Homeಮುಖಪುಟಸೇನಾ V/s ಕಂಗನಾ ವಿವಾದ: ದೂರ ಉಳಿಯಲು ಕಾಂಗ್ರೆಸ್ ಯತ್ನ

ಸೇನಾ V/s ಕಂಗನಾ ವಿವಾದ: ದೂರ ಉಳಿಯಲು ಕಾಂಗ್ರೆಸ್ ಯತ್ನ

ಎಐಸಿಸಿಯ ಮೂವರು ವಕ್ತಾರರು ವಿವಾದದಿಂದ ದೂರವಿರಲು ಪಕ್ಷವು ತತ್ವಬದ್ಧವಾದ ನಿಲುವನ್ನು ತೆಗೆದುಕೊಂಡಿದೆ ಎಂದು ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

- Advertisement -
- Advertisement -

ಮಹಾರಾಷ್ಟ್ರದ ಆಡಳಿತ ಪಕ್ಷ ಶಿವಸೇನೆ ಮತ್ತು ಬಾಲಿವುಡ್ ನಟಿ ಕಂಗನಾ ರಾಣಾವತ್ ನಡುವಿನ ಜಟಾಪಟಿಯಿಂದ ದೂರ ಉಳಿಯಲು ಕೇಂದ್ರ ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಎಐಸಿಸಿಯ ಮೂವರು ವಕ್ತಾರರು ವಿವಾದದಿಂದ ದೂರವಿರಲು ಪಕ್ಷವು ತತ್ವಬದ್ಧವಾದ ನಿಲುವನ್ನು ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.

“ಹೌದು, ಇದು ಹೆಚ್ಚು ರಾಜಕೀಯಗೊಳಿಸಿದ ವಿಷಯವಾಗಿದೆ. ಬಿಜೆಪಿ ಬಯಸುವುದು ಕೂಡ ಇದನ್ನೇ. ಕೋವಿಡ್ ಮತ್ತು ಆರ್ಥಿಕತೆಯಂತಹ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸದಂತೆ ಅವರು ಇಡೀ ರಾಜಕೀಯವನ್ನು ವಿವಾದಕ್ಕೆ ಎಳೆಯಲು ಬಯಸುತ್ತಾರೆ ” ಆದ್ದರಿಂದ, ಇದರಿಂದ ದೂರವಿರಲು ಮತ್ತು ಅವರ ಬಲೆಗೆ ಬೀಳದಂತೆ ನಾವು ತತ್ವಬದ್ಧವಾದ ನಿರ್ಧಾರ ತೆಗೆದುಕೊಂಡಿದ್ದೇವೆ ಎಐಸಿಸಿ ಮಾಧ್ಯಮ ವಿಭಾಗದ ಮುಖಂಡರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ನಟಿ ಕಂಗನಾ ಮುಂಬೈ ಕಚೇರಿ ನೆಲಸಮಕ್ಕೆ ಮುಂದಾದ ಬಿಎಂಸಿ!: ಹೈಕೋರ್ಟ್‌ ತಡೆಯಾಜ್ಞೆ

ನಟಿ ಕಂಗನಾ ರಾಣಾವತ್ ಬಾಲಿವುಡ್‌ನಲ್ಲಿ ಡ್ರಗ್ ಮಾಫಿಯಾ ಆದೆ ಎಂಬ ಆರೋಪ ಮತ್ತು ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ಬಗ್ಗೆ ಮುಂಬೈ ಪೊಲೀಸರಿಗೆ ಸಂಬಂಧಿಸಿದಂತೆ ಟ್ವೀಟ್‌ಗಳನ್ನು ಮಾಡುವ ಮೂಲಕ ವಿವಾದವನ್ನು ಆರಂಭಿಸಿದ್ದರು. ನಾನು ಮುಂಬೈ ಪೊಲೀಸರಿಗೆ ಹೆದರುತ್ತಿದೆ. ಮುಂಬೈ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಂತೆ ಕಾಣುತ್ತಿದೆ ಎಂಬಂತ ಹೇಳಿಕೆಗಳು ಶಿವಸೇನೆಯನ್ನು ಹೆಚ್ಚು ಕೆಣಕಿದ್ದವು.

ಮಹಾರಾಷ್ಟ್ರದ ಜನರು, ಬಾಲಿವುಡ್ ನಟಿ-ನಟಿಯರು, ಸರ್ಕಾರದ ಸಚಿವರು ಆಕೆಯ ಹೇಳಿಕೆಗಳ ಬಗ್ಗೆ ಅಸಮಾಧಾನ, ಆಕ್ರೋಶ ಹೊರಹಾಕಿದ್ದರು. ನಂತರ ಬುಧವಾರ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮುಂಬೈ ಪ್ರದೇಶದಲ್ಲಿನ ರನೌತ್ ಕಚೇರಿಯ ಭಾಗವನ್ನು ಧ್ವಂಸಗೊಳಿಸಿತು. ಸದ್ಯ ಬಿಜೆಪಿ ಆಕೆಯ ಹೇಳಿಕೆ ವಿರೋಧಿಸುತ್ತಲೇ ರಾಣಾವತ್‌ಗೆ ಬೆಂಬಲ, ರಕ್ಷಣೆ ಕೊಡಲು ಆರಂಭಿಸಿದೆ.

ಶಿವಸೇನಾ ಪ್ರಸ್ತುತ ಕಾಂಗ್ರೆಸ್ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಯೊಂದಿಗೆ ಪಾಲುದಾರರಾಗಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ನಡೆಸುತ್ತಿದೆ.

ಇದನ್ನೂ ಓದಿ: ಇದು ಕೆ.ಎಲ್.‌ ಅಶೋಕ್‌ರವರ ವೈಯಕ್ತಿಕ ಸಮಸ್ಯೆ ಅಲ್ಲ. ಸುಮ್ಮನಿದ್ದರೆ ನಾಳೆ ಎಲ್ಲರಿಗೂ ಹೀಗಾಗುವುದರಲ್ಲಿ ಸಂಶಯವಿಲ್ಲ.

ಕಾಂಗ್ರೆಸ್ ನಾಯಕರಲ್ಲಿ ಪರಸ್ಪರ ಭಿನ್ನಾಭಿಪ್ರಾಯ!

ಕೇಂದ್ರದ ಕಾಂಗ್ರೆಸ್ ನಾಯಕರು ಈ ವಿವಾದದಿಂದ ದೂರವೂಳಿಯಲು ನಿರ್ಧರಿಸಿದ್ದರೇ ಇತ್ತ ಮಹಾರಾಷ್ಟ್ರದ ಕಾಂಗ್ರೆಸ್ ನಾಯಕರಲ್ಲಿ ಪರಸ್ಪರ ಭಿನ್ನಾಭಿಪ್ರಾಯಗಳು ಕಂಡು ಬರುತ್ತಿವೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಅವರು ನಟಿ ರಾಣಾವತ್ ವಿವಾದದ ಮೇಲೆ ಕೇಂದ್ರೀಕರಿಸುವುದಕ್ಕಿಂತ  ಆಡಳಿತದಲ್ಲಿ ಕೋವಿಡ್ -19, ಆರ್ಥಿಕತೆ, ಚೀನಾದೊಂದಿಗಿನ ನಿಲುವು ಮುಂತಾದ ತುಂಬಾ ಮುಖ್ಯವಾದ ವಿಷಯಗಳಿವೆ ಎಂದು ತಿಳಿಸಿದ್ದಾರೆ.

“ಇದು ಕ್ರಿಮಿನಲ್ ಪ್ರಕರಣವಾಗಿದ್ದು, ಏಜೆನ್ಸಿಗಳು ತಮ್ಮ ಕೆಲಸವನ್ನು ಮಾಡಲಿ. ಕ್ರಿಮಿನಲ್ ಏಜೆನ್ಸಿಗಳಿಗೆ ಮಾಧ್ಯಮ ಅಥವಾ ಯಾವುದೇ ರಾಜಕೀಯ ಮುಖಂಡರ ಸಹಾಯ ಅಗತ್ಯವಿಲ್ಲ ”ಎಂದು ಚವಾಣ್ ಹೇಳಿದರು.

ಮಾಜಿ ಕೇಂದ್ರ ಸಚಿವ ಮಿಲಿಂದ್ ದಿವೋರಾ ಕೂಡ ರಾಜಕೀಯ ಬಿಟ್ಟು ಮುಖ್ಯವಾದ ವಿಷಯಗಳ ಬಗ್ಗೆ ಗಮನ ಹರಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.

 

ಮುಂಬೈನ ಮಾಜಿ ಕಾಂಗ್ರೆಸ್ ಮುಖ್ಯಸ್ಥ ನಿರುಪಮ್ ಅವರು ಬಿಎಂಸಿಯ ಈ ಕ್ರಮವನ್ನು “ಪ್ರತೀಕಾರದ ಕ್ರಮ” ಎಂದು ಬಣ್ಣಿಸಿದ್ದಾರೆ. ಹೈಕೋರ್ಟ್ ಈ ಕ್ರಮವನ್ನು ತಪ್ಪೆಂದು ಪರಿಗಣಿಸಿ ತಕ್ಷಣ ಅದನ್ನು ತಡೆಹಿಡಿದಿದೆ. ಇಡೀ ಕ್ರಮವು ಪ್ರತೀಕಾರದಿಂದ ಕೂಡಿದೆ. ಆದರೆ ಸೇಡು ರಾಜಕೀಯದ ರಾಜಕಾರಣ ಬಹಳ ಚಿಕ್ಕದು ಎಂದು ಟ್ವೀಟ್ ಮಾಡಿದ್ದಾರೆ.

ಆದರೆ, ಮಹಾರಾಷ್ಟ್ರ ಕಾಂಗ್ರೆಸ್ ವಕ್ತಾರ ಸಚಿನ್ ಸಾವಂತ್, ರಾಣಾವತ್ ಮಾಡಿದ ಆರೋಪಗಳಿಗೆ ಮಾತ್ರ ಪಕ್ಷ ಉತ್ತರಿಸುತ್ತದೆ ಎಂದರು. ನಾವು ಆಡಳಿತದತ್ತ ಗಮನ ಹರಿಸುತ್ತಿದ್ದೇವೆ. ಆದರೆ ಕಂಗನಾ ಮುಂಬೈಯನ್ನು ಪಿಒಕೆಗೆ ಸಮಾನ ಎಂದು ಕರೆಯುವಾಗ, ನಾವು ಮಾತನಾಡಬೇಕಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ದೇಶದ್ರೋಹ ಎನ್ನಲಾಗುವುದಿಲ್ಲ: ಯುಎಪಿಎ ಅಡಿ ಬಂಧಿತರಾಗಿದ್ದ ಕೇರಳದ ಯುವಕರಿಗೆ ಜಾಮೀನು

“ಘಟನೆ ನಡೆದ ಸಮಯವನ್ನು ಪ್ರಶ್ನಿಸಬಹುದು, ಆದರೆ ಅದರ ಕಾನೂನುಬದ್ಧತೆಯಲ್ಲ. ಅದು ಅಕ್ರಮ ಕಟ್ಟಡವಾಗಿದ್ದರೇ, ಅದನ್ನು ಕೆಡವಬೇಕಿದೆ,” ಎಂದರು. ಜೊತೆಗೆ ಮೋದಿ ಸರ್ಕಾರವು ಇಡಿ ಮತ್ತು ಸಿಬಿಐ ದುರುಪಯೋಗಕ್ಕೆ ಹೆಸರುವಾಸಿಯಾಗಿದೆ, ಆದರೆ ಆಗ ಯಾರೂ ಏನನ್ನೂ ಹೇಳುವುದಿಲ್ಲ” ಎಂದು ಕಿಡಿಕಾರಿದ್ದಾರೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಕೂಡ ಬಿಎಂಸಿಯ ಕ್ರಮ ತೆಗೆದುಕೊಳ್ಳುವುದನ್ನು ನಿಲ್ಲಿಸಬಹುದ್ದಿತ್ತು. ಮುಂಬೈನಲ್ಲಿ ಅಕ್ರಮ ನಿರ್ಮಾಣವು ಹೊಸತೇನಲ್ಲ. ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ, ಬಿಎಂಸಿಯ ಕ್ರಮವು ಜನರಿಗೆ ಅದರ ಬಗ್ಗೆ ಅನುಮಾನಗಳನ್ನು ಮೂಡಿಸಲು ಅವಕಾಶ ನೀಡುತ್ತದೆ ಎಂದರು. ಅದು “ಕಾನೂನುಬಾಹಿರ ಕಟ್ಟಡ ಇದೆಯೇ ಎಂದು ನನಗೆ ಗೊತ್ತಿಲ್ಲ. ನಾನು ಅದರ ಬಗ್ಗೆ ಸುದ್ದಿಯಲ್ಲಿ ಮಾತ್ರ ಓದಿದ್ದೇನೆ. ನಿಖರವಾದ ಮಾಹಿತಿಯಿಲ್ಲದೆ ಈ ಕುರಿತು ಪ್ರತಿಕ್ರಿಯಿಸುವುದು ನನಗೆ ಸೂಕ್ತವಲ್ಲ. ಬಿಎಂಸಿಗೆ ತನ್ನದೇ ಆದ ನಿಯಮಗಳಿವೆ ಮತ್ತು ಅವುಗಳಿಂದ ಕಾರ್ಯ ನಿರ್ವಹಿಸಿರಬಹುದು ಎಂದೂ ತಿಳಿಸಿದ್ದಾರೆ.

ಒಟ್ಟಾರೆ ನಟಿ ಕಂಗನಾ ಮುಂಬೈನಲ್ಲಿ ಹಚ್ಚಿರುವ ಕಿಚ್ಚು ಬಾಲಿವುಡ್ ಅಂಗಳ ಬಿಟ್ಟು ರಾಜಕೀಯ ಪಕ್ಷಗಳ ಜಟಾಪಟಿಗೆ, ಮೌನಕ್ಕೆ ಕಾರಣವಾಗಿದೆ. ಯಾವಾಗ ಬಿಜೆಪಿ ಕಂಗನಾ ರಾಣಾವತ್ ಬೆಂಬಲಕ್ಕೆ ನಿಂತು ಆಕೆಗೆ ವೈ-ಪ್ಲಸ್ ಭದ್ರತೆ ನೀಡಿತೋ ಆಗಿನಿಂದ ಟ್ವಿಟ್ಟರ್‌ನಲ್ಲಿ ಬಾಲಿವುಡ್ ಮಂದಿ ಕೂಡ ಈ ಬಗ್ಗೆ ವಿರೋಧವಾಗಿ ಟ್ವೀಟ್ ಮಾಡುವುದು ಬಿಟ್ಟಿದ್ದಾರೆ.


ಇದನ್ನೂ ಓದಿ: ಆತ್ಮಹತ್ಯೆ ತಡೆ ದಿನ: ತಮ್ಮವರ ಬಗೆಗಿನ ಕೊಂಚ ಕಾಳಜಿಯೂ ಸಹ ಆತ್ಮಹತ್ಯೆ ತಡೆಯಬಹುದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...