Homeಮುಖಪುಟಸ್ವಾಭಿಮಾನಿ ಮಹಿಳೆಯರು ಸಮಾಜದ ಶಕ್ತಿಯಾಗುತ್ತಾರೆ; ಭಾರತದ ಭವಿಷ್ಯವನ್ನು ಬದಲಿಸುತ್ತಾರೆ: ರಾಹುಲ್ ಗಾಂಧಿ

ಸ್ವಾಭಿಮಾನಿ ಮಹಿಳೆಯರು ಸಮಾಜದ ಶಕ್ತಿಯಾಗುತ್ತಾರೆ; ಭಾರತದ ಭವಿಷ್ಯವನ್ನು ಬದಲಿಸುತ್ತಾರೆ: ರಾಹುಲ್ ಗಾಂಧಿ

- Advertisement -
- Advertisement -

‘ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಶೇ.50ರಷ್ಟು ಸರ್ಕಾರಿ ಉದ್ಯೋಗಗಳನ್ನು ಮಹಿಳೆಯರಿಗೆ ಮೀಸಲಿಡಲಾಗುವುದು, ಸ್ವಾಭಿಮಾನಿ ಮಹಿಳೆಯರು ಸಮಾಜದ ಶಕ್ತಿಯಾಗುತ್ತಾರೆ; ಅವರು ಭಾರತದ ಭವಿಷ್ಯವನ್ನು ಬದಲಿಸುತ್ತಾರೆ’ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶುಕ್ರವಾರ ಭರವಸೆ ನೀಡಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, “ಭಾರತದಲ್ಲಿ ಮಹಿಳೆಯರ ಜನಸಂಖ್ಯೆ ಶೇಕಡಾ 50 ಅಲ್ಲವೇ? ಹೈಯರ್ ಸೆಕೆಂಡರಿ ಮತ್ತು ಹೈಯರ್ ಎಜುಕೇಷನ್ ನಲ್ಲಿ ಮಹಿಳೆಯರ ಉಪಸ್ಥಿತಿ ಶೇಕಡ 50 ಅಲ್ಲವೇ? ಹಾಗಿದ್ದಲ್ಲಿ, ವ್ಯವಸ್ಥೆಯಲ್ಲಿ ಅವರ ಪಾಲು ಏಕೆ ಕಡಿಮೆಯಾಗಿದೆ. ‘ಆಧಿ ಅಬಾದಿ ಪೂರಾ ಹಕ್’, ದೇಶವನ್ನು ನಡೆಸುವ ಸರ್ಕಾರದಲ್ಲಿ ಮಹಿಳೆಯರಿಗೆ ಸಮಾನ ಕೊಡುಗೆ ನೀಡಿದಾಗ ಮಾತ್ರ ಮಹಿಳೆಯರ ಸಾಮರ್ಥ್ಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲಾಗುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ; ಕಾಂಗ್ರೆಸ್ ಅದನ್ನೇ ಬಯಸುತ್ತದೆ” ಎಂದು ಪೋಸ್ಟ್ ಮಾಡಿದ್ದಾರೆ.

‘ಎಲ್ಲಾ ಸರ್ಕಾರಿ ಉದ್ಯೋಗಗಳಿಗೆ ಅರ್ಧದಷ್ಟು ನೇಮಕಾತಿಗಳನ್ನು ಮಹಿಳೆಯರಿಗೆ ಮೀಸಲಿಡಬೇಕು ಎಂದು ಕಾಂಗ್ರೆಸ್ ನಿರ್ಧರಿಸಿದೆ. ಸಂಸತ್ತಿನಲ್ಲಿ ಮತ್ತು ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿಯ ತಕ್ಷಣದ ಅನುಷ್ಠಾನದ ಪರವಾಗಿ ನಾವು ಕೂಡ ಇದ್ದೇವೆ’ ಎಂದು ಅವರು ಹೇಳಿದ್ದಾರೆ.

‘ಸುರಕ್ಷಿತ ಆದಾಯ, ಭವಿಷ್ಯ, ಸ್ಥಿರತೆ ಮತ್ತು ಸ್ವಾಭಿಮಾನ ಹೊಂದಿರುವ ಮಹಿಳೆಯರು ನಿಜವಾಗಿಯೂ ಸಮಾಜದ ಶಕ್ತಿಯಾಗುತ್ತಾರೆ. ಶೇ.50 ರಷ್ಟು ಸರ್ಕಾರಿ ಹುದ್ದೆಗಳಲ್ಲಿ ಮಹಿಳೆಯರು ಇರುವುದು ದೇಶದ ಪ್ರತಿಯೊಬ್ಬ ಮಹಿಳೆಗೆ ಬಲವನ್ನು ನೀಡುತ್ತದೆ ಮತ್ತು ಶಕ್ತಿಯುತ ಮಹಿಳೆಯರು ಭಾರತದ ಭವಿಷ್ಯವನ್ನು ಬದಲಾಯಿಸುತ್ತಾರೆ” ಎಂದು ಅವರು ಹೇಳಿದರು.

ಈ ಹಿಂದೆ, ಸಾರ್ವತ್ರಿಕ ಚುನಾವಣೆಗೆ ಮುನ್ನ ಕಾಂಗ್ರೆಸ್ ಮಹಿಳೆಯರಿಗೆ ಐದು ಭರವಸೆಗಳನ್ನು ಘೋಷಿಸಿತ್ತು. ಪಕ್ಷದ “ಮಹಾಲಕ್ಷ್ಮಿ” ಖಾತ್ರಿಯಡಿ, ಪ್ರತಿ ಬಡ ಕುಟುಂಬದಿಂದ ಒಬ್ಬ ಮಹಿಳೆಗೆ ನೇರ ನಗದು ವರ್ಗಾವಣೆಯ ಮೂಲಕ ವಾರ್ಷಿಕ ₹1 ಲಕ್ಷ ಸಹಾಯವನ್ನು ನೀಡಲಾಗುತ್ತದೆ.

ಇದಲ್ಲದೆ, ಕಾಂಗ್ರೆಸ್ “ಆಧಿ ಆಬಾದಿ, ಪೂರಾ ಹಕ್” ಅನ್ನು ಖಚಿತಪಡಿಸುತ್ತದೆ. ಅದರ ಅಡಿಯಲ್ಲಿ ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಎಲ್ಲಾ ಹೊಸ ನೇಮಕಾತಿಗಳಲ್ಲಿ ಶೇ.50 ಪ್ರತಿಶತವನ್ನು ಮಹಿಳೆಯರಿಗೆ ಮೀಸಲಿಡಲಾಗುತ್ತದೆ.

“ಶಕ್ತಿ ಕಾ ಸಮ್ಮಾನ್” ಖಾತರಿ ಅಡಿಯಲ್ಲಿ, ಆಶಾ, ಅಂಗನವಾಡಿ ಮತ್ತು ಮಧ್ಯಾಹ್ನದ ಊಟದ ಕಾರ್ಯಕರ್ತೆಯರ ಮಾಸಿಕ ವೇತನಕ್ಕೆ ಕೇಂದ್ರದ ಕೊಡುಗೆಯನ್ನು ದ್ವಿಗುಣಗೊಳಿಸಲಾಗುವುದು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

“ಅಧಿಕಾರ ಮೈತ್ರಿ” ಗ್ಯಾರಂಟಿ ಅಡಿಯಲ್ಲಿ, ಮಹಿಳೆಯರಿಗೆ ತಮ್ಮ ಕಾನೂನು ಹಕ್ಕುಗಳ ಬಗ್ಗೆ ಶಿಕ್ಷಣ ನೀಡಲು ಮತ್ತು ಅವರ ಜಾರಿಯಲ್ಲಿ ಅವರಿಗೆ ಸಹಾಯ ಮಾಡಲು ಪ್ಯಾರಾ-ಲೀಗಲ್ ಕಾರ್ಯಕಾರಿಯಾಗಿ ಸೇವೆ ಸಲ್ಲಿಸಲು ಕಾಂಗ್ರೆಸ್ ಪ್ರತಿ ಪಂಚಾಯತ್‌ನಲ್ಲಿ “ಅಧಿಕಾರ ಮೈತ್ರಿ” ಯನ್ನು ನೇಮಿಸುತ್ತದೆ.

“ಸಾವಿತ್ರಿ ಬಾಯಿ ಫುಲೆ ಹಾಸ್ಟೆಲ್‌ಗಳು” ಖಾತರಿಯಡಿಯಲ್ಲಿ, ಕಾಂಗ್ರೆಸ್ ನೇತೃತ್ವದ ಕೇಂದ್ರವು ದೇಶದಲ್ಲಿ ಉದ್ಯೋಗಿ ಮಹಿಳೆಯರಿಗಾಗಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದರಂತೆ ಹಾಸ್ಟೆಲ್‌ಗಳ ಸಂಖ್ಯೆಯನ್ನು ದ್ವಿಗುಣಗೊಳಿಸುತ್ತದೆ.

ಇದನ್ನೂ ಓದಿ; ನ್ಯಾಯಾಂಗ ಪರಾಮರ್ಶೆಯ ಅಧಿಕಾರವು ನೀತಿ ಬದಲಾವಣೆಗಳನ್ನು ಸಹ ನಡೆಸಬೇಕು: ನ್ಯಾಯಮೂರ್ತಿ ಗವಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...