Homeಮುಖಪುಟಸೇನಾ V/s ಕಂಗನಾ ವಿವಾದ: ದೂರ ಉಳಿಯಲು ಕಾಂಗ್ರೆಸ್ ಯತ್ನ

ಸೇನಾ V/s ಕಂಗನಾ ವಿವಾದ: ದೂರ ಉಳಿಯಲು ಕಾಂಗ್ರೆಸ್ ಯತ್ನ

ಎಐಸಿಸಿಯ ಮೂವರು ವಕ್ತಾರರು ವಿವಾದದಿಂದ ದೂರವಿರಲು ಪಕ್ಷವು ತತ್ವಬದ್ಧವಾದ ನಿಲುವನ್ನು ತೆಗೆದುಕೊಂಡಿದೆ ಎಂದು ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

- Advertisement -
- Advertisement -

ಮಹಾರಾಷ್ಟ್ರದ ಆಡಳಿತ ಪಕ್ಷ ಶಿವಸೇನೆ ಮತ್ತು ಬಾಲಿವುಡ್ ನಟಿ ಕಂಗನಾ ರಾಣಾವತ್ ನಡುವಿನ ಜಟಾಪಟಿಯಿಂದ ದೂರ ಉಳಿಯಲು ಕೇಂದ್ರ ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಎಐಸಿಸಿಯ ಮೂವರು ವಕ್ತಾರರು ವಿವಾದದಿಂದ ದೂರವಿರಲು ಪಕ್ಷವು ತತ್ವಬದ್ಧವಾದ ನಿಲುವನ್ನು ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.

“ಹೌದು, ಇದು ಹೆಚ್ಚು ರಾಜಕೀಯಗೊಳಿಸಿದ ವಿಷಯವಾಗಿದೆ. ಬಿಜೆಪಿ ಬಯಸುವುದು ಕೂಡ ಇದನ್ನೇ. ಕೋವಿಡ್ ಮತ್ತು ಆರ್ಥಿಕತೆಯಂತಹ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸದಂತೆ ಅವರು ಇಡೀ ರಾಜಕೀಯವನ್ನು ವಿವಾದಕ್ಕೆ ಎಳೆಯಲು ಬಯಸುತ್ತಾರೆ ” ಆದ್ದರಿಂದ, ಇದರಿಂದ ದೂರವಿರಲು ಮತ್ತು ಅವರ ಬಲೆಗೆ ಬೀಳದಂತೆ ನಾವು ತತ್ವಬದ್ಧವಾದ ನಿರ್ಧಾರ ತೆಗೆದುಕೊಂಡಿದ್ದೇವೆ ಎಐಸಿಸಿ ಮಾಧ್ಯಮ ವಿಭಾಗದ ಮುಖಂಡರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ನಟಿ ಕಂಗನಾ ಮುಂಬೈ ಕಚೇರಿ ನೆಲಸಮಕ್ಕೆ ಮುಂದಾದ ಬಿಎಂಸಿ!: ಹೈಕೋರ್ಟ್‌ ತಡೆಯಾಜ್ಞೆ

ನಟಿ ಕಂಗನಾ ರಾಣಾವತ್ ಬಾಲಿವುಡ್‌ನಲ್ಲಿ ಡ್ರಗ್ ಮಾಫಿಯಾ ಆದೆ ಎಂಬ ಆರೋಪ ಮತ್ತು ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ಬಗ್ಗೆ ಮುಂಬೈ ಪೊಲೀಸರಿಗೆ ಸಂಬಂಧಿಸಿದಂತೆ ಟ್ವೀಟ್‌ಗಳನ್ನು ಮಾಡುವ ಮೂಲಕ ವಿವಾದವನ್ನು ಆರಂಭಿಸಿದ್ದರು. ನಾನು ಮುಂಬೈ ಪೊಲೀಸರಿಗೆ ಹೆದರುತ್ತಿದೆ. ಮುಂಬೈ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಂತೆ ಕಾಣುತ್ತಿದೆ ಎಂಬಂತ ಹೇಳಿಕೆಗಳು ಶಿವಸೇನೆಯನ್ನು ಹೆಚ್ಚು ಕೆಣಕಿದ್ದವು.

ಮಹಾರಾಷ್ಟ್ರದ ಜನರು, ಬಾಲಿವುಡ್ ನಟಿ-ನಟಿಯರು, ಸರ್ಕಾರದ ಸಚಿವರು ಆಕೆಯ ಹೇಳಿಕೆಗಳ ಬಗ್ಗೆ ಅಸಮಾಧಾನ, ಆಕ್ರೋಶ ಹೊರಹಾಕಿದ್ದರು. ನಂತರ ಬುಧವಾರ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮುಂಬೈ ಪ್ರದೇಶದಲ್ಲಿನ ರನೌತ್ ಕಚೇರಿಯ ಭಾಗವನ್ನು ಧ್ವಂಸಗೊಳಿಸಿತು. ಸದ್ಯ ಬಿಜೆಪಿ ಆಕೆಯ ಹೇಳಿಕೆ ವಿರೋಧಿಸುತ್ತಲೇ ರಾಣಾವತ್‌ಗೆ ಬೆಂಬಲ, ರಕ್ಷಣೆ ಕೊಡಲು ಆರಂಭಿಸಿದೆ.

ಶಿವಸೇನಾ ಪ್ರಸ್ತುತ ಕಾಂಗ್ರೆಸ್ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಯೊಂದಿಗೆ ಪಾಲುದಾರರಾಗಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ನಡೆಸುತ್ತಿದೆ.

ಇದನ್ನೂ ಓದಿ: ಇದು ಕೆ.ಎಲ್.‌ ಅಶೋಕ್‌ರವರ ವೈಯಕ್ತಿಕ ಸಮಸ್ಯೆ ಅಲ್ಲ. ಸುಮ್ಮನಿದ್ದರೆ ನಾಳೆ ಎಲ್ಲರಿಗೂ ಹೀಗಾಗುವುದರಲ್ಲಿ ಸಂಶಯವಿಲ್ಲ.

ಕಾಂಗ್ರೆಸ್ ನಾಯಕರಲ್ಲಿ ಪರಸ್ಪರ ಭಿನ್ನಾಭಿಪ್ರಾಯ!

ಕೇಂದ್ರದ ಕಾಂಗ್ರೆಸ್ ನಾಯಕರು ಈ ವಿವಾದದಿಂದ ದೂರವೂಳಿಯಲು ನಿರ್ಧರಿಸಿದ್ದರೇ ಇತ್ತ ಮಹಾರಾಷ್ಟ್ರದ ಕಾಂಗ್ರೆಸ್ ನಾಯಕರಲ್ಲಿ ಪರಸ್ಪರ ಭಿನ್ನಾಭಿಪ್ರಾಯಗಳು ಕಂಡು ಬರುತ್ತಿವೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಅವರು ನಟಿ ರಾಣಾವತ್ ವಿವಾದದ ಮೇಲೆ ಕೇಂದ್ರೀಕರಿಸುವುದಕ್ಕಿಂತ  ಆಡಳಿತದಲ್ಲಿ ಕೋವಿಡ್ -19, ಆರ್ಥಿಕತೆ, ಚೀನಾದೊಂದಿಗಿನ ನಿಲುವು ಮುಂತಾದ ತುಂಬಾ ಮುಖ್ಯವಾದ ವಿಷಯಗಳಿವೆ ಎಂದು ತಿಳಿಸಿದ್ದಾರೆ.

“ಇದು ಕ್ರಿಮಿನಲ್ ಪ್ರಕರಣವಾಗಿದ್ದು, ಏಜೆನ್ಸಿಗಳು ತಮ್ಮ ಕೆಲಸವನ್ನು ಮಾಡಲಿ. ಕ್ರಿಮಿನಲ್ ಏಜೆನ್ಸಿಗಳಿಗೆ ಮಾಧ್ಯಮ ಅಥವಾ ಯಾವುದೇ ರಾಜಕೀಯ ಮುಖಂಡರ ಸಹಾಯ ಅಗತ್ಯವಿಲ್ಲ ”ಎಂದು ಚವಾಣ್ ಹೇಳಿದರು.

ಮಾಜಿ ಕೇಂದ್ರ ಸಚಿವ ಮಿಲಿಂದ್ ದಿವೋರಾ ಕೂಡ ರಾಜಕೀಯ ಬಿಟ್ಟು ಮುಖ್ಯವಾದ ವಿಷಯಗಳ ಬಗ್ಗೆ ಗಮನ ಹರಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.

 

ಮುಂಬೈನ ಮಾಜಿ ಕಾಂಗ್ರೆಸ್ ಮುಖ್ಯಸ್ಥ ನಿರುಪಮ್ ಅವರು ಬಿಎಂಸಿಯ ಈ ಕ್ರಮವನ್ನು “ಪ್ರತೀಕಾರದ ಕ್ರಮ” ಎಂದು ಬಣ್ಣಿಸಿದ್ದಾರೆ. ಹೈಕೋರ್ಟ್ ಈ ಕ್ರಮವನ್ನು ತಪ್ಪೆಂದು ಪರಿಗಣಿಸಿ ತಕ್ಷಣ ಅದನ್ನು ತಡೆಹಿಡಿದಿದೆ. ಇಡೀ ಕ್ರಮವು ಪ್ರತೀಕಾರದಿಂದ ಕೂಡಿದೆ. ಆದರೆ ಸೇಡು ರಾಜಕೀಯದ ರಾಜಕಾರಣ ಬಹಳ ಚಿಕ್ಕದು ಎಂದು ಟ್ವೀಟ್ ಮಾಡಿದ್ದಾರೆ.

ಆದರೆ, ಮಹಾರಾಷ್ಟ್ರ ಕಾಂಗ್ರೆಸ್ ವಕ್ತಾರ ಸಚಿನ್ ಸಾವಂತ್, ರಾಣಾವತ್ ಮಾಡಿದ ಆರೋಪಗಳಿಗೆ ಮಾತ್ರ ಪಕ್ಷ ಉತ್ತರಿಸುತ್ತದೆ ಎಂದರು. ನಾವು ಆಡಳಿತದತ್ತ ಗಮನ ಹರಿಸುತ್ತಿದ್ದೇವೆ. ಆದರೆ ಕಂಗನಾ ಮುಂಬೈಯನ್ನು ಪಿಒಕೆಗೆ ಸಮಾನ ಎಂದು ಕರೆಯುವಾಗ, ನಾವು ಮಾತನಾಡಬೇಕಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ದೇಶದ್ರೋಹ ಎನ್ನಲಾಗುವುದಿಲ್ಲ: ಯುಎಪಿಎ ಅಡಿ ಬಂಧಿತರಾಗಿದ್ದ ಕೇರಳದ ಯುವಕರಿಗೆ ಜಾಮೀನು

“ಘಟನೆ ನಡೆದ ಸಮಯವನ್ನು ಪ್ರಶ್ನಿಸಬಹುದು, ಆದರೆ ಅದರ ಕಾನೂನುಬದ್ಧತೆಯಲ್ಲ. ಅದು ಅಕ್ರಮ ಕಟ್ಟಡವಾಗಿದ್ದರೇ, ಅದನ್ನು ಕೆಡವಬೇಕಿದೆ,” ಎಂದರು. ಜೊತೆಗೆ ಮೋದಿ ಸರ್ಕಾರವು ಇಡಿ ಮತ್ತು ಸಿಬಿಐ ದುರುಪಯೋಗಕ್ಕೆ ಹೆಸರುವಾಸಿಯಾಗಿದೆ, ಆದರೆ ಆಗ ಯಾರೂ ಏನನ್ನೂ ಹೇಳುವುದಿಲ್ಲ” ಎಂದು ಕಿಡಿಕಾರಿದ್ದಾರೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಕೂಡ ಬಿಎಂಸಿಯ ಕ್ರಮ ತೆಗೆದುಕೊಳ್ಳುವುದನ್ನು ನಿಲ್ಲಿಸಬಹುದ್ದಿತ್ತು. ಮುಂಬೈನಲ್ಲಿ ಅಕ್ರಮ ನಿರ್ಮಾಣವು ಹೊಸತೇನಲ್ಲ. ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ, ಬಿಎಂಸಿಯ ಕ್ರಮವು ಜನರಿಗೆ ಅದರ ಬಗ್ಗೆ ಅನುಮಾನಗಳನ್ನು ಮೂಡಿಸಲು ಅವಕಾಶ ನೀಡುತ್ತದೆ ಎಂದರು. ಅದು “ಕಾನೂನುಬಾಹಿರ ಕಟ್ಟಡ ಇದೆಯೇ ಎಂದು ನನಗೆ ಗೊತ್ತಿಲ್ಲ. ನಾನು ಅದರ ಬಗ್ಗೆ ಸುದ್ದಿಯಲ್ಲಿ ಮಾತ್ರ ಓದಿದ್ದೇನೆ. ನಿಖರವಾದ ಮಾಹಿತಿಯಿಲ್ಲದೆ ಈ ಕುರಿತು ಪ್ರತಿಕ್ರಿಯಿಸುವುದು ನನಗೆ ಸೂಕ್ತವಲ್ಲ. ಬಿಎಂಸಿಗೆ ತನ್ನದೇ ಆದ ನಿಯಮಗಳಿವೆ ಮತ್ತು ಅವುಗಳಿಂದ ಕಾರ್ಯ ನಿರ್ವಹಿಸಿರಬಹುದು ಎಂದೂ ತಿಳಿಸಿದ್ದಾರೆ.

ಒಟ್ಟಾರೆ ನಟಿ ಕಂಗನಾ ಮುಂಬೈನಲ್ಲಿ ಹಚ್ಚಿರುವ ಕಿಚ್ಚು ಬಾಲಿವುಡ್ ಅಂಗಳ ಬಿಟ್ಟು ರಾಜಕೀಯ ಪಕ್ಷಗಳ ಜಟಾಪಟಿಗೆ, ಮೌನಕ್ಕೆ ಕಾರಣವಾಗಿದೆ. ಯಾವಾಗ ಬಿಜೆಪಿ ಕಂಗನಾ ರಾಣಾವತ್ ಬೆಂಬಲಕ್ಕೆ ನಿಂತು ಆಕೆಗೆ ವೈ-ಪ್ಲಸ್ ಭದ್ರತೆ ನೀಡಿತೋ ಆಗಿನಿಂದ ಟ್ವಿಟ್ಟರ್‌ನಲ್ಲಿ ಬಾಲಿವುಡ್ ಮಂದಿ ಕೂಡ ಈ ಬಗ್ಗೆ ವಿರೋಧವಾಗಿ ಟ್ವೀಟ್ ಮಾಡುವುದು ಬಿಟ್ಟಿದ್ದಾರೆ.


ಇದನ್ನೂ ಓದಿ: ಆತ್ಮಹತ್ಯೆ ತಡೆ ದಿನ: ತಮ್ಮವರ ಬಗೆಗಿನ ಕೊಂಚ ಕಾಳಜಿಯೂ ಸಹ ಆತ್ಮಹತ್ಯೆ ತಡೆಯಬಹುದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...