉದ್ಯೋಗಿ ಮಹಿಳೆಯರಿಗಾಗಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದರಂತೆ ಹಾಸ್ಟೆಲ್‌ಗಳ ಸಂಖ್ಯೆಯನ್ನು ದ್ವಿಗುಣಗೊಳಿಸುತ್ತದೆ.

ಇದನ್ನೂ ಓದಿ; ನ್ಯಾಯಾಂಗ ಪರಾಮರ್ಶೆಯ ಅಧಿಕಾರವು ನೀತಿ ಬದಲಾವಣೆಗಳನ್ನು ಸಹ ನಡೆಸಬೇಕು: ನ್ಯಾಯಮೂರ್ತಿ ಗವಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...