Homeಕ್ರೀಡೆಕ್ರಿಕೆಟ್ಇಂದು ಇಂಗ್ಲೆಂಡ್ ಎದುರು ಸೆಮಿಫೈನಲ್: ಭಾರತದ ಗೆಲುವಿಗೆ ಪಾಕ್ ಅಭಿಮಾನಿಗಳ ಹಾರೈಕೆ

ಇಂದು ಇಂಗ್ಲೆಂಡ್ ಎದುರು ಸೆಮಿಫೈನಲ್: ಭಾರತದ ಗೆಲುವಿಗೆ ಪಾಕ್ ಅಭಿಮಾನಿಗಳ ಹಾರೈಕೆ

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ 2ನೇ ಸೆಮಿಫೈನಲ್ ಇಂದು ನಡೆಯುತ್ತಿದ್ದು ಭಾರತ ಮತ್ತು ಇಂಗ್ಲೆಂಡ್ ಕಣಕ್ಕಿಳಿಯುತ್ತಿವೆ. ಈಗಾಗಲೇ ಪಾಕಿಸ್ತಾನ ತಂಡವು ನ್ಯೂಜಿಲೆಂಡ್ ವಿರುದ್ಧ ಗೆದ್ದು ಫೈನಲ್ ತಲುಪಿದೆ. ಹಾಗಾಗಿ ಇಂದು ನಡೆಯುವ ಪಂದ್ಯದಲ್ಲಿ ಭಾರತ ತಂಡ ಗೆಲ್ಲಲಿ ಎಂದು ಪಾಕ್ ಅಭಿಮಾನಿಗಳು ಹಾರೈಸಿದ್ದಾರೆ. ಹಾಗೊಂದು ವೇಳೆ ಭಾರತ ಗೆದ್ದಲ್ಲಿ 2007ರ ನಂತರ ಮತ್ತೊಮ್ಮೆ ಭಾರತ-ಪಾಕ್ ಫೈನಲ್‌ನಲ್ಲಿ ಭೇಟಿಯಾಗಲಿದ್ದಾರೆ. ಆ ರೋಚಕ ಕ್ಷಣಕ್ಕಾಗಿ ಹಲವರು ಕಾದು ಕುಳಿತಿದ್ದಾರೆ. ಇಂದಿನ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 1.30ಕ್ಕೆ ಆರಂಭವಾಗಲಿದೆ.

ಇನ್ನೊಂದೆಡೆ ಇಂಗ್ಲೆಂಡ್ ತಂಡ ಸಹ ಭಾರತದ ವಿರುದ್ಧ ಗೆದ್ದು ಫೈನಲ್ ತಲುಪುವ ಹಂಬಲದಲ್ಲಿದೆ. 2010ರಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಚಾಂಪಿಯನ್ ಆಗಿದ್ದ ಇಂಗ್ಲೆಂಡ್, 2016ರಲ್ಲಿ ವೆಸ್ಟ್ ಇಂಡೀಸ್ ಎದುರು ಫೈನಲ್‌ನಲ್ಲಿ ಮುಗ್ಗಿರಿಸಿತ್ತು.

ಇದನ್ನೂ ಓದಿ: 360 ಡಿಗ್ರಿ ಬ್ಯಾಟರ್ ಸೂರ್ಯಕುಮಾರ್ ಯಾದವ್‌: ಟಿ20ಯಲ್ಲಿ ಮತ್ತೆರೆಡು ದಾಖಲೆ

ಭಾರತ, ಇಂಗ್ಲೆಂಡ್ ಮತ್ತು ಪಾಕಿಸ್ತಾನ ಈ ಮೂರು ತಂಡಗಳು ಟಿ20 ವಿಶ್ವಕಪ್‌ ಅನ್ನು ತಲಾ ಒಮ್ಮೆಮ್ಮೆ ಜಯಿಸಿವೆ. ಮೂರು ತಂಡಗಳಲ್ಲಿ ಯಾವ ತಂಡ ಎರಡನೇ ಬಾರಿ ಪ್ರಶಸ್ತಿಗೆ ಮುತ್ತಿಕ್ಕಲಿದೆ ಎಂಬುದು ಭಾನುವಾರ ತೀರ್ಮಾನವಾಗಲಿದೆ.

ಇಂದು ಭಾರತ ತಂಡ ಇಂಗ್ಲೆಂಡ್ ಎದುರು ಗೆದ್ದು ನವೆಂಬರ್ 13ರಂದು ಪಾಕಿಸ್ತಾನದ ವಿರುದ್ಧ ಸೆಣಸಲಿ ಎಂದು ಪಾಕ್ ಅಭಿಮಾನಿಗಳು ಹಾರೈಸುತ್ತಿದ್ದಾರೆ. ಇದುವರೆಗೂ ವಿಶ್ವಕಪ್‌ ಪಂದ್ಯಾವಳಿಗಳಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡ 14 ಬಾರಿ ಮುಖಾಮುಖಯಾಗಿವೆ. 13 ಬಾರಿ ಭಾರತ ಗೆದ್ದರೆ ಒಮ್ಮೆ ಮಾತ್ರ ಪಾಕ್ ಜಯಕಂಡಿದೆ.

2007ರ ಟಿ20 ವಿಶ್ವಕಪ್‌ ಫೈನಲ್‌ನಲ್ಲಿ ಇವೆರೆಡು ತಂಡಗಳು ಸೆಣಸಿದ್ದವು. ಆ ಪಂದ್ಯದಲ್ಲಿ ಭಾರತ ತಂಡ 5 ರನ್‌ಗಳಿಂದ ಪಾಕ್‌ ಅನ್ನು ಮಣಿಸಿ ಚಾಂಪಿಯನ್ ಆಗಿತ್ತು.

ಭಾರತ-ಪಾಕ್ ಅಭಿಮಾಣಿಗಳ ಕ್ರಿಕೆಟ್ ಜ್ವರ ಹೇಗಿದೆ ಎಂದು ಈ ಕೆಳಗಿನ ಟ್ವೀಟ್‌ಗಳಲ್ಲಿ ನೋಡಿ.

ಇದನ್ನೂ ಓದಿ : ಟಿ20 ವಿಶ್ವಕಪ್: ಬಲಿಷ್ಟ ತಂಡಗಳನ್ನು ಮಣಿಸಿದ ಪುಟ್ಟ ಆದರೆ ದಿಟ್ಟ ತಂಡಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...