Homeಮುಖಪುಟಮಾನಿಟೈಸೇಶನ್‌‌ ಹೆಸರಿನಲ್ಲಿ 70 ವರ್ಷಗಳ ಆಸ್ತಿ ಮಾರಾಟ ಮಾಡಲಾಗುತ್ತಿದೆ: ಪಿ. ಚಿದಂಬರಂ

ಮಾನಿಟೈಸೇಶನ್‌‌ ಹೆಸರಿನಲ್ಲಿ 70 ವರ್ಷಗಳ ಆಸ್ತಿ ಮಾರಾಟ ಮಾಡಲಾಗುತ್ತಿದೆ: ಪಿ. ಚಿದಂಬರಂ

- Advertisement -
- Advertisement -

ಒಕ್ಕೂಟ ಸರ್ಕಾರವು ತನ್ನ ಆಸ್ತಿಯನ್ನು ಮಾನಿಟೈಸೇಶನ್‌‌ ಪಾಲಿಸಿಯ ಹೆಸರಿನಲ್ಲಿ ಮಾರಾಟ ಮಾಡಲು ಯೋಜಿಸುತ್ತಿದ್ದು, ಕಳೆದ 70 ವರ್ಷಗಳಲ್ಲಿ ನಿರ್ಮಿಸಲಾಗಿರುವ ಎಲ್ಲವನ್ನೂ ಆಯ್ದ ಕೆಲವರ ಕೈಗೆ ಒತ್ತೆ ಇಡಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಶುಕ್ರವಾರ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಒಕ್ಕೂಟ ಸರ್ಕಾರ ಇತ್ತೀಚೆಗೆ, ಅಂದಾಜು 6 ಲಕ್ಷ ಕೋಟಿ ರೂ. ನ್ಯಾಷನಲ್‌‌ ಮಾನಿಟೈಸೇಶನ್‌‌ ಪೈಪ್‌ಲೈನ್ (NMP) ನೀತಿಯನ್ನು ಅನಾವರಣಗೊಳಿಸಿದೆ. ಕಂದಾಯ ಹಕ್ಕುಗಳನ್ನು ಖಾಸಗಿ ವಲಯಕ್ಕೆ ವರ್ಗಾಯಿಸುವ ಮೂಲಕ ಬ್ರೌನ್ ಫೀಲ್ಡ್ ಯೋಜನೆಗಳಲ್ಲಿ ಮೌಲ್ಯವನ್ನು ಅನ್ಲಾಕ್ ಮಾಡುವ ಉದ್ದೇಶವನ್ನು ಈ ನೀತಿ ಹೊಂದಿದೆ. ಆಸ್ತಿಗಳ ಮಾಲೀಕತ್ವವು ಸರ್ಕಾರದಲ್ಲಿ ಉಳಿಯುತ್ತದೆ. ಪಾಲಿಸಿಯ ಮೂಲಕ ಉತ್ಪತ್ತಿಯಾದ ಹಣವನ್ನು ದೇಶದಲ್ಲಿ ಮೂಲಸೌಕರ್ಯ ಸೃಷ್ಟಿಗೆ ಬಳಸಲಾಗುವುದು ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: ಮಾನಿಟೈಸೇಶನ್‌‌ನಿಂದ ಕೆಲವೇ ಕ್ರೋನಿ ಕ್ಯಾಪಿಟಲಿಸ್ಟ್‌ಗಳಿಗೆ ಅನುಕೂಲವಾಗಿದೆ: ರಾಹುಲ್

ಮಾಜಿ ವಿತ್ತ ಸಚಿವರೂ ಆಗಿರುವ ಪಿ. ಚಿದಂಬರಂ ಅವರು ನೀತಿಯ ಕುರಿತು ಸಂಸತ್ತಿನಲ್ಲಿ ಯಾವುದೇ ಸಮಾಲೋಚನೆ ಅಥವಾ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ. “ಪ್ರಧಾನಿ ನರೇಂದ್ರ ಮೋದಿಯಾಗಲಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆಗಲಿ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

ನಾಲ್ಕು ಬಾರಿ ಹಣಕಾಸು ಸಚಿವರಾಗಿದ್ದ ಪಿ. ಚಿದಂಬರಂ ಅವರು, ಸರ್ಕಾರಕ್ಕೆ ಆದಾಯವನ್ನು ಉಂಟುಮಾಡುತ್ತದೆ ಎಂದು ಆಸ್ತಿಗಳನ್ನು ಮಾರಾಟ ಮಾಡುವುದರ ಹಿಂದಿನ ತಾರ್ಕಿಕತೆಯನ್ನು ಪ್ರಶ್ನಿಸಿದ್ದಾರೆ. ಈ ಆಸ್ತಿಗಳು ಗಳಿಸುತ್ತಿರುವ ಆದಾಯವನ್ನು ಒಕ್ಕೂಟ ಸರ್ಕಾರ ಬಹಿರಂಗಪಡಿಸುತ್ತಿಲ್ಲ. ಯಾಕೆಂದರೆ ಇದನ್ನು ಮಾರಾಟ ಮಾಡುವುದರಿಂದ 1.5 ಲಕ್ಷ ರೂ.ಗಳನ್ನು ಪಡೆಯುತ್ತಾರೆ ಎಂದು ಅವರು ಆರೋಪಿಸಿದ್ದಾರೆ.

“ಈ ಆಸ್ತಿಗಳು ಪ್ರಸ್ತುತ ಸುಮಾರು 1.3 ಲಕ್ಷ ಕೋಟಿ ರೂಪಾಯಿಗಳನ್ನು ಗಳಿಸುತ್ತಿವೆ ಎಂದು ನಾನು ನಂಬಿದ್ದೇನೆ. ಆದ್ದರಿಂದ, 70 ವರ್ಷಗಳಲ್ಲಿ ನಿರ್ಮಿಸಲಾದ ಸ್ವತ್ತುಗಳನ್ನು ಕೇವಲ 20,000 ಕೋಟಿ ಲಾಭಕ್ಕಾಗಿ ಮಾರಾಟ ಮಾಡುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಒಕ್ಕೂಟ ಬಜೆಟ್ 2021-22: ಉಳ್ಳವರನ್ನು, ಉದ್ಯಮಪತಿಗಳನ್ನು, ವಾಣಿಜ್ಯೋದ್ಯಮಿಗಳನ್ನು ತಣಿಸಲು ಪ್ರಯತ್ನಿಸಿರುವ ವೈಭವದ ಮಾತಿನ ಬಜೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...