Homeಮುಖಪುಟಖಾತೆ ಹಂಚಿಕೆ ವಿವಾದ: ರಾಜೀನಾಮೆ ಕೊಟ್ಟ ಶಿವಸೇನೆಯ ಅಬ್ದುಲ್‌ ಸತ್ತಾರ್‌

ಖಾತೆ ಹಂಚಿಕೆ ವಿವಾದ: ರಾಜೀನಾಮೆ ಕೊಟ್ಟ ಶಿವಸೇನೆಯ ಅಬ್ದುಲ್‌ ಸತ್ತಾರ್‌

- Advertisement -
- Advertisement -

ಖಾತೆ ಹಂಚಿಕೆ ವಿಚಾರವಾಗಿ ಶಿವಸೇನೆ ನೇತೃತ್ವದ ಮಹಾರಾಷ್ಟ್ರ ವಿಕಾಸ್ ಅಘಾಡಿ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ಕ್ಯಾಬಿನೆಟ್ ಸಚಿವ ಸ್ಥಾನ ಸಿಗದ ಕಾರಣ ಶಿವಸೇನೆಯ ಸಚಿವ ಅಬ್ದುಲ್ ಸತ್ತಾರ್ ಶನಿವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಔರಂಗಾಬಾದ್ ಜಿಲ್ಲೆಯ ಸಿಲ್ಲೋಡ್‌ನ ಶಾಸಕರಾದ ಸತ್ತಾರ್ ಅವರು ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್‌ ತೊರೆದು ಶಿವಸೇನೆ ಸೇರಿದ್ದರು. ಅವರಿಗೆ ಸದ್ಯ ರಾಜ್ಯ ಸಚಿವರನ್ನಾಗಿ ಮಾಡಲಾಗಿತ್ತು. ಅದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು ಕ್ಯಾಬಿನೆಟ್ ಸಚಿವ ಸ್ಥಾನ ನೀಡಲಾಗಿಲ್ಲ ಎಂದು ರಾಜೀನಾಮೆ ಸಲ್ಲಿಸಿದ್ದಾರೆ.

ಆದರೆ ಸಚಿವರ ರಾಜೀನಾಮೆ ಕುರಿತು ಮುಖ್ಯಮಂತ್ರಿಯವರ ಕಚೇರಿಯಿಂದ ಅಥವಾ ರಾಜಭವನದಿಂದ ಯಾವುದೇ ದೃಢೀಕರಣ ಬಂದಿಲ್ಲ. ಅಲ್ಲದೇ ಸತ್ತಾರ್ ಸ್ವತಃ ಏನನ್ನೂ ತಿಳಿಸಿಲ್ಲ.

ಆದರೆ ಹಿರಿಯ ಶಿವಸೇನೆಯ ಮುಖಂಡರು ಸತ್ತಾರ್ ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಿದ್ದಾರೆ. ಹಿರಿಯ ಸೇನಾ ಕಾರ್ಯಕರ್ತ ಅನಿಲ್ ದೇಸಾಯಿ ಅವರು ಸತ್ತಾರ್ ರಾಜೀನಾಮೆ ನೀಡಿಲ್ಲ ಎಂದು ಹೇಳಿದರು. ಈ ಮಧ್ಯೆ ಸತಾರ್ ಅವರನ್ನು ಭೇಟಿ ಮಾಡಲು ಮತ್ತು ಚರ್ಚಿಸಲು ಪಕ್ಷದ ಪರವಾಗಿ ಸೇನೆಯ ಅರ್ಜುನ್ ಖೋಟ್ಕರ್ ಅವರನ್ನು ಕಳುಹಿಸಲಾಗಿದೆ. ಔರಂಗಾಬಾದ್‌ನ ಹೋಟೆಲ್‌ವೊಂದರಲ್ಲಿ ಶನಿವಾರ ಬೆಳಿಗ್ಗೆ ಖೋಟ್ಕರ್, ಸತ್ತಾರ್ ಅವರನ್ನು ಭೇಟಿಯಾಗಿದ್ದರೂ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಸತ್ತಾರ್ ಅವರ ಮಗ ಸಮೀರ್, “ಅವರು ರಾಜೀನಾಮೆ ನೀಡಿದ್ದಾರೋ ಇಲ್ಲವೋ ನನಗೆ ತಿಳಿದಿಲ್ಲ. ಅವರು ಮಾತ್ರ ಈ ವಿಷಯದ ಬಗ್ಗೆ ಮಾತನಾಡಲು ಸಾಧ್ಯವಾಗುತ್ತದೆ. ” ಎಂದು ತಿಳಿಸಿದ್ದಾರೆ.

ಡಿಸೆಂಬರ್ 30 ರಂದು ನಡೆದ ಕ್ಯಾಬಿನೆಟ್ ವಿಸ್ತರಣೆಯಲ್ಲಿ ಪಕ್ಷದ ಅನೇಕ ಹಿರಿಯ ನಾಯಕರನ್ನು ಕಡೆಗಣಿಸಿದ ನಂತರ ಸೇನೆಯೊಳಗೆ ಅಸಮಾಧಾನ ಮೂಡಿದೆ. ಹಿಂದಿನ ಕಾಂಗ್ರೆಸ್-ಎನ್‌ಸಿಪಿ ಸರ್ಕಾರಗಳಲ್ಲಿ ಕ್ಯಾಬಿನೆಟ್ ಮಂತ್ರಿಯಾಗಿದ್ದ ಸತ್ತಾರ್ ಅವರಿಗೆ ಶಿವಸೇನಾ ಕೋಟಾದಿಂದ ಕ್ಯಾಬಿನೆಟ್ ಸ್ಥಾನ ನೀಡಲಾಗುವುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಸೇನಾ ಮುಖ್ಯಸ್ಥ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಸರ್ಕಾರವನ್ನು ಬೆಂಬಲಿಸುವ ಮೂವರು ಸ್ವತಂತ್ರ ಶಾಸಕರಿಗೆ ಕ್ಯಾಬಿನೆಟ್ ಸ್ಥಾನ ಮತ್ತು ಇಬ್ಬರು ಕಿರಿಯರಿಗೆ ಸಚಿವ ಹುದ್ದೆಗಳನ್ನು ನೀಡಿದ ನಂತರ ಅನೇಕ ಶಿವಸೇನಾ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...